Headlines

ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್​​ ಖುಷ್​ – Kannada News | Tungabhadra Dam Crest Gate Installation Completed Ahead of Schedule in Koppal

ಕೊಪ್ಪಳ, ಏಪ್ರಿಲ್​​ 26: ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ನಿಗದಿತ ಸಮಯಕ್ಕೂ ಮೊದಲೇ ಪೂರ್ಣಗೊಂಡಿದೆ. ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಂ ನಿರ್ಮಾಣವಾಗಿ 8 ದಶಕಗಳ ನಂತರ 33 ಗೇಟ್ ಬದಲಾವಣೆ ಮಾಡಲಾಗಿದೆ. 2024ರ ಆಗಸ್ಟ್ 10ರಂದು ಜಲಾಶಯದ 19ನೇ ಗೇಟ್​ ಕಿತ್ತು ಹೋಗಿತ್ತು. ತಜ್ಞರ ಸಲಹೆಯ ಮೇರೆಗೆ ಜಲಾಶಯದ ಎಲ್ಲಾ ಗೇಟ್​ಗಳ‌ ಬದಲಾವಣೆ ಮಾಡಲಾಗಿದೆ. ಟಿ.ಬಿ.ಡ್ಯಾಂನ 12 ಗೇಟ್​ಗಳ ಇಳಿಸುವ, ಏರಿಸುವ ಪರೀಕ್ಷೆ ಪೂರ್ಣವಾಗಿದ್ದು, ಉಳಿದ ಗೇಟ್​ಗಳ ಪರೀಕ್ಷೆ ಮಾಡಬೇಕಿದೆ. ಮೇ‌…

Read More

ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ ಮಾಡಿದ ಟ್ರಂಪ್ – Kannada News | Trump Shares Image of Suspect Restrained After White House Event Incident

ವಾಷಿಂಗ್ಟನ್, ಏಪ್ರಿಲ್ 26: ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯ ಫೋಟೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಿಡುಗಡೆ ಮಾಡಿದ್ದಾರೆ. ನೂರಾರು ಅತಿಥಿಗಳು ಸೇರಿದ್ದ ಹೋಟೆಲ್‌ನ ಬಾಲ್ ರೂಂನ ಹೊರಗಿನ ಸ್ಕ್ರೀನಿಂಗ್ ಪ್ರದೇಶದಲ್ಲಿ ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಟ್ರಂಪ್ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಶ್ವೇತಭವನದ ವರದಿಗಾರರ ಭೋಜನ ಕೂಟದಿಂದ ಶಂಕಿತ ಶೂಟರ್‌ನ ಮೊದಲ ಚಿತ್ರ ಹೊರಬಂದಿದ್ದು, ವಾಷಿಂಗ್ಟನ್ ಹಿಲ್ಟನ್‌ನ ಮೆಟ್ಟಿಲುಗಳ ಬಳಿ ಕಾನೂನು ಜಾರಿ ಸಂಸ್ಥೆಗಳು ಆತನನ್ನು ಬಂಧಿಸಿರುವುದನ್ನು ತೋರಿಸುತ್ತದೆ. ಶಂಕಿತ ಶೂಟರ್ ಅನ್ನು ಕ್ಯಾಲಿಫೋರ್ನಿಯಾದ…

Read More

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್! – Kannada News | IPL 2026: Lungi Ngidi Injury Update

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಚೇತರಿಕೆಯ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಶನಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ನಡೆದ ಐಪಿಎಲ್​​ನ 35ನೇ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮೂರನೇ ಓವರ್‌ನಲ್ಲಿ ಮಿಡ್-ಆಫ್‌ನಲ್ಲಿ…

Read More

ಮಹಿಳೆಗೆ ಹಠಾತ್ತನೆ ಕಾಣಿಸಿಕೊಂಡ ಹೆರಿಗೆ ನೋವು, ರಸ್ತೆಯಲ್ಲೇ ಹೆರಿಗೆ ಮಾಡಿಸಿದ ವೈದ್ಯೆ – Kannada News | Humanity on Streets: Strangers Help Deliver Baby Safely in Pune

ಪುಣೆ, ಏಪ್ರಿಲ್ 26: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗರ್ಭಿಣಿಯೊಬ್ಬರಿಗೆ ಹಠಾತ್ತನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರ ಸಹಾಯದಿಂದ ವೈದ್ಯರು ರಸ್ತೆಯಲ್ಲೇ ಹೆರಿಗೆ ಮಾಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮಹಿಳೆ ನೋವಿನಿಂದ ನರಳುತ್ತಿದ್ದರು, ಸುತ್ತಮುತ್ತಲಿನ ಪರಿಸ್ಥಿತಿ ಒಂದು ಕ್ಷಣ ಸ್ತಬ್ಧವಾಯಿತು.ಮಹಿಳೆಯರು ಸುತ್ತುವರೆದು ತಮ್ಮ ಸೀರೆ ಹಾಗೂ ದುಪಟ್ಟಾವನ್ನೇ ಪರದೆಯಂತೆ ಹಿಡಿದು ಸಹಾಯ ಮಾಡಿದರು. ಪುರುಷರು ವಾಹನಗಳ ಸಂಚಾರವನ್ನು ತಡೆದು ರಸ್ತೆಯಲ್ಲಿ ದಾರಿ ಮಾಡಿಕೊಟ್ಟರು. ಅಲ್ಲಿ ಯಾರು ಯಾರಿಗೆ ಸಂಬಂಧಿಕರಲ್ಲದಿದ್ದರೂ, ಎಲ್ಲರ ಉದ್ದೇಶ ಆ ತಾಯಿ ಮತ್ತು ಮಗುವನ್ನು ರಕ್ಷಿಸುವುದೊಂದೇ…

Read More

Horoscope Today 26 April : ಇಂದು ಈ ರಾಶಿಯವರಿಗೆ ಪರೋಕ್ಷವಾಗಿ ಅನೇಕ ರೀತಿಯಲ್ಲಿ ಲಾಭವಾಗಲಿದ್ದು, ಹೇಳಿಕೊಳ್ಳಲಾರರು

ಇಂದಿನ ಪಂಚಾಂಗ ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಧೃತಿ, ಕರಣ : ಬವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ :…

Read More

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 61 ವರ್ಷದ ವ್ಯಕ್ತಿಯಿಂದ 2.07 ಕೋಟಿ ರೂ. ಸುಲಿಗೆ – Kannada News | Cyber Fraud: 61 Yr Old Duped of 2.07 Crore in Digital Arrest Scam

ಬೆಂಗಳೂರು, ಏಪ್ರಿಲ್​​ 26: ಪೊಲೀಸರಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳ ನಡುವೆಯೂ ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವಂಚಕರು ಬೀಸುವ ಬಲೆಗೆ ಸಿಲುಕಿ ಹಣ ಕಳೆದುಕೊಳ್ಳುವ ಪ್ರಕರಣಗಳ ಸರಣಿ ರಾಜ್ಯದಲ್ಲಿ ಮುಂದುವರಿದಿದೆ. ಇದೇ ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 61 ವರ್ಷದ ವ್ಯಕ್ತಿಯೋರ್ವರಿಂದ ಆರೋಪಿಗಳು ಕೋಟ್ಯಾಂತರ ಹಣ ಪೀಕಿರುವ ಘಟನೆ ರಾಜ್ಯದಲ್ಲಿ ನಡೆದಿದೆ. ನಿಮ್ಮನ್ನು ಡಿಜಿಟಲ್​​ ಅರೆಸ್ಟ್​​ ಮಾಡಿದ್ದೇವೆ ಎಂದು ಸಂತ್ರಸ್ತ ವ್ಯಕ್ತಿಯನ್ನು ನಂಬಿಸಿದ್ದ ಆರೋಪಿಗಳು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳಂತೆ ನಟನೆ ಮಾಡಿ…

Read More

ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಇನ್ನು ಕಡ್ಡಾಯ! ಸರ್ಕಾರದ ಮಹತ್ವದ ಆದೇಶ – Kannada News | Mandatory Kannada Newspaper Reading in Karnataka Schools

ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಇನ್ನು ಕಡ್ಡಾಯ!Image Credit source: google Gemini ಬೆಂಗಳೂರು, ಏಪ್ರಿಲ್ 26: ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆಗಳನ್ನು (Kannada Newspaper) ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು…

Read More

Video: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಲಿನ ಕ್ಯಾನ್ ತಲೆಗೆ ಹಾಕಿಕೊಂಡು ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ – Kannada News | Milk Can Mishap: Man in Rajasthan Gets Head Stuck Inside Container

ಅಲ್ವಾರ್, ಏಪ್ರಿಲ್ 26: ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ತರಹೇವಾರಿ ಹರಸಾಹಸ ಮಾಡುವುದು ಸಾಮಾನ್ಯ. ಆದರೆ, ಅಲ್ವಾರ್‌ನ ಮಾಧೋಗಢ ಗ್ರಾಮದ ಕಲೂರಾಮ್ ರೆಬಾರಿ ಎಂಬ ವ್ಯಕ್ತಿ ಮಾಡಿದ ಉಪಾಯ ಮಾತ್ರ ಆತನನ್ನೇ ಸಂಕಷ್ಟಕ್ಕೆ ದೂಡಿತ್ತು. ತಲೆಯ ಮೇಲೆ ಸಿಲುಕಿಕೊಂಡ ಹಾಲಿನ ಕ್ಯಾನ್‌ನಿಂದಾಗಿ ಎರಡು ಗಂಟೆಗಳ ಕಾಲ ಪರದಾಡಿದ ಘಟನೆ ಈಗ ಬೆಳಕಿಗೆ ಬಂದಿದೆ. ಏಪ್ರಿಲ್ 24ರಂದು ಕಲೂರಾಮ್ ರೆಬಾರಿ ಗೋಧಿ ವಿತರಿಸಲು ಹೋಗುತ್ತಿದ್ದರು. ಅಂದು ಬಿಸಿಲು ವಿಪರೀತವಾಗಿದ್ದರಿಂದ, ತಲೆಗೆ ಬಿಸಿ ತಗುಲಬಾರದೆಂದು ತಮಾಷೆಗಾಗಿ ಅಥವಾ ರಕ್ಷಣೆಗಾಗಿ…

Read More

IPL 2026: ಒಂದೇ ದಿನ ಬರೋಬ್ಬರಿ 16 ಕ್ಯಾಚ್​ಗಳು ಡ್ರಾಪ್..! – Kannada News | IPL 2026: A Comedy of Errors on the Field

ಕ್ರಿಕೆಟ್‌ನಲ್ಲಿ “ಕ್ಯಾಚಸ್ ವಿನ್ ಮ್ಯಾಚಸ್” (Catches win matches) ಎಂಬ ಮಾತಿದೆ. ಈ ಮಾತನ್ನು ಏಪ್ರಿಲ್ 25 ರಂದು ನಡೆದ ಎರಡು ಪಂದ್ಯಗಳು ಅಕ್ಷರಶಃ ನಿಜವಾಗಿಸಿದ್ದಾರೆ. ಈ ಎರಡೂ ಮ್ಯಾಚ್​ಗಳಲ್ಲಿ ಫೀಲ್ಡರ್‌ಗಳು ಮಾಡಿದ ಎಡವಟ್ಟುಗಳಿಂದ ಪಂದ್ಯದ ಫಲಿತಾಂಶ ಬದಲಾಗಿದೆ. ಹೀಗೆ ಇಡೀ ಪಂದ್ಯದ ಗತಿಯನ್ನೇ ಬದಲಿಸಿದ ಆ “ಕೈಚೆಲ್ಲಿದ ಕ್ಯಾಚ್​ಗಳ” ಸಂಪೂರ್ಣ ವಿವರ ಇಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ಪಂದ್ಯ: ಈ ಪಂದ್ಯದಲ್ಲಿ ಪಂಜಾಬ್ ತಂಡ 265 ರನ್‌ಗಳ ಬೃಹತ್ ಗುರಿಯನ್ನು…

Read More

‘ಟಾಕ್ಸಿಕ್’ ಟೀಸರ್​ನಲ್ಲಿ ಅಂಥ ದೃಶ್ಯ ಇದೆ ಎಂದು ಟೀಕಿಸಿದವರಿಗೆ ಉತ್ತರ ನೀಡಿದ ಯಶ್ – Kannada News | Yash talks about bold scenes in Toxic teaser and Geethu Mohandas in CinemaCon

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಪ್ರಚಾರ ಜೋರಾಗಿ ನಡೆಯುತ್ತಿದೆ. ಯಶ್ ಅವರು ವಿದೇಶದಲ್ಲಿ ಸಂದರ್ಶನ ನೀಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ‘ಟಾಕ್ಸಿಕ್’ (Toxic) ಚಿತ್ರದ ಟೀಸರ್​ನಲ್ಲಿ ಇರುವ ಕೆಲವು ಬೋಲ್ಡ್ ದೃಶ್ಯಗಳ ಬಗ್ಗೆ ಜನರಿಂದ ವ್ಯಕ್ತವಾದ ಟೀಕೆಗಳಿಗೆ ಯಶ್ ಈಗ ಉತ್ತರ ನೀಡಿದ್ದಾರೆ. ಆ ಮೂಲಕ ಅವರು ಸಿನಿಮಾ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಅಮೆರಿಕದಲ್ಲಿ ನಡೆದ ‘ಸಿನಿಮಾಕಾನ್’ ಈವೆಂಟ್​ನಲ್ಲಿ ಪಾಲ್ಗೊಂಡಿದ್ದ…

Read More