Headlines

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ – Kannada News | Bengaluru Crime News: Woman Killed in Gayatri Nagar Fire; Man Stabbed to Death in Basaveshwara Nagar

ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡImage Credit source: tv9 ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ (Bangalore) ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅವಘಡದಲ್ಲಿ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ದುರ್ಮರಣ ಹೊಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್…

Read More

ಶಾಂತಿ ಒಪ್ಪಂದದ ನಡುವೆಯೂ ಯುದ್ಧದ ಕಾರ್ಮೋಡ, ಒಪ್ಪಂದ ಮೀರಿದರೆ ಹುಷಾರ್, ಇರಾನ್ ಸುತ್ತ ಸೇನೆ ಜಮಾವಣೆ ಮಾಡಿದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 09: ಅಮೆರಿಕ ಮತ್ತು ಇರಾನ್(Iran) ನಡುವಿನ ಕದನ ವಿರಾಮದ ಘೋಷಣೆಯ ಬೆನ್ನಲ್ಲೇ ಜಾಗತಿಕ ರಾಜಕೀಯದಲ್ಲಿ ಮತ್ತೆ ಯುದ್ಧದ ಕಾರ್ಮೋಡಗಳು ಕವಿಯತೊಡಗಿವೆ. ತಮ್ಮ ‘ಟ್ರುತ್ ಸೋಶಿಯಲ್’ ವೇದಿಕೆಯಲ್ಲಿ ಅಬ್ಬರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಸರ್ಕಾರಕ್ಕೆ ಅತ್ಯಂತ ಗಂಭೀರ ಎಚ್ಚರಿಕೆ ನೀಡಿದ್ದಾರೆ.ಇರಾನ್ ಸುತ್ತಮುತ್ತ ಅಮೆರಿಕದ ನೌಕಾಪಡೆ, ಯುದ್ಧ ವಿಮಾನಗಳು ಮತ್ತು ಮಿಲಿಟರಿ ಸಿಬ್ಬಂದಿ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಲಿದ್ದಾರೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಹೆಚ್ಚುವರಿ ಮದ್ದುಗುಂಡು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ನಮ್ಮ ಸೇನೆ ಇರಾನ್‌ನ…

Read More

ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ – Kannada News | Security Scare at Trump Tower After Suspicious Package Alert

ವಾಷಿಂಗ್ಟನ್, ಮಾರ್ಚ್​ 03: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಅಮೆರಿಕ ಸೇನೆಯು ಹಲವಾರು ದಿನಗಳಿಂದ ಇರಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸುತ್ತಿದೆ. ಆದಾಗ್ಯೂ, ಈ ಯುದ್ಧದ ಮಧ್ಯೆ, ಟ್ರಂಪ್‌ಗೆ ಸಂಬಂಧಿಸಿದ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ.ಮಾಹಿತಿಯ ಪ್ರಕಾರ, ಅಮೆರಿಕದ ಮ್ಯಾನ್‌ಹ್ಯಾಟನ್‌ನಲ್ಲಿರುವ ಟ್ರಂಪ್ ಟವರ್‌ನಲ್ಲಿ ಅನುಮಾನಾಸ್ಪದ ಬಾಕ್ಸ್​​ ಪತ್ತೆಯಾಗಿದೆ. ಟ್ರಂಪ್ ಟವರ್‌ನಿಂದ ಸೀಕ್ರೆಟ್ ಸರ್ವಿಸ್ ಈ ಪ್ಯಾಕ್ ಅನ್ನು ವಶಪಡಿಸಿಕೊಂಡಿದೆ. ಸೋಮವಾರ ಮಧ್ಯಾಹ್ನ ಮ್ಯಾನ್‌ಹ್ಯಾಟನ್‌ನಲ್ಲಿರುವ ಪ್ರಸಿದ್ಧ ಟ್ರಂಪ್ ಟವರ್‌ನ ಮೇಲ್ ಕೋಣೆಯಲ್ಲಿ ಅನುಮಾನಾಸ್ಪದ…

Read More

Zodiac Career Predictions: ನಿಮ್ಮ ರಾಶಿಗನುಗುಣವಾಗಿ ಜನವರಿ 4ರಿಂದ 10ರ ವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Zodiac Career Predictions: Jan 4 10 Job Prospects for All 12 Signs

ಹೊಸ ವರ್ಷ ಆರಂಭವಾಗಿದೆ. ಜನವರಿ 4ರಿಂದ 10ರ ವರೆಗೆ 12 ರಾಶಿಗನುಗುಣವಾಗಿ ನಿಮ್ಮ ಉದ್ಯೋಗ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಅಸ್ಥಿರತೆಯ ಉದ್ಯೋಗದಿಂದ ಭಯ, ಭ್ರಮ ನಿರಸನ, ಎಲ್ಲವೂ ಆಗಲಿದೆ. ನಿಮಗೆ ನೀವೇ ಪ್ರೇರಣೆ ಕೊಟ್ಟುಕೊಂಡು ಎಲ್ಲವನ್ನೂ ಎದುರಿಸಬೇಕಾಗುವುದು. ಈ ವಾರ ಶುಭವಾಗಲಿ. ಮೇಷ ರಾಶಿ: ಈ ವಾರದ ಕೆಲವು ದಿನದಲ್ಲಿ ಉದ್ಯೋಗ ಬದಲಾವಣೆ ಯೋಚನೆ ಗಟ್ಟಿಯಾಗುತ್ತದೆ. ಸಂದರ್ಶನದ ಮೂಲಕ ಅವಕಾಶ ಬರುತ್ತದೆ. ಹೊಸ ಕೆಲಸ ಆರಂಭದಲ್ಲಿ ಒತ್ತಡದಾಯಕವಾದರೂ ಮುಂದೆ ಸ್ಥಾನಮಾನ ಹೆಚ್ಚುತ್ತದೆ. ಆತುರದ ನಿರ್ಧಾರದಿಂದ ತಪ್ಪು ಆಯ್ಕೆ…

Read More

Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು (Acharya Chanakya)  ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು, ಯಶಸ್ಸು ಗಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಹಣ ಗಳಿಕೆ ಮಾತ್ರವಲ್ಲದೆ ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರು ಹೇಳಿರುವ ಈ ನೀತಿಪಾಠಗಳನ್ನು ನೀವು ಪಾಲಿಸಿದರೆ ಖಂಡಿತವಾಗಿಯೂ ಜೀವನದಲ್ಲಿ ಹಣದ ಕೊರತೆ ಬಾರದಂತೆ, ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬಹುದು. ಹಣದ ಕೊರತೆ ಎದುರಾಗಬಾರದೆಂದರೆ ಏನು…

Read More

ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್‌ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಆರೋಗ್ಯದ ಹಾಳಾಗದಂತೆ ಕಾಳಜಿ ವಹಿಸುವುದು ಎಂದರೆ ಕೇವಲ ಔಷಧಿಗಳನ್ನು ತೆಗೆದುಕೊಳ್ಳುವುದು ಎಂದಲ್ಲ, ಬದಲಾಗಿ ನಮ್ಮ ದೇಹಕ್ಕೆ ಏನು ಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು. ಅದರಲ್ಲಿಯೂ ವಿಟಮಿನ್ ಮಾತ್ರೆಗಳ ಅತಿಯಾದ ಬಳಕೆ ಪ್ರಯೋಜನಕ್ಕಿಂತ ಹೆಚ್ಚಿನ ಹಾನಿಯನ್ನುಂಟುಮಾಡಬಹುದು ಎಂದು ವೈದ್ಯರು ಹೇಳುತ್ತಾರೆ. ಅಷ್ಟೇ ಅಲ್ಲ, ಆಧುನಿಕ ಜೀವನಶೈಲಿಯಲ್ಲಿ ನಿದ್ರೆ (Sleep) ಮತ್ತು ದಂತದ ಆರೋಗ್ಯದ ಬಗ್ಗೆ ಹೆಚ್ಚಿನವರು ನಿರ್ಲಕ್ಷಿಸುತ್ತಾರೆ. ನಿದ್ರೆ ಸರಿಯಾಗಿ ಆಗದಿದ್ದರೆ ಆಯಾಸವಾಗುವುದು ಸಾಮಾನ್ಯ. ಅದರಲ್ಲಿಯೂ ವಿದ್ಯಾರ್ಥಿಗಳಲ್ಲಿ ಈ ರೀತಿ ಸಮಸ್ಯೆಯನ್ನು ಹೆಚ್ಚಾಗಿ ಕಂಡುಬರುತ್ತದೆ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು,…

Read More

ಅಕ್ಷಯ್ ಖನ್ನಾ ಬದಲಿಗೆ ‘ಪಾತಾಳ್ ಲೋಕ್’ ನಟನಿಗೆ ‘ದೃಶ್ಯಂ 3’ ಅವಕಾಶ – Kannada News | Patal Lok actor Jaideep Ahlawat replaces Akshaye Khanna in Drishyam 3

ಬಾಲಿವುಡ್ ನಟ ಅಕ್ಷಯ್ ಖನ್ನಾ (Akshaye Khanna) ಅವರಿಗೆ ‘ಧುರಂಧರ್’ ಸಿನಿಮಾದಿಂದ ಏಕಾಏಕಿ ಅವಕಾಶ ಹೆಚ್ಚಾಯಿತು. ಒಮ್ಮೆಲೇ ಅವರ ಜನಪ್ರಿಯತೆ ಮುಗಿಲು ಮುಟ್ಟಿತು. ಇದರಿಂದಾಗಿ ಅವರ ಡಿಮ್ಯಾಂಡ್ ಜಾಸ್ತಿ ಆಗಿದೆ. 2ರಿಂದ 3 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ಅವರು ಈಗ ಏಕಾಏಕಿ 20 ಕೋಟಿ ರೂಪಾಯಿಗೂ ಅಧಿಕ ಸಂಭಾವನೆ ಬೇಕು ಎಂದು ಕೇಳುತ್ತಿದ್ದಾರೆ. ಇದರಿಂದಾಗಿ ‘ದೃಶ್ಯಂ 3’ (Drishyam 3) ಸಿನಿಮಾದ ನಿರ್ಮಾಪಕರಿಗೆ ಕೋಪ ಬಂದಿದೆ. ಹಾಗಾಗಿ ಅಕ್ಷಯ್ ಖನ್ನಾ ಬದಲಿಗೆ ಜೈದೀಪ್ ಅಹಲಾವತ್ (Jaideep…

Read More

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್ – Kannada News | Priya Hassan condemns Chakravarthy Chandrachud statement on movie producers

ಕಿಚ್ಚ ಸುದೀಪ್ ಅವರ ಆಪ್ತರಾದ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಅನೇಕ ನಿರ್ಮಾಪಕರು ಖಂಡಿಸುತ್ತಿದ್ದಾರೆ. ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಸಹ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಟಿವಿ9 ಜತೆ ಅವರು ಮಾತನಾಡಿದ್ದಾರೆ. ‘ಚಂದ್ರಚೂಡ್ ಅವರ ವಿಡಿಯೋ ನೋಡಿದಾಗ ನನಗೆ ಅಸಹ್ಯ ಅನಿಸಿತು. ಅಷ್ಟು ಅಸಭ್ಯವಾದ ಪದವನ್ನು ಅವರು ಬಳಸಿದ್ದಾರೆ. ಹೆಣ್ಮಕ್ಕಳು ಕೇಳಲು ಹಿಂಜರಿಯುವಂತಹ ಪದ ಬಳಕೆ ಮಾಡಿದ್ದಾರೆ. ಡಾ. ರಾಜ್​ಕುಮಾರ್ ಅವರು ನಿರ್ಮಾಪಕರನ್ನು ಅನ್ನದಾತರು ಎಂದಿದ್ದರು….

Read More

ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಬ್ರೇಕ್? ಟ್ರಂಪ್ ಆ ಸಂದೇಶದಲ್ಲಿದೆ ಮಹತ್ವದ ಸುಳಿವು!

ನವದೆಹಲಿ, ಮಾರ್ಚ್ 21: ಕಳೆದ ಕೆಲವು ದಿನಗಳಿಂದ ಮಧ್ಯಪ್ರಾಚ್ಯದಲ್ಲಿ ಅಕ್ಷರಶಃ ಬೆಂಕಿಯುಗುಳುತ್ತಿದ್ದ ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಅಂತಿಮವಾಗಿ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿರುವ ಇತ್ತೀಚಿನ ಅಧಿಕೃತ ಹೇಳಿಕೆಯು, ಇರಾನ್ ವಿರುದ್ಧದ ‘ಆಪರೇಷನ್ ಎಪಿಕ್ ಫ್ಯೂರಿ (Operation Epic Furry)’ ಶೀಘ್ರದಲ್ಲೇ ಅಂತ್ಯಗೊಳ್ಳಬಹುದು ಎಂಬ ಬಲವಾದ ಮುನ್ಸೂಚನೆ ನೀಡಿದೆ. ಅಲ್ಲದೆ, ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಿದ್ದೇವೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಡೊನಾಲ್​ಡ್ ಟ್ರಂಪ್ ಹೇಳಿದ್ದೇನು? ಇರಾನ್‌ನ…

Read More

ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಹತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾರವಾರ, (ಮಾರ್ಚ್ 30): ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾಗಿರುವ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಅಂಕೋಲಾದಲ್ಲಿ ನಡೆದ ಹತ್ಯೆ  ಯತ್ನ ಪ್ರಕರಣ (Gopalkrishna Nayak Murder Attempt) ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಮಾರ್ಚ್ 25ರಂದು ಹಾಡಹಗಲೇ ನಡೆದ ಈ ದಾಳಿ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಘಟನೆಯ‌ ಇನ್ನೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಗೋಪಾಲ ಕೃಷ್ಣ ನಾಯಕ್ ಅವರ ತಲೆಗೆ…

Read More