ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 13ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ ಇದ್ದಲ್ಲಿ ದೂರ ಆಗುತ್ತದೆ. ಇನ್ನು ನಿಮಗೆ ಬರಬೇಕಾದ ಹಣ ಬಾಕಿ ಉಳಿದುಹೋಗಿದ್ದಲ್ಲಿ ಅದು ವಸೂಲಿ ಮಾಡಿಕೊಳ್ಳಲಿಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಈ ದಿನ ಹೊಸ ಸಾಧ್ಯತೆಗಳಿಂದ ತುಂಬಿರುತ್ತದೆ. ಉದ್ಯೋಗಸ್ಥರಿಗೆ ಹೊಸ ಯೋಜನೆಗಳಿಗೆ ಅವಕಾಶ ಸಿಗುತ್ತದೆ; ಮೇಲಧಿಕಾರಿಗಳ ಬೆಂಬಲ ದೊರೆತು ಕೆಲಸ- ಕಾರ್ಯಗಳು ಸುಗಮವಾಗಿ ಆಗಲಿವೆ. ವ್ಯಾಪಾರಸ್ಥರು ಗ್ರಾಹಕರ ನಿರೀಕ್ಷೆಗಳಿಗೆ ತಕ್ಕಂತೆ ಆರ್ಡರ್‌ ಗಳನ್ನು ಪೂರ್ತಿ ಮಾಡಿಕೊಡುತ್ತೀರಿ. ರೈತರಿಗೆ ಬೆಳೆಯ ಮಾರಾಟ ಸುಲಭವಾಗಿ ಆಗುತ್ತದೆ. ನಾಟಕ, ಇತರೆ ಬರಹ ಅಥವಾ ಕ್ರಿಯೇಟಿವ್ ಕೆಲಸಗಳಲ್ಲಿ ತೊಡಗಿರುವವರು ಹೊಸ ಚಿಂತನೆಗಳಿಂದ ಪ್ರೋತ್ಸಾಹ ಪಡೆಯುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆಯವರು, ಹಿರಿಯರು ನಿಮ್ಮ ಸಲಹೆ ಮತ್ತು ಸಹಕಾರದಿಂದ ಸಂತೋಷ ಪಡುತ್ತಾರೆ. ಪ್ರೀತಿಯಲ್ಲಿ ಇರುವವರಿಗೆ ಪರಸ್ಪರ ಮಾತುಕತೆಯಿಂದ ಬಾಂಧವ್ಯ ಬಲವಾಗುತ್ತದೆ. ಖರ್ಚು–ಉಳಿತಾಯ ಸಮತೋಲನ ಸಾಧಿಸುವ ಕಡೆಗೆ ಗಮನವನ್ನು ವಹಿಸಿ. ನಿಮ್ಮ ದೇಹಕ್ಕೆ ಒಗ್ಗುವ ಆಹಾರ ಮತ್ತು ಸರಿಯಾದ ಪ್ರಮಾಣದ ನಿದ್ರೆ ಮುಖ್ಯ. ದಿನಾಂತ್ಯಕ್ಕೆ ಸಾಧನೆಗಳ ಅನುಭವದಿಂದ ಮನಸ್ಸು ಹಿಗ್ಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಮತೋಲನದ ಆಹಾರ ಸೇವನೆಗೆ ಆದ್ಯತೆ ನೀಡಿ, ಮನೆಗೆ ತರುವಂಥ ದಿನಸಿ ಪದಾರ್ಥಗಳ ಆಯ್ಕೆಯಲ್ಲೇ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಶೀತ- ಕೆಮ್ಮು- ಕಫದಿಂದ ಬಳಲುತ್ತಾ ಇರುವವರು ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಔಷಧೋಪಚಾರ ಪಡೆಯುವುದಕ್ಕೆ ಆದ್ಯತೆ ನೀಡಿ. ನಿಮಗೆ ಬರಬೇಕಾದ ಬಾಕಿ ಹಣ ವಸೂಲಿಗೆ ಈ ದಿನ ಗಟ್ಟಿಯಾಗಿ ಪ್ರಯತ್ನಿಸಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 13ರ ದಿನಭವಿಷ್ಯ

ಪೈರೈಟ್ ಸ್ಟೋನ್ ನಿಂದ ಸಿದ್ಧ ಮಾಡಿದಂಥ ಉಂಗುರವನ್ನು ಧರಿಸುವುದರಿಂದ ಆರ್ಥಿಕ ಒತ್ತಡದಿಂದ ಹೊರಬರುವುದಕ್ಕೆ ದಾರಿ ಗೋಚರ ಆಗುತ್ತದೆ. ಇನ್ನು ಈ ದಿನ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮುನ್ನ ಬಿಳಿ ಬಣ್ಣದ ವಸ್ತ್ರವೊಂದನ್ನು ಜೇಬಿನಲ್ಲಿ ಇಟ್ಟುಕೊಂಡಿರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಖರ್ಚಿನ ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗಿರುತ್ತದೆ. ಕುಟುಂಬದ ಪರಿಸ್ಥಿತಿ ಹಾಗೂ ನೀವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸ್ನೇಹಿತರ ಜತೆಗೆ ಮಾತುಕತೆ ಬೇಡ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಒಂದೇ ಸಮಯಕ್ಕೆ ಹಲವು ಕೆಲಸಗಳು ಏಕ ಕಾಲಕ್ಕೆ ಮಾಡಬೇಕಾದ ಒತ್ತಡ ಸೃಷ್ಟಿ ಆಗುತ್ತದೆ. ದೂರದ ಸ್ಥಳದಲ್ಲಿ ಬಿಟ್ಟು ಓದಿಸುತ್ತಿರುವ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮುಖ್ಯ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪ್ರೀತಿ- ಪ್ರೇಮ, ಮದುವೆಗೆ ಸಂಬಂಧಿಸಿದಂತೆ ಭಾವನಾತ್ಮಕ ಕ್ಷಣಗಳಲ್ಲಿ ಸಮಾಧಾನದಿಂದ ನಿರ್ಧಾರ ಮಾಡುವುದು ಸವಾಲಾಗಿರುತ್ತದೆ. ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನ ಮಾಡಿದಲ್ಲಿ ಅದರ ಅಡ್ಡ ಪರಿಣಾಮ ನಿಮ್ಮ ಮೇಲೇ ಆಗಲಿದೆ. ಜಂಕ್ ಫುಡ್ ಗಳಿಂದ ಈ ದಿನ ಸಾಧ್ಯವಾದಷ್ಟೂ ದೂರ ಇರುವುದು ಒಳ್ಳೆಯದು. ಮಾಧ್ಯಮ ಕ್ಷೇತ್ರದಲ್ಲಿ ಇರುವವರಿಗೆ ಉದ್ಯೋಗದ ಆಫರ್ ಬರಬಹುದು.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಬಾಡಿಗೆ ಮನೆಗಾಗಿ ಹುಡುಕಾಟ ನಡೆಸುತ್ತಾ ಇರುವವರು ಈ ದಿನ ಅಡ್ವಾನ್ಸ್ ಮಾಡುವಂಥ ಯೋಗ ಇದೆ. ಆದಾಯ ಹೆಚ್ಚು ಮಾಡಿಕೊಳ್ಳಲು ವಿವಿಧ ಯೋಜನೆಗಳನ್ನು ರೂಪಿಸಲಿದ್ದೀರಿ. ನಿಮ್ಮದೇ ಅಸ್ತಿಯೊಂದನ್ನು ಮಾರುವ ಆಲೋಚನೆ ಸಹ ಬರಬಹುದು. ಹೂಡಿಕೆಗೆ ಆ ಹಣದ ಬಳಕೆ ಮಾಡುವ ಚಿಂತನೆ ಇರಲಿದೆ. ಇಷ್ಟು ಸಮಯ ನಿಮ್ಮ ಜೊತೆಗೆ ಸ್ನೇಹ- ಸೌಹಾರ್ದದಿಂದ ಇರುವ ವ್ಯಕ್ತಿ ಕೆಲವು ವಿಷಯಗಳಲ್ಲಿ ತೆಗೆದುಕೊಳ್ಳುವ ನಿರ್ಧಾರ ಕಿರಿಕಿರಿ ಮಾಡಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 13ರ ದಿನಭವಿಷ್ಯ

ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದುಕೊಳ್ಳಿ. ಸಾಧ್ಯವಿದ್ದಲ್ಲಿ ಮಾರನೇ ದಿನಕ್ಕೆ ಪಂಚಾಮೃತ ಅಭಿಷೇಕಕ್ಕೆ ಕೊಟ್ಟು ಬನ್ನಿ. ಹೊಸ ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಲಿದ್ದು, ಆದಾಯಕ್ಕೆ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ದೂರ ಪ್ರಯಾಣಕ್ಕೆ ಹೊರಡಲು ಎಲ್ಲ ಸಿದ್ಧತೆ ಮಾಡಿಕೊಂಡು, ಕೊನೆ ಕ್ಷಣದಲ್ಲಿ ಅದನ್ನು ರದ್ದು ಮಾಡಬೇಕಾದ ಪರಿಸ್ಥಿತಿ ಉದ್ಭವಿಸಲಿದೆ. ಹೊಸ ಸ್ನೇಹಿತರ ಜತೆಗೆ ಸಲುಗೆ ಬೇಡ. ಪಾರಂಪರಿಕ ವೈದ್ಯ ವೃತ್ತಿ ಮಾಡಿಕೊಂಡು ಬಂದಿರುವವರು ಕೆಲವು ಸಮಯ ಬಿಡುವು ತೆಗೆದುಕೊಳ್ಳುವ ತೀರ್ಮಾನ ಮಾಡುವಂತೆ ಆಗಲಿದೆ. ಇತರರ ತಪ್ಪುಗಳು ಕಂಡುಬಂದಲ್ಲಿ ಸಿಟ್ಟಿನಿಂದ ಕೂಗಾಡುವುದು- ಕಿರುಚಾಡುವುದು ಮಾಡಬೇಡಿ. ಸಾಧ್ಯವಾದಷ್ಟೂ ಸಮಾಧಾನದಿಂದ ತಿಳಿಹೇಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಇಂದು ನಿಮ್ಮಲ್ಲಿ ಮೂಡುವಂಥ ಹೊಸ ಆಶಯಗಳು ಮನಸ್ಸನ್ನು ಉತ್ಸಾಹದಿಂದ ಪ್ರೇರೇಪಿಸುತ್ತವೆ. ಪೊಲೀಸರು ಅಥವಾ ಸೇನೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಇಲ್ಲಿಯ ತನಕ ಸಿಗದೇ ಇದ್ದ ಕೆಲವು ಸವಲತ್ತುಗಳು ದೊರೆಯಲಿವೆ. ಶಾಲಾ ಶಿಕ್ಷಕರು ಮಕ್ಕಳಿಗೆ ಹೊಸ ವಿಧಾನದಲ್ಲಿ ಹೇಳಿಕೊಡುವ ಮೂಲಕ ಕಲಿಕೆ ಸುಗಮಗೊಳಿಸುತ್ತೀರಿ. ಲೇಖಕರು, ಕವಿ, ನಾಟಕ ಕಲಾವಿದರು ಹೊಸ ಸೃಜನಾತ್ಮಕ ಕಾರ್ಯಗಳಿಗೆ ಗುರುಗಳ ಸಮಾನರಾದ ವ್ಯಕ್ತಿಗಳಿಂದ ಪ್ರೇರಣೆ ಪಡೆಯುತ್ತೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕ್ರೀಡಾಪಟುಗಳು ಸ್ಪರ್ಧಾ ತಯಾರಿ ತೀವ್ರವಾಗಿ ಮುಂದುವರಿಸುತ್ತೀರಿ. ದಿನಸಿ ಅಂಗಡಿ, ಸಲೂನ್ ಮಾಲೀಕರು ಗ್ರಾಹಕರು ನೀಡುವ ಫೀಡ್ ಬ್ಯಾಕ್ ನಿಂದ ಸೇವಾ ವಿಧಾನದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದೀರಿ. ಹಣಕಾಸು ವಿಚಾರದಲ್ಲಿ ಯೋಜಿತವಾದ ಖರ್ಚು, ಉಳಿತಾಯವನ್ನು ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಕುಟುಂಬ ಸದಸ್ಯರ ಬೆಂಬಲದಿಂದ ನಿಮ್ಮ ಮೇಲಿನ ಒತ್ತಡದಲ್ಲಿ ಬಹಳ ಕಡಿಮೆಯಾಗುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

ಕೊಲೆಸ್ಟ್ರಾಲ್ ನಿಯಂತ್ರಿಸಲು ಪ್ರತಿನಿತ್ಯ ಈ ಸಲಹೆಗಳನ್ನು ಮರೆಯದೆಯೇ ಅನುಸರಿಸಿ – Kannada News | Daily Habits to Manage High Cholesterol

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ದೇಹದಲ್ಲಿ ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ. ಕೊಲೆಸ್ಟ್ರಾಲ್ ದೇಹಕ್ಕೆ ಅಗತ್ಯವಾದ ಒಂದು ರೀತಿಯ ಕೊಬ್ಬು, ಆದರೆ ಅದು ಹೆಚ್ಚಾದರೆ ಹಾನಿಕಾರಕವಾಗಬಹುದು. ಇದರಿಂದ ವ್ಯಕ್ತಿಯಲ್ಲಿ ಆಯಾಸ, ತಲೆತಿರುಗುವಿಕೆ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಅಥವಾ ನೋವು, ಉಸಿರಾಟದ ತೊಂದರೆ ಮತ್ತು ಎದೆಯಲ್ಲಿ ಅಸಹಜ ಒತ್ತಡದಂತಹ ಸಮಸ್ಯೆಗಳು ಕಂಡುಬರಬಹುದು. ಜೊತೆಗೆ ಕಣ್ಣುಗಳ ಸುತ್ತಲಿನ ಚರ್ಮದ ಸಿಪ್ಪೆ ಸುಲಿಯುವುದು ಅಥವಾ ತೂಕ ಹೆಚ್ಚಾಗುವುದು ಸಹ ಇದರ ಲಕ್ಷಣಗಳಾಗಿರಬಹುದು. ಪರೀಕ್ಷೆ ಮಾಡಿಕೊಳ್ಳದೆಯೇ ಹೆಚ್ಚಿನವರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷ್ಯ ಮಾಡಬಹುದು. ಇದಲ್ಲದೆ, ದೀರ್ಘಕಾಲದ ವರೆಗೆ ಹೆಚ್ಚಿನ ಕೊಲೆಸ್ಟ್ರಾಲ್ ಇರುವುದು ಹೃದಯ ಸಂಬಂಧಿ ಕಾಯಿಲೆ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸುವುದು ಅಪಾಯಕಾರಿ. ಹಾಗಾದರೆ ಕೊಲೆಸ್ಟ್ರಾಲ್ ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಏನು ಮಾಡಬೇಕು?

ಸಾಮಾನ್ಯವಾಗಿ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು, ಮೊದಲು ಆಹಾರಕ್ರಮದ ಬಗ್ಗೆ ಗಮನ ಕೊಡಬೇಕು. ಹುರಿದ ಮತ್ತು ಕೊಬ್ಬಿನಾಂಶ ಅಧಿಕವಾಗಿರುವ ಆಹಾರ ಸೇವನೆ ಮಾಡುವುದನ್ನು ಕಡಿಮೆ ಮಾಡಿ. ತಾಜಾ ಹಣ್ಣು, ತರಕಾರಿ, ಓಟ್ಸ್, ಕಡಲೆಕಾಯಿ ಮತ್ತು ಅಗಸೆ ಬೀಜಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸಿ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವಾಕಿಂಗ್, ಯೋಗ ಅಥವಾ ಸೈಕ್ಲಿಂಗ್‌ನಂತಹ ಲಘು ವ್ಯಾಯಾಮ ಮಾಡಿ. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ. ನಿಯಮಿತವಾಗಿ ತಪಾಸಣೆ ಮಾಡಿಸಿಕೊಂಡು ವೈದ್ಯರು ಸೂಚಿಸಿದಂತೆ ಔಷಧಿಗಳನ್ನು ತೆಗೆದುಕೊಳ್ಳಿ. ಒತ್ತಡ ಕಡಿಮೆ ಮಾಡಲು, ಧ್ಯಾನ ಮತ್ತು ಆಳವಾದ ಉಸಿರಾಟವನ್ನು ಅಭ್ಯಾಸ ಮಾಡಿ. ಈ ರೀತಿಯ ಸಣ್ಣ ಬದಲಾವಣೆಗಳು ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹ ಸಹಾಯ ಮಾಡಬಹುದು.

ಇದನ್ನೂ ಓದಿ: ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು

ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ?

  • ಹೆಚ್ಚು ಎಣ್ಣೆ ಹಾಗೂ ಕೊಬ್ಬಿನಾಂಶ ಹೆಚ್ಚಿರುವ ಆಹಾರ ಸೇವಿಸುವವರು
  • ಅತಿಯಾದ ತೂಕ ಹೊಂದಿರುವವರು
  • ದೈಹಿಕ ಚಟುವಟಿಕೆ ಕಡಿಮೆ ಇರುವವರು
  • ಧೂಮಪಾನ ಮತ್ತು ಮದ್ಯಪಾನ ಮಾಡುವವರು
  • ಕುಟುಂಬದಲ್ಲಿ ಹೃದಯ ರೋಗ ಅಥವಾ ಹೆಚ್ಚಿನ ಕೊಲೆಸ್ಟ್ರಾಲ್ ಇತಿಹಾಸ ಇರುವವರು

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NAM: ನಮೀಬಿಯಾ ವಿರುದ್ಧ 93 ರನ್​ಗಳಿಂದ ಗೆದ್ದ ಟೀಂ ಇಂಡಿಯಾ – Kannada News | T20 World Cup 2026: India Dominates Namibia by 93 Runs; Kishan and Pandya Shine

2026ರ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯಕ್ಕೂ ಮುನ್ನ ನಿರೀಕ್ಷಿಸಿದ ಫಲಿತಾಂಶವೇ ಪಂದ್ಯದ ಬಳಿಕವೂ ಹೊರಬಿದ್ದಿದೆ. ಈ ಪಂದ್ಯದಲ್ಲಿ ನಮೀಬಿಯಾ ತಂಡವನ್ನು 93 ರನ್​ಗಳ ಭಾರಿ ಅಂತರದಿಂದ ಮಣಿಸಿದ ಟೀಂ ಇಂಡಿಯಾ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನಮೀಬಿಯಾ ಕೇವಲ 116 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಈ ಗೆಲುವಿನಲ್ಲಿ ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರವಹಿಸಿದರು. ಇಶಾನ್ 24 ಎಸೆತಗಳಲ್ಲಿ 61 ರನ್ ಗಳಿಸಿದರೆ, ಪಾಂಡ್ಯ 28 ಎಸೆತಗಳಲ್ಲಿ 52 ರನ್ ಬಾರಿಸುವುದರ ಜೊತೆಗೆ ಎರಡು ವಿಕೆಟ್‌ಗಳನ್ನು ಸಹ ಪಡೆದರು.

ಫೆಬ್ರವರಿ 12 ರಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಸ್ಫೋಟಕ ಆರಂಭವನ್ನು ನೀಡಿ, ಪವರ್‌ಪ್ಲೇನಲ್ಲಿ ತಂಡವನ್ನು 86 ರನ್‌ಗಳಿಗೆ ಕೊಂಡೊಯ್ದರು. ಇಶಾನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್‌ಗಳಿಸಿ ಔಟಾದರು. ಅವರ ನಂತರ ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 52 ರನ್‌ಗಳ ಬಿರುಸಿನ ಆಟವಾಡಿದರು. ಆದಾಗ್ಯೂ, ಕೊನೆಯ 2 ಓವರ್‌ಗಳಲ್ಲಿ ಟೀಂ ಇಂಡಿಯಾ ಕೇವಲ 10 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತು. ನಮೀಬಿಯಾ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಗರಿಷ್ಠ 4 ವಿಕೆಟ್‌ಗಳನ್ನು ಪಡೆದರು.

ಈ ಗುರಿ ಬೆನ್ನಟ್ಟಿದ ನಮೀಬಿಯಾ ಪವರ್‌ಪ್ಲೇನಲ್ಲಿ 57 ರನ್‌ಗಳನ್ನು ಗಳಿಸುವ ಮೂಲಕ ಸ್ಫೋಟಕ ಆರಂಭವನ್ನು ಪಡೆದುಕೊಂಡಿತು. ಆರಂಭಿಕರಾದ ಜಾನ್ ಫ್ರೈಲಿಂಕ್ ಮತ್ತು ಲಾರೆನ್ ಸ್ಟೀನ್‌ಕ್ಯಾಂಪ್ ಉತ್ತಮ ಜೊತೆಯಾಟ ಕಟ್ಟಿದರು. ಆದಾಗ್ಯೂ, ಪವರ್‌ಪ್ಲೇ ಮುಗಿದ ನಂತರ, ನಮೀಬಿಯಾದ ಇನ್ನಿಂಗ್ಸ್ ಕುಸಿಯಿತು. ವರುಣ್ ಚಕ್ರವರ್ತಿ ಸತತ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಪಡೆದರು. ನಂತರ ಅಕ್ಷರ್ ಪಟೇಲ್ ಎರಡು ವಿಕೆಟ್‌ಗಳನ್ನು ಪಡೆದರು. ಹಾಗೆಯೇ ಹಾರ್ದಿಕ್ ಪಾಂಡ್ಯ 18 ನೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದು ನಮೀಬಿಯಾದ ಸೋಲನ್ನು ಖಚಿತಪಡಿಸಿದರು.

Published On – 10:45 pm, Thu, 12 February 26

Source link

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ – Kannada News | Comedy Khiladigalu Manthana allegations on WTC Utsava organisers

ಇತ್ತೀಚೆಗೆ WTC ಉತ್ಸವ (WTC Utsava) ಎಂಬ ಹೆಸರಿನಲ್ಲಿ ಮಹಿಳೆಯರ ಕ್ರಿಕೆಟ್ ಟೂರ್ನಮೆಂಟ್ ನಡೆದಿತ್ತು. ಅದರಲ್ಲಿ ಹಲವು ನಟಿಯರು ಭಾಗಿಯಾಗಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಂಥನಾ ಕೂಡ ಆಟ ಆಡಿದ್ದರು. ಆ ಟೂರ್ನಿ ಮುಗಿಸಿ ಮನೆಗೆ ತೆರಳುವಾಗ ಮಂಥನಾ ಅವರ ಕಾರಿಗೆ ಅಪಘಾತ (Accident) ಆಯಿತು. ‘WTC ಉತ್ಸವ’ ಆಯೋಜಕರು ಆ ಸಂದರ್ಭದಲ್ಲಿ ಕಾಳಜಿ ತೋರಿಸಿಲ್ಲ ಎಂದು ಮಂಥನಾ (Manthana) ಆರೋಪಿಸಿದ್ದಾರೆ. ‘ಅಪಘಾತ ಆದ ಬಳಿಕ ನಾವು ಪೊಲೀಸ್ ಠಾಣೆಗೆ ಹೋಗಿದ್ದೆವು. ಆ ಸಮಯದಲ್ಲಿ ಆಯೋಜಕರು ಯಾರೂ ಕೂಡ ನಮ್ಮ ಬಗ್ಗೆ ಕಾಳಜಿ ವಹಿಸಿಲ್ಲ. ಹಣದ ಸಲುವಾಗಿ ನಾನು ಧ್ವನಿ ಎತ್ತಿಲ್ಲ. ಅವರು ಮಾನವೀಯತೆಯ ದೃಷ್ಟಿಯಿಂದಲೂ ಒಂದು ಮಾತು ವಿಚಾರಿಸಿಲ್ಲ. ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಸುರಕ್ಷತೆ ಇಲ್ಲ ಎಂದರೆ ಇವರು ಈ ರೀತಿ ಟೂರ್ನಮೆಂಟ್ ಮಾಡಬಾರದು’ ಎಂದು ಮಂಥನಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಪ್ಪು ಚಿರತೆಯ ಜೊತೆ ನದಿಯ ನೀರು ಕುಡಿದ ಚಿರತೆ; ಭದ್ರಾ ಹುಲಿ ಅಭಯಾರಣ್ಯದ ವಿಡಿಯೋ ವೈರಲ್ – Kannada News | Black Panther and Leopard Drinking Water together At Karnatakas Bhadra Tiger Reserve watch viral Video

ಬೆಂಗಳೂರು, ಫೆಬ್ರವರಿ 12: ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಬ್ಲಾಕ್ ಪ್ಯಾಂಥರ್ (ಕಪ್ಪು ಚಿರತೆ) ಮತ್ತು ಚಿರತೆ ಒಟ್ಟಾಗಿ ಕುಳಿತು ನದಿಯಲ್ಲಿ ನೀರು ಕುಡಿಯುತ್ತಿರುವ ವಿಡಿಯೋ ಇಡೀ ದೇಶದ ಗಮನ ಸೆಳೆದಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿವೆ.

ಈ ಅಪರೂಪದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಅರವಿಂದ್ ಕಾರ್ತಿಕ್ ಸೆರೆ ಹಿಡಿದಿದ್ದಾರೆ. ಇದನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜನ ನಾಯಗನ್ ಬಳಿಕ ಮತ್ತೊಂದು ಚಿತ್ರದ ರಿಲೀಸ್​​​ಗೆ ತಡೆ; ದೊಡ್ಡ ಪ್ಲ್ಯಾನ್ ಮಾಡಿದ ತಂಡ – Kannada News | Ghuskor Pandat Title Row: Netflix Changes Name for Release Amidst Brahmin Protest

‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳು ಕಳೆದಿರಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ಸಿಗದೆ ಇರುವುದೇ ಸಿನಿಮಾ ರಿಲೀಸ್ ವಿಳಂಬ ಆಗಲು ಕಾರಣ. ಹೀಗಾಗಿ, ಈವರೆಗೆ ಸಿನಿಮಾ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಮತ್ತೊಂದು ಸಿನಿಮಾಗೆ ರಿಲೀಸ್​ಗೆ ಬ್ರೇಕ್ ಬೀಳುವ ಲಕ್ಷಣ ಇತ್ತು. ಆದರೆ, ತಕ್ಷಣ ತೆಗೆದುಕೊಂಡ ನಿರ್ಧಾರದಿಂದ ಸಿನಿಮಾ ರಿಲೀಸ್​​ಗೆ ಅನುವು ಮಾಡಿಕೊಡಲಾಗುತ್ತಿದೆ. ಅದು ಬಾಲಿವುಡ್​​ನ ‘ಘುಸ್ಕೋರ್ ಪಂಡತ್’.

ಮನೋಜ್ ಬಾಜ್​​ಪಾಯಿ ನಟನೆಯ ‘ಘುಸ್ಕೋರ್ ಪಂಡತ್’ ಸುತ್ತ ವಿವಾದದ ಹುತ್ತ ಬೆಳೆದಿದೆ. ಈ ಸಿನಿಮಾದ ಟೈಟಲ್ ವಿವಾದಕ್ಕೆ ಕಾರಣ ಆಗಿತ್ತು. ಈ ಸಿನಿಮಾದ ಟೈಟಲ್​ನ ಕನ್ನಡಕ್ಕೆ ತರ್ಜಮ್ಯ ಮಾಡಿದರೆ, ‘ಭ್ರಷ್ಟ ಅರ್ಚಕರು’ ಎಂಬ ಅರ್ಥ ಕೊಡುತ್ತದೆ. ಹೀಗಾಗಿ, ಇದಕ್ಕೆ ಅರ್ಚಕರ ವರ್ಗ ಧ್ವನಿ ಎತ್ತಿತ್ತು.

ಜೈಪುರದಲ್ಲಿರುವ ಸರ್ವ ಬ್ರಾಹ್ಮಿಣ್ ಮಹಸಭಾ ಅವರು ಈ ಟೈಟಲ್ ವಿರುದ್ಧ ಧ್ವನಿ ಎತ್ತಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲು ಕೂಡ ಹತ್ತಿತು. ಟೈಟಲ್ ಬದಲಾವಣೆ ಮಾಡೋವರೆಗೆ ಸಿನಿಮಾ ರಿಲೀಸ್​ಗೆ ಅವಕಾಶ ನೀಡುವುದಿಲ್ಲ ಎನ್ನುವ ಮಾತು ಕೇಳಿ ಬಂದವು. ಈಗ ಪ್ರಕರಣದಲ್ಲಿ ನೆಟ್​​ಫ್ಲಿಕ್ಸ್ ಕೋರ್ಟ್​​ಗೆ ತನ್ನ ನಿರ್ಧಾರ ತಿಳಿಸಿದೆ.

‘ಘುಸ್ಕೋರ್ ಪಂಡತ್ ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ತಂಡ ನಿರ್ಧರಿಸಿದೆ. ಸಧ್ಯ ಉದ್ಭವಿಸಿರುವ ಕಳವಳದ ಹಿನ್ನೆಲೆಯಲ್ಲಿ ನಿರ್ಮಾಪಕರು ಪ್ರಜ್ಞಾಪೂರ್ವಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ’ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ನೆಟ್‌ಫ್ಲಿಕ್ಸ್‌ನ ‘ಘೂಸ್‌ಖೋರ್ ಪಂಡತ್’ ವಿವಾದ: ಟೀಸರ್ ಡಿಲೀಟ್ ಮಾಡಿದ ಚಿತ್ರತಂಡ

ಸದ್ಯ ನೆಟ್​ಫ್ಲಿಕ್ಸ್​ಗೆ ಸಿನಿಮಾ ರಿಲೀಸ್ ಮಾಡಲು ಒಪ್ಪಿಗೆ ಸೂಚಿಸಿದೆ. ಒಂದೊಮ್ಮೆ ಸಿನಿಮಾ ರಿಲೀಸ್ ಬಳಿಕ ಮತ್ತಷ್ಟು ವಿವಾದಗಳು ಎದ್ದರೆ ಆಗ ಸಿನಿಮಾಗೆ ಬ್ಯಾನ್ ಬೀತಿ ಎದುರಾಗಬಹುದು ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:00 pm, Thu, 12 February 26

Source link

ಅಪ್ರಾಪ್ತ ಹುಡುಗರಿಂದ ದೆಹಲಿಯಲ್ಲಿ 17 ವರ್ಷದ ಬಾಲಕನ ಕಗ್ಗೊಲೆ – Kannada News | 17 year old boy stabbed to death in Delhi 7 people arrested

ನವದೆಹಲಿ, ಫೆಬ್ರವರಿ 12: ಉತ್ತರ ದೆಹಲಿಯ ಬವಾನಾ ಪ್ರದೇಶದಲ್ಲಿ 17 ವರ್ಷದ ಬಾಲಕನನ್ನು ಇರಿದು ಕೊಲೆ (Death) ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಬಾಲಾಪರಾಧಿಗಳು ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ 9.36ರ ಸುಮಾರಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆಜೆ ಕಾಲೋನಿಯ ನಿವಾಸಿ ಸಲೀಂ ಎಂಬ ಬಾಲಕನಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಆತನ ಎದೆ ಮತ್ತು ದೇಹದ ಇತರ ಭಾಗಗಳಲ್ಲಿ ಅನೇಕ ಇರಿತದ ಗಾಯಗಳು ಕಂಡುಬಂದಿವೆ.

ದೂರುದಾರರ ಪ್ರಕಾರ ಆರೋಪಿಗಳು ರಾತ್ರಿ 8.30ರ ಸುಮಾರಿಗೆ ಸಲೀಂನನ್ನು ತಡೆದು ಹಳೆಯ ಗಲಾಟೆಯ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದಾರೆ. ಅವರಲ್ಲಿ ಕೆಲವರು ಆತನಿಗೆ ಮುಷ್ಟಿಯಿಂದ ಹೊಡೆದು, ಕಾಲಿನಲ್ಲಿ ಒದ್ದು ಹಿಂಸೆ ನೀಡಿದ್ದಾರೆ, ಇತರರು ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಕಾರು ಆಟೋಗೆ ಡಿಕ್ಕಿ ಹೊಡೆದು 25 ವರ್ಷದ ಯುವತಿ ಸಾವು

ನರೇಲಾ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆ ಬಾಲಕ ಮತ್ತು ಆರೋಪಿಗಳ ನಡುವೆ ಹಳೆಯ ದ್ವೇಷವಿತ್ತು ಎಂದು ತಿಳಿದುಬಂದಿದೆ. ಬಂಧಿತರಲ್ಲಿ 16 ರಿಂದ 17 ವರ್ಷದೊಳಗಿನ ನಾಲ್ವರು ಅಪ್ರಾಪ್ತ ವಯಸ್ಕರು ಕೂಡ ಸೇರಿದ್ದಾರೆ. ಬಾಲಾಪರಾಧಿಗಳಲ್ಲಿ ಒಬ್ಬ ಈ ಹಿಂದೆ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NAM: 6,6,6,6,4.. ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್

ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಪಾಕೆಟ್ ಡೈನಮೋ ಖ್ಯಾತಿಯ ಇಶಾನ್ ಕಿಶನ್ ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್ ಗಳಿಸಿ ಔಟಾದರು. ಇಶಾನ್ ಅವರ ಈ ಇನ್ನಿಂಗ್ಸ್‌ನಲ್ಲಿ ಆರು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳು ಸೇರಿದ್ದವು. ಅದರಲ್ಲಿ ಒಂದೇ ಓವರ್​ನಲ್ಲಿ 4 ಸಿಕ್ಸರ್​ಗಳು ಸಿಡಿದಿದ್ದು ವಿಶೇಷವಾಗಿತ್ತು.

ಜೆಜೆ ಸ್ಮಿತ್ ಬೌಲ್ ಮಾಡಿದ ಈ ಓವರ್​ನ ಮೊದಲ ಎಸೆತದಲ್ಲಿ ಕಿಶನ್​ಗೆ ಯಾವುದೇ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ಆದರೆ ಆ ನಂತರದ ಸತತ 4 ಎಸೆತಗಳನ್ನು ಕಿಶನ್​ ಸಿಕ್ಸರ್​ಗಟ್ಟಿದರು. ಕೊನೆಯ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಈ ಓವರ್​ನಲ್ಲಿ ಕಿಶನ್ 28 ರನ್ ಕಲೆಹಾಕಿದರು. ಈ ಅಬ್ಬರದೊಂದಿಗೆ ಕಿಶನ್ ಕೇವಲ 20 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು.

ಇಶಾನ್ ಕಿಶನ್ ಅರ್ಧಶತಕ ಗಳಿಸಿದ ತಕ್ಷಣ, ಟಿ20 ವಿಶ್ವಕಪ್‌ನಲ್ಲಿ ಅರ್ಧಶತಕ ಗಳಿಸಿದ ಮೊದಲ ಭಾರತೀಯ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಧೋನಿ, ದಿನೇಶ್ ಕಾರ್ತಿಕ್ ಮತ್ತು ರಿಷಭ್ ಪಂತ್ ಅವರಂತಹ ವಿಕೆಟ್ ಕೀಪರ್‌ಗಳು ಟಿ20 ವಿಶ್ವಕಪ್‌ನಲ್ಲಿ ಆಡಿದ್ದಾರೆ, ಆದರೆ ಅವರು ಎಂದಿಗೂ ಅರ್ಧಶತಕ ಗಳಿಸುವಲ್ಲಿ ಯಶಸ್ವಿಯಾಗಲಿಲ್ಲ. ಈಗ, ಇಶಾನ್ ಈ ಸಾಧನೆ ಮಾಡಿದ್ದಾರೆ.

Source link

Exit mobile version