Headlines

ದಿನ ಭವಿಷ್ಯ: ಈ ರಾಶಿಯವರು ಇಂದು ಸಿಗುವ ಅಶುಭಸೂಚನೆಯನ್ನು ನಿರ್ಲಕ್ಷಿಸಬೇಡಿ… – Kannada News | Horoscope May 04 Monday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಮಾಡುವ ಕಠಿಣ ಪರಿಶ್ರಮವು ನಿಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಕೃಷಿ ಕಾರ್ಯದಲ್ಲಿ ನೀವು ತೊಡಗುವಿರಿ. ಇದು ನಿಮ್ಮನ್ನು ನೀವು ಅರ್ಥಮಾಡಿಕೊಳ್ಳುವ ಸಮಯ ಕೂಡ. ಇದರಿಂದ ನೀವು ಯಾವುದೇ ಸಮಸ್ಯೆಯನ್ನು ಸುಲಭವಾಗಿ ಪರಿಹರಿಸಲು ಸಾಧ್ಯವಾಗುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಮೇಲ್ಮಟ್ಟಕ್ಕೆ ಹೋಗಲಿದ್ದೀರಿ. ದೂರಪ್ರಯಾಣವನ್ನು ಇಂದು ಇಷ್ಟಪಡುವಿರಿ. ವೃಷಭ ರಾಶಿ : ಪ್ರಯೋಜನವಾಗದ ಮಾತುಗಳನ್ನು ಹೇಳುವುದು ಬೇಡ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಹಣಕಾಸಿನ ವಿಷಯಗಳಲ್ಲಿ ಕೆಲವು ತೊಡಕುಗಳು…

Read More

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ – Kannada News | Shivaji Nagar Footpath Clearance: Traders Allege Sudden Eviction Without Notice

ಬೆಂಗಳೂರು, ಜುಲೈ 21: ಶಿವಾಜಿನಗರದಲ್ಲಿ ನಡೆದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚಾರಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಜಿಬಿಎ ಸಿಬ್ಬಂದಿ ಮೇಲೆ ದಾಳಿ ನಡೆಸಿರುವ ಆರೋಪದ ಹಿನ್ನೆಲೆ ಹಲವರನ್ನು ವಶಕ್ಕೆ ಪಡೆದಿರುವ ನಡುವೆ ಅಧಿಕಾರಿಗಳ ವಿರುದ್ಧವೇ ವ್ಯಾಪಾರಿಗಳು ಗಂಭೀರ ಆರೋಪ ಮಾಡಿದ್ದಾರೆ. ನಮಗೆ ಒಂದು ನಿಮಿಷದ ಸಮಯವನ್ನೂ ನೀಡಿಲ್ಲ. ನಮ್ಮ ಫ್ರಿಡ್ಜ್, ಶೋಕೇಸ್ ಮತ್ತು ಇತರೆ ವ್ಯಾಪಾರದ ವಸ್ತುಗಳು ಸಂಪೂರ್ಣ ಪುಡಿಪುಡಿಯಾಗಿ ಹಾಳಾಗಿವೆ ಎಂದು ದೂರಿದ್ದಾರೆ. ಅರ್ಧ ಗಂಟೆ ಕಾಲಾವಕಾಶವನ್ನೂ ನೀಡದೆ ಬುಲ್ಡೋಜರ್ ಹಾಕಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ….

Read More

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್ – Kannada News | Sanjana Anand talks about Hayagrriva Kannada movie

ಧನ್ವೀರ್ ಗೌಡ (Dhanveer Gowda) ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಮೊದಲ ದಿನ ಕಾರಣಾಂತರಗಳಿಂದ ಸಿನಿಮಾದ ಶೋಗಳು ರದ್ದಾಗಿದ್ದವಾದರೂ ಆ ನಂತರ ಸಂಜೆ ವೇಳೆ ಸಿನಿಮಾ ಬಿಡುಗಡೆ ಆಗಿ, ಪ್ರೇಕ್ಷಕರಿಂದ ಉತ್ತರ ಆರಂಭಿಕ ಪ್ರತಿಕ್ರಿಯೆ ಪಡೆದುಕೊಂಡಿದೆ. ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಖುಷಿ ವ್ಯಕ್ತಪಡಿಸಿದ್ದಾರೆ….

Read More

India-Iran: ಇರಾನ್ ಕಟ್ಟರ್ ಇಸ್ಲಾಮಿಕ್ ದೇಶವಾದರೂ ಭಾರತಕ್ಕೆ ಬೇಕು; ಯಾಕೆ ಗೊತ್ತಾ? – Kannada News | Iran crisis, why India has to worry about this Islamic nation, here are some reasons

ನವದೆಹಲಿ, ಜನವರಿ 15: ಇರಾನ್ ಮೇಲೆ ಅಮೆರಿಕ ಯಾವ ಕ್ಷಣದಲ್ಲಿ ಬೇಕಾದರೂ ಮಿಲಿಟರಿ ದಾಳಿ ನಡೆಸಬಹುದು. ಭಾರತ ಬಹಳ ಆತಂಕದಲ್ಲಿ ಪರಿಸ್ಥಿತಿ ವೀಕ್ಷಿಸುವಂತಾಗಿದೆ. ಇರಾನ್ (Iran) ಏನೂ ಭಾರತಕ್ಕೆ ಮಿತ್ರ ದೇಶವಲ್ಲ, ತೀರಾ ಶತ್ರು ದೇಶವೂ ಅಲ್ಲ. ಎರಡು ದೇಶಗಳಾಚೆ ಇರುವ ಒಂದು ರಾಷ್ಟ್ರ. ಅಲ್ಲಿ ಪರಿಸ್ಥಿತಿ ಹದಗೆಟ್ಟರೆ ಭಾರತ ಯಾಕೆ ಚಿಂತಿಸಬೇಕು? ಭಾರತ ಇರಾನ್ ಬಗ್ಗೆ ಚಿಂತೆ ಪಡಲು ಕಾರಣಗಳಿವೆ. ಭಾರತ ಮತ್ತು ಇರಾನ್ ನಡುವಿನ ಈಗಿನ ಸಂಬಂಧದ ತಳಹದಿಯು ಪರಸ್ಪರ ಅಗತ್ಯಗಳ ಮೇಲೆ ನಿಂತಿದೆ….

Read More

GT vs SRH IPL 2026 Live Score: ಟೈಟಾನ್ಸ್​ vs ಸನ್​ರೈಸರ್ಸ್​​

ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು 14 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡವು 14 ಪಾಯಿಂಟ್ಸ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ 16 ಅಂಕಗಳೊಂದಿಗೆ ಅಗ್ರಸ್ಥಾನ ಸ್ವಾಧೀನಪಡಿಸಿಕೊಳ್ಳಲಿದೆ. ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್…

Read More

ಅದೃಷ್ಟ ಮತ್ತು ಅಂಡಾಶಯದ ಲಾಟರಿ; ತಮ್ಮ ಯಶಸ್ಸಿನ ಸೀಕ್ರೆಟ್ ಬಿಚ್ಚಿಟ್ಟ ವಾರನ್ ಬಫೆಟ್ – Kannada News | Warren Buffett reveals Ovarian Lottery and Luck factors in his success

ವಾರನ್ ಬಫೆಟ್Image Credit source: Ankit Agrawal/Mint via Getty Images ವಿಶ್ವದ ಅತ್ಯಂತ ಯಶಸ್ವಿ ಹಾಗೂ ಪ್ರಸಿದ್ಧ ಹೂಡಿಕೆದಾರರಲ್ಲಿ ಒಬ್ಬರಾದ ವಾರನ್ ಬಫೆಟ್ (Warren Buffett), ತಮ್ಮ ಅಪಾರ ಯಶಸ್ಸಿನ ಹಿಂದಿರುವ ಮುಖ್ಯ ರಹಸ್ಯ “ಅದೃಷ್ಟ” ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ವಿಶ್ವದ ಟಾಪ್-10 ಶ್ರೀಮಂತರಲ್ಲಿ ಒಬ್ಬರಾದ ಅವರು, ಜಗತ್ತಿನ 800 ಕೋಟಿ ಜನಸಂಖ್ಯೆಯಲ್ಲಿ ತಾವು ಅತ್ಯಂತ ಅದೃಷ್ಟಶಾಲಿ 10 ಜನರಲ್ಲಿ ಒಬ್ಬರಿರಬಹುದು ಎಂದಿದ್ದಾರೆ. ತಮ್ಮ ಜೀವನದ ಯಶಸ್ಸಿಗೆ ‘ಅಂಡಾಶಯದ ಲಾಟರಿ’ಯೂ (Ovarian Lottery) ಕಾರಣವಿರಬಹುದು ಎಂದಿದ್ದಾರೆ…

Read More

‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್​​ಗೆ ನೊಟೀಸ್

ಪ್ರೇಮ್ (Prem) ನಿರ್ದೇಶಿಸಿ ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ ತೇರಿ ಸರ್ಕೆ’ ಹಾಡಿನ ಬಗ್ಗೆಯಂತೂ ತೀವ್ರ ಟೀಕೆ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ಸಹ ದಾಖಲಾಗಿದೆ. ಲೋಕಸಭೆಯಲ್ಲಿ ಸಹ ಹಾಡಿನ ಬಗ್ಗೆ ಚರ್ಚೆ ನಡೆದಿದೆ. ಇದೀಗ ಹಾಡಿನ ಕುರಿತಾಗಿ ನಿರ್ದೇಶಕ ಪ್ರೇಮ್ ಸೇರಿದಂತೆ…

Read More

Typist Recruitment 2026: ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ! – Kannada News | Chikkamagaluru Court Typist Recruitment 2026: Apply Online for 6 Vacancies!

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ. ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರ (Typist) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಒಟ್ಟು 06 ಬೆರಳಚ್ಚುಗಾರರ (Typist) ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 34,100 ರಿಂದ 67,600 ರೂ. ವರೆಗೆ ಮತ್ತು ಇತರ…

Read More

18 ವರ್ಷಗಳ ಇತಿಹಾಸವನ್ನೇ ಬದಲಿಸಿದ RCB ದಾಂಡಿಗರು

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದಿದೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ವಿರುದ್ಧ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ.  ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಆರ್​ಸಿಬಿ ದಾಂಡಿಗರು…

Read More

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​ – Kannada News | IND vs NZ 5th T20: Last Chance for Sanju Samson

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಜ.31) ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಸಂಜು ಸ್ಯಾಮ್ಸನ್​ ಪಾಲಿಗೆ ಕೊನೆಯ ಚಾನ್ಸ್​. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 10 ರನ್ ಬಾರಿಸಿದ್ದ ಸ್ಯಾಮ್ಸನ್, ದ್ವಿತೀಯ ಪಂದ್ಯದಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ 24…

Read More