ಮುಂದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಮತ್ತೋರ್ವ ಆಟಗಾರ ಎಂಟ್ರಿ – Kannada News | T20 World Cup 2026: Washington Sundar to link up with Indian squad in Delhi

ಭಾರತ ತಂಡವು ಟಿ20 ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಯುಎಸ್​ಎ ತಂಡವನ್ನು 29 ರನ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನ ಬೆನ್ನಲ್ಲೇ ಭಾರತ ತಂಡಕ್ಕೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಅಂದರೆ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಪ್ರಮುಖ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಸಂಪೂರ್ಣ ಫಿಟ್​ ಆಗಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಪೆಕ್ಕೆಲುಬಿನ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅವರು ಕಿವೀಸ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್​ನ ಮೊದಲ ಪಂದ್ಯದ ವೇಳೆಯೂ ಭಾರತ ತಂಡದೊಡನೆ ಕಾಣಿಸಿಕೊಂಡಿರಲಿಲ್ಲ.

ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ವಾಷಿಂಗ್ಟನ್ ಸುಂದರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಫೆಬ್ರವರಿ 12 ಕ್ಕೂ ಮುನ್ನ ಅವರು ದೆಹಲಿಯಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಅಂದರೆ ಭಾರತ ಮತ್ತು ನಮೀಬಿಯ ನಡುವಣ ಪಂದ್ಯವು ಫೆಬ್ರವರಿ 12 ರಂದು ದೆಹಲಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ವಾಷಿಂಗ್ಟನ್ ಸುಂದರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವುದು ಖಚಿತವಾಗಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಇದನ್ನೂ ಓದಿ: ಇಬ್ಬರಿಗೆ ಅನಾರೋಗ್ಯ… ಟೀಮ್ ಇಂಡಿಯಾಗೆ ಚಿಂತೆ ಶುರು

ಟಿ20 ವಿಶ್ವಕಪ್ 2026 ಭಾರತದ ವೇಳಾಪಟ್ಟಿ:

  1. ಫೆಬ್ರವರಿ 7: ಭಾರತ vs ಯುಎಸ್​​ಎ-  (ಮುಂಬೈ)- ಭಾರತ ತಂಡಕ್ಕೆ 29 ರನ್​ಗಳ ಭರ್ಜರಿ ಜಯ
  2. ಫೆಬ್ರವರಿ 12: ಭಾರತ vs  ನಮೀಬಿಯಾ- (ದೆಹಲಿ)
  3. ಫೆಬ್ರವರಿ 15: ಭಾರತ vs ಪಾಕಿಸ್ತಾನ್-  (ಕೊಲಂಬೊ)
  4. ಫೆಬ್ರವರಿ 18: ಭಾರತ vs ನೆದರ್​ಲೆಂಡ್ಸ್-​​ (ಅಹಮದಾಬಾದ್)

ಈ ನಾಲ್ಕು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ 4 ಗ್ರೂಪ್​ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಮೊದಲ ಸುತ್ತಿನ ಬಳಿಕ ಸೂಪರ್-8 ಹಂತದ ಮುಖಾಮುಖಿ ಶುರುವಾಗಲಿದೆ. ಸೂಪರ್-8 ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆಯಲಿದೆ.

Source link

ನಾನು ಎಷ್ಟು ಒತ್ತಡ ಅನುಭವಿಸಿದ್ದೆ ಎಂಬುದು ನಂಗೆ ಮಾತ್ರ ಗೊತ್ತು! – Kannada News | T20 world cup 2026: suryakumar yadav post match interview after usa match

ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಜಯಭೇರಿಯ ಕಾರಣಕರ್ತ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಎಂದರೆ ತಪ್ಪಾಗಲಾರದು. ಏಕೆಂದರೆ ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪವರ್​ಪ್ಲೇನಲ್ಲಿ 4 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 46 ರನ್​ಗಳು ಮಾತ್ರ.

ಇದಾದ ಬಳಿಕ 77 ರನ್ ಆಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಟೀಮ್ ಇಂಡಿಯಾವನ್ನು ಏಕಾಂಗಿಯಾಗಿ ಮುನ್ನಡೆಸಿದ್ದು ಸೂರ್ಯಕುಮಾರ್ ಯಾದವ್. ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯ 49 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 84 ರನ್ ಬಾರಿಸಿದರು.

ಈ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 161 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 132 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 29 ರನ್​ಗಳ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ತಾನು ಅನುಭವಿಸಿದ ಒತ್ತಡವನ್ನು ವಿವರಿಸಿದ್ದಾರೆ. ಬೃಹತ್ ಮೊತ್ತದ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿ ನಾವು ಕೇವಲ 77 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದವು. ಈ ವೇಳೆ ನಾನು ಎಷ್ಟು ಒತ್ತಡವನ್ನು ಅನುಭವಿಸುತ್ತಿದ್ದೆ ಎಂದು ನನಗೆ ಮಾತ್ರ ಗೊತ್ತಿದೆ.

ಆದರೆ ಇಂತಹ ಒತ್ತಡಗಳ ಸಂದರ್ಭಗಳಲ್ಲೂ ಉತ್ತಮವಾಗಿ ಬ್ಯಾಟಿಂಗ್ ಮಾಡಬಲ್ಲೆ ಎನ್ನುವ ನಂಬಿಕೆ ನನಗಿತ್ತು. ಏಕೆಂದರೆ ನಾನು ಇಲ್ಲೇ ಆಡಿದವನು. ಮುಂಬೈ ಕ್ರಿಕೆಟ್ ಮೈದಾನ, ಆಝಾದ್ ಮೈದಾನ, ಕ್ರಾಸ್ ಮೈದಾನದಲ್ಲಿ ನಾನು ಕ್ರಿಕೆಟ್ ಕೆರಿಯರ್ ರೂಪಿಸಿದ್ದೇನೆ. ಹೀಗಾಗಿ ಕೊನೆಯವರೆಗೂ ಬ್ಯಾಟಿಂಗ್ ಮಾಡಿದರೆ, ಪಂದ್ಯದಲ್ಲಿ ವ್ಯತ್ಯಾಸವನ್ನುಂಟು ಮಾಡಬಹುದು ಎಂಬುದು ನನಗೆ ತಿಳಿದಿತ್ತು. ಹೀಗಾಗಿ ಕ್ರೀಸ್ ಕಚ್ಚಿ ಆಡಲು ನಿರ್ಧರಿಸಿದೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ಇದೇ ವೇಳೆ ಪಿಚ್​ ಬಗ್ಗೆ ಮಾತನಾಡಿದ ಸೂರ್ಯ, ಯಾವಾಗಲೂ ವಾಂಖೆಡೆಯಲ್ಲಿ ಇರುವುದಕ್ಕಿಂತ ಸ್ವಲ್ಪ ಭಿನ್ನವಾದ ಪಿಚ್ ಇದಾಗಿತ್ತು. ಬೆಳಿಗ್ಗೆ ಹೊರಗೆ ಹೆಚ್ಚು ಬಿಸಿಲು ಇರಲಿಲ್ಲ. ಕ್ಯುರೇಟರ್ ಮತ್ತು ಮೈದಾನದ ಸಿಬ್ಬಂದಿ ಅತ್ಯುತ್ತಮ ಪಿಚ್ ಅನ್ನು ಸಿದ್ಧಪಡಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ.

ಆದರೆ ಕೆಲವು ವಿಷಯಗಳು ಅವರ ನಿಯಂತ್ರಣದಲ್ಲಿಲ್ಲ. ಇದರಿಂದ ಪಿಚ್​ನ ಮೇಲ್ಮೈನಲ್ಲಿ ಬದಲಾವಣೆಯಾಗಿರಬಹುದು. ಇದಾಗ್ಯೂ ನಮ್ಮ ತಪ್ಪುಗಳನ್ನು ಒಪ್ಪಲು ಸಾಧ್ಯವಿಲ್ಲ. ನಾವು ಇನ್ನೂ ಸ್ವಲ್ಪ ಉತ್ತಮವಾಗಿ ಬ್ಯಾಟಿಂಗ್ ಮಾಡಬಹುದಿತ್ತು ಎಂಬುದು ನನ್ನ ಅನಿಸಿಕೆ.

ಇದನ್ನೂ ಓದಿ: ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್

ಇದೀಗ ಪಂದ್ಯ ಗೆದ್ದಿದ್ದೇವೆ. ಗೆದ್ದ ಬಳಿಕ ನಾವು ಬಹಳಷ್ಟು ವಿಷಯಗಳನ್ನು ಕಲಿಯಬಹುದು. ಅದರಂತೆ ಯುಎಸ್​ಎ ವಿರುದ್ಧ ನಾವು ಸ್ವಲ್ಪ ಉತ್ತಮವಾಗಿ ಅಥವಾ ಸ್ವಲ್ಪ ಚುರುಕಾಗಿ ಬ್ಯಾಟಿಂಗ್ ಮಾಡಬೇಕಿತ್ತು ಎಂಬ ಪಾಠ ಕಲಿತಿದ್ದೇವೆ. ಒಬ್ಬ ಬ್ಯಾಟ್ಸ್‌ಮನ್ ಅಥವಾ ಇಬ್ಬರು ಬ್ಯಾಟ್ಸ್‌ಮನ್‌ಗಳು ಕೊನೆಯವರೆಗೂ ಆಡಲು ಪ್ರಯತ್ನಿಸುವುದಕ್ಕಿಂತ ಆ ಸಣ್ಣ, ಸಣ್ಣ ಪಾಲುದಾರಿಕೆಗಳು ನಮ್ಮನ್ನು 160 ಕ್ಕೆ ಕೊಂಡೊಯ್ಯಬಹುದಿತ್ತು. ಇದುವೇ ಈ ಪಂದ್ಯದಿಂದ ಕಲಿತ ಪಾಠ. ಮುಂದಿನ ಪಂದ್ಯಕ್ಕೆ ಇನ್ನೂ ಕೆಲ ದಿನಗಳ ಸಮಯವಿದೆ. ಹೀಗಾಗಿ ನಮೀಬಿಯ ವಿರುದ್ಧದ ಪಂದ್ಯಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿ ಹಿಂತಿರುಗುತ್ತೇವೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

Source link

ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ! – Kannada News | Uion Minister HD Kumaraswamy Slams JDS MLA G.T. Devegowda Over Loyalty

ಮೈಸೂರು, ಫೆಬ್ರವರಿ 08: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕಾ? ನನ್ನ ಮುಂದೆ ಜಿ.ಟಿ. ದೇವೇಗೌಡ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನನ್ನ ಮನಸ್ಸಿಗೆ ಬಹಳ ನೋವಾಗುವ ಘಟನೆ ನಡೆದಿದೆ. ನಾನು ರಾಜೀನಾಮೆ ಕೊಡುವ ತಪ್ಪನ್ನು ಏನು ಮಾಡಿದ್ದೆ? ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಹಳಷ್ಟು ಜನ ಅಭ್ಯರ್ಥಿಗಳು ಇದ್ದಾರೆ. ಬಹಳಷ್ಟು ಜನರನ್ನು ಬೆಳೆಸಿದ್ದೇವೆ, ಮೆರೆಸಿದ್ದೇವೆ ಎಂದು ಹೇಳಿಕೊಳ್ತಾರೆ. ಯಾವಾಗ ಯಾರನ್ನು ಮೆರೆಸುತ್ತಾರೋ ಯಾರಿಗೆ ಗೊತ್ತು. ಈಗ ಯಾರೋ ಒಬ್ಬರನ್ನು ಮೆರೆಸಲು ಜಿಟಿಡಿ ಹೊರಟಿದ್ದಾರೆ. ಜಿ.ಟಿ. ದೇವೇಗೌಡಗೆ ನಿಯತ್ತು ಏನಾದಾರೂ ಇದೆಯಾ? ಚಾಮುಂಡೇಶ್ವರಿ ಕ್ಷೇತ್ರಕ್ಕೂ ನನಗೂ ಭಾವನಾತ್ಮಕ ಸಂಬಂಧ ಇದೆ. ಮುಂಡೇಶ್ವರಿ ಕ್ಷೇತ್ರದಲ್ಲಿ ಯಾರನ್ನೇ ಅಭ್ಯರ್ಥಿ ಮಾಡಿದ್ರೂ ಗೆಲ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Horoscope Today 08 February​: ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 08, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ, ಸ್ವಾತಿ ನಕ್ಷತ್ರದ ಈ ಶುಭ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲವು ಮಧ್ಯಾಹ್ನ 4:56 ರಿಂದ ಸಂಜೆ 6:24 ರ ತನಕ ಇರಲಿದೆ. ಸರ್ವ ಸಿದ್ಧಿ ಕಾಲ ಅಥವಾ ಸಂಕಲ್ಪ ಕಾಲವು ಮಧ್ಯಾಹ್ನ 2:01 ರಿಂದ 3:28 ರ ತನಕ ಇರುತ್ತದೆ.

ಈ ವಿಶೇಷ ಭಾನುವಾರದಂದು ಮದ್ದೂರು ವೈದ್ಯನಾಥಪುರದಲ್ಲಿ ರಥೋತ್ಸವ, ಸೀತಾ ಅವರ ಜಾತ್ರೆ, ಮೈಸೂರಿನಲ್ಲಿ ಮಾರಿಸಾರು ರಥೋತ್ಸವ ಮತ್ತು ಗುಬ್ಬಿಯಲ್ಲಿ ಹಿಂದೂ ಸಮಾಜೋತ್ಸವದಂತಹ ಕಾರ್ಯಕ್ರಮಗಳು ನಡೆಯಲಿವೆ. ಡಾ. ಗುರೂಜಿ ಅವರು ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸುವವರಿಗೆ ಶುಭ ಹಾರೈಸಿದ್ದಾರೆ. ತಮ್ಮ ಭವಿಷ್ಯದಲ್ಲಿ, ಅವರು ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ.

 

Source link

Nelamangala: ಗ್ಯಾಸ್​​ ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿಯೂ ಆತ್ಮಹತ್ಯೆ! – Kannada News | Nelamangala Couple Tragedy: Gas Geyser Leak Claims Husband, Wife’s Suicide

ರಾಜು ಮತ್ತು ಮೀನಾ ದಂಪತಿImage Credit source: Tv9 Kannada

ನೆಲಮಂಗಲ, ಫೆಬ್ರವರಿ 08: 20 ವರ್ಷಗಳ ಕಾಲ ಸುಂದರವಾಗಿ ಜೀವನ ನಡೆಸಿದ್ದ ದಂಪತಿ ದುರಂತ ಅಂತ್ಯಕಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದದಲ್ಲಿ ನಡೆದಿದೆ. ರಾಜು (48) ಮತ್ತು ಮೀನಾ (42) ಮೃತರಾಗಿದ್ದಾರೆ. ಮನೆಯ ಬಾತ್​​ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್​​ ಗೀಸರ್​​ ಲೀಕ್​​ ಆಗಿದೆ. ಇದರಿಂದ ಉಸಿರಾಡಲು ಸಾಧ್ಯವಾಗದೆ ಒದ್ದಾಡಿ ಅವರು ಪ್ರಾಣ ಬಿಟ್ಟಿದ್ದಾರೆ. ಇತ್ತ ಪತಿಯ ಸಾವಿನ ವಿಷಯ ತಿಳಿಯುತ್ತಿದ್ದಂತೆ ದುಃಖ ತಾಳಲಾರದೆ ಬ್ಯಾಂಕ್​ ಉದ್ಯೋಗಿಯಾಗಿದ್ದ ಪತ್ನಿ ಮೀನಾ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿಯಾಗಿದ್ದ ದಂಪತಿ ಕೆಲಸ ನಿಮ್ಮಿತ್ತ ನೆಲಮಂಗಲ ನಗರದಲ್ಲಿ ಮಗನ ಜೊತೆಗೆ ವಾಸವಿದ್ದರು. ಮೀನಾ ಬೆಂಗಳೂರಿನ ಬ್ಯಾಂಕ್​​ ಒಂದರ ಉದ್ಯೋಗಿಯಾಗಿದ್ದು, ಪತಿಯ ಸಾವಿನ ವಿಚಾರ ತಿಳಿಯುತ್ತಲೇ ನೆಲಮಂಗಲ ನಗರದ ಜಕ್ಕಸಂದ್ರದ ಮನೆ ಕಡೆ ಹೊರಟ್ಟಿದ್ದಾರೆ. ಆದರೆ ಪತಿಯ ಅಗಲುವಿಕೆಯ ಸುದ್ದಿ ಕೇಳಿ ಅದಾಗಲೇ ತೀವ್ರವಾಗಿ ಆಘಾತಕ್ಕೆ ಒಳಗಾಗಿದ್ದ ಮೀನಾ ಮೃತ ಗಂಡನ ಮುಖ ಕೂಡ ನೋಡಿಲ್ಲ. ತಾವು ನಿರ್ಮಾಣ ಮಾಡುತ್ತಿದ್ದ ಮನೆಯ ಸಲ್ಪ ದೂರದಲ್ಲಿಯೇ ಇದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಫ್ರೀಫೈರ್​​ಗೆ ಅಡಿಕ್ಟ್ ಆಗಿದ್ದ ಅಕ್ಕನ ಮಗನನ್ನೇ ಕೊಂದಿದ್ದ ಮಾವ ಸೇರಿ ಕುಟುಂಬದ ನಾಲ್ವರು ಬಿಹಾರದಲ್ಲಿ ಆತ್ಮಹತ್ಯೆಗೆ ಶರಣು!

ಡೆತ್​​ನೋಟ್​​ ಬರೆದು ಸೂಸೈಡ್​​

ಇನ್ನು ಆತ್ಮಹತ್ಯೆಗೂ ಮುನ್ನ ಮೀನಾ ಡೆತ್ನೋಟ್​​ ಕೂಡ ಬರೆದಿದ್ದಾರೆ. ಗಂಡನನ್ನ ಬಿಟ್ಟು ಒಂದು ನಿಮಿಷವೂ ತಾನು ಬದುಕಿರುವುದಿಲ್ಲ ಎಂದು ಅದರಲ್ಲಿ ಅವರು ಉಲ್ಲೇಖ ಮಾಡಿದ್ದು, ಜೊತೆಗೆ ಯಾರ್ಯಾರಿಗೆ ಏನೇನು ಕೊಡಬೇಕು ಅದೆಲ್ಲವನ್ನ ಕೊಟ್ಟುಬಿಡಿ. ನನ್ನ ಕ್ಷಮಿಸಿಬಿಡಿ ಎಂದು ಉಲ್ಲೇಖಿಸಿದ್ದಾರೆ. ದಂಪತಿಯ ಈ ದುರಂತ ಅಂತ್ಯ ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. 20 ವರ್ಷದ ಹಿಂದೆ ಕೈಹಿಡಿದಿದ್ದ ಈ ಜೋಡಿ ಸಾವಲ್ಲೂ ಒಂದಾಗಿರೋದು ಹಲವರ ಕಣ್ಣಂಚಲ್ಲಿ ನೀರು ತರಿಸಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:15 am, Sun, 8 February 26

Source link

Daily Devotional: ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು? – Kannada News | Daily Devotional: Traditional Remedies for Travel According to Hindu Beliefs

ಬೆಂಗಳೂರು, ಫೆಬ್ರುವರಿ​ 08: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಪ್ರಯಾಣಕ್ಕೆ ಹೊರಡುವಾಗ ಎದುರಾಗುವ ಕೆಲವು ಘಟನೆಗಳು ಹಾಗೂ ಅವುಗಳ ಕುರಿತಾದ ನಂಬಿಕೆಗಳನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯಿಂದ ಹೊರಡುವಾಗ ಬೀಗದಕೈ ಕೆಳಗೆ ಬೀಳುವುದು, ಕಾಲು ಎಡವುವುದು, ಅನಾರೋಗ್ಯದ ಲಕ್ಷಣಗಳು ಕಾಣಿಸುವುದು ಅಥವಾ ಒಂಟಿ ಸೀನು ಮುಂತಾದವುಗಳನ್ನು ಕೆಲವೊಮ್ಮೆ ಅಪಶಕುನಗಳೆಂದು ಭಾವಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ಇವುಗಳನ್ನು ಕೇವಲ ಭಯಗಳೆಂದು ಪರಿಗಣಿಸದೆ, ಬದಲಾಗಿ ಜಾಗೃತಿ ಮೂಡಿಸುವ ಸಂಕೇತಗಳಾಗಿ ನೋಡಲಾಗುತ್ತದೆ.

ಇಂತಹ ಸಂದರ್ಭಗಳಲ್ಲಿ ಆತಂಕ ಪಡದೆ, ಕೆಲವು ಸರಳ ಪರಿಹಾರಗಳನ್ನು ಅನುಸರಿಸುವುದು ಉತ್ತಮ. ಈ ಪರಿಹಾರಗಳು ಕಚೇರಿಗೆ ಹೋಗುವ ಸಂದರ್ಭಕ್ಕಲ್ಲದೆ, ಪ್ರಥಮ ಬಾರಿಗೆ ಬೆಳಿಗ್ಗೆ ಮನೆಯಿಂದ ಹೊರಡುವಾಗ ಮಾತ್ರ ಅನ್ವಯಿಸುತ್ತವೆ. ಕೆಲವು ನಿಮಿಷ ವಿಶ್ರಾಂತಿ ಪಡೆಯುವುದು, ಸ್ವಲ್ಪ ನೀರು ಕುಡಿಯುವುದು, ಓಂ ಗಂ ಗಣಪತಯೇ ನಮಃ ಅಥವಾ ಹನುಮ ಮಂತ್ರವನ್ನು ಜಪಿಸುವುದು, ಬಲಗಾಲನ್ನು ಹೊರಗಿಟ್ಟು ಪ್ರಯಾಣ ಮುಂದುವರಿಸುವುದು, ಅಥವಾ ಬೆಲ್ಲ ಮತ್ತು ನೀರನ್ನು ಸೇವಿಸುವುದು ಇಂತಹ ಪರಿಹಾರಗಳಾಗಿವೆ. ಇವು ಆತ್ಮವಿಶ್ವಾಸವನ್ನು ಹೆಚ್ಚಿಸಿ, ಒಳ್ಳೆಯದಾಗುತ್ತದೆ ಎಂಬ ನಂಬಿಕೆಯನ್ನು ಮೂಡಿಸುತ್ತವೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

ಡಿವೋರ್ಸ್​​ ನೀಡದೆ 2ನೇ ಮದುವೆ: ಪೊಲೀಸರ ಜೊತೆ ಮಂಟಪಕ್ಕೇ ನುಗ್ಗಿ ಪತಿಗೆ ಶಾಕ್​​ ಕೊಟ್ಟ ಪತ್ನಿ – Kannada News | Wife Stops Husband’s Second Marriage in Filmy Style at Yedeyuru in Tumakuru

ಪತಿಯ ಎರಡನೇ ಮದುವೆ ತಡೆದ ಪತ್ನಿImage Credit source: Tv9 Kannada

ತುಮಕೂರು, ಫೆಬ್ರವರಿ 08: ತನಗೆ ವಿಚ್ಛೇದನ ನೀಡದೆ ಮತ್ತೊಂದು ಮದುವೆ ಮಾಡಿಕೊಳ್ಳಲು ಹೊರಟಿದ್ದ ಪತಿ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಕಲ್ಯಾಣ ಮಂಟಪಕ್ಕೆ ಪೊಲೀಸರ ಜೊತೆ ನುಗ್ಗಿ ಪತ್ನಿ ಭರ್ಜರಿ ಶಾಕ್​​ ಕೊಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡೆಯೂರಿನಲ್ಲಿ ನಡೆದಿದೆ. ಥೇಟ್​​ ಸಿನಿಮಾ ಶೈಲಿಯ ದೃಶ್ಯ ನೆರೆದಿದ್ದವರನ್ನು ಅಚ್ಚರಿಗೊಳಿಸಿದ್ದು, ಪತ್ನಿಗೆ ಗೊತ್ತಾಗದಂತೆ ಮತ್ತೊಂದು ಮದುವೆ ಮಾಡಲಾಗ್ತಿತ್ತು ಎಂಬ ಆರೋಪ ಕೇಳಿಬಂದಿದೆ.

2014ರಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಲೇಪಾಕ್ಷಿ ಎಂಬಾಕೆಯನ್ನ ಹರಿಪ್ರಸಾದ್ ಮದುವೆಯಾಗಿದ್ದರು. 8ನೇ ತರಗತಿಯಿಂದಲೇ ಇವರಿಬ್ಬರು ಪರಸ್ಪರ ಪ್ರಿತಿಸಿದ್ದರು ಎನ್ನಲಾಗಿದ್ದು, ಮದುವೆ ಬಳಿಕ 10 ವರ್ಷ ಸಂಸಾರವನ್ನೂ ನಡೆಸಿದ್ದರು. ಆ ಬಳಿಕ ಕೌಟುಂಬಿಕ ಕಲಹದ ಕಾರಣಕ್ಕೆ ದಂಪತಿ ಬೇರೆಯಾಗಿದ್ದರು. ಈ ನಡುವೆ ಲೇಪಾಕ್ಷಿಗೆ ಗೊತ್ತಾಗದಂತೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಯುವತಿಯ ಜೊತೆಗೆ ಮದುವೆಗೆ ಹರಿಪ್ರಸಾದ್​ ಮುಂದಾಗಿದ್ದಾರೆ. ಅದರಂತೆ ಯಡೆಯೂರಿನ SLN ಕಲ್ಯಾಣ ಮಂಟಪದಲ್ಲಿ ಇಂದು ಬೆಳಗ್ಗೆ 8:15ರಿಂದ 8:40ರ ವರೆಗೆ ಇದ್ದ ಮುಹೂರ್ತದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮಕ್ಕೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸರ ಜೊತೆ ಲೇಪಾಕ್ಷಿ ಎಂಟ್ರಿ ಕೊಟ್ಟಿದ್ದಾರೆ.

ಇದನ್ನೂ ಓದಿ:  ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ; 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ

ಇನ್ನು ಪತ್ನಿ ಕಂಡು ಹರಿಪ್ರಸಾದ್​​ ಕಕ್ಕಾಬಿಕ್ಕಿಯಾಗಿದ್ದರೆ, ನನಗೆ ಡಿವೋರ್ಸ್ ಕೊಡದೆ ಮೋಸ ಮಾಡಿದ್ದೀಯಾ ಅಂತ ಗಲಾಟೆ ತೆಗೆದ ಲೇಪಾಕ್ಷಿ ಕೊನೆಗೂ ಮದುವೆ ನಿಲ್ಲಿಸಿದ್ದಾರೆ. ಮತ್ತೊಂದು ಮದುವೆಯ ಆಸೆಯಲ್ಲಿ ಹಸೆಮಣೆ ಏರಿದ್ದ ಹರಿಪ್ರಸಾದ್​​, ತಾಳಿ ಕಟ್ಟದೆ ಪೊಲೀಸ್​​ ಠಾಣೆಗೆ ತೆರಳಿದ ಪ್ರಸಂಗ ನಡೆದಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಲೇಪಾಕ್ಷಿ ಕುಟುಂಬಸ್ಥರು ಹರೀಶ್​​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರೀತಿಸಿ ಮುದುವೆಯಾದಾಕೆಗೆ ವಿಚ್ಚೇದನವನ್ನೂ ನೀಡದೆ ಈಗ ಮತ್ತೊಬ್ಬಳಿಗೆ ತಾಳಿಕಟ್ಟಲು ಈತ ಹೋಗಿದ್ದಾನೆ ಅಂದ್ರೆ ಏನು ಸ್ವಾಮಿ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:26 pm, Sun, 8 February 26

Source link

ಟಾಪ್​​ಲೆಸ್ ಆಗಿ ಕಾಣಿಸಿಕೊಂಡ ‘ಅರ್ಜುನ್ ರೆಡ್ಡಿ’ ನಟಿ ಶಾಲಿನಿ ಪಾಂಡೆ; ಫೋಟೋ ವೈರಲ್ – Kannada News | Arjun Reddy actress Shalini Pandey Goes Topless for latest photoshoot

ಸೂಪರ್ ಹಿಟ್ ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ನಟಿ ಶಾಲಿನಿ ಪಾಂಡೆ (Shalini Pandey) ಅವರು ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದರು. ಆ ಪಾತ್ರದಲ್ಲಿ ಅವರನ್ನು ಪ್ರೇಕ್ಷಕರು ಬಹಳ ಇಷ್ಟಪಟ್ಟಿದ್ದರು. ಆದರೆ ಶಾಲಿನಿ ಪಾಂಡೆ ಅವರು ರಿಯಲ್ ಲೈಫ್​​ನಲ್ಲಿ ಸಖತ್ ಬೋಲ್ಡ್. ಈಗ ತಮ್ಮ ಗ್ಲಾಮರಸ್ ಅವತಾರದ ಮೂಲಕ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಸಾಮಾನ್ಯವಾಗಿ ತೆರೆಯ ಮೇಲೆ ಸಂಪ್ರದಾಯಬದ್ಧ ಪಾತ್ರಗಳಲ್ಲಿ ನಟಿಸುವ ಶಾಲಿನಿ ಅವರು, ತಮ್ಮ ಇಮೇಜ್ ಬದಿಗಿಟ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶಾಲಿನಿ ಪಾಂಡೆ ಇತ್ತೀಚೆಗೆ ಹಂಚಿಕೊಂಡಿರುವ ಫೋಟೋಗಳು ಸಖತ್ ವೈರಲ್ ಆಗುತ್ತಿವೆ. ಈ ಫೋಟೋದಲ್ಲಿ ಶಾಲಿನಿ ಕೇವಲ ಟವಲ್ ಸುತ್ತಿಕೊಂಡು, ಬೆನ್ನು ತೋರಿಸಿ ಪೋಸ್ ನೀಡಿದ್ದಾರೆ. ಯಾವುದೇ ಅಬ್ಬರವಿಲ್ಲದೇ ಸರಳ ಮೇಕಪ್, ಬಿಟ್ಟ ಕೂದಲು ಹಾಗೂ ಮಂದ ಬೆಳಕಿನಲ್ಲಿ ಮೂಡಿಬಂದಿರುವ ಈ ಫೋಟೋಗಳು ಶಾಲಿನಿ ಅವರ ಆತ್ಮವಿಶ್ವಾಸವನ್ನು ಎತ್ತಿ ತೋರಿಸುತ್ತಿವೆ.

ಶಾಲಿನಿ ಪಾಂಡೆ ಅವರ ಸಹಜವಾದ ಸೌಂದರ್ಯ ಮತ್ತು ಫಿಟ್‌ನೆಸ್‌ನಿಂದಾಗಿ ಈ ಫೋಟೋಗಳು ಅತ್ಯಂತ ಆಕರ್ಷಕವಾಗಿ ಕಾಣಿಸುತ್ತಿವೆ. ಅಭಿಮಾನಿಗಳು ಕಾಮೆಂಟ್ ಬಾಕ್ಸ್‌ನಲ್ಲಿ ಮೆಚ್ಚುಗೆಯ ಮಳೆ ಸುರಿಯುತ್ತಿದ್ದಾರೆ. ಕೆಲವರಿಗೆ ಶಾಲಿನಿ ಅವರ ಈ ಅವತಾರ ಕಂಡು ಅಚ್ಚರಿ ಆಗಿದೆ. ‘ಮುಗ್ಧತೆಯ ಹಿಂದೆ ಇಷ್ಟೊಂದು ಹಾಟ್‌ನೆಸ್ ಅಡಗಿದೆಯಾ’ ಎಂದು ಕೆಲವು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ತೆಲುಗಿನ ‘ಅರ್ಜುನ ರೆಡ್ಡಿ’ ಸಿನಿಮಾದ ಮೂಲಕ ದೊಡ್ಡ ಮಟ್ಟದ ಯಶಸ್ಸು ಕಂಡ ಶಾಲಿನಿ ಪಾಂಡೆ, ನಂತರ ಬಾಲಿವುಡ್‌ನತ್ತ ಮುಖ ಮಾಡಿದರು. ಇತ್ತೀಚೆಗಷ್ಟೇ ಅವರು ಪುಲ್ಕಿತ್ ಸಾಮ್ರಾಟ್ ಮತ್ತು ವರುಣ್ ಶರ್ಮಾ ನಟನೆಯ ‘ರಾಹು ಕೇತು’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾದಿಂದ ಸಿನಿಮಾಗೆ ವಿಭಿನ್ನ ಪಾತ್ರಗಳನ್ನು ಆರಿಸಿಕೊಳ್ಳುತ್ತಿರುವ ಶಾಲಿನಿ, ಈಗ ತಮ್ಮ ಈ ಬೋಲ್ಡ್ ಫೋಟೋಶೂಟ್ ಮೂಲಕ ತಾನು ಕೇವಲ ಸಾಂಪ್ರದಾಯಿಕ ಪಾತ್ರಗಳಿಗೆ ಮಾತ್ರ ಸೀಮಿತವಲ್ಲ ಎಂಬ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಶಾಲಿನಿ ಪಾಂಡೆ

ತೆರೆಯ ಮೇಲಿನ ಸರಳತೆ ಮತ್ತು ಆಫ್-ಸ್ಕ್ರೀನ್‌ನಲ್ಲಿನ ಈ ಬೋಲ್ಡ್ ಲುಕ್ ಎರಡನ್ನೂ ಶಾಲಿನಿ ಸಮಾನವಾಗಿ ನಿಭಾಯಿಸುತ್ತಿರುವುದು ಅವರ ವೃತ್ತಿಜೀವನದ ಹೊಸ ಆಯಾಮವನ್ನು ಸೂಚಿಸುತ್ತಿದೆ. ಇನ್​ಸ್ಟಾಗ್ರಾಮ್​​ನಲ್ಲಿ ಶಾಲಿನಿ ಅವರನ್ನು 23 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:04 pm, Sun, 8 February 26

Source link

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು.

ಅಝಿಸ್ಟಾ ಸಂಸ್ಥೆಯ 80 ಕಿಲೋ ಭಾರದ ಭೂ ಪರಿವೀಕ್ಷಣಾ ಉಪಗ್ರಹವಾದ ಎಎಫ್​ಆರ್ (AFR – earth observing satellite) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಇಮೇಜ್​ಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಫೆಬ್ರುವರಿ 3ರಂದು ಅಝಿಸ್ಟಾ ನಡೆಸಿದ ಎರಡೂ ಪ್ರಯೋಗಗಳು ಯಶಸ್ವಿಯಾಗಿವೆ.

ಇದನ್ನೂ ಓದಿ: ಸರ್ವಮ್ ಎಐನಿಂದ ಹೊಸ ಮಾಡಲ್; ಡಾಕ್ಯುಮೆಂಟ್ ಇಂಟೆಲಿಜೆನ್ಸ್​ನಲ್ಲಿ ವಿಶ್ವಲ್ಲೇ ಬೆಸ್ಟ್; ಕಟು ಟೀಕಾಕಾರರಿಗೂ ಅಚ್ಚರಿ

ಕಕ್ಷೆಯಲ್ಲಿ ಸೆಟಿಲೈಟ್​ಗಳು ಗಂಟೆಗೆ ಸುಮಾರು 50,000 ಕಿಮೀ ವೇಗದಲ್ಲಿ ತಿರುಗುತ್ತಿರುತ್ತವೆ. ಕಕ್ಷೆಯಲ್ಲಿ ಇನ್ನೊಂದು ವಸ್ತುವಿನ ದೃಶ್ಯ ಸೆರೆ ಹಿಡಿಯುವುದು ಕಷ್ಟ. ಅದರಲ್ಲೂ ಸೂರ್ಯನ ಪ್ರಖರ ಬಿಸಿಲು ಇರುವಾಗ ಬಹಳ ಕಷ್ಟ. ಅಝಿಸ್ಟಾದ ಸೆಟಿಲೈಟ್​ನಲ್ಲಿರುವ ಬಹಳ ಸುಧಾರಿತ ಸಾಫ್ಟ್​ವೇರ್ ಮತ್ತು ಕ್ಯಾಮೆರಾಗಳು ಈ ಕಾರ್ಯವನ್ನು ಯಶಸ್ವಿಯಾಗಿ ಮಾಡಿವೆ. ಐಎಸ್​ಎಸ್ ಅನ್ನು 245-300 ಕಿಮೀ ದೂರದಿಂದ ಫೋಟೋ ಸೆರೆ ಹಿಡಿಯುವ ಕೆಲಸ ಮಾಡಿದೆ.

ಆರ್ಬಿಟ್ ಸ್ನೂಪಿಂಗ್ ಯಾಕೆ ಮುಖ್ಯ?

ಕಕ್ಷೆಯಲ್ಲಿ ಹಾನಿಕಾರಕವಾಗಬಹುದಾದ ವಸ್ತುಗಳು ಹಾಗೂ ಶತ್ರುಗಳ ಸೆಟಿಲೈಟ್​ಗಳನ್ನು ಗುರುತಿಸಲು ಈ ಸ್ನೂಪಿಂಗ್ ಸಹಾಯಕವಾಗುತ್ತದೆ. ಭಾರತದಿಂದ ಹಲವು ಸಾವಿರಾರು ಕೋಟಿ ರೂ ಮೌಲ್ಯದ ಹಲವು ಸೆಟಿಲೈಟ್​ಗಳು ಕಕ್ಷೆಯಲ್ಲಿ ತಿರುಗುತ್ತಿವೆ. ರಕ್ಷಣೆಯಿಂದ ಹಿಡಿದು ಸಂವಹನದವರೆಗೆ ಮಹತ್ವದ ಕಾರ್ಯಗಳಿಗೆ ಈ ಸೆಟಿಲೈಟ್​ಗಳು ಬಳಕೆ ಆಗುತ್ತಿವೆ. ಶತ್ರು ದೇಶಗಳ ದಾಳಿಯಿಂದಲೋ ಅಥವಾ ಮತ್ತೊಂದರಿಂದಲೂ ಇವುಗಳು ಹಾನಿಯಾಗದಂತೆ ನೋಡಿಕೊಳ್ಳಲು ಕಕ್ಷೆಯಲ್ಲಿ ಕಣ್ಣಿಟ್ಟಿರುವುದು ಬಹಳ ಮುಖ್ಯ. ಹೀಗಾಗಿ, ಆರ್ಬಿಟ್ ಸ್ನೂಪಿಂಗ್ ಅಗತ್ಯ ಎನಿಸುತ್ತದೆ.

ಇದನ್ನೂ ಓದಿ: ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್

ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಇಂಥದ್ದೊಂದು ಸಾಮರ್ಥ್ಯ ಅಭಿವೃದ್ಧಿಪಡಿಸಿರುವುದು ಗಮನಾರ್ಹ. ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿಗೂ ತೆರೆಯುವ ಸರ್ಕಾರದ ಕ್ರಮ ಮತ್ತು ಉದ್ದೇಶ ಫಲಕೊಡುತ್ತಿರುವಂತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್; ಕಾರಣ ಏನು? – Kannada News | Actor Rajpal Yadav sent to Tihar Jail in check bounce case

ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜ್​​ಪಾಲ್ ಯಾದವ್ (Rajpal Yadav) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್ಥಿಕ ಅಪರಾಧದ ಕಾರಣದಿಂದ ಅವರು ಜೈಲು ಪಾಲಾಗುವಂತಾಗಿದೆ. ಒಂದೂವರೆ ದಶಕದ ಹಿಂದೆ ಪಡೆದಿದ್ದ ಸಾಲವನ್ನು ಮರುಪಾವತಿ ಮಾಡಲಾಗದೇ ಇದ್ದಿದ್ದಕ್ಕಾಗಿ ಅವರನ್ನು ಜೈಲಿಗೆ ಕಳಿಸಲಾಗಿದೆ. ರಾಜ್​ಪಾಲ್ ಯಾದವ್ ಅವರು ಈಗ ತಿಹಾರ್ ಜೈಲು (Tihar Jail) ಸೇರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಸಿನಿಮಾ ಮಾಡುವ ಸಲುವಾಗಿಯೇ ಸಾಲ ಪಡೆದಿದ್ದ ರಾಜ್​ಪಾಲ್ ಯಾದವ್ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ.

ದೆಹಲಿ ಮೂಲದ ಉದ್ಯಮಿಯೊಬ್ಬರಿಂದ ರಾಜ್​ಪಾಲ್ ಯಾದವ್ ಅವರು 5 ಕೋಟಿ ರೂಪಾಯಿ ಸಾಲ ಪಡೆದಿದ್ದರು. ತಮ್ಮದೇ ನಿರ್ದೇಶನದ ‘ಅತಾ ಪತಾ ಲಾಪತಾ’ ಸಿನಿಮಾ ಸಲುವಾಗಿ ಅವರ ಸಾಲ ಮಾಡಿದ್ದರು. ಆದರೆ ಆ ಸಿನಿಮಾ ಸೋತಿತು. ಆದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಶುರು ಆಯಿತು. ಸಾಲ ತೀರಿಸಲು ರಾಜ್​ಪಾಲ್ ಯಾದವ್ ಅವರಿಗೆ ಸಾಧ್ಯವಾಗಲೇ ಇಲ್ಲ.

ಸಾಲ ಕೊಟ್ಟವರು ರಾಜ್​ಪಾಲ್ ಯಾದವ್ ಮೇಲೆ ಕೇಸ್ ಹಾಕಿದರು. ರಾಜ್​ಪಾಲ್ ಯಾದವ್ ನೀಡಿದ್ದ ಹಲವು ಚೆಕ್​​ಗಳು ಬೌನ್ಸ್ ಆಗಿದ್ದರಿಂದ ಅವರಿಗೆ 2018ರಲ್ಲೇ ಶಿಕ್ಷೆ ಪ್ರಕಟ ಆಯಿತು. 6 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಲಾಯಿತು. ಆ ಬಳಿಕವೂ ರಾಜ್​ಪಾಲ್ ಯಾದವ್ ಬುದ್ಧಿ ಕಲಿಯಲಿಲ್ಲ. ಸಾಲ ತೀರಿಸಲು ಅವರು ವಿಫಲರಾದರು.

ಒಂದೂವರೆ ದಶಕಗಳ ಕಾಲ ಎಳೆದಾಡಿಕೊಂಡು ಬಂದಿದ್ದ ಈ ಕೇಸ್ ಈಗ ಅಂತಿಮ ಘಟಕ್ಕೆ ಬಂದಿದೆ. ನೀವು ಕೂಡಲೇ ಶರಣಾಗಬೇಕು ಎಂದು ರಾಜ್​ಪಾಲ್ ಯಾದವ್ ಅವರಿಗೆ ಕೋರ್ಟ್ ಸೂಚನೆ ನೀಡಿತು. ಅದರಂತೆ, ರಾಜ್​ಪಾಲ್ ಯಾದವ್ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಸಮಯಾವಕಾಶ ನೀಡುವಂತೆ ಅವರು ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ: Rajpal Yadav: 26,000 ರೂ. ನೀಡಿ ಹೇರ್​ಕಟ್​ ಮಾಡಿಸಿಕೊಂಡಿದ್ದ ರಾಜ್​ಪಾಲ್​ ಯಾದವ್​; ಹಾಸ್ಯ ನಟನ ಪ್ರಯತ್ನವೆಲ್ಲ ನೀರಲ್ಲಿ ಹೋಮ

2010ರಲ್ಲಿ ರಾಜ್​ಪಾಲ್ ಯಾದವ್ ಪಡೆದಿದ್ದ 5 ಕೋಟಿ ರೂಪಾಯಿ ಸಾಲ ಈಗ 9 ಕೋಟಿ ರೂಪಾಯಿ ಆಗಿ ಬೆಳೆದಿದೆ. ಇದನ್ನು ಮರುಪಾವತಿ ಮಾಡಲು ಅವರಿಗೆ ಹಲವು ಅವಕಾಶಗಳನ್ನು ನೀಡಲಾಗಿತ್ತು. ಆದರೆ ಅದನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ಈ ಬಾರಿ ಜೈಲು ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version