Headlines

ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಸೀರೆಗೆ ಹೊತ್ತಿದ ಬೆಂಕಿ – Kannada News | BJP MLA Anupama Jaiswal Injured During Effigy Protest in UP

ಬಹ್ರೈಚ್, ಏಪ್ರಿಲ್ 26: ಬಹ್ರೈಚ್​ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಪ್ರತಿಕೃತಿಯನ್ನು ದಹಿಸಲು ಹೋದಾಗ ಬಿಜೆಪಿ ಶಾಸಕಿ ಅನುಪಮಾ ಜೈಶ್ವಾಲ್ ಬಟ್ಟೆಗೆ ಬೆಂಕಿ ತಗುಲಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿವಾಸದ ಬಳಿ ಬಿಜೆಪಿ ನಡೆಸಿದ ಮಹಿಳಾ ಜನಾಕ್ರೋಶ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹಣೆ ಹಾಗೂ ಕೂದಲಿಗೆ ಕೂಡ ಬೆಂಕಿ ತಗುಲಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಕನಕಪುರದಲ್ಲಿ ಕಾಡಾನೆ ದಾಳಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿ ದಾರುಣ ಸಾವು: ಅತ್ತ ಚಾಮರಾಜನಗರದಲ್ಲಿಯೂ ಮುಂದುವರಿದ ಒಂಟಿ ಸಲಗದ ಕಾಟ – Kannada News | Elephant Attack Kills Man in Cheelandawadi Village, Kanakapura

ರಾಮನಗರ/ ಚಾಮರಾಜನಗರ, ಏಪ್ರಿಲ್​​ 26: ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಕನಕಪುರದ ಪ್ರವಾಸಿ ಸ್ಥಳ ಸಂಗಮದಲ್ಲಿ ಮಹಿಳೆಯೋರ್ವರ ಮೇಲೆ ಕಾಡಾನೆ ಇತ್ತೀಚೆಗಷ್ಟೇ ದಾಳಿ ನಡೆಸಿತ್ತು. ಏಕಾಏಕಿ ಬಂದ ಕಾಡಾನೆ ಕಂಡು ಪ್ರಾಣ ಭೀತಿಯಿಂದ ಜನರು ದಿಕ್ಕಾಪಾಲಾಗಿ ಓಡುವ ವಿಡಿಯೋ ವೈರಲ್​​ ಆಗಿತ್ತು. ಆ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ‌ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ವ್ಯಕ್ತಿಯೋರ್ವರ ಬಲಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

Read More

ಎಂಗೇಜ್ಮೆಂಟ್ ಆದ ರಾತ್ರಿಯೇ ಯುವತಿ ಪ್ರಿಯತಮನೊಂದಿಗೆ ಪರಾರಿ! ಲವ್ ಜಿಹಾದ್ ಶಂಕೆ – Kannada News | Haveri: Girl Goes Missing After Engagement; Love Jihad Allegations Spark Protests in Hanagal

ಎಂಗೇಜ್ಮೆಂಟ್ ಆದ ರಾತ್ರಿಯೇ ಯುವತಿ ಪ್ರಿಯತಮನೊಂದಿಗೆ ಪರಾರಿ! ಹಾವೇರಿ, ಏಪ್ರಿಲ್ 26: ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ವಿವಾಹ ನಿಶ್ಚಿತಾರ್ಥ ನಡೆದ ಬೆನ್ನಲ್ಲೇ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಫುಸಲಾಯಿಸಿ ಲವ್ ಜಿಹಾದ್​ಗೆ (Love Jihad) ಯತ್ನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನಡೆದಿದ್ದೇನು? ಗ್ರಾಮದ 24 ವರ್ಷದ ಬಿ.ಕಾಂ ಪದವೀಧರೆ ಶಂಕ್ರಮ್ಮ ಕೆರಿಮತ್ತಿಹಳ್ಳಿ ನಾಪತ್ತೆಯಾದ ಯುವತಿ. ಶಂಕ್ರಮ್ಮನಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥ ನೆರವೇರಿತ್ತು. ಮೇ 11ಕ್ಕೆ ಮದುವೆಯೂ ನಿಶ್ಚಯವಾಗಿತ್ತು. ನಿಶ್ಚಿತಾರ್ಥ ನಡೆದ…

Read More

Health Tips: ಕ್ಯಾಲ್ಸಿಯಂ ಕಾರ್ಬೈಡ್; ಹಣ್ಣಿನಲ್ಲಿ ಅಡಗಿರುವ ವಿಷದ ಬಗ್ಗೆ ಇರಲಿ ಎಚ್ಚರ! – Kannada News | Artificial Fruit Ripening Dangers: Avoid Carbide Treated Fruits

ಬೇಸಿಗೆಯ ಬಿಸಿಲಿನೊಂದಿಗೆ ಮಾವಿನ ಹಣ್ಣಿನ ಹಂಗಾಮು ಆರಂಭವಾಗುತ್ತಿದ್ದಂತೆಯೇ ಎಲ್ಲರಲ್ಲೂ ಸಿಹಿಯಾದ ಹಣ್ಣುಗಳನ್ನು ಸವಿಯುವ ತವಕ ಹೆಚ್ಚಾಗುತ್ತದೆ. ಆದರೆ, ಹಣ್ಣುಗಳು ಬೇಗ ಮಾಗಲಿ ಎಂಬ ಗ್ರಾಹಕರ ಆಸೆಯನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಹಣ್ಣುಗಳನ್ನು ಕೃತಕವಾಗಿ, ಅತೀ ವೇಗವಾಗಿ ಮಾಗಿಸಲು ‘ಕ್ಯಾಲ್ಸಿಯಂ ಕಾರ್ಬೈಡ್’ ಎಂಬ ಅಪಾಯಕಾರಿ ರಾಸಾಯನಿಕವನ್ನು ಬಳಸಲಾಗುತ್ತಿದೆ. ವ್ಯಾಪಾರಿಗಳ ವಲಯದಲ್ಲಿ ‘ಮಸಾಲಾ’ ಎಂದೇ ಕರೆಯಲ್ಪಡುವ ಈ ವಿಷಕಾರಿ ಅಂಶವನ್ನು ಮಾವು, ಬಾಳೆ, ಪಪ್ಪಾಯಿ ಮತ್ತು ಚಿಕ್ಕು ಹಣ್ಣುಗಳಿಗೆ ಹೆಚ್ಚಾಗಿ ಬಳಸಲಾಗುತ್ತಿದೆ. ಕಡಿಮೆ ವೆಚ್ಚದಲ್ಲಿ ಹಣ್ಣುಗಳನ್ನು ಮಾಗಿಸಿ ಮಾರುಕಟ್ಟೆಗೆ ತಲುಪಿಸುವ ಇವರ…

Read More

ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ, ದಬ್ಬಾಳಿಕೆ ಒಪ್ಪಲ್ಲ ಎಂದ ಚೇತನ್ – Kannada News | Chetan Kumar Ahimsa press meet on Dr Rajkumar Samadhi controversy

ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅಣ್ಣಾವ್ರ ಸಮಾಧಿ ಸಲುವಾಗಿ ಸರ್ಕಾರ ಎರಡೂವರೆ ಜಾಗವನ್ನು ನೀಡಿದ್ದು ಸರಿಯಲ್ಲ ಎಂದು ಅವರು ಹೇಳಿದ್ದರು. ಆ ಹೇಳಿಕೆಗೆ ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಚೇತನ್ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದ್ದರು. ಆದರೆ ಕ್ಷಮೆ ಕೇಳಿಸಲು ಬಂದವರು ತಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ ಎಂದು…

Read More

Riyan Parag: ನಮ್ಮ ಸೋಲಿಗೆ ಇದೊಂದೇ ಕಾರಣ..! – Kannada News | Riyan Parag Post match interview after RR vs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 36ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 228 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಈ ಗುರಿಯನ್ನು ಸನ್​ರೈಸರ್ಸ್ ಹೈದರಾಬಾದ್ ಸುಲಭವಾಗಿ ಚೇಸ್ ಮಾಡಿತು. ಪರಿಣಾಮ ಆರ್​ಆರ್​ ಪಡೆ 5 ವಿಕೆಟ್​ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಈ ಸೋಲಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ನಮ್ಮ ಪ್ರದರ್ಶನ ಚೆನ್ನಾಗಿತ್ತು, ಆದರೆ…

Read More

ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರು; ಅಶೋಕ್ ಕುಮಾರ್ ಲಾಹಿರಿ ಯಾರು? – Kannada News | Ashok Lahiri NITI Aayog Vice Chairman: Eminent Economist to Lead Think Tank

ಪ್ರಧಾನಿ ಮೋದಿ ಜೊತೆ ನೀತಿ ಆಯೋಗ್ ನೂತನ ಉಪಾಧ್ಯಕ್ಷ ಅಶೋಕ್ ಲಾಹಿರಿImage Credit source: PTI ನವದೆಹಲಿ, ಏಪ್ರಿಲ್ 26: ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರಾಗಿ (ವೈಸ್ ಛೇರ್ಮನ್) ಅಶೋಕ್ ಕುಮಾರ್ ಲಾಹಿರಿಯವರು (Ashok Kumar Lahiri) ನೇಮಕವಾಗಿದ್ದಾರೆ. ಹಾಲಿ ಉಪಾಧ್ಯಕ್ಷರಾಗಿರುವ ಸುಮನ್ ಬೆರಿ (Suman Bery) ಅವರ ಸ್ಥಾನವನ್ನು ಲಾಹಿರಿ ತುಂಬಲಿದ್ದಾರೆ. ಭಾರತ ಸರ್ಕಾರದ ನೀತಿಯನ್ನು ರೂಪಿಸುವ ಚಿಂತನ ವೇದಿಕೆಯಂತಿರುವ ನೀತಿ ಆಯೋಗ್​ನಲ್ಲಿ ಉಪಾಧ್ಯಕ್ಷ ಸ್ಥಾನ ಮಹತ್ವದ್ದು. ಪ್ರಧಾನಿಗಳು ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. ಆದರೆ, ಚಿಂತನ ಮಂಥನ,…

Read More

Mann Ki Baat: ಭಾರತದ ಅಭಿವೃದ್ಧಿಗೆ ಸೌರ ಹಾಗೂ ಪವನ ಶಕ್ತಿ ಬಹಳ ಮುಖ್ಯ: ಪ್ರಧಾನಿ ಮೋದಿ – Kannada News | Mann Ki Baat Focuses on Census Drive and Buddha’s Teachings

ನವದೆಹಲಿ, ಏಪ್ರಿಲ್ 26: ಭಾರತದ ಅಭಿವೃದ್ಧಿಗೆ ಸೌರಶಕ್ತಿ ಮತ್ತು ಪವನ ಶಕ್ತಿ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ನಾವು ವಿದ್ಯುತ್ ಅನ್ನು ಸಂರಕ್ಷಿಸಬೇಕು ಮತ್ತು ಸೌರ, ಪವನ ಶಕ್ತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಮನ್​ಕಿ ಬಾತ್​ನಲ್ಲಿ ಹೇಳಿದ್ದಾರೆ. ದಕ್ಷಿಣ ಅಮೆರಿಕದ ಚಿಲಿಯಲ್ಲಿರುವ ಒಂದು ಸಂಸ್ಥೆಯು ಭಗವಾನ್ ಬುದ್ಧನ ಬೋಧನೆಗಳನ್ನು ಪ್ರಚಾರ ಮಾಡುತ್ತಿದೆ. ಲಡಾಖ್ ಮೂಲದ ಡ್ರುಬ್ಬನ್ ಓಟ್ಜರ್ ರಿನ್‌ಪೋಚೆ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯವನ್ನು ನಡೆಸಲಾಗುತ್ತಿದೆ ಎಂದರು. 2027ರ ಜನಗಣತಿಯನ್ನು ದೇಶದ ಅಭಿವೃದ್ಧಿಯ ದಿಕ್ಸೂಚಿ…

Read More

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರು ಸೋಲ್’ ಅನಾವರಣ: ಕಲಾಪ್ರೇಮಿಗಳ ಮನಗೆದ್ದ ಜೌಮ್ ಪ್ಲೆನ್ಸಾ ಶಿಲ್ಪಕಲೆ – Kannada News | ‘Bengaluru’s Soul’: Jaume Plensa’s Stunning 16ft Sculpture Unveiled at KIA Terminal 2, Art at Bangalore Airport

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರು ಸೋಲ್’ ಅನಾವರಣ ಬೆಂಗಳೂರು, ಏಪ್ರಿಲ್ 26: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 (T2) ಈಗ ಮತ್ತೊಂದು ಜಾಗತಿಕ ಆಕರ್ಷಣೆಗೆ ಸಾಕ್ಷಿಯಾಗಿದೆ. ವಿಶ್ವಪ್ರಸಿದ್ಧ ಸ್ಪ್ಯಾನಿಷ್ ಕಲಾವಿದ ಜೌಮ್ ಪ್ಲೆನ್ಸಾ ಅವರು ಕೆತ್ತಿರುವ 16 ಅಡಿ ಎತ್ತರದ ‘ಬೆಂಗಳೂರಿನ ಆತ್ಮ’ (Bengaluru’s Soul) ಎಂಬ ಭವ್ಯ ಶಿಲ್ಪಕಲೆಯು ಶನಿವಾರ ಸಂಜೆ ಅನಾವರಣಗೊಂಡಿದ್ದು, ಪ್ರಯಾಣಿಕರ ಪಾಲಿಗೆ ಹೊಸ ‘ಇನ್‌ಸ್ಟಾಗ್ರಾಮ್ ಸ್ಪಾಟ್’ ಆಗಿ ಹೊರಹೊಮ್ಮಿದೆ. ವೈವಿಧ್ಯತೆಯ ಪ್ರತಿಬಿಂಬ ಈ ಬೃಹತ್ ಕಲಾಕೃತಿಯು ಕನ್ನಡ, ಅರೇಬಿಕ್,…

Read More

Garuda Purana: ಮದುವೆಯಾಗದಿದ್ದರೆ ಜೀವನ ಅಪೂರ್ಣವೇ? ಗರುಡ ಪುರಾಣ ಹೇಳುವುದೇನು? – Kannada News | Sacred indian marriage spiritual significance and grihastha dharma

ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಎಂಬುದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಾಮಾಜಿಕ ಅಥವಾ ಕಾನೂನಾತ್ಮಕ ಒಪ್ಪಂದವಲ್ಲ. ಬದಲಿಗೆ, ಇದನ್ನು ಹದಿನಾರು ಸಂಸ್ಕಾರಗಳಲ್ಲಿ ಅತ್ಯಂತ ಪ್ರಮುಖವಾದ ‘ಪವಿತ್ರ ಸಂಸ್ಕಾರ’ ಎಂದು ಪರಿಗಣಿಸಲಾಗುತ್ತದೆ. ವೇದ ಮತ್ತು ಪುರಾಣಗಳ ಪ್ರಕಾರ, ಮನುಷ್ಯನ ಜೀವನಯಾನವನ್ನು ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ ಮತ್ತು ಸನ್ಯಾಸ ಎಂಬ ನಾಲ್ಕು ಆಶ್ರಮಗಳಾಗಿ ವಿಂಗಡಿಸಲಾಗಿದೆ. ಈ ನಾಲ್ಕರಲ್ಲಿ ‘ಗೃಹಸ್ಥ ಆಶ್ರಮ’ವು ಉಳಿದ ಮೂರು ಆಶ್ರಮಗಳಿಗೆ ಆಧಾರಸ್ತಂಭವಾಗಿದ್ದು, ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಹಾಡುತ್ತದೆ. ಗೃಹಸ್ಥಾಶ್ರಮ ಧರ್ಮದ ಅಡಿಪಾಯ: ಮದುವೆ ಏಕೆ…

Read More