ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್! – Kannada News | Yadgiri Inspector Trapped by Lokayukta While Accepting Rs 1 Lakh Bribe in Gurmitkal

ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ

ಯಾದಗಿರಿ, ಮೇ 09: ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ ಒಬ್ಬರು​ ಬರೋಬ್ಬರಿ ಒಂದು ಲಕ್ಷ ರೂ. ಲಂಚ (Bribe) ಪಡೆಯುವಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

ಮುಖ್ಯಾಂಶಗಳು

  • ಆರೋಪಿಯನ್ನು ಬಂಧಿಸದಿರಲು ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್
  •  ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಅವರು ಹಣ ಪಡೆಯುವಾಗ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ.
  •  ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ನೇತೃತ್ವದಲ್ಲಿ ದಾಳಿ

ನಡೆದಿದ್ದೇನು?

ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್​ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್‌ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಈ ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ 1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ

ಗುರುಮಠಕಲ್‌ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಇನ್ಸ್‌ಪೆಕ್ಟರ್ ವೀರಣ್ಣ ಬಲೆಗೆ ಬೀಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ಅವರ ನೇತೃತ್ವದ ತಂಡ ಈ ದಾಳಿಯನ್ನು ನಡೆಸಿದೆ. ಸದ್ಯ ಆರೋಪಿ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೃನಾಲ್ ಪಾಂಡ್ಯ ಕಾಲರ್ ಪಟ್ಟಿ ಹಿಡಿದ ನಿಕೋಲಸ್ ಪೂರನ್! – Kannada News | Krunal pandya and nicholas pooran Fight video in IPL 2026

IPL 2026: ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿ ಎಂದರೆ ಅಲ್ಲಿ ಕೇವಲ ಕ್ರಿಕೆಟ್ ಮಾತ್ರವಲ್ಲ, ಹೈ-ವೋಲ್ಟೇಜ್ ಡ್ರಾಮಾಗಳು ನಡೆಯುತ್ತಿರುತ್ತವೆ. ಇತ್ತೀಚಿನ ಪಂದ್ಯದ ನಂತರವೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ಕೆರಿಬಿಯನ್ ಆಟಗಾರ ನಿಕೋಲಸ್ ಪೂರನ್ ಅವರು ಕೃನಾಲ್ ಪಾಂಡ್ಯ ಅವರ ಕಾಲರ್ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಮೈದಾನದಲ್ಲಿ ಏನಾಯಿತು?

ಈ ಪಂದ್ಯದ ವೇಳೆ 10ನೇ ಓವರ್‌ನಲ್ಲಿ ಕೃನಾಲ್ ಪಾಂಡ್ಯ ಸತತ ಎರಡು ಬೌನ್ಸರ್ ಎಸೆತಗಳ ಮೂಲಕ ಪೂರನ್ ಅವರನ್ನು ಕೆಣಕಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇಬ್ಬರೂ ಆಟಗಾರರು ಕ್ರೀಸ್​​ನಲ್ಲಿ ಮುಖಾಮುಖಿಯಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂಬಂತೆ ತೋರಿತ್ತು. ಈ ವೇಳೆ ಅಂಪೈರ್ ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಬೇಕಾಯಿತು.

ಪಂದ್ಯದ ನಂತರ ನಡೆದಿದ್ದೇನು?

ಈ ಪಂದ್ಯದಲ್ಲಿ ಎಲ್‌ಎಸ್‌ಜಿ ತಂಡ ಆರ್‌ಸಿಬಿ ವಿರುದ್ಧ 9 ರನ್‌ಗಳ ಜಯ ಸಾಧಿಸಿದ ಬಳಿಕ, ಮೈದಾನದಲ್ಲಿ ಎಲ್ಲರೂ ಹ್ಯಾಂಡ್ ಶೇಕ್ ಮಾಡುತ್ತಿರುವಾಗ ಪೂರನ್ ಅವರು ದಿಢೀರನೆ ಕೃನಾಲ್ ಪಾಂಡ್ಯ ಅವರ ಕಾಲರ್ ಪಟ್ಟಿಯನ್ನು ಹಿಡಿದು ಎಳೆದಿದ್ದಾರೆ. ಮೊದಲ ನೋಟಕ್ಕೆ ಇದು ಜಗಳದಂತೆ ಕಂಡರೂ, ವಾಸ್ತವವಾಗಿ ಅದು ಕೇವಲ ತಮಾಷೆಯಾಗಿತ್ತು.

ಕೃನಾಲ್ ಮತ್ತು ಪೂರನ್ ಇಬ್ಬರೂ ಈ ಹಿಂದೆ ಎಲ್‌ಎಸ್‌ಜಿ ತಂಡದಲ್ಲಿ ಜೊತೆಯಾಗಿ ಆಡಿದ್ದಾರೆ. ಅವರಿಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಮೈದಾನದಲ್ಲಿ ನಡೆದಿದ್ದ ಮಾತಿನ ಚಕಮಕಿಯನ್ನು ಮರೆತು ಗೆಲುವಿನ ಸಂಭ್ರಮದಲ್ಲಿ ಒಬ್ಬರನ್ನೊಬ್ಬರು ಕಾಲೆಳೆದಿದ್ದಾರೆ. ಕಾಲರ್ ಹಿಡಿದ ಬಳಿಕ ಇಬ್ಬರೂ ಪರಸ್ಪರ ಕೈಕುಲುಕಿ, ನಗುತ್ತಾ ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು, “ಇದು ನೈಜ ಕ್ರೀಡಾ ಮನೋಭಾವ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರದ ಈ ಸ್ನೇಹದ ಕ್ಷಣಗಳು ಕ್ರಿಕೆಟ್ ಎನ್ನುವುದು ಕೇವಲ ಸ್ಪರ್ಧೆಯಲ್ಲ, ಅದನ್ನೂ ಮೀರಿದ ಬಾಂಧವ್ಯ ಎಂದು ಸಾರಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ಮೈದಾನದಲ್ಲಿ ಎಷ್ಟೇ ಪೈಪೋಟಿ ಇದ್ದರೂ ಪಂದ್ಯ ಮುಗಿದ ಮೇಲೆ ಆಟಗಾರರು ಒಬ್ಬರಿಗೊಬ್ಬರು ಗೌರವ ನೀಡುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪೂರನ್ ಮತ್ತು ಕೃನಾಲ್ ನಡುವಿನ ಈ ‘ಕಾಲರ್ ಫೈಟ್’ ಕೇವಲ ಸ್ನೇಹದ ಸಂಭ್ರಮವಷ್ಟೇ ಆಗಿತ್ತು. ಕ್ರೀಡೆ ಎಂದರೆ ಕೇವಲ ಸೋಲು-ಗೆಲುವಲ್ಲ, ಅದು ಹಳೆಯ ಸ್ನೇಹವನ್ನು ಸಂಭ್ರಮಿಸುವ ವೇದಿಕೆ ಕೂಡ ಹೌದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.

Source link

ಪತ್ನಿಯರ ಎದುರು ಬಯಲಾಯ್ತು ಸಹೋದರರ ಸವಾಲು; ಗುಟ್ಟು-ರಟ್ಟು – Kannada News | Nandagokula Secret Exposed: Brothers’ Challenge Revealed by Wives TRP leading serial

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ನಂದಗೋಕುಲ’ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ. ಈ ಧಾರಾವಾಹಿ ಗಂಭೀರ ವಿಷಯಗಳ ಜೊತೆಗೆ ವೀಕ್ಷಕರಿಗೆ ನಗೆಯ ಹಬ್ಬವನ್ನೇ ಉಣಬಡಿಸುವ ಕೆಲಸವನ್ನೂ ಮಾಡುತ್ತಿದೆ ಎಂದರೂ ತಪ್ಪಾಗಲಾರದು. ಕೌಟುಂಬಿಕ ಬಾಂಧವ್ಯದ ಜೊತೆಗೆ ಹಾಸ್ಯದ ಎಳೆಯನ್ನು ಬೆರೆಸಿರುವ ಈ ಧಾರಾವಾಹಿಯಲ್ಲಿ, ಕೇಶವ ಮತ್ತು ವಲ್ಲಭನ ನಡುವಿನ ಮಾತುಕತೆ ಈಗ ಹೊಸ ತಿರುವು ಪಡೆದುಕೊಂಡಿದೆ.

ಕೇಶವ ಮತ್ತು ಮೀನಾ ಅವರ ಮದುವೆ ಮೀನಾ ತಂದೆಗೆ ಇಷ್ಟವಿರಲಿಲ್ಲ. ದೇವಸ್ಥಾನದಲ್ಲಿ ಸಿಕ್ಕಾಗ ಕೇಶವನನ್ನು ಮೀನಾ ತಂದೆ ‘ಕಿರಾಣಿ ಅಂಗಡಿಯವ’ ಎಂದು ಹೀಯಾಳಿಸಿದ್ದನು. ಇದು ಕೇಶವನ ಮನಸ್ಸಿಗೆ ತೀವ್ರವಾಗಿ ತಟ್ಟಿದೆ. ಹೇಗಾದರೂ ಮಾಡಿ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲೇಬೇಕು ಎಂದು ಕೇಶವ ಪಣ ತೊಟ್ಟರೆ, ಇತ್ತ ತಮ್ಮ ವಲ್ಲಭ ಕೂಡ ಡ್ರೈವಿಂಗ್ ಕೆಲಸದ ಮೂಲಕ ಆರ್ಥಿಕವಾಗಿ ಸದೃಢವಾಗುವ ಕನಸು ಕಾಣುತ್ತಾನೆ.

ಇಬ್ಬರೂ ಸಹೋದರರು ತಮ್ಮ ಗುರಿಗಳ ಬಗ್ಗೆ ಪರಸ್ಪರ ಚರ್ಚಿಸಿ, ‘ಈ ವಿಷಯ ನಮ್ಮ ಪತ್ನಿಯರಿಗೆ ಅಪ್ಪಿತಪ್ಪಿಯೂ ತಿಳಿಯಬಾರದು‘ ಎಂದು ಒಬ್ಬರಿಗೊಬ್ಬರು ಮಾತು ಕೊಟ್ಟುಕೊಳ್ಳುತ್ತಾರೆ. ಆದರೆ, ಈ ‘ಸೀಕ್ರೆಟ್’ ಉಳಿಯುವುದು ಅಷ್ಟು ಸುಲಭವಲ್ಲ ಎಂಬುದು ಅವರಿಗೆ ತಿಳಿದಿರುವುದಿಲ್ಲ.

ಕೇಶವ ಮನೆಗೆ ಬಂದವನೇ ಮೀನಾ ಎದುರು ವಲ್ಲಭನ ಡ್ರೈವಿಂಗ್ ಯೋಜನೆಯನ್ನು ಬಾಯಿ ಬಿಟ್ಟುಬಿಡುತ್ತಾನೆ. ಇತ್ತ ವಲ್ಲಭ ಕೂಡ ಅಮೂಲ್ಯ ಮುಂದೆ ಹೋಗಿ ಕೇಶವನ ಸರ್ಕಾರಿ ಕೆಲಸದ ಕನಸನ್ನು ಹಂಚಿಕೊಳ್ಳುತ್ತಾನೆ. ತಮಾಷೆಯೆಂದರೆ, ಇಬ್ಬರೂ ಕೂಡ ‘ಬೇರೆಯವರಿಗೆ ಹೇಳಬೇಡ’ ಎಂಬ ಕಂಡೀಷನ್ ಹಾಕಿಯೇ ಗುಟ್ಟನ್ನು ಬಿಟ್ಟುಕೊಟ್ಟಿರುತ್ತಾರೆ.

ಇದನ್ನೂ ಓದಿ: ಬಿಗ್​​ಬಾಸ್ ಮನೆಗೆ ಹೋಗಲು ಇಲ್ಲಿದೆ ಅವಕಾಶ, ಮಾಡಬೇಕಾಗಿದ್ದು ಇಷ್ಟೆ

ಹೊಟ್ಟೆಯಲ್ಲಿ ಗುಟ್ಟು ಇಟ್ಟುಕೊಳ್ಳಲಾಗದೆ ಒದ್ದಾಡುವ ಮೀನಾ, ಅಡುಗೆ ಮನೆಯಲ್ಲಿ ಅಮೂಲ್ಯ ಸಿಕ್ಕ ತಕ್ಷಣ ಎಲ್ಲವನ್ನೂ ಹೇಳಿಯೇ ಬಿಡುತ್ತಾಳೆ. ಅಣ್ಣ-ತಮ್ಮಂದಿರು ಅಂದುಕೊಂಡಿದ್ದ ‘ಸಹೋದರರ ಸವಾಲು’ ಅಂತಿಮವಾಗಿ ಹೆಂಡತಿಯರ ನಡುವಿನ ಹರಟೆಯಲ್ಲಿ ಕರಗಿ ಹೋಗುತ್ತದೆ. ಗಂಡಂದಿರ ಅತಿ ಆತ್ಮವಿಶ್ವಾಸ ಮತ್ತು ಪತ್ನಿಯರ ಮುಗ್ಧ ಹರಟೆಯ ಈ ಜುಗಲ್‌ಬಂದಿ ವೀಕ್ಷಕರಿಗೆ ಭರಪೂರ ಮನರಂಜನೆ ನೀಡುತ್ತಿದೆ. ‘ನಂದಗೋಕುಲ’ ಧಾರಾವಾಹಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಪೂರ್ತಿ ಶೋ ಬಂದರೆ ಏನಾಗಬಹುದು?‘; ಕಿರುತೆರೆ ಲೋಕಕ್ಕೆ ಎಂಟ್ರಿಕೊಡಲು ರೋಹಿತ್ ರೆಡಿ – Kannada News | Rohit Sharma’s Entertainment Debut: From Cricket Pitch to Sony TV Show

ಕ್ರಿಕಟ್ ಲೋಕಕ್ಕೂ ಬಣ್ಣದ ಲೋಕಕ್ಕೂ ಎಲ್ಲಿಲ್ಲದ ನಂಟು. ಕ್ರಿಕೆಟ್ ಲೋಕದ ಅನೇಕರು ಸಿನಿಮಾದಲ್ಲಿ ನಟಿಸಿದ ಉದಾಹರಣೆ ಇದೆ. ಶೋನಲ್ಲಿ ಮಿಂಚಿದ್ದೂ ಇದೆ. ಈಗ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಸರದಿ. ಅವರು ಮೈದಾನದ ಹೊರಗೂ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ ಬಿಡುಗಡೆ ಮಾಡಿರುವ ಹೊಸ ಟೀಸರ್, ರೋಹಿತ್ ಶರ್ಮಾ ಅವರ (Rohit Sharma) ಮನರಂಜನಾ ಲೋಕದ ಪದಾರ್ಪಣೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ.

ಸೋನಿ ಪಿಕ್ಚರ್ಸ್ ಹಂಚಿಕೊಂಡಿರುವ ಟೀಸರ್ ಗಮನ ಸೆಳೆದಿದೆ. ರೋಹಿತ್ ಅವರನ್ನು ಫ್ಯಾನ್ಸ್ ಭೇಟಿ ಮಾಡುತ್ತಾರೆ. ಅವರು ಮಾಡಿದ ಸಾಧನೆಯನ್ನು ಹೊಗಳುತ್ತಾರೆ. ಆದರೆ, ಎಲ್ಲರಿಗೂ ಇಷ್ಟ ಆಗಿದ್ದು ಅವರ ಆಟವಲ್ಲ, ಬದಲಿಗೆ ಮೈದಾನದಲ್ಲಿ ಹೇಳಿದ್ದ ‘ಕೋಯಿ ಭಿ ಗಾರ್ಡನ್ ಮೇ ನಹೀ ಘುಮೇಗಾ’ (ಯಾರೂ ಗಾರ್ಡನ್‌ನಲ್ಲಿ ಓಡಾಡುವಂತಿಲ್ಲ) ಎಂಬ ಸಾಲುಗಳು. ಇದನ್ನು ಹೇಳುವಂತೆ ಎಲ್ಲರೂ ಒತ್ತಾಯಿಸುತ್ತಾರೆ.

ಮೈದಾನದಲ್ಲಿ ರೋಹಿತ್ ಆಡಿದ ಈ ಮಾತು ಸೋಶಿಯಲ್ ಮೀಡಿಯಾದಲ್ಲಿ ಎಷ್ಟು ವೈರಲ್ ಆಗಿತ್ತು ಎಂದರೆ, ಈಗ ಅದೇ ಸಾಲುಗಳಿಂದ ಎಲ್ಲರೂ ಅವರನ್ನು ಗುರುತಿಸುವಂತಾಗಿದೆ. ಇದಕ್ಕೆ ಪ್ರತಿಕ್ರಿಯಿಸುವ ರೋಹಿತ್, ‘ಕೇವಲ ಎರಡು ಸಾಲು ಹೇಳಿದ್ದಕ್ಕೆ ಇಷ್ಟೊಂದು ವೈರಲ್ ಆಯ್ತು, ಇನ್ನು ನನ್ನ ಪೂರ್ತಿ ಶೋ ಬಂದರೆ ಏನಾಗಬಹುದು?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಹಿಟ್​ಮ್ಯಾನ್ ಆರ್ಭಟ: ರೋಹಿತ್ ಶರ್ಮಾಗೆ ಸ್ಪೆಷಲ್ ಗಿಫ್ಟ್ ನೀಡಿದ ನೀತಾ ಅಂಬಾನಿ

ರೋಹಿತ್ ಶರ್ಮಾ ಅವರು ರಿಯಾಲಿಟಿ ಶೋ ಅಥವಾ ಟಾಕ್ ಶೋ ಮೂಲಕ ಕಿರುತೆರೆಗೆ ಬರಬಹುದು ಎಂಬ ಮುನ್ಸೂಚನೆ ಸಿಕ್ಕಿದೆ. ಇದು ಯಾವ ರೀತಿಯ ಶೋ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಈ ಕಾರ್ಯಕ್ರಮವು ಸೋನಿ ಎಂಟರ್‌ಟೈನ್‌ಮೆಂಟ್ ಟೆಲಿವಿಷನ್ ಮತ್ತು ಸೋನಿ ಲಿವ್ ಒಟಿಟಿಯಲ್ಲಿ ಶೀಘ್ರದಲ್ಲೇ ಬರಲಿದೆ ಎಂಬುದಷ್ಟೇ ಖಚಿತವಾಗಿದೆ. ವಿಶ್ವಕಪ್ ವಿಜೇತ ನಾಯಕ ಈಗ ಬ್ಯಾಟ್ ಬಿಟ್ಟು ಮೈಕ್ ಹಿಡಿದು ಪ್ರೇಕ್ಷಕರನ್ನು ಹೇಗೆ ರಂಜಿಸಲಿದ್ದಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಕೆಎಲ್ ರಾಹುಲ್ – Kannada News | KL Rahul Creates New History In IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ತಂಡ ಬದಲಾದರೂ ರನ್ ಮಳೆ ನಿಂತಿಲ್ಲ, ದಾಖಲೆಗಳ ಬೇಟೆ ಕೂಡ ನಿಂತಿಲ್ಲ! ಪಂಜಾಬ್‌ನಲ್ಲಿ ಅಬ್ಬರಿಸಿ, ಲಕ್ನೋದಲ್ಲಿ ಮಿಂಚಿ, ಈಗ ಡೆಲ್ಲಿಯಲ್ಲೂ ಅಧಿಪತ್ಯ ಸ್ಥಾಪಿಸಿರುವ ಕೆಎಲ್ ರಾಹುಲ್ (KL Rahul), ಐಪಿಎಲ್‌ನಲ್ಲಿ ಯಾರೂ ಮಾಡದ ‘ತ್ರಿವಳಿ ಸಾವಿರ’ದ ವಿಶೇಷ ದಾಖಲೆ ಬರೆದಿದ್ದಾರೆ. (PC: IPL)

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ! ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Rain Update: Heavy Rainfall Predicted in Bengaluru and South Interior Districts; Yellow Alert Issued

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!Image Credit source: MediaForge AI

ಬೆಂಗಳೂರು, ಮೇ 09: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
  • ಕೊಡಗು ಸೇರಿದಂತೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆ?

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉಳಿದಂತೆ ಬೆಂಗಳೂರು ಸೇರಿ ಮೈಸೂರು, ಬಳ್ಳಾರಿ, ಹಾಸನ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಇಂದು ಮತ್ತು ನಾಳೆ (ಮೇ 9, 10) ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:17 am, Sat, 9 May 26

Source link

ನೂತನ ಸಿಡಿಎಸ್ ಆಗಿ ಲೆಫ್ಟಿನೆಂಟ್ ಜನರಲ್ ಎನ್​ಎಸ್ ರಾಜಾ ಸುಬ್ರಮಣಿ ನೇಮಕ: ನೌಕಾಪಡೆಗೆ ಕೃಷ್ಣ ಸ್ವಾಮಿನಾಥನ್ ಮುಖ್ಯಸ್ಥ – Kannada News | Lt Gen NS Raja Subramani Appointed Next CDS; Vice Adm Krishna Swaminathan To Lead Indian Navy

ಲೆಫ್ಟಿನೆಂಟ್ ಜನರಲ್ ಎನ್​ಎಸ್ ರಾಜಾ ಸುಬ್ರಮಣಿ (ಎಡ ಚಿತ್ರ) ಹಾಗೂ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್Image Credit source: ANI

ನವದೆಹಲಿ, ಮೇ 9: ಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹುದ್ದೆಯಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್​ಎಸ್ ರಾಜಾ ಸುಬ್ರಮಣಿ (Lt Gen NS Raja Subramani) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜತೆಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ನೇಮಕ ಮಾಡಿದೆ. ದೇಶದ ಭದ್ರತಾ ದೃಷ್ಟಿಯಿಂದ ಈ ನೇಮಕಾತಿಗಳು ಅತ್ಯಂತ ಮಹತ್ವದ್ದಾಗಿವೆ.

ಮುಖ್ಯಾಂಶಗಳು

  • ಪ್ರಸ್ತುತ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರ ಅವಧಿ ಮೇ 30 ಕ್ಕೆ ಮುಕ್ತಾಯಗೊಳ್ಳಲಿದೆ.
  • ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಅವರು ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಲಿದ್ದಾರೆ.
  • ಸುಬ್ರಮಣಿ ಅವರು ಈ ಹಿಂದೆ ಸೇನಾಪಡೆಯ ಉಪಮುಖ್ಯಸ್ಥರಾಗಿ ಹಾಗೂ ಕೇಂದ್ರ ಕಮಾಂಡ್‌ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಅನುಭವದ ಗಣಿ, ರಾಜಾ ಸುಬ್ರಮಣಿ

ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ 1 ರಂದು ಅವರು ಈ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಕ್ಕೂ ಮೊದಲು, ಜುಲೈ 2024 ರಿಂದ ಜುಲೈ 2025 ರವರೆಗೆ ಭೂಸೇನೆಯ ಉಪಮುಖ್ಯಸ್ಥರಾಗಿ (Vice Chief of Army Staff) ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, ಮಾರ್ಚ್ 2023 ರಿಂದ ಜೂನ್ 2024 ರವರೆಗೆ ಸೆಂಟ್ರಲ್ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿಯೂ ಕಾರ್ಯನಿರ್ವಹಿಸಿದ ದಕ್ಷ ಅಧಿಕಾರಿಯಾಗಿದ್ದಾರೆ.

ರಾಜಾ ಸುಬ್ರಮಣಿ ಪಡೆದ ಗೌರವ, ಪದಕಗಳು

ಭಾರತೀಯ ಸೇನೆಯಲ್ಲಿನ ಅವರ ಸುದೀರ್ಘ ಮತ್ತು ನಿಷ್ಠಾವಂತ ಸೇವೆಯನ್ನು ಪರಿಗಣಿಸಿ ಅವರಿಗೆ ಹಲವು ಪ್ರತಿಷ್ಠಿತ ಸೇನಾ ಗೌರವಗಳನ್ನು ನೀಡಲಾಗಿದೆ. ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ಸೇನಾ ಪದಕ ಮತ್ತು ವಿಶಿಷ್ಟ ಸೇವಾ ಪದಕ ಸೇರಿದಂತೆ ಹಲವು ಶೌರ್ಯ ಮತ್ತು ಸೇವಾ ಪದಕಗಳು ಅವರ ಮುಡಿಗೇರಿವೆ. ಮೇ 30 ರಂದು ಜನರಲ್ ಅನಿಲ್ ಚೌಹಾಣ್ ನಿವೃತ್ತರಾದ ಬಳಿಕ ಸುಬ್ರಮಣಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Video: ಪಾಕಿಸ್ತಾನಿ ಭಯೋತ್ಪಾದಕರ ವಿರುದ್ಧದ ಆಪರೇಷನ್ ಸಿಂಧೂರ್​ಗೆ ಒಂದು ವರ್ಷ: ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ರಾಜ ಶಿವಾಜಿ’ ಚಿತ್ರದ ಲಾಭ-ನಷ್ಟದ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದ ರಿತೇಶ್ ದೇಶ್​​ಮುಖ್ – Kannada News | Raja Shivaji Box Office Budget: Ritesh Deshmukh Clarifies 100 Cr Rumors, Film Earns 55 Cr

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ರಾಜ ಶಿವಾಜಿ’ ಸಿನಿಮಾದ (Raja Shivaji) ಬಗ್ಗೆ ಈಗ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಚಿತ್ರದ ಭರ್ಜರಿ ಗಳಿಕೆಯ ನಡುವೆಯೇ, ಸಿನಿಮಾದ ಬಜೆಟ್ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಿರ್ದೇಶಕ ಹಾಗೂ ನಟ ರಿತೇಶ್ ದೇಶ್‌ಮುಖ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ಸಿನಿಮಾ 100 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಆಗಿದೆ ಎಂದು ಹೇಳಲಾಗಿತ್ತು. ಈ ವಿಷಯ ಪ್ರೇಕ್ಷಕನಿಗೆ ಮುಖ್ಯವಲ್ಲ ಎಂದಿದ್ದಾರೆ.

‘ರಾಜ ಶಿವಾಜಿ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಇದು 100 ಕೋಟಿ ರೂಪಾಯಿ ವೆಚ್ಚದ ಸಿನಿಮಾ ಎಂಬ ಮಾತುಗಳು ಕೇಳಿಬರುತ್ತಿದ್ದವು. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಿತೇಶ್, ‘ಸಿನಿಮಾದ ಅಸಲಿ ಬಜೆಟ್ ಕೇವಲ ನಿರ್ಮಾಪಕರಿಗೆ ಮಾತ್ರ ತಿಳಿದಿರುತ್ತದೆ. ನೀವು 100 ಕೋಟಿ ಖರ್ಚು ಮಾಡಿ ಸಿನಿಮಾ ಮಾಡಿದರೂ ಅಥವಾ 10 ಕೋಟಿ ಖರ್ಚು ಮಾಡಿ ಸಿನಿಮಾ ಮಾಡಿದರೂ, ಒಬ್ಬ ಪ್ರೇಕ್ಷಕ ಚಿತ್ರಮಂದಿರಕ್ಕೆ ಬಂದು ಟಿಕೆಟ್​ಗೆ ಎಷ್ಟು ಕೊಡಬೇಕೋ ಅಷ್ಟನ್ನೇ ಕೊಡುತ್ತಾನೆ. ಅವನಿಗೆ ಸಿನಿಮಾ ಇಷ್ಟವಾಗಬೇಕೇ ಹೊರತು, ಅದರ ಹಿಂದಿನ ಖರ್ಚಿನ ಲೆಕ್ಕಾಚಾರವಲ್ಲ’ ಎಂದಿದ್ದಾರೆ ರಿತೇಶ್.

ಇದನ್ನೂ ಓದಿ: ‘ರಾಜ ಶಿವಾಜಿ’ ಚಿತ್ರಕ್ಕೆ ಕೈ ಕೊಟ್ಟ ಹಿಂದಿ ಭಾಷಿಕರು; ಅದೃಷ್ಟ ಬದಲಿಸಿದ್ದು ಯಾರು?

‘ನೀವು ಚಿತ್ರಮಂದಿರಕ್ಕೆ 100 ಅಥವಾ 300 ರೂಪಾಯಿ ಕೊಟ್ಟು ಟಿಕೆಟ್ ಖರೀದಿಸುತ್ತೀರಿ ಅಷ್ಟೇ ನಿಮಗೆ ಮುಖ್ಯವಾಗಬೇಕು. ಸಿನಿಮಾದ ಮ್ಯಾಜಿಕ್ ಅನ್ನು ಅನುಭವಿಸಿ ಹೊರಬರಬೇಕೇ ಹೊರತು, ಅದರ ವೆಚ್ಚದ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಅಮಿತಾಭ್ ಬಚ್ಚನ್ ಅವರ ‘ಶೋಲೆ’ ಕಾಲದಲ್ಲಿ ಯಾರೂ ಬಜೆಟ್ ಬಗ್ಗೆ ಕೇಳುತ್ತಿರಲಿಲ್ಲ, ಕೇವಲ ಮನರಂಜನೆಯನ್ನಷ್ಟೇ ಬಯಸುತ್ತಿದ್ದರು’ ಎಂದು ಅವರು ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

8 ದಿನಗಳಲ್ಲಿ 55 ಕೋಟಿ ದಾಟಿದ ಗಳಿಕೆ

ಮೇ 1 ರಂದು ಬಿಡುಗಡೆಯಾದ ‘ರಾಜ ಶಿವಾಜಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತನ್ನ ಪಾರುಪತ್ಯ ಮುಂದುವರಿಸಿದೆ. ಕೇವಲ 8 ದಿನಗಳಲ್ಲಿ ಸಿನಿಮಾ 55 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಬಾಚಿಕೊಂಡಿದೆ. ಚಿತ್ರಮಂದಿರದ ಗಳಿಕೆಯಷ್ಟೇ ಅಲ್ಲದೆ, ಸ್ಯಾಟಲೈಟ್ ಮತ್ತು ಒಟಿಟಿ ಹಕ್ಕುಗಳ ಮಾರಾಟದಿಂದಲೂ ಚಿತ್ರಕ್ಕೆ ದೊಡ್ಡ ಮೊತ್ತದ ಆದಾಯ ಬಂದಿದೆ. ರಿತೇಶ್ ಹೇಳುವಂತೆ ಬಜೆಟ್ 100 ಕೋಟಿಗಿಂತ ಕಡಿಮೆ ಇದ್ದಲ್ಲಿ, ಈಗಾಗಲೇ ಗಳಿಸಿರುವ 55 ಕೋಟಿ ಹಾಗೂ ಡಿಜಿಟಲ್ ಹಕ್ಕುಗಳ ಆದಾಯವನ್ನು ಸೇರಿಸಿದರೆ ನಿರ್ಮಾಪಕರು ಲಾಭವನ್ನು ಜೇಬಿಗಿಳಿಸುವುದು ಖಚಿತವಾಗಿದೆ. ಸಿನಿಮಾ ನಷ್ಟದಲ್ಲಿದೆ ಎಂದೆಲ್ಲ ವರದಿ ಬಂದಿತ್ತು. ಆದರೆ, ರಿತೇಶ್ ಹೇಳಿಕೆಯಿಂದ ಲಾಭ-ನಷ್ಟದ ಲೆಕ್ಕಾಚಾರ ಬದಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today: ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 9, ಶನಿರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ಈ ದಿನವು ಹಲವು ವಿಶೇಷತೆಗಳನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 9:05 ರಿಂದ 10:40ರ ವರೆಗೆ ಇರಲಿದ್ದು, ಸರ್ವ ಸಿದ್ಧಿ ಹಾಗೂ ಸಂಕಲ್ಪ ಕಾಲವು ಮಧ್ಯಾಹ್ನ 1:01 ರಿಂದ 3:26ರ ವರೆಗೆ ಇರುತ್ತದೆ.

ಇದು ಸಾಕ್ಷಾತ್ ವೆಂಕಟೇಶ್ವರನ ಲಹರಿಗಳು ಮತ್ತು ಶನಿ ಭಗವಾನ್‌ರ ಪ್ರಭಾವವಿರುವ ದಿನ. ಹನುಮನ ಕೃಪೆಗೆ ಪಾತ್ರರಾಗಲು ಸೂಕ್ತವಾದ ದಿನವೂ ಹೌದು. ಇಂದು ಬ್ಯಾಂಕ್ ಹಾಲಿಡೇ (ಎರಡನೇ ಶನಿವಾರ) ಆಗಿದ್ದು, ಶ್ರೀರಾಮ ಪಟ್ಟಾಭಿಷೇಕದ ದಿನವೂ ಆಗಿದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link

Daily Devotional: ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ? – Kannada News | Is Baldness a Sign of Good Luck? Astrological Benefits and Insights by Dr. Basavaraja Guruji

ಬೋಳು ತಲೆ ಇದ್ದವರಿಗೆ ಅದೃಷ್ಟ ಯಾವ ರೀತಿ ಇರಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ವೈಜ್ಞಾನಿಕವಾಗಿ, ಆಹಾರ ಪದ್ಧತಿ, ವಾಸಿಸುವ ಸ್ಥಳ, ಮತ್ತು ಅನುವಂಶೀಯತೆ (ಹೆರಿಡಿಟ್ರಿ) ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳಾಗಿವೆ. ಆದರೆ ಜ್ಯೋತಿಷ್ಯದ ಪ್ರಕಾರ, ರವಿ, ಮಂಗಳ ಮತ್ತು ಕೇತು ಗ್ರಹಗಳ ಪ್ರಭಾವ ಅಥವಾ ಅವುಗಳ ನೀಚ ದೃಷ್ಟಿಯು ಬೋಳುತಲೆಗೆ ಕಾರಣವಾಗಬಹುದು. ಜಾತಕದಲ್ಲಿ ಮೊದಲನೇ ಮನೆಯಾದ ಶಿರಸ್ಸಿಗೆ ಸಂಬಂಧಿಸಿದಂತೆ ಈ ಗ್ರಹಗಳ ಸ್ಥಾನಗಳು ಮಹತ್ವಪೂರ್ಣವಾಗಿವೆ.

ಆಧ್ಯಾತ್ಮಿಕವಾಗಿ, ಬೋಳುತಲೆಯನ್ನು ಸೂರ್ಯ ಗ್ರಹದ (ರವಿ ಗ್ರಹ) ಪ್ರಭಾವ ಹೆಚ್ಚಾದ ಲಕ್ಷಣವೆಂದು ಪರಿಗಣಿಸಲಾಗುತ್ತದೆ. ಇದು ವ್ಯಕ್ತಿಯಲ್ಲಿ ಅಪಾರ ಜ್ಞಾನ, ಬುದ್ಧಿಶಕ್ತಿ, ಸಂಪತ್ತು ಮತ್ತು ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗಿದೆ. ಬೋಳುತಲೆ ಹೊಂದಿದವರು ರಾಜಕೀಯದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸುವುದನ್ನು ಇತಿಹಾಸದಲ್ಲಿ ಕಾಣಬಹುದು. ಕೃತಕ ವಿಧಾನಗಳಿಂದ ಬೋಳುತಲೆಯನ್ನು ಮರೆಮಾಚುವುದು ಈ ಶುಭ ಅದೃಷ್ಟವನ್ನು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ. ಬೋಳುತಲೆ ಹೊಂದಿದ ವ್ಯಕ್ತಿಗಳಲ್ಲಿ ವಾಕ್ ಶಕ್ತಿ, ಆಲೋಚನಾ ಶಕ್ತಿ ಮತ್ತು ಪ್ರಬುದ್ಧತೆ ಹೆಚ್ಚಾಗಿ ಕಂಡುಬರುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

Exit mobile version