ಪಾಕ್ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಲಷ್ಕರ್ ಉಗ್ರ ಪ್ರತ್ಯಕ್ಷ – Kannada News | Shoaib Akhtar’s Brother Funeral: Hafiz Saeed’s Son, LeT Terrorists Spotted in Pakistan

ಇಸ್ಲಾಮಾಬಾದ್, ಜೂನ್ 27: ಪಾಕಿಸ್ತಾನ(Pakistan)ವು ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ ಎಂಬ ಭಾರತದ ವಾದಕ್ಕೆ ಮತ್ತೊಂದು ಬಲವಾದ ಸಾಕ್ಷಿ ಸಿಕ್ಕಂತಾಗಿದೆ. ಪಾಕಿಸ್ತಾನದ ಮಾಜಿ ಸ್ಟಾರ್ ಕ್ರಿಕೆಟಿಗ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯಲ್ಲಿ, ನಿಷೇಧಿತ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಭಯೋತ್ಪಾದಕರು ಹಾಗೂ ಹಫೀಜ್ ಸಯೀದ್‌ನ ಪುತ್ರ ತಲ್ಹಾ ಹಾಗೂ ಇತರೆ ಸಹಚರರು ಬಹಿರಂಗವಾಗಿ ಭಾಗವಹಿಸಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ. ಈ ಘಟನೆಯ ವಿಡಿಯೋಗಳು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಸುಳ್ಳನ್ನು ಜಗಜ್ಜಾಹೀರುಗೊಳಿಸಿವೆ. ನಿಷೇಧಿತ ಜಮಾತ್-ಉದ್-ದವಾ …

Read More

ಟಿ20 ವಿಶ್ವಕಪ್​ಗೆ ನ್ಯೂಝಿಲೆಂಡ್ ತಂಡ ಪ್ರಕಟ – Kannada News | New Zealand squad for Women’s T20 World Cup 2026

2026ರ ಜೂನ್ 12ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಯು 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಹಾಲಿ ಚಾಂಪಿಯನ್ ಆಗಿರುವ ನ್ಯೂಝಿಲೆಂಡ್ ತಂಡವನ್ನು ಈ ಬಾರಿ ಸ್ಟಾರ್ ಆಲ್-ರೌಂಡರ್ ಅಮೆಲಿಯಾ ಕೆರ್ (Amelia Kerr) ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಅನುಭವಿ ಆಟಗಾರ್ತಿಯರಾದ ಸೂಝಿ ಬೆಟ್ಸ್, ಸೋಫಿ ಡಿವೈನ್, ಲಿಯಾ ತಹುಹು ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ನೆನ್ಸಿ ಪಟೇಲ್ ಮತ್ತು ಇಸಿ ಶಾರ್ಪ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ…

Read More

ಹಾರ್ಮುಜ್ ಬಿಕ್ಕಟ್ಟಿನ ಎಫೆಕ್ಟ್: ತೈಲದ ಗರಿಷ್ಠ ಬಳಕೆ ಸೇರಿದಂತೆ ಹೊಸ ಪ್ರವೃತ್ತಿಯಲ್ಲಿ ಭಾರತೀಯ ಆಯಿಲ್ ರಿಫೈನರಿಗಳು

ನವದೆಹಲಿ, ಜೂನ್ 1: ಮಧ್ಯಪ್ರಾಚ್ಯದಲ್ಲಿ (Middle East) ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಇರಾನ್ ಸಂಘರ್ಷದಿಂದಾಗಿ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ (Strait of Hormuz) ಪ್ರದೇಶದಲ್ಲಿ ತೀವ್ರ ಅಡಚಣೆ ಉಂಟಾಗಿದೆ. ಇದರ ನೇರ ಪರಿಣಾಮ ಭಾರತದ ಇಂಧನ ವಲಯದ ಮೇಲಾಗಿದ್ದು, ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳು (Oil Refineries) ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಇಂಧನ ಪೂರೈಸಲು ತಮ್ಮ ತಂತ್ರಜ್ಞಾನ ಮತ್ತು ತೈಲ ಮಿಶ್ರಣದ ಶೈಲಿಯನ್ನು ಬದಲಾಯಿಸಿಕೊಳ್ಳುತ್ತಿವೆ ಎಂದು ಟೈಮ್ಸ್ ಆಫ್ ಇಂಡಿಯಾ…

Read More

ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ ಭವಿಷ್ಯಕ್ಕೆ ಸಚಿವ ಫುಲ್​​​ ಖುಷ್ – Kannada News | Viral Video: Student Predicts CM Post for Thimmapur, A Boost Amid Excise Probe?

 ಬಾಗಲಕೋಟೆ , ಫೆ.7: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಚರ್ಚೆಯ ನಡುವೆಯೂ ಒಂದು ತಮಾಷೆಯ ಮತ್ತು ಕುತೂಹಲದ ಸುದ್ದಿಯೊಂದು ಸೋಶಿಯಲ್​​​​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಒಂದೆಡೆ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ. ತಿಮ್ಮಾಪುರ (R.B. Thimmapur) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೆ, ಇನ್ನೊಂದೆಡೆ ಈ ‘ಕೊರವಂಜಿ’ ವಿದ್ಯಾರ್ಥಿನಿಯ ಭವಿಷ್ಯವಾಣಿ ಸಚಿವರಿಗೆ ಹೊಸ ಹುರುಪು ನೀಡಿದಂತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಖಾಸಗಿ ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…

Read More

ಲಗ್ಗೆರೆ ಬಸ್ ನಿಲ್ದಾಣದಲ್ಲಿ ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ – Kannada News | BMTC Bus Engulfed in Flames at Laggere Bus Stand, Bengaluru

ಬೆಂಗಳೂರು, ಏಪ್ರಿಲ್​ 19: ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಒಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ನಿನ್ನೆ ಸಂಜೆ ಸುಮಾರು 4:50ಕ್ಕೆ ಮೆಜೆಸ್ಟಿಕ್‌ನಿಂದ ಲಗ್ಗೆರೆ ಬಸ್ ನಿಲ್ದಾಣಕ್ಕೆ ಬಂದಿದ್ದ ಬಿಎಂಟಿಸಿ ಬಸ್‌ ನಿಲ್ಲಿಸಿದ ನಂತರ ಚಾಲಕ ಮತ್ತು ನಿರ್ವಾಹಕರು ಬಸ್ ನಿಲ್ದಾಣದೊಳಗೆ ತೆರಳಿದ್ದರು. ಅದಾಗಿ ಐದೇ ನಿಮಿಷದೊಳಗೆ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ, ಅಧಿಕಾರಿಗಳು, ಚಾಲಕ-ನಿರ್ವಾಹಕರು ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಲು ಫೋಮ್ ಮತ್ತು ನೀರನ್ನು ಬಳಸಿ…

Read More

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಮವಸ್ತ್ರ, ಶೂ ನೀಡಲು ಕ್ಯಾಬಿನೆಟ್​ ಅಸ್ತು – Kannada News | Good News for Minority Students: Cabinet Approves Free Uniforms and Shoes

ಬೆಂಗಳೂರು, ಜುಲೈ 02: ಸಿಎಂ ಡಿಕೆ ಶಿವಕುಮಾರ್ (DK Shivakumar)​ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ (Cabinet) ಸಭೆಯಲ್ಲಿ ಪ್ರಮುಖ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಪ್ರಮುಖವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಕ್ರೀಡಾ ಉಡುಪು ಹಾಗೂ ಶೂ ನೀಡಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ 33.06 ಕೋಟಿ ರೂ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಬೀಳಗಿ ಏತ ನೀರಾವರಿ ಯೋಜನೆಗೆ ಅನುಮೋದನೆ ಬಾಗಲಕೋಟೆ ಜಿಲ್ಲೆಯ ರೈತರಿಗೆ ಸಂಪುಟ ಸಭೆಯು ಸಿಹಿ ಸುದ್ದಿ…

Read More

ಕೇವಲ 58 ​ಎಸೆತ… ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಚೇಸಿಂಗ್

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ 9.4 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಹೀಗೆ ಪಂದ್ಯ ಮುಗಿಸಿ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಬಾಲ್​ಗಳನ್ನು ಬಾಕಿಯಿರಿಸಿ 100+ ಸ್ಕೋರ್​ ಚೇಸ್ ಮಾಡಿದ ದಾಖಲೆ ಬರೆದಿದೆ. ಪಲ್ಲೆಕಲೆ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಒಮಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್…

Read More

Optical Illusion: ನಿಮಗೊಂದು ಸವಾಲ್; ಈ ಚಿತ್ರದಲ್ಲಿರುವ ಕಳ್ಳ ಬೆಕ್ಕನ್ನು ಜಸ್ಟ್ 10 ಸೆಕೆಂಡುಗಳಲ್ಲಿ ಗುರುತಿಸಿ – Kannada News | Optical illusion: Spot the hidden cat in this picture within 10 seconds.

ನೀವು ಬುದ್ಧಿವಂತರೇ, ಹಾಗಾದ್ರೆ ಮೆದುಳು ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ ಈಗ ಬಂದಿದೆ. ನೀವು ಈ ಹಿಂದೆ ಒಗಟಿನ ಚಿತ್ರಗಳನ್ನು ಬಿಡಿಸಲು ವಿಫಲ ಆಗಿದ್ದೀರಬಹುದು. ನಿಮ್ಮ ವೀಕ್ಷಣಾ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯ ಮಟ್ಟವನ್ನು ಪರೀಕ್ಷಿಸಲು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರ ನೋಡಿ. ಈ ಅಡುಗೆ ಮನೆಯಲ್ಲಿ ಅಡಗಿರುವ ಬೆಕ್ಕನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಫೈಂಡ್ ದಿ ಸ್ನೈಪರ್’ (/FindTheSniper)…

Read More

IND-W vs SL-W: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ ಸ್ಮೃತಿ ಮಂಧಾನ – Kannada News | Smriti Mandhana Achieves 10,000 International Runs Record in Cricket

ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್‌ ಕಲೆಹಾಕಿದ್ದರೆ, ಇದೀಗ 10000 ರನ್​ಗಳ ಗಡಿ ದಾಟಿರುವ ಸ್ಮೃತಿ, ಮಿಥಾಲಿ ಅವರ ದಾಖಲೆಯನ್ನು ಇನ್ನು ಕೆಲವೇ ಪಂದ್ಯಗಳಲ್ಲಿ ಮುರಿಯಲಿದ್ದಾರೆ. Source link

Read More

ಇನ್ಫೋಸಿಸ್​ನ ಹಿರಿಯ ಅಧಿಕಾರಿಗಳಂತೆ ನಟಿಸಿ 6 ಕೋಟಿ ರೂ. ಪಂಗನಾಮ! ನಾಲ್ವರ ಮೇಲೆ ಎಫ್ಐಆರ್

ಬೆಂಗಳೂರು, ಏಪ್ರಿಲ್ 03: ಇನ್ಫೋಸಿಸ್ (Infosys) ಸಂಸ್ಥೆಯ ಹಿರಿಯ ಅಧಿಕಾರಿಗಳಂತೆ ನಟನೆ ಮಾಡಿ 6.3 ಕೋಟಿ ರೂ. ವಂಚನೆ ನಡೆಸಿದ ಆರೋಪ ಕೇಳಿ ಬಂದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರು ಮರ್ಕಂಟೈಲ್ ಕಂಪನಿ ನೀಡಿದ ದೂರಿನ ಪ್ರಕಾರ, ಗಗನ್ ಎಂಬಾತ ಇನ್ಫೋಸಿಸ್ ಸಂಸ್ಥೆಯ CSR ಪ್ರಾದೇಶಿಕ ಮುಖ್ಯಸ್ಥನಾಗಿ ತಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಆರೋಪಿಸಲಾಗಿದೆ. ನಂಬಿಕೆ ಗಳಿಸಲು ನಕಲಿ ತಂಡ ರಚಿಸಿ ಪರಿಶೀಲನೆ! ತಾನು ಹಿರಿಯ ಅಧಿಕಾರಿಗಳಾದ ನಿಲಾದ್ರಿ ಪ್ರಸಾದ್ ಮಿಶ್ರಾ ಹಾಗೂ…

Read More