‘ಸ್ವಾತಂತ್ರ್ಯ ಹೋರಾಟಗಾರರು ಗುಂಡಿಗೆ ಎದೆಯೊಡ್ಡಿದರು, ನೀವು ಮೊಟ್ಟೆಗೆ ಹೆದರುತ್ತೀರಾ?’; ಮಹುವಾ ಮೊಯಿತ್ರಾಗೆ ಸುಪ್ರೀಂ ಕೋರ್ಟ್ ಪ್ರಶ್ನೆ – Kannada News | Why fear eggs freedom fighters took bullets Supreme Court asks TMC MP Mahua Moitra
ನವದೆಹಲಿ, ಆಗಸ್ಟ್ 7: ತಮ್ಮ ಮೇಲೆ ಮೊಟ್ಟೆ ಎಸೆಯಬಹುದು ಎಂಬ ಕಾರಣ ನೀಡಿ ಪೊಲೀಸ್ ತನಿಖೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಅನುಮತಿ ಕೋರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ (Mahua Moitra) ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತನಿಖಾಧಿಕಾರಿಯ ಮುಂದೆ ಖುದ್ದಾಗಿ ಹಾಜರಾಗುವಂತೆ ತಿಳಿಸಿದ್ದ ಕೊಲ್ಕತ್ತಾ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿದ್ದ ಸಂಸದೆ ಮಹುವಾ ಮೊಯಿತ್ರಾ, ಸುರಕ್ಷತೆಯ ಬಗ್ಗೆ ಆತಂಕ ಮತ್ತು ರಾಜಕೀಯ ವಿರೋಧಿಗಳಿಂದ ಮೊಟ್ಟೆ ಎಸೆಯುವುದು ಸೇರಿದಂತೆ ಸಾರ್ವಜನಿಕವಾಗಿ…