ಬೆಂಗಳೂರು, ಏಪ್ರಿಲ್ 26: ನಗರದ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬನು ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್ ನೀಡಿದ ದೂರಿನ ಆಧಾರದ ಮೇಲೆ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 35ನೇ ಪಂದ್ಯವು ಐತಿಹಾಸಿಕ ಚೇಸಿಂಗ್ಗೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 264 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ಪಂಜಾಬ್ ಕಿಂಗ್ಸ್ 18.5 ಓವರ್ಗಳಲ್ಲಿ ಚೇಸ್ ಮಾಡಿ ಅಮೋಘ ಜಯ ಸಾಧಿಸಿತು.
ಈ ಸೋಲಿನ ಬಳಿಕ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್, ತಂಡದ ಕಳಪೆ ಫೀಲ್ಡಿಂಗ್ ಮತ್ತು ಬೌಲಿಂಗ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸೋಲಿಗೆ ಬೇರೆ ಯಾರನ್ನೂ ಹೊಣೆ ಮಾಡುವಂತಿಲ್ಲ. ಏಕೆಂದರೆ “ನಾವು ಸೋಲಲು ಅರ್ಹರಾಗಿದ್ದೆವು” ಎಂದು ಅಕ್ಷರ್ ಪಟೇಲ್ ನೇರವಾಗಿಯೇ ಹೇಳಿದ್ದಾರೆ.
ಈ ಪಿಚ್ ಬ್ಯಾಟಿಂಗ್ಗೆ ಪೂರಕವಾಗಿತ್ತು ಮತ್ತು ಮೈದಾನ ಚಿಕ್ಕದಾಗಿದ್ದರಿಂದ ಸಿಕ್ಸರ್ಗಳು ಬರುವುದು ಸಹಜವಾಗಿತ್ತು. ಆದರೆ, ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳಲಿಲ್ಲ. ಫೀಲ್ಡರ್ಗಳು ಬೌಲರ್ಗಳಿಗೆ ಬೆಂಬಲ ನೀಡದಿದ್ದರೆ ಇಂತಹ ಪಂದ್ಯಗಳನ್ನು ಗೆಲ್ಲುವುದು ಕಷ್ಟ ಎಂದು ಅಕ್ಷರ್ ಬೇಸರ ವ್ಯಕ್ತಪಡಿಸಿದ್ದಾರೆ.
ಪವರ್ಪ್ಲೇ ಅವಧಿಯಲ್ಲಿ ವೇಗದ ಬೌಲರ್ಗಳು ಹೆಚ್ಚು ರನ್ ಬಿಟ್ಟುಕೊಟ್ಟಿದ್ದು ಮತ್ತು ಫೀಲ್ಡಿಂಗ್ನಲ್ಲಿ ಮಾಡಿದ ಎಡವಟ್ಟುಗಳು ಪಂದ್ಯದ ಗತಿಯನ್ನು ಬದಲಿಸಿದವು. ಪಂಜಾಬ್ ಕಿಂಗ್ಸ್ ಮೊದಲ 6 ಓವರ್ಗಳಲ್ಲೇ ದಾಖಲೆಯ ರನ್ ಗಳಿಸಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮುಳುವಾಯಿತು.
ಡೆಲ್ಲಿ ಕ್ಯಾಪಿಟಲ್ಸ್ 264 ರನ್ ಗಳಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ತನ್ನ ಬ್ಯಾಟಿಂಗ್ ಶಕ್ತಿಯನ್ನು ತೆರೆದಿಟ್ಟಿತ್ತು. 264 ರನ್ ಎಂಬುದು ದೊಡ್ಡ ಮೊತ್ತ. ಬ್ಯಾಟಿಂಗ್ನಲ್ಲಿ ನಾವು ಶ್ರೇಷ್ಠ ಪ್ರದರ್ಶನ ನೀಡಿದ್ದೇವೆ, ಇದು ಸಕಾರಾತ್ಮಕ ಅಂಶ. ಆದರೆ ಅದೃಷ್ಟ ಮತ್ತು ಫೀಲ್ಡಿಂಗ್ ಎರಡೂ ನಮಗೆ ಸಾಥ್ ನೀಡಲಿಲ್ಲ ಎಂದು ಅಕ್ಷರ್ ಹೇಳಿದ್ದಾರೆ.
ನಿರ್ಣಾಯಕ ಕ್ಷಣಗಳಲ್ಲಿ ಪಂದ್ಯವನ್ನು ನಮ್ಮತ್ತ ತಿರುಗಿಸಿಕೊಳ್ಳುವಲ್ಲಿ ನಾವು ವಿಫಲರಾಗುತ್ತಿದ್ದೇವೆ. ಪದೇ ಪದೇ ಒಂದೇ ತಪ್ಪುಗಳನ್ನು ಮಾಡುವುದು ಸರಿಯಲ್ಲ. ನಾವು ಮತ್ತೆ ಈ ಕುಳಿತು ಚರ್ಚಿಸಿ, ಮುಂದಿನ ಪಂದ್ಯಗಳಲ್ಲಿ ಎಲ್ಲಿ ಸುಧಾರಿಸಿಕೊಳ್ಳಬೇಕು ಎಂಬುದನ್ನು ನೋಡುತ್ತೇವೆ. ಈ ಮೂಲಕ ಮುಂದಿನ ಮ್ಯಾಚ್ಗಳಲ್ಲಿ ಇಂತಹ ತಪ್ಪುಗಳನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ ಎಂದು ಅಕ್ಷರ್ ಪಟೇಲ್ ಇದೇ ವೇಳೆ ತಿಳಿಸಿದ್ದಾರೆ.
ಈ ಪಂದ್ಯದ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಅತ್ತ ಭರ್ಜರಿ ಗೆಲುವು ದಾಖಲಿಸಿರುವ ಪಂಜಾಬ್ ಕಿಂಗ್ಸ್ ತಂಡವು 13 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಬೆಂಗಳೂರು, ಏಪ್ರಿಲ್ 26: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಕೆಲ ವಾರಗಳಿಂದ ಬಾರಿ ಬಾರಿ ಏರಿಳಿತಗಳನ್ನು ಕಾಣುತ್ತಿವೆ. ಚಿನ್ನದ ಬೆಲೆ (Gold Rates) ಈ ವಾರಾಂತ್ಯದಲ್ಲಿ 100 ರೂ ಏರಿಕೆಯಾದರೂ ಕಳೆದ 10 ದಿನದಲ್ಲಿ ಗ್ರಾಮ್ಗೆ 140 ರೂನಷ್ಟು ಕಡಿಮೆ ಆಗಿದೆ. 14,260 ರೂನಿಂದ 14,120 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 5 ರೂ ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲೂ ಇದೇ ಟ್ರೆಂಡ್ ಇದೆ. ಕಳೆದ ಕೆಲ ವಾರಗಳ ಹಿಂದಕ್ಕೆ ಹೋಲಿಸಿದರೆ ಅಲ್ಲಿ ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಹೆಚ್ಚಿನ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,41,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 26ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,404 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,120 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,553 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,404 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,120 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಸಾಲದ ಸುಳಿಯಿಂದ ಹೊರಬರಲುImage Credit source: Pinterest
ಸಾಲ ಹೆಚ್ಚಾದಾಗ ಅದನ್ನು ತೀರಿಸಿಕೊಳ್ಳಲು ನಾವು ಪಡುವ ಕಷ್ಟ ಅಷ್ಟಿಷ್ಟಲ್ಲ. ಬ್ಯಾಂಕ್ ಸಾಲವಿರಲಿ, ಕೈಸಾಲವಿರಲಿ ಅಥವಾ ಯಾವುದೇ ಸಾಲವಿರಲಿ, ಆದಾಯ ಸಾಲಕ್ಕೆ ಸರಿಹೊಂದುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೆಲವು ಆಧ್ಯಾತ್ಮಿಕ ತಂತ್ರಗಳನ್ನು ಅಳವಡಿಸಿಕೊಂಡರೆ ಸಾಲ ಬೇಗ ತೀರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.
ಗುರೂಜಿಯವರು ಹೇಳುವಂತೆ, ಸಾಲ ಪಡೆಯಬೇಕಾದ ಸಂದರ್ಭದಲ್ಲಿ, ಬ್ಯಾಂಕ್ಗೆ ಅಥವಾ ಯಾವುದೇ ವ್ಯಕ್ತಿಯ ಬಳಿ ಹಣ ಪಡೆಯಲು ಹೋಗುವಾಗ, ಕುಬೇರನನ್ನು ಸ್ಮರಣೆ ಮಾಡಿಕೊಳ್ಳುವುದು ಅತ್ಯಂತ ಮುಖ್ಯ. ಮನೆಯಲ್ಲಿ ಒಂದು ರೂಪಾಯಿ ಕಾಯನ್ನು ಅರಿಶಿನ ಬಟ್ಟೆಯಲ್ಲಿ ಕಟ್ಟಿ ದೇವರ ಬಳಿ ಇಟ್ಟು, ಕುಬೇರ ಅಥವಾ ಲಕ್ಷ್ಮಿ ಕುಬೇರರಿಗೆ ಪ್ರಾರ್ಥನೆ ಸಲ್ಲಿಸಿ. “ನಾನು ಸಾಲಕ್ಕೆ ಹೋಗುತ್ತಿದ್ದೇನೆ, ಅದನ್ನು ಸರಿಯಾಗಿ ತೀರಿಸಲು ನೀನು ವ್ಯವಸ್ಥೆ ಮಾಡಿಕೊಡು” ಎಂದು ಪ್ರಾರ್ಥಿಸಿ ಹೊರಟರೆ, ಆ ಸಾಲ ಬೇಗ ತೀರುತ್ತದೆ.
ಸಾಲ ತೀರಿಸುವಾಗ:
ಸಾಲವನ್ನು ಮರುಪಾವತಿಸುವಾಗ ದಕ್ಷಿಣಾಮೂರ್ತಿಯನ್ನು ಸ್ಮರಣೆ ಮಾಡಿಕೊಳ್ಳಬೇಕು. ಬೇರೆಯವರಿಗೆ ಹಣ ನೀಡುವಾಗ ಒಮ್ಮೆ ದಕ್ಷಿಣಾಮೂರ್ತಿಯನ್ನು ನೆನೆದು ಆ ಹಣವನ್ನು ಕೊಡಬೇಕು. ಧನಮೂಲಂ ಇದಂ ಜಗತ್ತು ಎಂಬಂತೆ ಹಣವಿದ್ದರೆ ಮಾತ್ರ ಜೀವನ ಮಾಡಲು ಸಾಧ್ಯ. ಹಣವಿಲ್ಲದವನು ಹೆಣಕ್ಕೆ ಸಮಾನ ಎಂಬ ಮಾತು ಸುಳ್ಳಲ್ಲ. ಸಾಲ ತೀರಿಸಲಾಗದೆ ಕಷ್ಟಪಡುತ್ತಿರುವಾಗ, ಅನಾಥೋ ದೈವರಕ್ಷಕ ಎಂಬಂತೆ, ನಮಗೆ ಶಕ್ತಿ ಇಲ್ಲದಾಗ ಭಗವಂತನನ್ನು ಪ್ರಾರ್ಥಿಸುವುದು ಅಗತ್ಯ.
ಶುಭ ದಿನಗಳು ಮತ್ತು ಅಶುಭ ದಿನಗಳು:
ಸಾಲವನ್ನು ತೀರಿಸಲು ಮಂಗಳವಾರದ ದಿನವನ್ನು ಆಯ್ದುಕೊಳ್ಳಿ. ಮಂಗಳವಾರದಂದು ಸಾಲವನ್ನು ಮರುಪಾವತಿಸಲು ಪ್ರಾರಂಭಿಸಿದರೆ, ಮೂರು ಮಂಗಳವಾರಗಳು ತಪ್ಪಿಸದೆ ಹಣವನ್ನು ನೀಡಿದರೆ, ನಿಮ್ಮ ಸಾಲ ಬೇಗ ತೀರಹೋಗುತ್ತದೆ. ಸಾಲಗಾರರು ಮಂಗಳವಾರದಂದು ಹಣ ತೆಗೆದುಕೊಳ್ಳಲು ಇಷ್ಟಪಡುತ್ತಾರೆ ಏಕೆಂದರೆ ಇದು ಶುಭ ದಿನವೆಂದು ನಂಬಲಾಗಿದೆ.
ಸಾಲವನ್ನು ಪಡೆಯಲು ಸೋಮವಾರ ಮತ್ತು ಗುರುವಾರಗಳು ಶುಭ ದಿನಗಳಾಗಿವೆ. ಈ ದಿನಗಳಲ್ಲಿ ಸಾಲವನ್ನು ಪಡೆದರೆ ಅದನ್ನು ಬೇಗ ತೀರಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಸಾಲ ಕೊಡುವವರನ್ನು ಸೋಮವಾರ ಅಥವಾ ಗುರುವಾರ ಹಣ ನೀಡಲು ಕೇಳಬಹುದು. ಆದರೆ, ಶನಿವಾರದ ದಿನ ಯಾವುದೇ ಹಣಕಾಸಿನ ವಹಿವಾಟು ಮಾಡದಿರುವುದು ಉತ್ತಮ. ಶನಿವಾರದಂದು ಹಣವನ್ನು ಕೊಡುವುದು ಅಥವಾ ಪಡೆಯುವುದು ಒಳ್ಳೆಯ ರೀತಿಯಲ್ಲಿ ಸಫಲವಾಗುವುದಿಲ್ಲ ಎಂದು ನಂಬಲಾಗಿದೆ.
ಈ ಎಲ್ಲಾ ಸಣ್ಣ ಸಣ್ಣ ತಂತ್ರಗಳನ್ನು ಅಳವಡಿಸಿಕೊಂಡಿದ್ದೆ ಆದರೆ, ಸಾಲದ ಸಂಕಷ್ಟದಿಂದ ಹೊರಬಂದು ಸುಖಮಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ, ಏಪ್ರಿಲ್ 26: ಅಮೆರಿಕದ ಶ್ವೇತಭವನದಲ್ಲಿ ಆಯೋಜಿಸಲಾಗಿದ್ದ ಗಣ್ಯರ ಸಭೆಯಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಿಂದ ಇಡೀ ಜಗತ್ತು ಬೆಚ್ಚಿಬಿದ್ದಿದೆ. ಈ ಘಟನೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಖಂಡಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಎಕ್ಸ್ (X) ಮೂಲಕ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಸಮಾಧಾನವಾಯಿತು. ಅವರ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಎಂದಿಗೂ ಸ್ಥಾನವಿಲ್ಲ, ಇದನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ಹೇಳಿದ್ದಾರೆ.
ಬಹು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರನು ಭದ್ರತಾ ತಪಾಸಣಾ ಕೇಂದ್ರವನ್ನು ಭೇದಿಸಿ ಸಭಾಂಗಣದತ್ತ ಧಾವಿಸುತ್ತಿದ್ದ ದೃಶ್ಯಗಳು ವೈರಲ್ ಆಗಿವೆ. ಆದರೆ, ಸೀಕ್ರೆಟ್ ಸರ್ವಿಸ್ ಸಿಬ್ಬಂದಿ ಪ್ರಾಣದ ಹಂಗು ತೊರೆದು ಆತನನ್ನು ಹಿಮ್ಮೆಟ್ಟಿಸಿ ವಶಕ್ಕೆ ಪಡೆದರು.
Relieved to learn that President Trump, the First Lady and Vice President are safe and unharmed following the recent security incident at a Washington DC hotel. I extend my best wishes for their continued safety and well-being. Violence has no place in a democracy and must be…
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್ ಆಘಾತಕಾರಿ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ದಾಳಿಕೋರ ಹಾರಿಸಿದ ಗುಂಡು ಒಬ್ಬ ಭದ್ರತಾ ಅಧಿಕಾರಿಯ ಬುಲೆಟ್ ಪ್ರೂಫ್ ಜಾಕೆಟ್ಗೆ ನೇರವಾಗಿ ತಗುಲಿದೆ. ಅದೃಷ್ಟವಶಾತ್ ಅಧಿಕಾರಿ ಸುರಕ್ಷಿತವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ಘಟನೆಯು ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸುವ ಅಗತ್ಯವನ್ನು ಎತ್ತಿ ತೋರಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯ ಫೋಟೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಿಡುಗಡೆ ಮಾಡಿದ್ದಾರೆ. ನೂರಾರು ಅತಿಥಿಗಳು ಸೇರಿದ್ದ ಹೋಟೆಲ್ನ ಬಾಲ್ ರೂಂನ ಹೊರಗಿನ ಸ್ಕ್ರೀನಿಂಗ್ ಪ್ರದೇಶದಲ್ಲಿ ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಟ್ರಂಪ್ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಶ್ವೇತಭವನದ ವರದಿಗಾರರ ಭೋಜನ ಕೂಟದಿಂದ ಶಂಕಿತ ಶೂಟರ್ನ ಮೊದಲ ಚಿತ್ರ ಹೊರಬಂದಿದ್ದು, ವಾಷಿಂಗ್ಟನ್ ಹಿಲ್ಟನ್ನ ಮೆಟ್ಟಿಲುಗಳ ಬಳಿ ಕಾನೂನು ಜಾರಿ ಸಂಸ್ಥೆಗಳು ಆತನನ್ನು ಬಂಧಿಸಿರುವುದನ್ನು ತೋರಿಸುತ್ತದೆ. ಶಂಕಿತ ಶೂಟರ್ ಅನ್ನು ಕ್ಯಾಲಿಫೋರ್ನಿಯಾದ ಟೊರೆನ್ಸ್ನ 31 ವರ್ಷದ ಕೋಲ್ ತೋಮಸ್ ಅಲೆನ್ ಎಂದು ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ವಿಶ್ವ ಬೌದ್ಧಿಕ ಆಸ್ತಿ ದಿನImage Credit source: Freepik
ಬೌದ್ಧಿಕ ಆಸ್ತಿ (Intellectual Property) ಎಂಬುದು ಮಾನವನ ಬುದ್ಧಿಶಕ್ತಿಯ ಅಮೂರ್ತ ಸೃಷ್ಟಿಯನ್ನು ಒಳಗೊಂಡಿರುವ ಆಸ್ತಿಯ ವರ್ಗವಾಗಿದ್ದು, ಇದು ಬೆಲೆ ಕಟ್ಟಲಾಗದಷ್ಟು ಅಮೂಲ್ಯವಾಗಿದೆ. ಪೇಟೆಂಟ್ಗಳು, ಹಕ್ಕುಸ್ವಾಮ್ಯಗಳು, ಟ್ರೇಡ್ಮಾರ್ಕ್ಗಳು ಮತ್ತು ವಿನ್ಯಾಸಗಳು, ಕೃತಿಸ್ವಾಮ್ಯ ಇವೆಲ್ಲವೂ ಬೌದ್ಧಿಕ ಆಸ್ತಿಗಳಾಗಿದ್ದು, ಲೇಖಕ, ಕಥೆಗಾರ, ವಿಜ್ಞಾನಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಬುದ್ಧಿ ಶಕ್ತಿ ಹಾಗೂ ಸೃಜನಶೀಲತೆಯಿಂದ ಹೊರ ತರುವ ಕಥೆ, ಸಂಗೀತ, ಪುಸ್ತಕ, ವಿನ್ಯಾಸಗಳನ್ನು ಬೇರೆ ಯಾರು ಕದಿಯದಂತೆ ಈ ಅಮೂಲ್ಯ ಬೌದ್ಧಿಕ ಆಸ್ತಿಯ ಹಕ್ಕುಗಳನ್ನು ರಕ್ಷಿಸಲು ಹಾಗೂ ಸೃಷ್ಟಿಕರ್ತರು, ಸಂಶೋಧಕರು, ಉದ್ಯಮಿಗಳ ಆಲೋಚನೆಗಳು ಮತ್ತು ಅವರು ನೀಡಿದ ಕೊಡುಗೆಗಳನ್ನು ಗೌರವಿಸಲು ಪ್ರತಿವರ್ಷ ಏಪ್ರಿಲ್ 26 ರಂದು ವಿಶ್ವ ಬೌದ್ಧಿಕ ಆಸ್ತಿಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.
ವಿಶ್ವ ಬೌದ್ಧಿಕ ಆಸ್ತಿ ದಿನದ ಇತಿಹಾಸವೇನು?
ವಿಶ್ವ ಬೌದ್ಧಿಕ ಆಸ್ತಿ ದಿನವನ್ನು ಪ್ರತಿ ವರ್ಷ ಏಪ್ರಿಲ್ 26 ರಂದು ಆಚರಿಸಲಾಗುತ್ತದೆ. ಈ ದಿನದ ಆಚರಣೆಯನ್ನು ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ (WIPO) 2000 ರಲ್ಲಿ ಪ್ರಾರಂಭಿಸಿತು. ಈ ದಿನ 1970 ರಲ್ಲಿ ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ (WIPO) ಯನ್ನು ಸ್ಥಾಪಿಸುವ ಸಮಾವೇಶವು ಜಾರಿಗೆ ಬಂದ ದಿನದ ಸ್ಮರಣಾರ್ಥವಾಗಿದೆ. ನಾವೀನ್ಯತೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ (ಪೇಟೆಂಟ್ಗಳು, ಹಕ್ಕುಸ್ವಾಮ್ಯಗಳು, ಟ್ರೇಡ್ಮಾರ್ಕ್ಗಳು ಮತ್ತು ವಿನ್ಯಾಸಗಳು) ಪ್ರಮುಖ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಇಟ್ಟುಕೊಂಡು ಈ ದಿನದ ಆಚರಣೆಯನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಪ್ರತಿವರ್ಷ ಏಪ್ರಿಲ್ 26 ರಂದು ಈ ವಿಶೇಷ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ವಿಶ್ವ ಬೌದ್ಧಿಕ ಆಸ್ತಿ ದಿನವನ್ನು ಆಚರಿಸುವ ಮೂಲ ಉದ್ದೇಶವೇ ಬೌದ್ಧಿಕ ಆಸ್ತಿಯ ಹಕ್ಕು, ನಾವೀನ್ಯತೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವಲ್ಲಿ ಬೌದ್ಧಿಕ ಆಸ್ತಿಯ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಬೌದ್ಧಿಕ ಆಸ್ತಿಗಳಿಗೆ ಅಂತರಾಷ್ಟ್ರೀಯ ಮಾನ್ಯತೆ ತಂದುಕೊಡುವುದಾಗಿದೆ
ಈ ದಿನ ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ಪ್ರೋತ್ಸಾಹಿಸುತ್ತದೆ, ಇದು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ.
ಈ ಈ ದಿನದಂದು ಪ್ರಪಂಚದಾದ್ಯಂತ ವಿಚಾರ ಸಂಕಿರಣಗಳು, ಪ್ರದರ್ಶನಗಳು ಮತ್ತು ಸ್ಪರ್ಧೆಗಳು ಮುಂತಾದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಕ್ರಿಕೆಟ್ ಎನ್ನುವುದು ಕೇವಲ ಅನುಭವದ ಆಟವಲ್ಲ, ಅದು ಪ್ರತಿಭೆಯ ಪ್ರದರ್ಶನ ಎಂಬುದನ್ನು 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ದಾಳಿಯನ್ನು ಪುಡಿ ಮಾಡಿದ ಸೂರ್ಯವಂಶಿ, ಐಪಿಎಲ್ ಇತಿಹಾಸ ಕಂಡ ಅತ್ಯಂತ ಸ್ಫೋಟಕ ಇನ್ನಿಂಗ್ಸ್ಗಳಲ್ಲಿ ಒಂದನ್ನು ಆಡಿ ಮುಗಿಸಿದ್ದಾರೆ. ಈ ಭರ್ಜರಿ ಇನಿಂಗ್ಸ್ನೊಂದಿಗೆ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಮಾಹಿತಿ ಇಲ್ಲಿದೆ…
ಬೀದರ್, ಏಪ್ರಿಲ್ 26: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಅವುಗಳನ್ನು ಸ್ವತಃ ಶಾಸಕರೇ ರಕ್ಷಣೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಅಲಗೂಡ ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣದಿಂದಾ ಅಲಗೂಡ ಚಿಟ್ಟಾ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಒಂದೆರಡಲ್ಲ ಬರೋಬ್ಬರಿ 23 ಗೋವುಗಳನ್ನು ಬಿಜೆಪಿ ಶಾಸಕ ಶರಣು ಸಲಗರ ರಕ್ಷಣೆ ಮಾಡಿದ್ದಾರೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಕ್ಷಿಸಿದ ಗೋವುಗಳನ್ನು ಗೋಶಾಲೆಗೆ ರವಾನೆ ಮಾಡಲಾಗಿದೆ.
ಬೆಂಗಳೂರು (ಏ. 26): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ರನ್ ಮಳೆಯೇ ಸುರಿಯಿತು. ಈ ಪಂದ್ಯದಲ್ಲಿ ಬ್ಯಾಟ್ಸ್ಮನ್ಗಳು ದಾಖಲೆ ಪುಸ್ತಕಕ್ಕೆ ಹಲವು ಪುಟ ಸೇರಿಸಿದರು. ಈ ಪಂದ್ಯದಲ್ಲಿ 529 ರನ್ಗಳು, 33 ಸಿಕ್ಸರ್ಗಳು ಮತ್ತು 49 ಬೌಂಡರಿಗಳು ಸಿಡಿದವು. ದೆಹಲಿಯ 264 ರನ್ಗಳ ಗುರಿಯನ್ನು ಕೇವಲ 18.5 ಓವರ್ಗಳಲ್ಲಿ ತಲುಪುವ ಮೂಲಕ ಪಂಜಾಬ್ ಕಿಂಗ್ಸ್ ಇತಿಹಾಸ ನಿರ್ಮಿಸಿತು. ಇದು ಐಪಿಎಲ್ನಲ್ಲಿ ಮಾತ್ರವಲ್ಲದೆ ವಿಶ್ವ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೂ ಅತ್ಯಧಿಕ ಯಶಸ್ವಿ ರನ್-ಚೇಸ್ ಆಗಿದೆ. ಪಂಜಾಬ್ 2024 ರ ತನ್ನದೇ ಆದ 261 ರನ್ಗಳ (ಕೆಕೆಆರ್ ವಿರುದ್ಧ) ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಸ್ಥಾಪಿಸಿತು.
ಕೆಎಲ್ ರಾಹುಲ್ ಅಬ್ಬರ
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಅಜೇಯ 152 ರನ್ ಗಳಿಸಿ ಸಂಚಲನ ಸೃಷ್ಟಿಸಿದರು. ಐಪಿಎಲ್ನಲ್ಲಿ 150 ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಐಪಿಎಲ್ ಇತಿಹಾಸದಲ್ಲಿ ಕ್ರಿಸ್ ಗೇಲ್ (175*) ಮತ್ತು ಬ್ರೆಂಡನ್ ಮೆಕಲಮ್ (158*) ನಂತರ ಮೂರನೇ ಅತ್ಯಧಿಕ ವೈಯಕ್ತಿಕ ಸ್ಕೋರ್ ಹೊಂದಿದ್ದಾರೆ.
ಗೇಲ್ ಶತಕಗಳ ಸಂಖ್ಯೆಗೆ ಸಮ
ಈ ಪಂದ್ಯದಲ್ಲಿ ಗಳಿಸಿದ ಶತಕವು ಕೆಎಲ್ ರಾಹುಲ್ ಅವರ ವೃತ್ತಿಜೀವನದ ಆರನೇ ಐಪಿಎಲ್ ಶತಕವಾಗಿದೆ. ಇದರೊಂದಿಗೆ, ಅವರು ಐಪಿಎಲ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಸರಿಗಟ್ಟಿದರು. ಈಗ, ವಿರಾಟ್ ಕೊಹ್ಲಿ (8) ಮತ್ತು ಜೋಸ್ ಬಟ್ಲರ್ (7) ಮಾತ್ರ ಅವರಿಗಿಂತ ಮುಂದಿದ್ದಾರೆ.
ಟಿ20ಯಲ್ಲಿ ಭಾರತೀಯರ ರಾಜನಾದ ರಾಹುಲ್
ಕೆಎಲ್ ರಾಹುಲ್ ಈಗ ಟಿ20 ಕ್ರಿಕೆಟ್ನಲ್ಲಿ (ಪುರುಷರ ಟಿ20) ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದ ಭಾರತೀಯ ಬ್ಯಾಟ್ಸ್ಮನ್ ಆಗಿದ್ದಾರೆ. ಅವರು ತಿಲಕ್ ವರ್ಮಾ ಅವರ ದಾಖಲೆಯನ್ನು (ಮೇಘಾಲಯ ವಿರುದ್ಧ 151 ರನ್) ಹಿಂದಿಕ್ಕಿದ್ದಾರೆ.
ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ನಿತೀಶ್ ರಾಣಾ ನಡುವೆ 220 ರನ್ಗಳ ಬೃಹತ್ ಜೊತೆಯಾಟ ಕಂಡುಬಂದಿತು. ಇದು ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಧಿಕ ಪಾಲುದಾರಿಕೆಯಾಗಿದೆ. ಕೊಹ್ಲಿ ಮತ್ತು ಡಿವಿಲಿಯರ್ಸ್ (229 ರನ್ಗಳು) ಇನ್ನೂ ಈ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಹೊಂದಿದ್ದಾರೆ.
ಅತಿ ದೊಡ್ಡ ರನ್ ಚೇಸ್
ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ನಲ್ಲಿ ಮಾತ್ರವಲ್ಲದೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಚೇಸ್ ಮಾಡಿದ ದಾಖಲೆಯನ್ನು ಮತ್ತೊಮ್ಮೆ ಸ್ಥಾಪಿಸಿದೆ. ಈ ಹಿಂದೆ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 265 ರನ್ಗಳ ಗುರಿಯನ್ನು ಬೆನ್ನಟ್ಟಿ ಈ ದಾಖಲೆಯನ್ನು ಹೊಂದಿದ್ದರು. ಇದಕ್ಕೂ ಮೊದಲು, ಪಂಜಾಬ್ ಕಿಂಗ್ಸ್ ತಂಡದ ಅತ್ಯಧಿಕ ರನ್ ಚೇಸ್ 2025 ರಲ್ಲಿ ಕೆಕೆಆರ್ ವಿರುದ್ಧವಾಗಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಡಾ. ರಾಜ್ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಸೃಷ್ಟಿ ಆಯಿತು. ಸಮಾಧಿ ನಿರ್ಮಾಣಕ್ಕೆ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿದ್ದು ಸೂಕ್ತವಲ್ಲ ಎಂದು ಚೇತನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಡಾ. ರಾಜ್ಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಚೇತನ್ ಅಹಿಂಸಾ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದರು. ಆದರೆ ಚೇತನ್ ಅವರು ಕ್ಷಮೆ ಕೇಳುವಾಗ ಸುತ್ತಿ ಬಳಸಿ ಮಾತನಾಡಿದರು. ನೇರವಾಗಿ ಅವರು ಕ್ಷಮೆ ಕೇಳುವುದಕ್ಕೂ ಮುನ್ನ ತಮ್ಮ ಹೇಳಿಕೆಯನ್ನು ಸಮರ್ಥಿಸುವ ಪ್ರಯತ್ನ ಮಾಡಿದರು. ಅದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.