NEET UG ಆಕಾಂಕ್ಷಿಗಳಿಗೆ ಗೂಗಲ್​ನಿಂದ ಭರ್ಜರಿ ಗಿಫ್ಟ್; ಜೆಮಿನಿ ಆ್ಯಪ್‌ನಲ್ಲಿ ಸಿಗಲಿದೆ ಉಚಿತ ಅಣಕು ಪರೀಕ್ಷೆ! – Kannada News | Google Gemini Offers Free NEET UG Mock Tests: Boost Your Exam Prep with AI

ಗೂಗಲ್ ಇಂಡಿಯಾ ತನ್ನ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವಾದ ‘ಜೆಮಿನಿ’ (Gemini) ಮೂಲಕ ಉಚಿತ NEET UG ಅಭ್ಯಾಸ ಪರೀಕ್ಷೆಗಳನ್ನು ಪರಿಚಯಿಸಿದೆ. ಸಾಮಾನ್ಯವಾಗಿ ನೀಟ್ ಪರೀಕ್ಷೆಯ ಕೋಚಿಂಗ್ ಪಡೆಯಲು ಲಕ್ಷಾಂತರ ರೂಪಾಯಿ ಶುಲ್ಕ ತೆರಬೇಕಾಗುತ್ತದೆ. ಇದನ್ನು ಮನಗಂಡ ಗೂಗಲ್ ಇಂಡಿಯಾ, ಶಿಕ್ಷಣದಲ್ಲಿ ತಂತ್ರಜ್ಞಾನವನ್ನು ಅಳವಡಿಸುವ ತನ್ನ ಗುರಿಯ ಭಾಗವಾಗಿ ಈ ಯೋಜನೆಯನ್ನು ಘೋಷಿಸಿದೆ. ಗೂಗಲ್ ತನ್ನ ಅಧಿಕೃತ ‘X’ (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಅಭ್ಯರ್ಥಿಗಳು ತಮ್ಮ ತಯಾರಿಯನ್ನು ಈಗ ಸಂಪೂರ್ಣ ಉಚಿತವಾಗಿ ಜೆಮಿನಿ ಅಪ್ಲಿಕೇಶನ್‌ನಲ್ಲಿ ಮಾಡಬಹುದಾಗಿದೆ.

ಅಣಕು ಪರೀಕ್ಷೆ ತೆಗೆದುಕೊಳ್ಳುವುದು ಹೇಗೆ?

ಈ ಸೌಲಭ್ಯವನ್ನು ಪಡೆಯಲು ಅಭ್ಯರ್ಥಿಗಳು ಯಾವುದೇ ಕಷ್ಟಪಡಬೇಕಿಲ್ಲ. ಜೆಮಿನಿ ಅಪ್ಲಿಕೇಶನ್ ತೆರೆದು ಕೇವಲ ಒಂದು ವಾಕ್ಯ ಹೇಳಿದರೆ ಸಾಕು:

“ನಾನು ನೀಟ್ ಅಣಕು ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸುತ್ತೇನೆ” (I want to take a NEET mock test)

ಹೀಗೆ ಹೇಳಿದ ತಕ್ಷಣ ಜೆಮಿನಿ ಎಐ ನಿಮ್ಮ ಪಠ್ಯಕ್ರಮಕ್ಕೆ ಅನುಗುಣವಾಗಿ ಪ್ರಶ್ನೆಗಳನ್ನು ಕೇಳಲು ಮತ್ತು ನಿಮ್ಮ ತಯಾರಿಯನ್ನು ಮೌಲ್ಯಮಾಪನ ಮಾಡಲು ಆರಂಭಿಸುತ್ತದೆ. ಇದು ಕೇವಲ ಪ್ರಶ್ನೆಗಳನ್ನಷ್ಟೇ ನೀಡುವುದಿಲ್ಲ, ಬದಲಿಗೆ ಸಂವಾದಾತ್ಮಕವಾಗಿ (Interactive) ಕಲಿಕೆಯ ಅನುಭವವನ್ನು ನೀಡುತ್ತದೆ.

ಈ ಯೋಜನೆಯ ವಿಶೇಷತೆಗಳೇನು?

  • ವಾಸ್ತವಿಕ ಪರೀಕ್ಷಾ ಅನುಭವ: ಈ ಅಭ್ಯಾಸ ಪರೀಕ್ಷೆಗಳು ನಿಜವಾದ NEET UG ಪರೀಕ್ಷೆಯ ಮಾದರಿಯಲ್ಲೇ ಇರಲಿವೆ. ಇದು ಅಭ್ಯರ್ಥಿಗಳಲ್ಲಿ ಪರೀಕ್ಷೆಯ ಬಗೆಗಿನ ಭಯವನ್ನು ಹೋಗಲಾಡಿಸಿ ಆತ್ಮವಿಶ್ವಾಸ ತುಂಬುತ್ತದೆ.
  • ಸರಳ ಇಂಟರ್ಫೇಸ್: ಬಳಕೆದಾರ ಸ್ನೇಹಿ ವಿನ್ಯಾಸದಿಂದಾಗಿ ವಿದ್ಯಾರ್ಥಿಗಳು ಸುಲಭವಾಗಿ ಪ್ರಶ್ನೆಗಳಿಗೆ ಉತ್ತರಿಸಬಹುದು ಮತ್ತು ವಿವರಣೆಗಳನ್ನು ಪಡೆಯಬಹುದು.
  • ಎಲ್ಲರಿಗೂ ಲಭ್ಯ: ಯಾವುದೇ ಶುಲ್ಕವಿಲ್ಲದೆ, ದೇಶದ ಮೂಲೆಮೂಲೆಯ ವಿದ್ಯಾರ್ಥಿಗಳು ಇಂಟರ್ನೆಟ್ ಮೂಲಕ ಉನ್ನತ ಮಟ್ಟದ ತಯಾರಿ ನಡೆಸಲು ಇದು ಸಹಕಾರಿ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಸವಾಲುಗಳಿಗೆ ಪರಿಹಾರ:

ಪ್ರತಿ ವರ್ಷ ಸುಮಾರು 1.25 ಲಕ್ಷ MBBS ಸೀಟುಗಳಿಗಾಗಿ ನಡೆಯುವ ಈ ಭೀಕರ ಸ್ಪರ್ಧೆಯಲ್ಲಿ, ಸರಿಯಾದ ಮಾರ್ಗದರ್ಶನವಿಲ್ಲದೆ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಹಿಂದೆ ಬೀಳುತ್ತಿದ್ದರು. ಗೂಗಲ್‌ನ ಈ ಉಪಕ್ರಮವು ಶಿಕ್ಷಣವನ್ನು ಪ್ರಜಾಪ್ರಭುತ್ವೀಕರಣಗೊಳಿಸುವತ್ತ (Democratization of Education) ದೊಡ್ಡ ಹೆಜ್ಜೆಯಾಗಿದ್ದು, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

ನೀಟ್ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಇಂದೇ ಜೆಮಿನಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ತಮ್ಮ ವೈದ್ಯಕೀಯ ಕನಸಿನ ಹಾದಿಯನ್ನು ಸುಗಮಗೊಳಿಸಿಕೊಳ್ಳಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:50 pm, Fri, 17 April 26

Source link

ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಐತಿಹಾಸಿಕ ತೀರ್ಪು ಎಂದ ಲಾಯರ್ – Kannada News | Life imprisonment for 16 people including Vinay Kulkarni: A historic verdict, says lawyer

ಬೆಂಗಳೂರು, ಏಪ್ರಿಲ್​ 17: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬಳಿಕ 10 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ವಕೀಲ​ ಶಿವಾನಂದ ಪೆರ್ಲಾ ಮಾತನಾಡಿದ್ದು, ಇದೊಂದು ಐತಿಹಾಸಿಕ ತೀರ್ಪು ಎಂದಿದ್ದಾರೆ.  15 ಜೂನ್ 2016 ರಂದು ಧಾರವಾಡದ ಉದಯ ಜಿಮ್‌ನಲ್ಲಿ ಯೋಗೇಶ್ ಗೌಡ ಅವರ ಭೀಕರ ಕೊಲೆಯಾಗಿತ್ತು. ಪ್ರಕರಣದ ಪ್ರಾರಂಭದಲ್ಲಿ ಧಾರವಾಡ ಪೊಲೀಸರು ಬಸವರಾಜ್ ಮುತ್ತಕಿ ಮತ್ತು ಐದು ಇತರರ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ನಂತರ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಯಿತು. ಒಟ್ಟು 21 ಜನರ ಮೇಲೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿತು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

High Court Jobs: ಕರ್ನಾಟಕ ಹೈಕೋರ್ಟ್ ನೇಮಕಾತಿ; 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Karnataka High Court Civil Judge Recruitment 2026: 90 Vacancies for LLB Graduates – Apply Now!

ನ್ಯಾಯಾಂಗ ಸೇವೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಕಾನೂನು ಪದವೀಧರರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಸಿವಿಲ್ ನ್ಯಾಯಾಧೀಶರ (Civil Judges) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಪ್ರತಿಷ್ಠಿತ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು.

ಹುದ್ದೆಗಳ ವಿವರ ಮತ್ತು ಸಂಬಳದ ಶ್ರೇಣಿ:

ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ವೇತನ ಶ್ರೇಣಿಯು ತಿಂಗಳಿಗೆ ರೂ. 77,840 ರಿಂದ 1,36,520/- ವರೆಗೆ ಇರಲಿದ್ದು, ಸರ್ಕಾರದ ನಿಯಮಾನುಸಾರ ಇತರೆ ಭತ್ಯೆಗಳೂ ಲಭ್ಯವಿರುತ್ತವೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ (LLB) ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿಗೆ ಸಂಬಂಧಿಸಿದಂತೆ ಗರಿಷ್ಠ ವಯಸ್ಸು 45 ವರ್ಷಗಳು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ:

  • SC/ST/ಪ್ರವರ್ಗ-I: 05 ವರ್ಷಗಳು ಸಡಿಲಿಕೆ.
  • ಕ್ಯಾಟ್-2A/2B/3A/3B: 03 ವರ್ಷಗಳು ಸಡಿಲಿಕೆ.

ಅರ್ಜಿ ಶುಲ್ಕದ ವಿವರ

ಅಭ್ಯರ್ಥಿಗಳು ಎರಡು ಹಂತದ ಪರೀಕ್ಷಾ ಶುಲ್ಕಗಳನ್ನು ಪಾವತಿಸಬೇಕಾಗುತ್ತದೆ:

  • ಪೂರ್ವಭಾವಿ ಪರೀಕ್ಷಾ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳಿಗೆ ರೂ. 500/-
  • SC/ST/ಪ್ರವರ್ಗ-I ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/-

ಮುಖ್ಯ ಪರೀಕ್ಷಾ ಶುಲ್ಕ:

(ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು)

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳ ಅರ್ಹತೆಯನ್ನು ಪರೀಕ್ಷಿಸಲು ಹಂತ-ಹಂತದ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ:

  • ಪೂರ್ವಭಾವಿ ಪರೀಕ್ಷೆ (Preliminary Exam)
  • ಮುಖ್ಯ ಲಿಖಿತ ಪರೀಕ್ಷೆ (Main Written Exam)
  • ಸ್ಟೆನೋಗ್ರಫಿ ಪರೀಕ್ಷೆ (ಅಗತ್ಯವಿದ್ದರೆ)
  • ವೈಯಕ್ತಿಕ ಸಂದರ್ಶನ (Interview)

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತರು ಈ ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು:

  • ಮೊದಲು ಕರ್ನಾಟಕ ಹೈಕೋರ್ಟ್‌ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು, ರೆಸ್ಯೂಮ್ ಮತ್ತು ಫೋಟೋಗಳನ್ನು ಸಿದ್ಧವಾಗಿಡಿ.
  • ಅಧಿಕೃತ ವೆಬ್‌ಸೈಟ್ ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
  • ಕೊನೆಯದಾಗಿ ಅರ್ಜಿ ಸಲ್ಲಿಸಿ (Submit), ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಪ್ರಿಂಟ್ ತೆಗೆದುಕೊಳ್ಳಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದ್ವಿಪೌರತ್ವ ಪ್ರಕರಣ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ – Kannada News | Allahabad High Court Orders Case Against Congress Leader Rahul Gandhi In Dual Citizenship Case

ಅಲಹಾಬಾದ್, ಏಪ್ರಿಲ್ 17: ದ್ವಿಪೌರತ್ವದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ಪ್ರಕರಣ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ ಎಂಬ ಆರೋಪಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಹಾಗೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶಿಸಿದೆ.

ಉತ್ತರ ಪ್ರದೇಶ ಸರ್ಕಾರವು ಈ ಪ್ರಕರಣದ ಬಗ್ಗೆ ಸ್ವತಃ ತನಿಖೆ ನಡೆಸಬೇಕು ಅಥವಾ ಈ ವಿಷಯವನ್ನು ಕೇಂದ್ರೀಯ ಸಂಸ್ಥೆಗೆ ತನಿಖೆಗೆ ವಹಿಸಬೇಕು ಎಂದು ಹೈಕೋರ್ಟ್‌ನ ಲಕ್ನೋ ಪೀಠ ನಿರ್ದೇಶಿಸಿದೆ.

ಜನವರಿ 28ರಂದು ಲಕ್ನೋದ ವಿಶೇಷ ಸಂಸದ ಮತ್ತು ಶಾಸಕ ನ್ಯಾಯಾಲಯವು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ನಿರಾಕರಿಸಿತ್ತು. ಪೌರತ್ವಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರ ತನಗೆ ಇಲ್ಲ ಎಂದಿದ್ದ ವಿಶೇಷ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ: Video: ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಸಮಸ್ಯೆ ಇಲ್ಲ ಎಂದ ರಾಹುಲ್ ಗಾಂಧಿ

ಈ ಬಗ್ಗೆ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್, ಈ ವಿಷಯದಲ್ಲಿ ಸರಿಯಾದ ಪರಿಶೀಲನೆಯ ಅಗತ್ಯವಿದೆ ಎಂದು ಹೇಳಿದೆ. ಕಾನೂನಿನ ಪ್ರಕಾರ ಈ ವಿಷಯವನ್ನು ಪರಿಶೀಲಿಸುವಂತೆ ರಾಜ್ಯದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಏನಿದು ಪ್ರಕರಣ?:

ಈ ಪ್ರಕರಣವು ರಾಹುಲ್ ಗಾಂಧಿ ಬ್ರಿಟಿಷ್ ಪೌರತ್ವ ಹೊಂದಿರಬಹುದು ಎಂಬ ಆರೋಪಗಳಿಗೆ ಸಂಬಂಧಿಸಿದೆ. ಭಾರತೀಯ ಕಾನೂನಿನಡಿಯಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲ. ಇಂಗ್ಲೆಂಡ್ ಮೂಲದ ಕಂಪನಿಗೆ ಸಂಬಂಧಿಸಿದ ದಾಖಲೆಗಳನ್ನು ಉಲ್ಲೇಖಿಸಿ ದೂರು ನೀಡಲಾಗಿದೆ. ಅಲ್ಲಿ ಅವರನ್ನು ಬ್ರಿಟಿಷ್ ಪ್ರಜೆ ಎಂದು ಉಲ್ಲೇಖಿಸಲಾಗಿದೆ. ಅವರ ಅಧಿಕೃತ ದಾಖಲಾತಿಗಳಲ್ಲಿ ಲಂಡನ್ ವಿಳಾಸವನ್ನು ಕೂಡ ಪಟ್ಟಿ ಮಾಡಲಾಗಿದೆ. ಪೌರತ್ವ, ಪಾಸ್‌ಪೋರ್ಟ್‌ಗಳು ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಾನೂನುಗಳು ಸೇರಿದಂತೆ ವಿವಿಧ ಕಾನೂನು ನಿಬಂಧನೆಗಳ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ವಿವರವಾದ ತನಿಖೆಗಾಗಿ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿಯ ಪೌರತ್ವ ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕರ್ನಾಟಕದ ನಿವಾಸಿಯಾಗಿರುವ ಅರ್ಜಿದಾರರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಅಧಿಕೃತ ರಹಸ್ಯ ಕಾಯ್ದೆ, ವಿದೇಶಿಯರ ಕಾಯ್ದೆ ಮತ್ತು ಪಾಸ್‌ಪೋರ್ಟ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಿ ಎಫ್‌ಐಆರ್ ದಾಖಲಿಸಿ ವಿವರವಾದ ತನಿಖೆ ನಡೆಸುವಂತೆ ಕೋರಿದ್ದಾರೆ.

ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದು ಸಾಬೀತುಪಡಿಸುವ ದಾಖಲೆಗಳು ಮತ್ತು ಬ್ರಿಟಿಷ್ ಸರ್ಕಾರದ ಕೆಲವು ಇಮೇಲ್‌ಗಳು ತಮ್ಮ ಬಳಿ ಇವೆ. ಈ ಕಾರಣದಿಂದಾಗಿ ಅವರು ಭಾರತದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು. ಅವರು ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ – Kannada News | Yogesh Gowda Murder Case fighter Basavaraj koravar talks after Court Life Imprisonment For MLA Vinay Kulkarni

ಧಾರವಾಡ, (ಏಪ್ರಿಲ್ 17): ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್‌ನಲ್ಲಿ ನಡೆದ ಈ ಹತ್ಯೆ ಪ್ರಕರಣ ಸುಮಾರು 10 ವರ್ಷಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಇಂದು (ಏಪ್ರಿಲ್ 17) ಅಪರಾಧಿಗಳಿಗೆ ಶಿಕ್ಷೆಯಾಗಿದೆ.

ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಯೋಗೇಶ್ ಗೌಡ ಹತ್ಯೆ ಪ್ರಕರಣದ ಹೋರಾಟಗಾರ ಬಸವರಾಜ ಕೊರವರ್, ಮಾಧ್ಯಮಗಳ ಜೊತೆ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಕೆಲವೊಂದಿಷ್ಟು ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಇದನ್ನೂ ಓದಿ; ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು?

Source link

‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ – Kannada News | Ram Gopal Varma takes U Turn on Dhurandhar 2 Criticizes Dawood Ibrahim portrayal

ಆರಂಭದಿಂದಲೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾವನ್ನು ಹೊಗಳುತ್ತಲೇ ಬಂದಿದ್ದಾರೆ. ಈ ಚಿತ್ರದ ಡೈರೆಕ್ಟರ್ ಆದಿತ್ಯ ಧರ್ ಕೆಲಸವನ್ನು ಆರ್​ಜಿವಿ ಕೊಂಡಾಡಿದ್ದಾರೆ. ಇದು ಭಾರತೀಯ ಚಿತ್ರರಂಗದ ಗೇಮ್ ಚೇಂಜರ್ ಎಂದು ಹೊಗಳಿದ್ದಾರೆ. ಆದರೆ ಈಗ ಏಕಾಏಕಿ ಯು-ಟರ್ನ್ ಹೊಡೆದಿದ್ದಾರೆ. ‘ಧುರಂಧರ್ 2’ (Dhurandhar 2) ಚಿತ್ರದ ಒಂದು ಪ್ರಮುಖ ಅಂಶದ ಬಗ್ಗೆ ರಾಮ್ ಗೋಪಾಲ್ ವರ್ಮಾ ಅಸಮಾಧಾನ ವ್ಯಕ್ತಪಡಿದ್ದಾರೆ. ಅವರ ಈ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ.

ಈ ಸಿನಿಮಾದಲ್ಲಿ ದಾವೂದ್ ಇಬ್ರಾಹಿಂ ಪಾತ್ರವನ್ನು ತೋರಿಸಿದ ಬಗ್ಗೆ ರಾಮ್ ಗೋಪಾಲ್ ವರ್ಮಾ ವಿರೋಧ ವ್ಯಕ್ತಪಡಿಸಿದ್ದಾರೆ. ಚಿತ್ರದ ಮೇಕಿಂಗ್ ಮತ್ತು ನಿರ್ದೇಶನದ ಬಗ್ಗೆ ಆರ್​ಜಿವಿ ಅವರಿಗೆ ಈಗಲೂ ಗೌರವವಿದೆ. ಆದರೆ, ಚಿತ್ರದಲ್ಲಿ ಭೂಗತ ಲೋಕದ ಡಾನ್ ದಾವೂದ್ ಇಬ್ರಾಹಿಂ ಪಾತ್ರವನ್ನು ಬಿಂಬಿಸಿರುವ ರೀತಿ ತಮಗೆ ಸರಿ ಅನಿಸಿಲ್ಲ ಎಂದು ಅವರು ಹೇಳಿದ್ದಾರೆ.

‘ಸಿನಿಮಾ ತಂಡದವರಿಗೆ ತಮ್ಮದೇ ಆದ ಮಾಹಿತಿಯ ಮೂಲಗಳಿರಬಹುದು. ಆದರೆ, ಚಿತ್ರದಲ್ಲಿ ತೋರಿಸಲಾದ ದಾವೂದ್ ಇಬ್ರಾಹಿಂನ ವ್ಯಕ್ತಿತ್ವವು ನಾನು ತಿಳಿದಿರುವ ವಾಸ್ತವಕ್ಕೆ ಹತ್ತಿರವಾಗಿಲ್ಲ. ದಾವೂದ್ ಇಬ್ರಾಹಿಂ ಸುಮಾರು 20 ವರ್ಷಗಳ ಹಿಂದೆಯೇ ಕ್ರಿಮಿನಲ್ ಚಟುವಟಿಕೆಗಳಿಂದ ದೂರ ಸರಿದು ನಿಷ್ಕ್ರಿಯನಾಗಿದ್ದಾನೆ. ಆದರೆ ಸಿನಿಮಾದಲ್ಲಿ ಆತನನ್ನು ಸಕ್ರಿಯವಾಗಿ ತೋರಿಸಿರುವುದು ಸರಿಯಲ್ಲ’ ಎಂಬುದು ರಾಮ್ ಗೋಪಾಲ್ ವರ್ಮಾ ಅವರ ವಾದ.

‘ದಾವೂದ್ ಬಗ್ಗೆ ಯಾರು ಕೂಡ ಇಂತದ್ದೇ ಸತ್ಯ ಎಂದು ಹೇಳಲು ಸಾಧ್ಯವಿಲ್ಲ. ಸಿನಿಮಾದಲ್ಲಿ ತೋರಿಸಿರುವುದನ್ನು ಸುಳ್ಳು ಎಂದು ಹೇಳಲು ನನ್ನ ಬಳಿಯೂ ಸಾಕ್ಷಿಯಿಲ್ಲ. ಹಾಗೆಯೇ ಅದನ್ನು ನಿಜ ಎಂದು ಸಾಬೀತುಪಡಿಸಲು ನಿರ್ದೇಶಕರಿಗೂ ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆಗೆ ‘ಧುರಂಧರ್ 2’ ಚಿತ್ರತಂಡ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ‘ಧುರಂಧರ್’ ಪ್ರದರ್ಶನಕ್ಕೆ ಇಲ್ಲ ತಡೆ; ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಭೂಗತ ಲೋಕದ ಕಥೆಗಳನ್ನು ಆಧರಿಸಿ ‘ಸತ್ಯ’ ಮತ್ತು ‘ಕಂಪನಿ’ ರೀತಿಯ ಸಿನಿಮಾಗಳನ್ನು ನೀಡಿರುವ ರಾಮ್ ಗೋಪಾಲ್ ವರ್ಮಾ ಅವರು ದಾವೂದ್ ವಿಷಯದಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಚರ್ಚೆಗೆ ಕಾರಣ ಆಗಿದೆ. ಸದ್ಯ ‘ಧುರಂಧರ್ 2’ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ವರ್ಮಾ ಅವರ ಈ ಹೇಳಿಕೆಗೆ ನಿರ್ದೇಶಕ ಆದಿತ್ಯ ಧರ್ ಯಾವ ರೀತಿ ಪ್ರತಿಕ್ರಿಯಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್ – Kannada News | Darshan’s former manager Mallikarjuna talks about Darshan

ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾರು-ಖಾಸಗಿ ಬಸ್​ ಡಿಕ್ಕಿಯಾಗಿ ಇಡೀ ಕುಟುಂಬ ಸಜೀವ ದಹನ: ಇಲ್ಲಿದೆ ಮೃತ 9 ಜನರ ಡೀಟೇಲ್ಸ್ – Kannada News | Raichur: Car and bus collision in Yadgir; death toll rises to 9

ಮೃತ ಕೃಷ್ಣ ನಾಯಕ್‌ ಕುಟುಂಬ, ಸುಟ್ಟುಕರಕಲಾದ ಕಾರು, ಬಸ್​​Image Credit source: tv9 kannada

ರಾಯಚೂರು, ಏಪ್ರಿಲ್​ 17: ಯಾದಗಿರಿಯಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) ಸದ್ಯ ಸಾವನ್ನಪ್ಪಿದವರ (death) ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್‌ ಸದಸ್ಯ ಕೃಷ್ಣ ನಾಯಕ್‌ (52) ಹಾಗೂ ಅವರ ಕುಟುಂಬದ 7 ಜನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಕೃಷ್ಣಾ ನಾಯಕ್ ಅಣ್ಣ ವೆಂಕೋಬಾ ಮಗಳಾದ ಶಶಿಕಲಾ ಹಾಗೂ ಆಕೆಯ ಮಗ ಇದೀಗ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 9ಕ್ಕೆ ಏರಿಕೆ ಆಗಿದೆ.

ಮೃತಪಟ್ಟವರು 

ಈ ಭೀಕರ ಅಪಘಾತದಲ್ಲಿ ಸಿರವಾರದ ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣಾ ನಾಯಕ್, ಅವರ ಪತ್ನಿ ಅನಂತಕಲಾ (45), ಪುತ್ರಿ ನಿಸರ್ಗ (30), ಅಳಿಯ ಶರಣಪ್ಪ (36), ಮೊಮ್ಮಕ್ಕಳಾದ ಸಿದ್ಧಾರ್ಥ (3) ಮತ್ತು ಅದ್ವಿಕಾ (5) ಹಾಗೂ ಶ್ರೀನಿಧಿ (1.6 ವರ್ಷ) ಮೃತಪಟ್ಟಿದ್ದಾರೆ. ಇವರ ಜೊತೆಗೆ ಕೃಷ್ಣಾ ನಾಯಕ್ ಅವರ ಅಣ್ಣ ವೆಂಕೋಬಾ ಅವರ ಮಗಳು ಶಶಿಕಲಾ (30) ಮತ್ತು ಆಕೆಯ ಪುತ್ರ ಚಂದನ್ (3) ಕೂಡ ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ನಡೆದಿದ್ದೇನು?

ಸಿರವಾರ ಪಟ್ಟಣ ಪಂಚಾಯತ್ ಸದಸ್ಯರಾದ ಕೃಷ್ಣ ನಾಯಕ್ (52) ಮತ್ತು ಅವರ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಯಾದಗಿರಿಯ ಮಾರ್ಗಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕೃಷ್ಣ ನಾಯಕ್ ಸೇರಿದಂತೆ ಅವರ ಕುಟುಂಬದ ಒಟ್ಟು ಎಂಟು ಸದಸ್ಯರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ

ದುರಂತವೆಂದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಶ್ರೀನಿಧಿ, ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿಯಿಂದ ಕಲಬುರ್ಗಿಗೆ ಕರೆದೊಯ್ಯುವ ಮಾರ್ಗಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಸದ್ಯ ಶಶಿಕಲಾ ಅವರ ಹಿರಿಯ ಮಗ 5 ವರ್ಷದ ವಿರಾಟ್ ಅಪಘಾತದಲ್ಲಿ ಗಾಯಗೊಂಡಿದ್ದು, ಸದ್ಯ ಕಲಬುರ್ಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಫೋನ್ ಇಟ್ಟ ಎರಡೇ ನಿಮಿಷಕ್ಕೆ ಅಪಘಾತ

ಮೃತ ಕೃಷ್ಣಾ ನಾಯಕ್ ಸಂಬಂಧಿಕರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಘಟನೆಗೂ ಎರಡು ನಿಮಿಷ ಮುನ್ನ ಬಸವರಾಜ್ ಎನ್ನುವ ಸಂಬಂಧಿ ಜೊತೆ ಕೃಷ್ಣಾ ನಾಯಕ್ ಫೋನ್​​ನಲ್ಲಿ ಮಾತನಾಡಿದ್ದಾರೆ. ಬಸವರಾಜ್-ಗೀತಾ ದಂಪತಿ ಮನೆಯಲ್ಲಿ ಸಮಾರಂಭದ ಕುರಿತು ಮಾತುಕತೆ ಮಾಡಿದ್ದು, ಕಾರ್ಯಕ್ರಮಕ್ಕೆ ಬರುತ್ತೇನೆ, ಬಂದ ಮೇಲೆ ಮಾತನಾಡುತ್ತೇವೆ ಎಂದಿದ್ದಾರೆ. ಹೀಗೆ ಫೋನ್ ಇಟ್ಟ ಎರಡೇ ನಿಮಿಷಕ್ಕೆ ಅಪಘಾತವಾಗಿರುವ ವಿಚಾರ ಗೊತ್ತಾಗಿದೆ ಎಂದು ಕೃಷ್ಣಾರ ಸಂಬಂಧಿ ಗೀತಾ ಅಳಲು ತೋಡಿಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ – Kannada News | Rajasthan Royals Manager Romi Bhinder Fined Over IPL Dugout Phone Controversy

ಐಪಿಎಲ್ (IPL 2026) ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವ್ಯವಸ್ಥಾಪಕ ರೋಮಿ ಭಿಂದರ್ (Romi Bhinder) ಡಗೌಟ್‌ನಲ್ಲಿ ಕುಳಿತು ಫೋನ್ ಬಳಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಬಿಸಿಸಿಐ (BCCI) ಈ ಆರೋಪದ ಬಗ್ಗೆ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ತನಿಖೆ ಪೂರ್ಣವಾಗಿದ್ದು, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದ ಭಿಂದರ್‌ಗೆ ದಂಡ ವಿಧಿಸಲಾಗಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್ ಬಳಸುವುದನ್ನು ನೋಡುತ್ತಾ ಕುಳಿತಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಶಿಕ್ಷೆಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.

ನಿಯಮ ಉಲ್ಲಂಘಿಸಿದ ರೋಮಿ ಭಿಂದರ್

ಏಪ್ರಿಲ್ 10 ರಂದು ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಸಮಯದಲ್ಲಿ, ರೋಮಿ ಭಿಂದರ್ ಡಗೌಟ್‌ನಲ್ಲಿ ಕುಳಿತು ತಮ್ಮ ಫೋನ್ ಬಳಸುತ್ತಿದ್ದರು. ಐಪಿಎಲ್ ನಿಯಮದ ಪ್ರಕಾರ, ತಂಡದ ಆಟಗಾರರು ಹಾಗೂ ಸದಸ್ಯರಿಗೆ ಡ್ರೆಸ್ಸಿಂಗ್ ಕೋಣೆಗೆ ಫೋನ್‌ಗಳನ್ನು ಕೊಂಡೊಯ್ಯಲು ಅನುಮತಿಸಲಾಗಿದೆ. ಆದರೆ ಡಗೌಟ್‌ನಲ್ಲಿ ಮೊಬೈಲ್​ಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಅದಕ್ಕಾಗಿಯೇ ರೋಮಿ ಭಿಂದರ್ ವಿರುದ್ಧ ತನಿಖೆ ನಡೆಸಬೇಕಾಯಿತು.

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ

ರೋಮಿ ಭಿಂದರ್ ಫೋನ್ ಬಳಸಿದ್ದು ಏಕೆ?

ರೋಮಿ ಭಿಂದರ್ ಡಗೌಟ್‌ನಲ್ಲಿ ಫೋನ್ ಬಳಸುವುದಕ್ಕೆ ಬಿಸಿಸಿಐನಿಂದ ವಿನಾಯಿತಿ ಪಡೆದಿದ್ದಾರೆ ಎಂಬುದು ತಿಳಿದುಬಂದಿದೆ. ಇದಕ್ಕೆ ಕಾರಣ ಅವರ ಆರೋಗ್ಯ. ವಾಸ್ತವವಾಗಿ, ಭಿಂದರ್ ಐಪಿಎಲ್‌ಗೆ ಮೊದಲು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಆರೋಗ್ಯ ಕಾರಣಗಳಿಂದಾಗಿ, ಅವರು ಆಗಾಗ್ಗೆ ತಮ್ಮ ವೈದ್ಯರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಆದಾಗ್ಯೂ ಭಿಂದರ್ ಫೋನ್ ಬಳಕೆ ಮಾಡಿದ್ದು ಐಪಿಎಲ್ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗಿದ್ದು, ಇದರ ಪರಿಣಾಮವಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು? – Kannada News | Yogesh Gowda Murder Case: Vinay Kulkarni MLA Post Suspended for life imprisonment, what next options

ಬೆಂಗಳೂರು, (ಏಪ್ರಿಲ್ 17): 2016ರಲ್ಲಿ ನಡೆದಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (vinay kulkarni)  ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಂದು (ಏಪ್ರಿಲ್ 17) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು. ಕಾನೂನು ಪ್ರಕಾರ, ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ. ಅದರಂತೆ ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ

ಯಾವುದೇ ಜನಪ್ರತಿನಿಧಿಗಳ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣ ಅವರ ಶಾಸಕ ಸ್ಥಾನ ರದ್ದಾಗುತ್ತದೆ. ಸದ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆ ವಿನಯ್​ ಕುಲಕರ್ಣಿ ಅವರ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ.   ಕೋರ್ಟ್ ತನ್ನ ತೀರ್ಪಿನ ಪ್ರತಿಯನ್ನು ಸ್ಪೀಕರ್ ಗೆ ಕಳುಹಿಸಲಿದ್ದು, ಆ ಬಳಿಕ ಸ್ಫೀಕರ್ ಅಧಿಕೃತವಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಿದ್ದಾರೆ.

ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಕಾನೂನು ಏನು ಹೇಳುತ್ತೆ?

ಕಾನೂನು ಪ್ರಕಾರ ಶಿಕ್ಷೆ ಪ್ರಕಟವಾದ ದಿನದಿಂದಲೇ ಶಾಸಕ ಸ್ಥಾನದಿಂದ ತಕ್ಷಣವೇ ಅನರ್ಹವಾಗುತ್ತೆ. ‘ಜನಪ್ರತಿನಿಧಿ ಕಾಯ್ದೆ 1951’ರ ಸೆಕ್ಷನ್ 8(3) ರ ಪ್ರಕಾರ, ಯಾವುದೇ ಶಾಸಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. 2013ರ ‘ಲಿಲಿ ಥಾಮಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪಿನ ಪ್ರಕಾರ ಮೇಲ್ಮನವಿ ಸಲ್ಲಿಸಲು ನೀಡಲಾಗುತ್ತಿದ್ದ 3 ತಿಂಗಳ ಕಾಲಾವಕಾಶವನ್ನು ರದ್ದುಪಡಿಸಲಾಗಿದೆ. ಹಾಗಾಗಿ, ಶಿಕ್ಷೆಯಾದ ತಕ್ಷಣ ಅನರ್ಹತೆ ಅನ್ವಯವಾಗುತ್ತದೆ.

ಚುನಾವಣೆಗೆ ಸ್ಪರ್ಧಿಸಲು ನಿಷೇಧ

ಇನ್ನು ಜೈಲು ಶಿಕ್ಷೆಯ ಅವಧಿಯನ್ನು ಪೂರೈಸಿದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶವಿರುವುದಿಲ್ಲ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಕಾರಣ, ಉನ್ನತ ನ್ಯಾಯಾಲಯವು ಶಿಕ್ಷೆಯನ್ನು ರದ್ದುಗೊಳಿಸದ ಹೊರತು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದು ಅಸಾಧ್ಯ. ಇನ್ನು ಶಾಸಕತ್ವ ಅಧಿಕೃತವಾಗಿ ಅನರ್ಹಗೊಂಡ ತಕ್ಷಣ ಕ್ಷೇತ್ರ ಖಾಲಿಯಾಗಲಿದೆ. ವಿಧಾನಸಭಾ ಸಚಿವಾಲಯದಿಂದ ಕ್ಷೇತ್ರ ‘ಖಾಲಿ’ ಇದೆ ಎಂದು ಘೋಷಣೆಯಾಗಲಿದ್ದು, ಬಳಿಕ ಚುನಾವಣಾ ಆಯೋಗ 6 ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸುವ ಸಾಧ್ಯತೆ ಇದೆ.

ಶಿಕ್ಷೆಗೆ ತಡೆ ನೀಡಿದರೆ ಮಾತ್ರ ವಿನಾಯಿತಿ

ಇನ್ನು ಶಿಕ್ಷೆಗೆ ತಡೆ ನೀಡಿದರೆ ಮಾತ್ರ ಇದೆಲ್ಲದರಿಂದ ವಿನಾಯಿತಿ ಸಿಗಲಿದೆ. ಕೇವಲ ಜೈಲು ಶಿಕ್ಷೆಗೆ ತಡೆ ನೀಡಿದರೆ (Stay on sentence) ಸಾಲದು, ಬದಲಿಗೆ ಉನ್ನತ ನ್ಯಾಯಾಲಯವು ಅವರ ಮೇಲಿನ ಅಪರಾಧ ನಿರ್ಣಯಕ್ಕೆ ತಡೆ (Stay on conviction) ನೀಡಿದರೆ ಮಾತ್ರ ಶಾಸಕ ಸ್ಥಾನ ಮತ್ತು ಚುನಾವಣೆಗೆ ಸ್ಪರ್ಧಿಸುವ ಹಕ್ಕು ಪುನಃ ದೊರೆಯುತ್ತದೆ.  ಇನ್ನು ಜೀವಾವಧಿ ಅಂದರೆ 14 ವರ್ಷ ಸೆರೆವಾಸದ ಬಳಿಕ ಸರ್ಕಾರ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version