Headlines

ಕುಸಿದು ಬಿದ್ದು ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾವು; ಕೊನೆಗೂ ಹೆತ್ತವರ ಕನಸೂ ನನಸಾಗಲಿಲ್ಲ! – Kannada News | Sudden Demise: Hassan Software Engineer Shwetha, 25, Succumbs to Brain Hemorrhage

ಹಾಸನ, ಏ.27: ಜಿಲ್ಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ 25 ವರ್ಷದ ಯುವತಿ ಶ್ವೇತಾ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಈ ಘಟನೆ ಇಡೀ ಗ್ರಾಮದಲ್ಲಿ ಹಾಗೂ ಕುಟುಂಬಸ್ಥರಲ್ಲಿ ಸೂತಕ ಛಾಯೆ ಆವರಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ(25), ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ…

Read More

ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧ: ಅನುಮತಿ ಕೊಟ್ಟರೆ ಉಗ್ರ ಹೋರಾಟದ ಎಚ್ಚರಿಕೆ – Kannada News | BJP Opposes Bengaluru Umar Khalid Book Event, Warns of Massive Protests

ನಗರ ಪೊಲೀಸ್ ಆಯುಕ್ತರಿಗೆ BJP ಮನವಿ Image Credit source: Tv9 Kannada ಬೆಂಗಳೂರು, ಏಪ್ರಿಲ್​​ 27: ದೊಮ್ಮಲೂರಿನ ಬಿಐಸಿಯಲ್ಲಿ ನಾಳೆ ನಿಗದಿಯಾಗಿರುವ ‘ಉಮರ್ ಖಾಲಿದ್ ಆ್ಯಂಡ್​ ಹಿಸ್ ವರ್ಲ್ಡ್’ ಪುಸ್ತಕದ ಕುರಿತ ಕಾರ್ಯಕ್ರಮಕ್ಕೆ ಅನುಮತಿ ಸಂಬಂಧ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಟ ಪ್ರಕಾಶ್ ರಾಜ್, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವು ಮುಖಂಡರು ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ಜೆಎನ್​ಯು ಮಾಜಿ…

Read More

ಇದು ನನ್ನ ಕೊನೆಯ ರ‍್ಯಾಲಿ, ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದ ಮಣ್ಣಿನಲ್ಲಿ ಪ್ರಧಾನಿ ಮೋದಿ ವಿಜಯಘೋಷ – Kannada News | West Bengal: Narendra Modi Signals Final Campaign Rally, Eyes Return for Swearing In

ಕೋಲ್ಕತ್ತಾ, ಏಪ್ರಿಲ್ 27: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬರಾಕ್‌ಪೋರ್‌ನಲ್ಲಿ ಬಿಜೆಪಿಯ ಬಲ ಪ್ರದರ್ಶನ ಮಾಡಿದರು. ತಮ್ಮ ಭಾಷಣದ ಉದ್ದಕ್ಕೂ ವಿಜಯದ ಆತ್ಮವಿಶ್ವಾಸವನ್ನು ಪ್ರದರ್ಶಿಸಿದ ಅವರು, ಮುಂದಿನ ಬಾರಿ ಬರುವುದು ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಎಂದು ಘೋಷಿಸುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು. ಈ ಚುನಾವಣೆಯಲ್ಲಿ ಇದು ನನ್ನ ಕೊನೆಯ ರ್ಯಾಲಿ, ಮೇ 4ರ ಫಲಿತಾಂಶದ ನಂತರ ಖಂಡಿತವಾಗಿಯೂ ಬಿಜೆಪಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ನಾನು…

Read More

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ – Kannada News | Surat Murder Case: Woman Found Dead, Husband Held

ಸೂರತ್, ಏಪ್ರಿಲ್ 27: ಪತ್ನಿಯ ಕೊಲೆ(Murder) ಮಾಡಿ ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ವಿಶಾಲ್ ಸಾಲ್ವಿ (40), ನಾಲ್ಕು ದಿನಗಳ ಹಿಂದೆ ತನ್ನ ಪತ್ನಿ ಶಿಲ್ಪಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮೊದಲಿಗೆ ಇದನ್ನು ಸಾಮಾನ್ಯ ನಾಪತ್ತೆ ಪ್ರಕರಣವೆಂದು ಭಾವಿಸಿ ತನಿಖೆ…

Read More

ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ! – Kannada News | Harihara Panchamasali Peetha Crisis: Vachanananda Swamy vs Trustees Over 10 Crore Fund Scam Allegations

ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ!Image Credit source: tv9 ದಾವಣಗೆರೆ, ಏಪ್ರಿಲ್ 27: ಹರಿಹರದ ಪಂಚಮಸಾಲಿ ಪೀಠದಲ್ಲಿ (Harihara Panchamasali Peeth) ದಶಕಗಳಿಂದ ನಡೆಯುತ್ತಿದ್ದ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಮಠದ ಅನುದಾನ ಮತ್ತು ಭಕ್ತರ ದೇಣಿಗೆಯ ಲೆಕ್ಕಾಚಾರದ ವಿಚಾರದಲ್ಲಿ ವಚನಾನಂದ ಸ್ವಾಮೀಜಿ (Vachanananda Swamiji) ಮತ್ತು ಟ್ರಸ್ಟಿಗಳ ನಡುವೆ ತೀವ್ರ ಗುದ್ದಾಟ ಆರಂಭವಾಗಿದೆ. ಮಠದ ಆವರಣ ಸೋಮವಾರ (ಏಪ್ರಿಲ್ 37) ಹೈಡ್ರಾಮಾ ನಡೆಯಿತು. ಮಠದ ಆವರಣದಲ್ಲಿ ಬಿಗಿ…

Read More

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – Kannada News | Bengaluru–Mumbai Vande Bharat Sleeper to Launch on August 1: Route and Timings Revealed

ವಂದೇ ಭಾರತ್​​ ಸ್ಲೀಪರ್​​ ರೈಲುImage Credit source: alamy.com ಬೆಂಗಳೂರು, ಏಪ್ರಿಲ್​​ 27: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು ಬಹು ಬೇಡಿಕೆಯ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 1ರಿಂದ ಈ ರೈಲಿನ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಯೋಜನೆಗೆ ಏಪ್ರಿಲ್ 16ರಂದು ಅನುಮೋದನೆ ದೊರಕಿತ್ತು. ಆ ಮೂಲಕ ಬೆಂಗಳೂರು-ಮುಂಬೈ ನಡುವಿನ ರೈಲು ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ. ಈ ಸ್ಲೀಪರ್…

Read More

ಐಪಿಎಲ್​ನಲ್ಲಿ ಫೀಲ್ಡಿಂಗ್​ಗೆ ಅಡ್ಡಿ ಪಡಿಸಿ ಔಟಾದ ನಾಲ್ವರು ಬ್ಯಾಟರ್​ಗಳು ಇವರೇ..! – Kannada News | Batters Dismissed for Obstructing the Field in IPL

ಕ್ರಿಕೆಟ್ ಜಗತ್ತಿನಲ್ಲಿ ಬ್ಯಾಟರ್ ಒಬ್ಬರು ಔಟ್ ಆಗಲು ಹಲವಾರು ದಾರಿಗಳಿವೆ. ಆದರೆ, ಅತಿ ಹೆಚ್ಚು ಚರ್ಚೆಗೆ ಮತ್ತು ವಿವಾದಕ್ಕೆ ಕಾರಣವಾಗುವ ಒಂದು ಔಟ್ ಎಂದರೆ ಅದು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’. ಅಂದರೆ, ಫೀಲ್ಡರ್ ಚೆಂಡನ್ನು ಎಸೆಯುವಾಗ ಅಥವಾ ಹಿಡಿಯುವಾಗ ಬ್ಯಾಟರ್ ಬೇಕೆಂದೇ ಅಡ್ಡ ಬರುವುದು ಅಥವಾ ಅಡ್ಡಿಪಡಿಸುವುದು. ಹೀಗೆ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಐಪಿಎಲ್​ನಲ್ಲಿ ಔಟಾದ ನಾಲ್ವರು ಬ್ಯಾಟರ್​ಗಳ ಪಟ್ಟಿ ಇಲ್ಲಿದೆ… ಯೂಸುಫ್ ಪಠಾಣ್ (2013): ಐಪಿಎಲ್ ಇತಿಹಾಸದಲ್ಲಿ ಈ ರೀತಿ ಔಟ್ ಆದ ಮೊದಲ ಆಟಗಾರ ಕೋಲ್ಕತ್ತಾ…

Read More

ಲಿವ್-ಇನ್ ಸಂಬಂಧದಿಂದ ಹೊರಬರುವುದು ಅಪರಾಧವಲ್ಲ, ಆದರೆ ಮಗು ಜನಿಸಿದ ನಂತರ ಅತ್ಯಾಚಾರದ ಆರೋಪ ಎಷ್ಟು ಸರಿ: ಸುಪ್ರೀಂ ಪ್ರಶ್ನೆ – Kannada News | Supreme Court of India Examines Consent in Live In Relationship Case

ನವದೆಹಲಿ, ಏಪ್ರಿಲ್ 27: ಲಿವ್-ಇನ್ ಸಂಬಂಧ(Live-In Relationship)ದಲ್ಲಿ ದೀರ್ಘಕಾಲ ಬಾಳಿ, ಮಗುವನ್ನು ಪಡೆದ ನಂತರ ಪುರುಷನ ವಿರುದ್ಧ ಅತ್ಯಾಚಾರದ ದೂರು ದಾಖಲಿಸುವ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮದುವೆಯ ಬಂಧವಿಲ್ಲದ ಇಂತಹ ಸಂಬಂಧಗಳಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ಮದುವೆಯ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಮಹಿಳೆಯ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠವು, ಇದು ಲಿವ್-ಇನ್ ಸಂಬಂಧವಾಗಿದ್ದು, ಮಹಿಳೆ ಆ ವ್ಯಕ್ತಿಯೊಂದಿಗೆ ಮಗುವನ್ನು…

Read More

ಕಾರ್ಮಿಕರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ , ಸಚಿವ ಸಂತೋಷ್ ಲಾಡ್ ಘೋಷಣೆ! – Kannada News | Karnataka to Implement New Minimum Wage; Smart Cards for Drivers and New Bills for Gig Workers

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿImage Credit source: MediaForge AI ಬಳ್ಳಾರಿ, ಏಪ್ರಿಲ್ 27: ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು (Minimum wage) ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಅಸಂಘಟಿತ ವಲಯದ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಬದ್ಧ…

Read More

ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಇದ್ದರು. ಇವರನ್ನು ಸೀಕ್ರೆಟ್​ ರೂಂನಲ್ಲೂ ಒಟ್ಟಿಗೆ ಇಡಲಾಗಿತ್ತು. ಈಗ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಭೇಟಿ ಆಗಿದ್ದಾರೆ. ಈ ಭೇಟಿಯ ವಿಡಿಯೋವನ್ನು ರಕ್ಷಿತಾ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರೂ ಪ್ರೀತಿಯಿಂದ ಮಾತನಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಕಾಣಿಸಿದ ದ್ವೇಷ ಇಲ್ಲಿ ಕಾಣಿಸುತ್ತಿಲ್ಲ ಎಂಬುದು ಖುಷಿಯ ವಿಷಯ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More