Headlines

ಸಾಲ ವಸೂಲಿ ಮಾಡುವ ವೇಳೆ ಅವಾಚ್ಯ ಶಬ್ಧದಿಂದ ನಿಂದಿಸಿದ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಹಾಕಿದ ಕುಡುಕ – Kannada News | Chamarajanagar Murder: Relative Kills Man in Loan Recovery Conflict

ಚಾಮರಾಜನಗರ,ಡಿ.30: ಕೊಟ್ಟ ಸಾಲ ವಸೂಲಿ ಮಾಡುವ ವೇಳೆ ಅವಾಚ್ಯ ಶಬ್ಧದಿಂದ ನಿಂದಿಸಿದ ಎಂದು ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಂದಿರುವ ಘಟನೆ ಚಾಮರಾಜನಗರ (Chamarajanagar) ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದೊಡ್ಡಿಯಲ್ಲಿ ನಡೆದಿದೆ. ಉಮೇಶ್ ಎಂಬಾತ ತನ್ನ ಸಂಬಂಧಿ ಸ್ವಾಮಿ ಗೌಡ ಎಂಬಾತನಿಗೆ ಸಾಲ ಕೊಟ್ಟಿದ್ದ, ಸ್ವಲ್ಪ ದಿನದ ನಂತರ ಉಮೇಶ್ ಸಾಲವನ್ನು ವಾಪಸ್ಸು ಕೇಳಿದ್ದಾನೆ. ಇದರಿಂದ ರೊಚ್ಚಿಗೆದ್ದು, ಸ್ವಾಮಿ ಗೌಡ ಕುಡಿದ ಅಮಲಿನಲ್ಲಿ ಉಮೇಶ್ ತಲೆ, ಮುಖವನ್ನು ಮಚ್ಚಿನಿಂದ ಕೊಚ್ಚಿ ಹಾಕಿದ್ದಾನೆ. ನಂತರ ಕತ್ತು ಕೊಯ್ದು ಹಾಕಿದ್ದಾನೆ. ನಂತರ ತೀವ್ರ ಗಾಯಗೊಂಡಿದ್ದ…

Read More

ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ – Kannada News | MGNREGA to PBGRY: CM Siddaramaiah Lead Congress MLAs Meeting decides to special session

ಬೆಂಗಳೂರು, (ಜನವರಿ 08): ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್‌ ಜಿ ಎಂದು ಪುನರ್‌ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಇಂದಿನ ಸಚಿವ ಸಂಪುಟದಲ್ಲೂ ಸಹ ಚರ್ಚೆ ಮಾಡಿದ್ದು, ವಿಬಿ ಜಿ ರಾಮ್‌ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah_ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು…

Read More

ಪುರುಷರಿಗೆ ದೊಡ್ಡ ಹೊಟ್ಟೆ ಬರುವುದಕ್ಕೆ ಕೇವಲ ಆಹಾರ ಮಾತ್ರ ಕಾರಣವಲ್ಲ! ಹಾಗಾದ್ರೆ ಯಾಕೆ ಈ ರೀತಿ ಆಗುತ್ತೆ? – Kannada News

ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ಹೊಟ್ಟೆ ಭಾಗದಲ್ಲಿ ಕೊಬ್ಬು (Belly Fat) ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಹೆಚ್ಚಿನವರು ಇದನ್ನು ಹೆಚ್ಚು ಆಹಾರ ಸೇವನೆ, ವ್ಯಾಯಾಮದ ಕೊರತೆ ಅಥವಾ ಅಸ್ವಸ್ಥ ಜೀವನಶೈಲಿಯ ಪರಿಣಾಮ ಎಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಕೆಲ ಸಂದರ್ಭಗಳಲ್ಲಿ ಹೊಟ್ಟೆ ಹೊರಬರುವುದಕ್ಕೆ ದೇಹದ ಒಳಗಿನ ಹಾರ್ಮೋನಲ್ ಬದಲಾವಣೆಗಳೂ ಕಾರಣವಾಗಬಹುದು. ವಯಸ್ಸು ಹೆಚ್ಚಾದಂತೆ ಪುರುಷರ ದೇಹದಲ್ಲಿ ಹಲವು ಹಾರ್ಮೋನಲ್ ಬದಲಾವಣೆಗಳು ಸಂಭವಿಸುತ್ತವೆ. ಅಸಮತೋಲನವಾದ ಆಹಾರ ಪದ್ಧತಿ, ಒತ್ತಡ, ನಿದ್ರಾಹೀನತೆ, ಶಾರೀರಿಕ ಚಟುವಟಿಕೆಯ ಕೊರತೆ ಮತ್ತು ಅಸ್ವಸ್ಥ ಜೀವನಶೈಲಿ…

Read More

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್! ಪಿಂಕ್ ಲೈನ್​ನಲ್ಲಿ ಮೆಟ್ರೋ ಸಂಚಾರ ಟ್ರಯಲ್ ಆರಂಭ – Kannada News | Bengaluru Metro Pink Line Trial Starts: Kalena Agrahara Tavarekere Opens Soon!

ಬೆಂಗಳೂರು, ಜನವರಿ 10: ನಗರವಾಸಿಗಳಿಗೆ ಮೆಟ್ರೋದಿಂದ ಮತ್ತೊಂದು ಶುಭ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮಾರ್ಗದಲ್ಲಿ ಮೆಟ್ರೋ ರೈಲು ಓಡಾಟದ ಟ್ರಯಲ್ ಅನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಆರಂಭಿಸಿದೆ. ಒಟ್ಟು 21.26 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ ಪ್ರಥಮ ಹಂತವಾಗಿ 7.5 ಕಿ.ಮೀ ಎಲಿವೇಟೆಡ್ ವಿಭಾಗದಲ್ಲಿ ಟ್ರಯಲ್ ನಡೆಯುತ್ತಿದೆ. ಈ ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು 6 ಸ್ಟೇಷನ್‌ಗಳಿದ್ದು, ಕಾಳೇನಾ ಅಗ್ರಹಾರದಿಂದ ತಾವರೆಕೆರೆ ನಡುವಿನ ಭಾಗದಲ್ಲಿ ಪರೀಕ್ಷಾ ಓಡಾಟ ಆರಂಭವಾಗಿದೆ. ಏಪ್ರಿಲ್–ಮೇ ತಿಂಗಳಲ್ಲಿ…

Read More

ಬಳ್ಳಾರಿ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ? ಕೇಸ್​ ಬಗ್ಗೆ ಪರಮೇಶ್ವರ್​​ ಬಿಗ್​​ಅಪ್ಡೇಟ್​ – Kannada News | Ballari Banner Clash: Is the Case Being Handed Over to the CBI?

ಗೃಹ ಸಚಿವ ಜಿ. ಪರಮೇಶ್ವರ್​​ ಬೆಂಗಳೂರು, ಜನವರಿ 04: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ  ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣದ ತನಿಖೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಅಪ್ಡೇಟ್​​ ನೀಡಿದ್ದಾರೆ. ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡ್ತೇನೆ. ಅಗತ್ಯಬಿದ್ದರೆ ಸಿಐಡಿಗೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು…

Read More

‘ಲಾಕ್ ಅಪ್ ಸೀಸನ್ 2’: ಶೋನಿಂದ ಕಂಗನಾ ರಣಾವತ್​​ನ ಹೊರಗಿಟ್ಟಿದ್ದೇಕೆ? – Kannada News | Lock Upp 2: Ekta Kapoor Reveals Why Kangana Ranaut Isn’t Hosting, Netflix Debut

ಖ್ಯಾತ ರಿಯಾಲಿಟಿ ಶೋ ‘ಲಾಕ್ ಅಪ್’ ಈಗ ಎರಡನೇ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಈ ಬಾರಿ ಶೋಗೆ ‘ಲಾಕ್ ಅಪ್: ಸಚ್ ಯಾ ಸಜಾ’ ಎಂದು ಹೆಸರಿಡಲಾಗಿದೆ. ಆದರೆ ಈ ಸೀಸನ್‌ನಲ್ಲಿ ಕೆಲವು ದೊಡ್ಡ ಬದಲಾವಣೆಗಳು ಆಗಿವೆ. ಮೊದಲ ಸೀಸನ್ ನಡೆಸಿಕೊಟ್ಟಿದ್ದ ನಟಿ ಕಂಗನಾ ರಣಾವತ್ ಈ ಬಾರಿ ಶೋನಲ್ಲಿ ಇರುವುದಿಲ್ಲ. ಅವರ ಬದಲಿಗೆ ನಿರ್ದೇಶಕಿ ಫರಾ ಖಾನ್ ಮತ್ತು ನಟ ರಿತೇಶ್ ದೇಶ್‌ಮುಖ್ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಕಂಗನಾ ರಣಾವತ್ ಶೋನಿಂದ ಹೊರಗುಳಿಯಲು ಅಸಲಿ ಕಾರಣ…

Read More

ಅಯೋಧ್ಯೆ ಹಗರಣ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ – Kannada News | Karnataka Strengthens Temple Security Following Ayodhya Donation Scandal

ಬೆಂಗಳೂರು, ಜುಲೈ 16: ಅಯೋಧ್ಯೆ ರಾಮಮಂದಿರ ಹುಂಡಿ ಅವ್ಯವಹಾರದ ಬೆನ್ನಲ್ಲೇ ಅಲರ್ಟ್ ಆಗಿರುವ ರಾಜ್ಯ ಸರ್ಕಾರವು ರಾಜ್ಯದ ದೇವಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿನ ಕಾಣಿಕೆ ಹುಂಡಿಗಳಿಗೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಕುರಿತಾಗಿ ಡಿಸಿಎಂ ಜಿ. ಪರಮೇಶ್ವರ್​ ಮಾತನಾಡಿದ್ದು, ‘‘ರಾಜ್ಯದಲ್ಲಿ 39 ಸಾವಿರ ದೇವಸ್ಥಾನಗಳು ಮುಜರಾಯಿ ಅಡಿಯಲ್ಲಿವೆ. ಮುಜರಾಯಿಗೆ ಸೇರದ ದೇವಸ್ಥಾನಗಳೂ ಇವೆ. ಎ ದರ್ಜೆಯ ದೇವಸ್ಥಾನಕ್ಕೆ ಸಾಕಷ್ಟು ಹಣ ಬರುತ್ತೆ. ಹುಂಡಿ ಇತರೆ ಸ್ಥಳಕ್ಕೆ ಸಿಸಿಟಿಸಿ ಹಾಕಿ ಕೇಂದ್ರೀಕೃತ…

Read More

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(Strait of Hormuz)  ಮುಚ್ಚಿತ್ತು. ಇದು ತೈಲ ಟ್ಯಾಂಕರ್​ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಬಳಸಿಕೊಂಡು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್​ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ…

Read More

ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ? ಎಸ್​ಆರ್​ ವಿಶ್ವನಾಥ್ ಹೇಳಿದ್ದಿಷ್ಟು – Kannada News | BJP Leaders S.R. Vishwanath and K. Sudhakar Resolve Differences, Pledge Unity

ಬೆಂಗಳೂರು, ಜುಲೈ 05: ಬಿಜೆಪಿ ಹಿರಿಯ ಮುಖಂಡರಾದ ಎಸ್.ಆರ್. ವಿಶ್ವನಾಥ್ ಮತ್ತು ಕೆ. ಸುಧಾಕರ್ ನಡುವೆ ಇತ್ತೀಚೆಗೆ ಸಾರ್ವಜನಿಕವಾಗಿ ವ್ಯಕ್ತವಾಗಿದ್ದ ವೈಯಕ್ತಿಕ ಭಿನ್ನಾಭಿಪ್ರಾಯಗಳು ಇದೀಗ ಪಕ್ಷದ ಹಿರಿಯರ ಮಧ್ಯಸ್ಥಿಕೆಯಿಂದ ಬಗೆಹರಿದಿದೆ. ಈ ಕುರಿತು ಮಾತನಾಡಿದ ಎಸ್.ಆರ್. ವಿಶ್ವನಾಥ್, ರಾಜ್ಯ ಅಧ್ಯಕ್ಷ ಪ್ರಲ್ಹಾದ್​​ ಜೋಶಿ ಮತ್ತು ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಅವರು ನಮ್ಮನ್ನ ಕರೆದು ಮಾತುಕತೆ ಮಾಡಿದ್ದಾರೆ ಎಂದರು. ಮಾಧ್ಯಮಗಳ ಮೂಲಕ ಹೊರಹೊಮ್ಮಿದ್ದ ವೈಯಕ್ತಿಕ ಹೇಳಿಕೆಗಳಿಗೆ ಅಂತ್ಯ ಹಾಡಬೇಕು ಎಂದು ಪಕ್ಷದ ನಾಯಕರು ಸೂಚಿಸಿದ್ದರು. ಇದೀಗ…

Read More

ಟೀಂ ಇಂಡಿಯಾವನ್ನು ಸೋಲಿಸಿದ ಬೆನ್ನಲ್ಲೇ ಐರ್ಲೆಂಡ್ ಕೋಚ್ ರಾಜೀನಾಮೆ – Kannada News | Ireland Cricket Coach Heinrich Malan Resigns After Historic India T20 Series Win

ಬಲಿಷ್ಠ ಟೀಂ ಇಂಡಿಯಾವನ್ನು ಎರಡು ಪಂದ್ಯಗಳ ಟಿ20 ಸರಣಿಯಲ್ಲಿ ವೈಟ್ ವಾಶ್ ಮಾಡಿದ ಸಂತಸದಲ್ಲಿದ್ದ ಐರ್ಲೆಂಡ್ (India vs Ireland) ತಂಡಕ್ಕೆ ಆಘಾತ ಎದುರಾಗಿದೆ. ತಂಡವನ್ನು ಈ ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿದ ಮುಖ್ಯ ಕೋಚ್ ಹೆನ್ರಿಕ್ ಮಲನ್ (Heinrich Malan) ಇದ್ದಕ್ಕಿದ್ದಂತೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕ್ರಿಕೆಟ್ ಐರ್ಲೆಂಡ್ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ಆ ಪೋಸ್ಟ್‌ನಲ್ಲಿ ಮುಖ್ಯ ಕೋಚ್ ರಾಜೀನಾಮೆಯ ವಿಚಾರವನ್ನು ಹಂಚಿಕೊಂಡಿದೆ. ಕೋಚ್ ಹೆನ್ರಿಕ್ ಮಲನ್ ಅವರ ಈ ನಿರ್ಧಾರ…

Read More