Headlines

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ – Kannada News | IPL 2026 playoff qualification scenarios of All 10 teams

IPL 2026: ಐಪಿಎಲ್ 2026ರ ಕಾದಾಟ ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ! ಹತ್ತು ತಂಡಗಳ ನಡುವಿನ ಈ ಬಲಿಷ್ಠ ಪೈಪೋಟಿಯಲ್ಲಿ ಪ್ಲೇ-ಆಫ್‌ಗೆ ಲಗ್ಗೆ ಇಡುವ ನಾಲ್ಕು ಅದೃಷ್ಟವಂತ ತಂಡಗಳು ಯಾವುವು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿದೆ. ಕೆಲ ತಂಡಗಳು ಗೆಲುವಿನ ನಾಗಾಲೋಟದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಇನ್ನು ಕೆಲವು ತಂಡಗಳು ಪ್ರತಿ ಪಂದ್ಯವನ್ನೂ ‘ಮಾಡು ಇಲ್ಲವೇ ಮಡಿ’ ಎಂಬಂತೆ ಆಡಬೇಕಾದ ಅನಿವಾರ್ಯತೆಯಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ……

Read More

ಭಾರತದ ವಿರುದ್ಧದ ಪಂದ್ಯ ಬಾಯ್ಕಾಟ್: ಪಾಕಿಸ್ತಾನ್ ತಂಡದ ಕುತಂತ್ರ – Kannada News | Pakistan planning for India match boycott in T20 World Cup 2026

ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗುವುದಿಲ್ಲವೇ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಬೇಕಿದ್ದರೆ ಫೆಬ್ರವರಿ 15 ರವರೆಗೆ ಕಾಯಲೇಬೇಕು. ಏಕೆಂದರೆ ಭಾರತದ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತೆರೆಮರೆಯಲ್ಲೇ ಯೋಜನೆ ರೂಪಿಸುತ್ತಿದೆ. ಇಂತಹದೊಂದು ಕುತಂತ್ರಕ್ಕೆ ಕೈ ಹಾಕಲು ಮುಖ್ಯ ಕಾರಣ ಐಸಿಸಿ ನೀಡಿರುವ ಎಚ್ಚರಿಕೆ. ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಗಿಟ್ಟರೆ ಪಾಕಿಸ್ತಾನ್ ಕೂಡ ವಿಶ್ವಕಪ್ ಟೂರ್ನಿ ಆಡುವುದು ಅನುಮಾನ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿತ್ತು. ಪಿಸಿಬಿಯ…

Read More

ಜಂತರ್ ಮಂತರ್‌ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ – Kannada News | Fresh clashes near Jantar Mantar as CJP protesters throw stones bottles at Delhi Police ACPs injured

ನವದೆಹಲಿ, ಜುಲೈ 22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಜಂತರ್ ಮಂತರ್ ಬಳಿಯ ಕನ್ನಾಟ್ ಪ್ಲೇಸ್‌ನ ಟಾಲ್‌ಸ್ಟಾಯ್ ಮಾರ್ಗದಲ್ಲಿ ಇಂದು ರಾತ್ರಿ ಸುಮಾರು 8.30ಕ್ಕೆ ತೀವ್ರ ಉದ್ವಿಗ್ನತೆ ಉಂಟಾಗಿದೆ. ಪ್ರತಿಭಟನಾಕಾರರ ಗುಂಪೊಂದು ದೆಹಲಿ ಪೊಲೀಸರ ಮೇಲೆ ದಿಢೀರ್ ದಾಳಿ ನಡೆಸಿದೆ. ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದ ಗುಂಪು ದಿಢೀರನೆ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ಎಸೆಯಲಾರಂಭಿಸಿತು. ಈ ಹಿಂಸಾಚಾರದಲ್ಲಿ ಕನ್ನಾಟ್ ಪ್ಲೇಸ್ ವಿಭಾಗದ ಎಸಿಪಿ ವಿವೇಕ್ ಭಗತ್ ಅವರಿಗೆ…

Read More

ಚಿರಂಜೀವಿ ಕ್ರೇಜ್: ಒಂದೇ ಕುಟುಂಬದ 140 ಮಂದಿಯಿಂದ ಸಿನಿಮಾ ವೀಕ್ಷಣೆ – Kannada News | 140 members of a family watched Chiranjeevi’s Mana Shankara Vara Prasad garu movie

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ಆದರೆ ಕಳೆದ ಐದಾರು ವರ್ಷಗಳಿಂದ ಅವರಿಗೆ ಸೂಕ್ತ ಗೆಲುವು ಸಿಕ್ಕಿರಲೇ ಇಲ್ಲ. ನಟಿಸಿದ ಸಿನಿಮಾಗಳು ಒಂದರ ಹಿಂದೊಂದರಂತೆ ಫ್ಲಾಪ್ ಆಗಿದ್ದವು. ಚಿರಂಜೀವಿ ಎಂದರೆ ಕಲೆಕ್ಷನ್ ಇಲ್ಲದ ನಟ ಎಂಬ ಅಭಿಪ್ರಾಯ ಹೊಸ ತೆಲುಗು ಸಿನಿಮಾ ವೀಕ್ಷಕರಲ್ಲಿ ಮೂಡಿಬಿಟ್ಟಿತ್ತು. ಆದರೆ ನಿಜಕ್ಕೂ ಚಿರಂಜೀವಿಯ ಕ್ರೇಜ್ ಎಂಬುದನ್ನು ಮತ್ತೆ ತೋರಿಸಿದೆ ಅವರ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ…

Read More

ಅಮೆರಿಕದೊಂದಿಗೆ ಟ್ರೇಡ್ ಡೀಲ್, ಮುಗಿಯದ ತೊಡಕು; ದಕ್ಷಿಣ ಅಮೆರಿಕ ಸೇರಿದಂತೆ ಬೇರೆ ಬೇರೆ ಮಾರುಕಟ್ಟೆಗಳ ಮೇಲೆ ಭಾರತದ ಕಣ್ಣು – Kannada News | After 3 new FTAs in 2025, India looking for more trade deals

ನವದೆಹಲಿ, ಜನವರಿ 11: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ (India US trade deal) ಮಾಡಿಕೊಳ್ಳಲು ಹಲವು ತಿಂಗಳುಗಳಿಂದ ನಡೆಯುತ್ತಿರುವ ಮಾತುಕತೆ ಫಲಪ್ರದವಾಗುವ ಲಕ್ಷ ಸದ್ಯಕ್ಕಂತೂ ಕಾಣುತ್ತಿಲ್ಲ. ಅಮೆರಿಕವು ಭಾರತಕ್ಕೆ ಅತಿದೊಡ್ಡ ರಫ್ತು ಮಾರುಕಟ್ಟೆಯಾಗಿರುವುದರಿಂದ ಈ ಟ್ರೇಡ್ ಡೀಲ್ ಮಹತ್ವದ್ದು. ಭಾರತಕ್ಕೆ ಹಲವು ಬಿಲಿಯನ್ ಡಾಲರ್​ಗಳಷ್ಟು ರಫ್ತಿಗೆ ಸಂಚಕಾರವಾಗಲಿದೆ. ಹೀಗಾಗಿ, ಭಾರತವು ಈ ನಷ್ಟ ಭರಿಸಲು ಪರ್ಯಾಯ ಮಾರುಕಟ್ಟೆಗಳನ್ನು ಹುಡುಕುತ್ತಿದೆ. ಕಳೆದ ವರ್ಷವೇ ಮೂರು ಟ್ರೇಡ್ ಡೀಲ್ ಕುದುರಿಸಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ….

Read More

ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 80 ಡಾಲರ್​ಗಿಂತ ಕಡಿಮೆ; ಪೆಟ್ರೋಲ್, ಡೀಸಲ್ ಬೆಲೆ ಕಡಿಮೆಗೊಳ್ಳುತ್ತಾ? – Kannada News | Crude Oil selling at price below 80 USD, expectations of decrease in petrol, diesel rates

ನವದೆಹಲಿ, ಜೂನ್ 18: ಕೆಲ ದಿನಗಳ ಹಿಂದೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಘೋಷಣೆಯಾದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude Oil) ಬೆಲೆಗಳು ಸತತವಾಗಿ ಇಳಿಮುಖವಾಗುತ್ತಿವೆ. ಮಾರ್ಚ್ ಮಧ್ಯಭಾಗದಲ್ಲಿ ಪ್ರತಿ ಬ್ಯಾರೆಲ್‌ಗೆ ಬರೋಬ್ಬರಿ $145 ದಾಟಿದ್ದ ಭಾರತದ ಕಚ್ಚಾ ತೈಲ ಖರೀದಿ ದರ (Indian crude oil basket), ಈಗ ಗಣನೀಯವಾಗಿ ಕುಸಿದು ಬ್ಯಾರೆಲ್‌ಗೆ $80 ಕ್ಕಿಂತಲೂ ಕೆಳಗೆ ಬಂದಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ. ಇದು ಸಾಮಾನ್ಯ ಜನರಿಗೆ ಪೆಟ್ರೋಲ್…

Read More

IPL 2026: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಎರಡು ಅಮೋಘ ಗೆಲುವುಗಳ ಬೆನ್ನಲ್ಲೇ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ… ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡವು ಈ…

Read More

ಪೇರಳೆ ಹಣ್ಣು ತಿಂದ ತಕ್ಷಣ ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ! – Kannada News | Foods To Avoid Immediately After Eating Guava

ಪೇರಳೆ ಹಣ್ಣು (Guava) ಆರೋಗ್ಯಕ್ಕೆ ಅತ್ಯಂತ ಉಪಯುಕ್ತವಾದ ಹಣ್ಣುಗಳಲ್ಲಿ ಒಂದು. ಇದರಲ್ಲಿ ವಿಟಮಿನ್ ಸಿ, ಫೈಬರ್ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ಆದರೆ ಪೇರಳೆ ಹಣ್ಣು ತಿಂದ ತಕ್ಷಣ ಕೆಲವು ಆಹಾರಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ತಿಳಿದಿದೆಯೇ? ಹೌದು, ಪೇರಳೆಯ ಜೊತೆ ಕೆಲವು ಆಹಾರಗಳನ್ನು ಅಪ್ಪಿತಪ್ಪಿಯೂ ಸೇವನೆ ಮಾಡಬಾರದು ಇದರಿಂದ ಆರೋಗ್ಯ ಹಾಳಾಗುವುದರಲ್ಲಿ ಸಂಶಯವೇ ಇಲ್ಲ. ಹಾಗಾದರೆ ಆ ಆಹಾರಗಳು ಯಾವವು, ಯಾಕೆ ಸೇವನೆ…

Read More

Puja Tips: ಪೂಜೆಯಲ್ಲಿ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು? ಯಾವುದನ್ನು ಬಳಸಬಾರದು? – Kannada News | Reusable Puja Items: What You Can and Cannot Use Again in Worship

ಪೂಜೆಯ ಸಮಯದಲ್ಲಿ ದೇವರಿಗೆ ಹಲವು ರೀತಿಯ ವಸ್ತುಗಳನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ, ತುಪ್ಪ, ಹೂವುಗಳು, ಶ್ರೀಗಂಧ ಇತರ ಪೂಜೆಗಿಟ್ಟ ವಸ್ತುಗಳು ಉಳಿದುಬಿಡುತ್ತವೆ. ಕೆಲವು ವಸ್ತುಗಳು ದೇವರಿಗೆ ಅರ್ಪಿಸಿದರೂ ಹಾಳಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ಶುದ್ಧೀಕರಿಸಿ ಮತ್ತೆ ಪೂಜೆಯಲ್ಲಿ ಬಳಸಬಹುದೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಪೂಜಾ ಸಾಮಗ್ರಿಗಳ ಬಗ್ಗೆ ಹಲವು ಸಂದೇಹಗಳಿವೆ. ಹಾಗಾಗಿ ಪೂಜೆಯಲ್ಲಿ ಬಳಸುವ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು ಮತ್ತು ಯಾವುದನ್ನು ಬಳಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಪೂಜೆಯಲ್ಲಿ…

Read More

ಈ ವಾರ ಗ್ರಹಗಳ ಬದಲಾವಣೆಯಿಂದ ಆಗುವ ರಾಜಕೀಯ ಲಾಭ, ನಷ್ಟಗಳು

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ​ಮೇಷ : ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು…

Read More