Headlines

ಪ್ರಯಾಣಿಕರ ಗಮನಕ್ಕೆ: ಆ 9ರಂದು ಈ ಮಾರ್ಗದಲ್ಲಿ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ – Kannada News | Purple Line Metro Services Between Baiyappanahalli and MG Road Temporary Suspended on August 9

ಬೆಂಗಳೂರು, ಆಗಸ್ಟ್​​ 07: ಆಗಸ್ಟ್ 9ರಂದು ಮೆಟ್ರೋ (Namma Metro) ನೇರಳೆ ಮಾರ್ಗದಲ್ಲಿ ಅಗತ್ಯ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್ (BMRCL) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಟ್ರಿನಿಟಿ, ಎಂ.ಜಿ.ರಸ್ತೆ ಸೇರಿದಂತೆ 6 ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ? ನಮ್ಮ ಮೆಟ್ರೋದ ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ…

Read More

‘ಟಾಕ್ಸಿಕ್’ ಸಿನಿಮಾದ ರನ್ಟೈಮ್ ಎಷ್ಟು? ಸೆನ್ಸಾರ್ ಬಗ್ಗೆ ಹರಿದಾಡುತ್ತಿದೆ ಸುದ್ದಿ – Kannada News | Yash’s Toxic movie runtime estimated to 3 hours 6 minutes

ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ‘ಟಾಕ್ಸಿಕ್’ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾನಲ್ಲಿ ಯಶ್ ಜೊತೆಗೆ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದು, ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಟೀಸರ್, ಹಾಡುಗಳು, ಪೋಸ್ಟರ್ ಸಾಕಷ್ಟು ಗಮನ ಸೆಳೆದಿವೆ. ನಾಳೆ (ಆಗಸ್ಟ್ 08) ಸಿನಿಮಾದ ಟ್ರೈಲರ್ ರಿಲೀಸ್ ಆಗಲಿದ್ದು, ಇದರ ನಡುವೆ ಸಿನಿಮಾದ ರನ್​​ಟೈಮ್​​ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಅವಧಿ ಎಷ್ಟಿರಲಿದೆ ಎಂಬ ಬಗ್ಗೆ…

Read More

IND vs SL: ಇಬ್ಬರು ಸ್ಟಾರ್ ಆಟಗಾರರಿಗೆ ಗಾಯ; ಮೊದಲ ಟೆಸ್ಟ್​ಗೆ ಅಲಭ್ಯ – Kannada News | India vs SL Test: Mendis, Nissanka Out – Big Blow for Sri Lanka’s Chances

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 15 ರಂದು ಆರಂಭವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ಆತಿಥೇಯ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಇಬ್ಬರು ಅನುಭವಿ ಬ್ಯಾಟ್ಸ್‌ಮನ್​ಗಳು ಗಾಯದಿಂದ ಬಳಲುತ್ತಿದ್ದು, ಇವರಿಬ್ಬರು ಮೊದಲ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ. Source link

Read More

ಎಂಡಿಆರ್ ಶುಲ್ಕ ಕೇವಲ ಶೇ. 0.04? ದೊಡ್ಡ ವ್ಯಾಪಾರಿಗಳಿಗೆ ಮಾತ್ರವಾ ಈ ಶುಲ್ಕ? ಯಾರು ದೊಡ್ಡ ವ್ಯಾಪಾರಿಗಳು? – Kannada News | UPI MDR to be very nominal, large merchants to bear the fee, as per proposed framework

ನವದೆಹಲಿ, ಆಗಸ್ಟ್ 7: ನಿರ್ದಿಷ್ಟ ಯುಪಿಐ ವಹಿವಾಟುಗಳಿಗೆ ಎಂಡಿಆರ್ ಅಥವಾ ಮರ್ಚೆಂಟ್ ಡಿಸ್ಕೌಂಟ್ ರೇಟ್ ಶುಲ್ಕ ವಿಧಿಸಲು ಸರ್ಕಾರ ಸಜ್ಜಾಗಿದೆ ಎಂದು ಮೂಲಗಳಿಂದ ಮಾಹಿತಿ ಪಡೆದು ಬ್ಯುಸಿನೆಸ್ ಟುಡೆ ಎಕ್ಸ್​ಕ್ಲೂಸಿವ್ ವರದಿ ಪ್ರಕಟಿಸಿದೆ. ಈ ವರದಿ ಪ್ರಕಾರ ಯುಪಿಐ ವಹಿವಾಟುಗಳ ಸಂಬಂಧ ಸರ್ಕಾರ ಹಾಗೂ ಆರ್​ಬಿಐ ಹೊಸ ನೀತಿಯನ್ನು ರೂಪಿಸಲು ಚಿಂತನೆ ನಡೆಸಿವೆ. ದೊಡ್ಡ ವ್ಯಾಪಾರಿಗಳಿಗಷ್ಟೇ ಯುಪಿಐ ವಹಿವಾಟು ಮೇಲೆ ಎಂಡಿಆರ್ ಶುಲ್ಕ ಅನ್ವಯಿಸಬಹುದು. ಅದೂ ಬಹಳ ಅಲ್ಪ ಪ್ರಮಾಣದ ಶುಲ್ಕ ಇರಲಿದೆ ಎಂದು ಈ ವರದಿ…

Read More

Randstad 2026: ಭಾರತದ ಟಾಪ್ 10 ಉದ್ಯೋಗದಾತ ಕಂಪನಿಗಳ ಪಟ್ಟಿ ಪ್ರಕಟ; ಗೂಗಲ್, ಟಾಟಾ ಗ್ರೂಪ್‌ಗೆ ಅಗ್ರಸ್ಥಾನ! – Kannada News | Randstad 2026: Google, Tata, Amazon Top India’s Best Employers; WLB Key to Retention

ರ್ಯಾಂಡ್‌ಸ್ಟಾಡ್( Randstad) ಎಂಪ್ಲಾಯರ್ ಬ್ರಾಂಡ್ ರಿಸರ್ಚ್ 2026ರ ವರದಿಯ ಪ್ರಕಾರ, ಉದ್ಯೋಗಿಗಳನ್ನು ಆಕರ್ಷಿಸುವಲ್ಲಿ ಗೂಗಲ್ ಪ್ರಥಮ ಸ್ಥಾನದಲ್ಲಿದ್ದರೆ, ಟಾಟಾ ಗ್ರೂಪ್ ಎರಡನೇ ಸ್ಥಾನ ಮತ್ತು ಅಮೆಜಾನ್ ಮೂರನೇ ಸ್ಥಾನವನ್ನು ಪಡೆದುಕೊಂಡಿವೆ. ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ವಲಯಗಳ ಪ್ರಮುಖ ಕಂಪನಿಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಪ್ರಪಂಚದಾದ್ಯಂತದ 34 ಮಾರುಕಟ್ಟೆಗಳಲ್ಲಿ 1.7 ಮಿಲಿಯನ್ ಹಾಗೂ ಭಾರತದಲ್ಲಿ ಸುಮಾರು 3,500 ಉದ್ಯೋಗಿಗಳ ಅಭಿಪ್ರಾಯಗಳನ್ನು ಆಧರಿಸಿ ಈ ಅಧ್ಯಯನ ನಡೆಸಲಾಗಿದೆ. ಜಾಗತಿಕವಾಗಿ ಇದು 26ನೇ ಅಧ್ಯಯನವಾಗಿದ್ದರೆ, ಭಾರತದಲ್ಲಿ ನಡೆಸಲಾದ 16ನೇ…

Read More

ಆ. 14ರ ಬದಲು ಇಂದೇ ರಾಜೀನಾಮೆ ನೀಡಿದ್ದೇಕೆ ಸಭಾಪತಿ?: ಸತ್ಯ ಬಿಚ್ಚಿಟ್ಟ ಬಸವರಾಜ ಹೊರಟ್ಟಿ – Kannada News | ‘Resigned Early to Avoid No Confidence Motion’: Basavaraj Horatti Reveals Truth Behind Sudden Resignation

ಆ. 14ರ ಬದಲು ಇಂದೇ ರಾಜೀನಾಮೆ ನೀಡಿದ್ದೇಕೆ ಸಭಾಪತಿ?Image Credit source: Tv9 Kannada ಬೆಂಗಳೂರು, ಆಗಸ್ಟ್​​ 07: ಕರ್ನಾಟಕ ವಿಧಾನ ಪರಿಷತ್​​ಗೆ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್​​ ಹೆಸರನ್ನು ಎಐಸಿಸಿ ಘೋಷಣೆ ಮಾಡಿದ ಬಳಿಕ ನಡೆದ ರಾಜಕೀಯ ಬೆಳವಣಿಗಳ ನಡುವೆ, ಸಭಾಪತಿ ಸ್ಥಾನಕ್ಕೆ ಆಗಸ್ಟ್​​ 14ರಂದು ರಾಜೀನಾಮೆ ನೀಡೋದಾಗಿ ಬಸವರಾಜ ಹೊರಟ್ಟಿ ಘೋಷಿಸಿದ್ದರು. ಆದರೆ ಅಚ್ಚರಿಯ ಬೆಳವಣಿಗೆಗಳ ನಡುವೆ ಇಂದೇ ಅವರು ತಮ್ಮ ಹುದ್ದೆ ತೊರೆದಿದ್ದಾರೆ. ಸರ್ಕಾರದಿಂದ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ವಿಪಕ್ಷಗಳ…

Read More

ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು – Kannada News | Delhi roads turn into water parks after the rain Children seen Swimming around

ನವದೆಹಲಿ, ಆಗಸ್ಟ್ 7: ದೆಹಲಿಯಲ್ಲಿ (Delhi Rains) ಇಂದು ಸುರಿದ ಭಾರೀ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ಇದು ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ರಸ್ತೆಯ ತುಂಬ ನಿಂತಿದ್ದ ಮಳೆನೀರಿನಲ್ಲಿ ಹಾರಿದ ಮಕ್ಕಳು ಈಜಾಡಿದ್ದಾರೆ. ಈ ವೀಕೆಂಡ್​​ನಲ್ಲಿ ದೆಹಲಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ದಕ್ಷಿಣ ದೆಹಲಿಯ ಮೆಹ್ರೌಲಿ-ಬದರ್‌ಪುರ (MB) ರಸ್ತೆಯ ವಾಯುಸೇನಾ ಬಾದ್ (ಏರ್ ಫೋರ್ಸ್ ಸ್ಟೇಷನ್) ಬಳಿ 3ರಿಂದ 4 ಅಡಿಗಳಷ್ಟು ನೀರು ಶೇಖರಣೆಯಾಗಿದ್ದು, ಆ ಮಾರ್ಗವು…

Read More

ನೆರೆಯಲ್ಲಿ ಶವಸಂಸ್ಕಾರದ ಹರಸಾಹಸ: ಹರಿವ ನದಿಯಲ್ಲೇ ಟ್ರ್ಯಾಕ್ಟರ್ ಓಡಿಸಿ ಅಂತ್ಯಕ್ರಿಯೆ ನೆರವೇರಿಸಿದ ಜನರು – Kannada News | Floods Force Family to Use Tractor for Cremation Amid Flowing River

ಕಲಬುರಗಿ, ಆಗಸ್ಟ್​​ 07: ಜಿಲ್ಲೆಯ ಸೇಡಂನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಶವ ಸಂಸ್ಕಾರಕ್ಕೂ (funeral) ಜನರು ಪರದಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ. ಸೇಡಂ ತಾಲೂಕಿನಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಮಲಾವತಿ ನದಿಯಲ್ಲೇ ಜೀವವನ್ನು ಪಣಕ್ಕಿಟ್ಟು ಟ್ರ್ಯಾಕ್ಟರ್ ಓಡಿಸುವ ಮೂಲಕ ಮೃತದೇಹವನ್ನು ಸಾಗಿಸಿ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಬೆಳಕಿಗೆ ಬಂದಿದೆ. ನಡೆದಿದ್ದೇನು? ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ತವರು ಕ್ಷೇತ್ರ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ…

Read More

ಸಿಡಿಲು ಬಡಿದು 24 ವರ್ಷದ ಫುಟ್ಬಾಲ್ ಆಟಗಾರ ಸಾವು; ದಾರುಣ ಘಟನೆ ಕ್ಯಾಮರಾದಲ್ಲಿ ಸೆರೆ – Kannada News | Thai Footballer Sofwan Awe Dies from Lightning Strike Mid Match: Viral Video

ಸಿಡಿಲು ಬಡಿದು 24 ವರ್ಷದ ಯುವ ಫುಟ್ಬಾಲ್ ಆಟಗಾರ (football player) ಸಾವನ್ನಪ್ಪಿರುವ ದಾರುಣ ಘಟನೆ ಭಾರತದ ನೆರೆಯ ರಾಷ್ಟ್ರ ಥೈಲ್ಯಾಂಡ್​ನಲ್ಲಿ ನಡೆದಿದೆ. ಈ ಅವಘಡದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಿಜಕ್ಕೂ ಹೃದಯವಿದ್ರಾವಕವಾಗಿದೆ. ದಕ್ಷಿಣ ಥೈಲ್ಯಾಂಡ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಪಂದ್ಯದ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮವಾಗಿ ಯುವ ಫುಟ್ಬಾಲ್ ಆಟಗಾರ ಸೋಫ್ವಾನ್ ಅವೆ ಸಾವನ್ನಪ್ಪಿದ್ದಾರೆ. ಹಾಗೆಯೇ ಈ ಘಟನೆಯಲ್ಲಿ ಸುಮಾರು ಒಂದು ಡಜನ್ ಇತರ ಆಟಗಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲೇ…

Read More

‘ಜನರೇಷನ್ ಗಟಾರ್’ ಎಂದಿದ್ದ ಕಂಗನಾ ಈಗ ಯೂ ಟರ್ನ್; ‘ಜೆನ್ ಜಿ ಭಾರತದ ಶಕ್ತಿ’ ಎಂದ ನಟಿ – Kannada News | Kangana Ranaut U Turn calls Gen Z strength of country after Generation Gutter Remark

ಕೆಲವೇ ದಿನಗಳ ಹಿಂದಷ್ಟೇ ಜೆನ್ ಜಿ (Gen Z) ಪೀಳಿಗೆಯನ್ನು ‘ಜನರೇಷನ್ ಗಟಾರ್’ (Generation Gutter) ಎಂದು ಕರೆದು ತೀವ್ರ ವಾಗ್ದಾಳಿ ನಡೆಸಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಈಗ ದಿಢೀರ್ ಯೂ-ಟರ್ನ್ ಹೊಡೆದಿದ್ದಾರೆ. ಪ್ರಸ್ತುತ ಯುವ ಪೀಳಿಗೆಯೇ ನಮ್ಮ ದೇಶದ ದೊಡ್ಡ ಶಕ್ತಿ ಎಂದು ಅವರು ಹೊಗಳಿಕೆಯ ಮಳೆ ಸುರಿಸಿದ್ದಾರೆ. ಶುಕ್ರವಾರ ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಕಂಗನಾ, ‘ಜೆನ್ ಜಿ ನಮ್ಮ ದೇಶದ ದೊಡ್ಡ ಶಕ್ತಿ. ಒಂದು ರೀತಿಯಲ್ಲಿ ಅವರು…

Read More