ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 61 ವರ್ಷದ ವ್ಯಕ್ತಿಯಿಂದ 2.07 ಕೋಟಿ ರೂ. ಸುಲಿಗೆ – Kannada News | Cyber Fraud: 61 Yr Old Duped of 2.07 Crore in Digital Arrest Scam

ಬೆಂಗಳೂರು, ಏಪ್ರಿಲ್​​ 26: ಪೊಲೀಸರಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳ ನಡುವೆಯೂ ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವಂಚಕರು ಬೀಸುವ ಬಲೆಗೆ ಸಿಲುಕಿ ಹಣ ಕಳೆದುಕೊಳ್ಳುವ ಪ್ರಕರಣಗಳ ಸರಣಿ ರಾಜ್ಯದಲ್ಲಿ ಮುಂದುವರಿದಿದೆ. ಇದೇ ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 61 ವರ್ಷದ ವ್ಯಕ್ತಿಯೋರ್ವರಿಂದ ಆರೋಪಿಗಳು ಕೋಟ್ಯಾಂತರ ಹಣ ಪೀಕಿರುವ ಘಟನೆ ರಾಜ್ಯದಲ್ಲಿ ನಡೆದಿದೆ. ನಿಮ್ಮನ್ನು ಡಿಜಿಟಲ್​​ ಅರೆಸ್ಟ್​​ ಮಾಡಿದ್ದೇವೆ ಎಂದು ಸಂತ್ರಸ್ತ ವ್ಯಕ್ತಿಯನ್ನು ನಂಬಿಸಿದ್ದ ಆರೋಪಿಗಳು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳಂತೆ ನಟನೆ ಮಾಡಿ 2 ಕೋಟಿ ರೂಪಾಯಿಗೂ ಅಧಿಕ ಹಣ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ.

ಪೊಲೀಸರ ಪ್ರಕಾರ, ಮಾರ್ಚ್‌ನಲ್ಲಿ ‘ನ್ಯಾಷನಲ್ ಡೇಟಾ ಪ್ರೊಟೆಕ್ಷನ್ ಸೆಂಟರ್’ ಅಧಿಕಾರಿಯೆಂದು ಹೇಳಿಕೊಂಡ ವ್ಯಕ್ತಿಯಿಂದ ಕರೆ ಬಂದಿದೆ. ಮುಂಬೈ ಮೂಲದ ವ್ಯಕ್ತಿಯೊಬ್ಬರು ಸಿಮ್ ಕಾರ್ಡ್ ಪಡೆಯಲು ನಿಮ್ಮ ಗುರುತಿನ ದಾಖಲೆಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಆ ಸಿಮ್​​ನ ಬೆದರಿಕೆ ಕರೆಗಳು, ಅಸಭ್ಯ ಫೋಟೋ-ವೀಡಿಯೋಗಳ ಕಳುಹಿಸುವಿಕೆ ಹಾಗೂ ಡ್ರಗ್ ಟ್ರಾಫಿಕಿಂಗ್‌ಗೆ ಬಳಸಲಾಗಿದೆ. ಈ ಸಂಬಂಧ ಮುಂಬೈನ ಕೋಲಾಬಾ ಪೊಲೀಸ್ ಠಾಣೆಯಲ್ಲಿ 30-50 ಎಫ್‌ಐಆರ್‌ಗಳು ದಾಖಲಾಗಿವೆ. NIA ಮತ್ತು ED ತನಿಖೆ ನಡೆಸಲಿವೆ ಎಂದು ಹೇಳಿ ಸಂತ್ರಸ್ತನನ್ನು ಬೆದರಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ವ್ಯಕ್ತಿಗೆ 14 ದಿನ ಡಿಜಿಟಲ್ ಅರೆಸ್ಟ್, ₹1.62 ಕೋಟಿ ವಂಚನೆ

ನಂತರ NIA ಮತ್ತು ED ಅಧಿಕಾರಿಗಳಂತೆ ನಟಿಸಿದವರು ಕರೆ ಮಾಡಿ, ಸಂತ್ರಸ್ತ ವ್ಯಕ್ತಿಯ ವೈಯಕ್ತಿಕ ಮಾಹಿತಿ ಸಂಗ್ರಹಿಸಿ, ವಿಲಾಸ್ ರಾವ್ ಪಟೇಲ್ ಎಂಬ ಹೆಸರಿನ ED ಅಧಿಕಾರಿ ಎಂದು ಹೇಳಿಕೊಂಡ ವ್ಯಕ್ತಿಯೊಂದಿಗೆ ಮಾತನಾಡಲು ಸೂಚಿಸಿದ್ದಾರೆ. ವಂಚಕರು ವ್ಯಕ್ತಿಯನ್ನು ಭಯಭೀತಗೊಳಿಸಿ, ಆತಂಕಕಾರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆಂದು ಆರೋಪಿಸಿ ಪರಿಶೀಲನೆ ಮತ್ತು ಪ್ರಕರಣ ಕ್ಲಿಯರೆನ್ಸ್ ಹೆಸರಿನಲ್ಲಿ ಹಣ ವರ್ಗಾಯಿಸಲು ಒತ್ತಾಯಿಸಿದ್ದಾರೆ. ಅದರಂತೆ ಏಪ್ರಿಲ್ 7ರಿಂದ ಏಪ್ರಿಲ್ 18ರವರೆಗೆ, 61 ವರ್ಷದ ಸಂತ್ರಸ್ತ ವ್ಯಕ್ತಿ RTGS ಮೂಲಕ ಆರೋಪಿಗಳು ಸೂಚಿಸಿರುವ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 2,07,04,600 ವರ್ಗಾಯಿಸಿದ್ದಾರೆ ಎಂಬುದು ಗೊತ್ತಾಗಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಇನ್ನು ಕಡ್ಡಾಯ! ಸರ್ಕಾರದ ಮಹತ್ವದ ಆದೇಶ – Kannada News | Mandatory Kannada Newspaper Reading in Karnataka Schools

ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಇನ್ನು ಕಡ್ಡಾಯ!Image Credit source: google Gemini

ಬೆಂಗಳೂರು, ಏಪ್ರಿಲ್ 26: ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆಗಳನ್ನು (Kannada Newspaper) ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.

ಆದೇಶದ ಹಿಂದಿನ ಉದ್ದೇಶಗಳು

  • ಮೊಬೈಲ್ ಚಟಕ್ಕೆ ಬ್ರೇಕ್: ಇತ್ತೀಚಿನ ದಿನಗಳಲ್ಲಿ ಮಕ್ಕಳು ಇಂಟರ್ನೆಟ್ ಮತ್ತು ಸಾಮಾಜಿಕ ಜಾಲತಾಣಗಳಿಗೆ ದಾಸರಾಗುತ್ತಿದ್ದು, ಇದರಿಂದ ಅವರ ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಉಂಟಾಗುತ್ತಿದೆ. ಇದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.
  • ಆರೋಗ್ಯ ರಕ್ಷಣೆ: ಅತಿಯಾದ ಮೊಬೈಲ್ ಬಳಕೆಯಿಂದ ಉಂಟಾಗುತ್ತಿರುವ ದೃಷ್ಟಿ ದೋಷ, ಸ್ಮರಣಶಕ್ತಿ ಕುಂಠಿತ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದು ಇದರ ಗುರಿ.
  • ಕೌಶಲ್ಯ ವೃದ್ಧಿ: ದಿನಪತ್ರಿಕೆ ಓದುವುದರಿಂದ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಹೆಚ್ಚುವುದಲ್ಲದೆ, ಕನ್ನಡ ಭಾಷಾ ಪ್ರೌಢಿಮೆ, ಶಬ್ದಕೋಶ ಮತ್ತು ಬರವಣಿಗೆಯ ಕೌಶಲ್ಯಗಳು ಉತ್ತಮಗೊಳ್ಳಲಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಿದ್ದು, ಅದರ ಮುಂದಿನ ಭಾಗವಾಗಿ ಈ ಶೈಕ್ಷಣಿಕ ಸುಧಾರಣೆ ಜಾರಿಗೆ ಬಂದಿದೆ. ಈ ನೂತನ ನಿಯಮವು ಮಕ್ಕಳನ್ನು ಬಾಹ್ಯ ಜಗತ್ತಿನ ವಿದ್ಯಮಾನಗಳೊಂದಿಗೆ ಸಂಪರ್ಕಿಸಲು ಮತ್ತು ಅವರಲ್ಲಿ ಓದುವ ಆಸಕ್ತಿ ಮೂಡಿಸಲು ಸಹಕಾರಿಯಾಗಲಿದೆ ಎಂದು ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಲಿನ ಕ್ಯಾನ್ ತಲೆಗೆ ಹಾಕಿಕೊಂಡು ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ – Kannada News | Milk Can Mishap: Man in Rajasthan Gets Head Stuck Inside Container

ಅಲ್ವಾರ್, ಏಪ್ರಿಲ್ 26: ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ತರಹೇವಾರಿ ಹರಸಾಹಸ ಮಾಡುವುದು ಸಾಮಾನ್ಯ. ಆದರೆ, ಅಲ್ವಾರ್‌ನ ಮಾಧೋಗಢ ಗ್ರಾಮದ ಕಲೂರಾಮ್ ರೆಬಾರಿ ಎಂಬ ವ್ಯಕ್ತಿ ಮಾಡಿದ ಉಪಾಯ ಮಾತ್ರ ಆತನನ್ನೇ ಸಂಕಷ್ಟಕ್ಕೆ ದೂಡಿತ್ತು. ತಲೆಯ ಮೇಲೆ ಸಿಲುಕಿಕೊಂಡ ಹಾಲಿನ ಕ್ಯಾನ್‌ನಿಂದಾಗಿ ಎರಡು ಗಂಟೆಗಳ ಕಾಲ ಪರದಾಡಿದ ಘಟನೆ ಈಗ ಬೆಳಕಿಗೆ ಬಂದಿದೆ.

ಏಪ್ರಿಲ್ 24ರಂದು ಕಲೂರಾಮ್ ರೆಬಾರಿ ಗೋಧಿ ವಿತರಿಸಲು ಹೋಗುತ್ತಿದ್ದರು. ಅಂದು ಬಿಸಿಲು ವಿಪರೀತವಾಗಿದ್ದರಿಂದ, ತಲೆಗೆ ಬಿಸಿ ತಗುಲಬಾರದೆಂದು ತಮಾಷೆಗಾಗಿ ಅಥವಾ ರಕ್ಷಣೆಗಾಗಿ ಪಕ್ಕದಲ್ಲಿದ್ದ 15 ಲೀಟರ್ ಹಾಲಿನ ಸ್ಟೀಲ್ ಕ್ಯಾನ್ ಅನ್ನು ತಮ್ಮ ತಲೆಯ ಮೇಲೆ ಹಾಕಿಕೊಂಡರು. ಆದರೆ, ಕ್ಯಾನ್ ಒಳಗೆ ಹೋದ ತಲೆ ಹೊರಗೆ ಬರಲೇ ಇಲ್ಲ.

ಕೂಡಲೇ ಗ್ರಾಮಸ್ಥರು ಜಮಾಯಿಸಿ ಕ್ಯಾನ್ ತೆಗೆಯಲು ಹರಸಾಹಸ ಪಟ್ಟರು. ಎಣ್ಣೆ ಹಚ್ಚುವುದು, ಸೋಪು ಹಚ್ಚಿ ಎಳೆಯುವುದು ಸೇರಿದಂತೆ ಹಲವು ದೇಸಿ ತಂತ್ರಗಳನ್ನು ಬಳಸಿದರೂ ಕ್ಯಾನ್ ಮಾತ್ರ ಇಂಚೂ ಕದಲಲಿಲ್ಲ. ವಿದ್ಯುತ್ ಚಾಲಿತ ಗ್ರೈಂಡರ್ ಯಂತ್ರವನ್ನು ಬಳಸಿ ಅತ್ಯಂತ ನಾಜೂಕಿನಿಂದ ಕ್ಯಾನ್ ಅನ್ನು ಕತ್ತರಿಸಲು ನಿರ್ಧರಿಸಲಾಯಿತು. ಸ್ವಲ್ಪವೇ ಹೆಚ್ಚುಕಡಿಮೆಯಾದರೂ ವ್ಯಕ್ತಿ ಮುಖಕ್ಕೆ ಗಾಯವಾಗುವ ಅಪಾಯವಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಒಂದೇ ದಿನ ಬರೋಬ್ಬರಿ 16 ಕ್ಯಾಚ್​ಗಳು ಡ್ರಾಪ್..! – Kannada News | IPL 2026: A Comedy of Errors on the Field

ಕ್ರಿಕೆಟ್‌ನಲ್ಲಿ “ಕ್ಯಾಚಸ್ ವಿನ್ ಮ್ಯಾಚಸ್” (Catches win matches) ಎಂಬ ಮಾತಿದೆ. ಈ ಮಾತನ್ನು ಏಪ್ರಿಲ್ 25 ರಂದು ನಡೆದ ಎರಡು ಪಂದ್ಯಗಳು ಅಕ್ಷರಶಃ ನಿಜವಾಗಿಸಿದ್ದಾರೆ. ಈ ಎರಡೂ ಮ್ಯಾಚ್​ಗಳಲ್ಲಿ ಫೀಲ್ಡರ್‌ಗಳು ಮಾಡಿದ ಎಡವಟ್ಟುಗಳಿಂದ ಪಂದ್ಯದ ಫಲಿತಾಂಶ ಬದಲಾಗಿದೆ. ಹೀಗೆ ಇಡೀ ಪಂದ್ಯದ ಗತಿಯನ್ನೇ ಬದಲಿಸಿದ ಆ “ಕೈಚೆಲ್ಲಿದ ಕ್ಯಾಚ್​ಗಳ” ಸಂಪೂರ್ಣ ವಿವರ ಇಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ಪಂದ್ಯ:

ಈ ಪಂದ್ಯದಲ್ಲಿ ಪಂಜಾಬ್ ತಂಡ 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿ ವಿಶ್ವ ದಾಖಲೆ ನಿರ್ಮಿಸಿತು. ಇದಕ್ಕೆ ಪಂಜಾಬ್ ಬ್ಯಾಟರ್‌ಗಳಿಗೆ ಸಿಕ್ಕ ಜೀವದಾನಗಳೇ ಮುಖ್ಯ ಕಾರಣ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೃಹತ್ ಮೊತ್ತ ಪೇರಿಸಲು ಪಂಜಾಬ್ ಕಿಂಗ್ಸ್ ಆಟಗಾರರು ಕೈಚೆಲ್ಲಿದ ಕ್ಯಾಚ್​ಗಳು ಕೂಡ ಕಾರಣ ಎಂಬುದು ಇಲ್ಲಿ ಉಲ್ಲೇಖಾರ್ಹ. ಆ ಕ್ಯಾಚ್​ಗಳೆಂದರೆ…

  • KL ರಾಹುಲ್ ಅವರ ಕ್ಯಾಚ್‌ಗಳು: ಕೆ.ಎಲ್. ರಾಹುಲ್ 12 ರನ್ ಗಳಿಸಿದ್ದಾಗ ಶಶಾಂಕ್ ಸಿಂಗ್ (2.2 ಓವರ್) ಮತ್ತು ನಂತರ ವಿಜಯಕುಮಾರ್ ವೈಶಾಕ್ (9.2 ಓವರ್) ಕ್ಯಾಚ್ ಕೈಬಿಟ್ಟಿದ್ದರು. ಇದರ ಲಾಭ ಪಡೆದ ರಾಹುಲ್ ಅಜೇಯ 152 ರನ್* ಸಿಡಿಸಿದರು.
  • ಶ್ರೇಯಸ್ ಅಯ್ಯರ್ ಜೀವದಾನ: ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಕರುಣ್ ನಾಯರ್ ಮೂರು ಎಸೆತಗಳ ಅಂತರದಲ್ಲಿ ಎರಡು ಬಾರಿ (14.6 ಮತ್ತು 15.2 ಓವರ್) ಜೀವದಾನ ನೀಡಿದರು.
  • ಬೌಂಡರಿ ಲೈನ್ ಎಡವಟ್ಟು: ಮಾರ್ಕಸ್ ಸ್ಟೋಯಿನಿಸ್ (16.6 ಓವರ್) ಮತ್ತು ಮುಕೇಶ್ ಕುಮಾರ್ (8.1 ಓವರ್) ಇಬ್ಬರೂ ಕ್ಯಾಚ್ ಹಿಡಿದರೂ, ನಿಯಂತ್ರಣ ತಪ್ಪಿ ಬೌಂಡರಿ ಕುಶನ್ ಮುಟ್ಟಿದ್ದರಿಂದ ಅವು ಸಿಕ್ಸರ್ ಆಗಿ ಪರಿವರ್ತನೆಯಾದವು.
  • ಇತರ ಮಿಸ್‌ಗಳು: ಆಖಿಬ್ ನಬಿ ಮತ್ತು ಲುಂಗಿ ಎನ್ಗಿಡಿ ಕೂಡ ಕ್ಯಾಚ್​ಗಳನ್ನು ಹಿಡಿಯುವಲ್ಲಿ ವಿಫಲರಾಗಿದ್ದರು.

ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ಪಂದ್ಯ:

ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಕಳಪೆ ಫೀಲ್ಡಿಂಗ್ ಪ್ರದರ್ಶಿಸಿದರೆ, ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಕಳಪೆ ಫೀಲ್ಡಿಂಗ್​ಗೆ ಭಾರೀ ಬೆಲೆ ತೆರಬೇಕಾಯಿತು.

  • ಅಭಿಷೇಕ್ ಶರ್ಮಾ ಕ್ಯಾಚ್: ರವೀಂದ್ರ ಜಡೇಜಾ ಮತ್ತು ಶಿಮ್ರಾನ್ ಹೆಟ್ಮೆಯರ್ ಇಬ್ಬರೂ ಅಭಿಷೇಕ್ ಶರ್ಮಾ ಅವರ ಕ್ಯಾಚ್ ಪಡೆಯುವಲ್ಲಿ ವಿಫಲರಾಗಿದ್ದರು.
  •  ಧ್ರುವ್ ಜುರೆಲ್ ಕ್ಯಾಚ್: ಸಾಕಿಬ್ ಹುಸೇನ್ ಅವರು ಧ್ರುವ್ ಜುರೆಲ್ ಅವರು ನೀಡಿ ಕ್ಯಾಚ್ ಅನ್ನು ಎರಡು ಬಾರಿ (5.6 ಮತ್ತು 8.5 ಓವರ್) ಕೈಬಿಟ್ಟಿದ್ದರು.
  • ಇತರೆ ಮಿಸ್​ಗಳು: ಟ್ರಾವಿಸ್ ಹೆಡ್, ರಿಯಾನ್ ಪರಾಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರಿಗೂ ಎದುರಾಳಿ ತಂಡದ ಫೀಲ್ಡಿಂಗ್ ಮಿಸ್‌ಗಳಿಂದಾಗಿ ಹೊಸ ಜೀವದಾನಗಳು ಸಿಕ್ಕವು.

ಇದನ್ನೂ ಓದಿ: ಬರೋಬ್ಬರಿ 986 ರನ್​ಗಳು… ಐಪಿಎಲ್​ನಲ್ಲಿ ಹೊಸ ಇತಿಹಾಸ

ಒಟ್ಟಾರೆಯಾಗಿ, ಈ ದಿನವನ್ನು “ಕೈಚೆಲ್ಲಿದ ಅವಕಾಶಗಳ ದಿನ” (A Day of Missed Chances) ಎಂದು ಕರೆಯಲಾಗಿದೆ, ಏಕೆಂದರೆ ಈ ತಪ್ಪುಗಳೇ ಪಂದ್ಯದ ಫಲಿತಾಂಶವನ್ನು ಬದಲಿಸಿದವು.

ಕೈಚೆಲ್ಲಿದ ಕ್ಯಾಚ್​ಗಳ ಸಂಕ್ಷಿಪ್ತ ವಿವರಗಳು:

  • 2.2 ಓವರ್​– ಶಶಾಂಕ್ ಸಿಂಗ್ ಕೈಯಿಂದ ಕೆ.ಎಲ್. ರಾಹುಲ್ ಅವರ ಕ್ಯಾಚ್ ಮಿಸ್.
  • 9.2 ಓವರ್– ವಿಜಯಕುಮಾರ್ ವೈಶಾಕ್ ಕೈಯಿಂದ ಕೆ.ಎಲ್. ರಾಹುಲ್ ಅವರ ಕ್ಯಾಚ್ ಮಿಸ್.
  • 16.6 ಓವರ್​– ಮಾರ್ಕಸ್ ಸ್ಟೊಯಿನಿಸ್ ಕ್ಯಾಚ್ ಹಿಡಿದರೂ, ಬೌಂಡರಿ ಲೈನ್ ಟಚ್ ಆಗಿ ಅದು ಸಿಕ್ಸ್​ ಆಯಿತು.
  • 1.3  ಓವರ್​– ಆಖಿಬ್ ನಬಿ ಕೈಯಿಂದ ಪ್ರಭ್‌ಸಿಮ್ರಾನ್ ಸಿಂಗ್ ಅವರ ಕ್ಯಾಚ್ ಮಿಸ್.
  • 2.3 ಓವರ್​– ಲುಂಗಿ ಎನ್ಗಿಡಿ ಕ್ಯಾಚ್ ಹಿಡಿಯುವಲ್ಲಿ ವಿಫಲರಾದರು.
  • 8.1 ಓವರ್​– ಮುಕೇಶ್ ಕುಮಾರ್ ಕ್ಯಾಚ್ ಹಿಡಿದರೂ, ಬೌಂಡರಿ ಕುಶನ್ ಅನ್ನು ಮುಟ್ಟಿದರು.
  • 14.6 ಓವರ್​– ಕರುಣ್ ನಾಯರ್ ಕೈಯಿಂದ ಶ್ರೇಯಸ್ ಅಯ್ಯರ್ ಅವರ ಕ್ಯಾಚ್ ಮಿಸ್.
  • 15.2 ಓವರ್​– ಕರುಣ್ ನಾಯರ್ ಕೈಯಿಂದ ಶ್ರೇಯಸ್ ಅಯ್ಯರ್ ಅವರ ಕ್ಯಾಚ್ ಮಿಸ್.
  • 4.1 ಓವರ್​– ಅನಿಖೇತ್ ವರ್ಮಾ ಕೈಯಿಂದ ವೈಭವ್ ಸೂರ್ಯವಂಶಿ ಅವರ ಕ್ಯಾಚ್ ಮಿಸ್.
  • 5.6  ಓವರ್​– ಸಾಕಿಬ್ ಹುಸೇನ್ ಕೈಯಿಂದ ಧ್ರುವ್ ಜುರೆಲ್ ಅವರ ಕ್ಯಾಚ್ ಮಿಸ್.
  • 8.5  ಓವರ್​– ಸಾಕಿಬ್ ಹುಸೇನ್ ಕೈಯಿಂದ ಧ್ರುವ್ ಜುರೆಲ್ ಅವರ ಕ್ಯಾಚ್ ಮಿಸ್.
  • 15.2 ಓವರ್​– ಪ್ರಫುಲ್ ಹಿಂಗೆ ಕೈಯಿಂದ ರಿಯಾನ್ ಪರಾಗ್ ಅವರ ಕ್ಯಾಚ್ ಮಿಸ್.
  • 0.1  ಓವರ್​– ಧ್ರುವ್ ಜುರೆಲ್ ಕೈಯಿಂದ ಟ್ರಾವಿಸ್ ಹೆಡ್ ಅವರ ಕ್ಯಾಚ್ ಮಿಸ್.
  • 3.2 ಓವರ್​– ಅಭಿಷೇಕ್ ಶರ್ಮಾ ಅವರ ಕ್ಯಾಚ್ ಪಡೆಯುವಲ್ಲಿ ಶಿಮ್ರಾನ್ ಹೆಟ್ಮೆಯರ್ ವಿಫಲರಾದರು.
  • 4.6  ಓವರ್– ರವೀಂದ್ರ ಜಡೇಜಾ ಕೈಯಿಂದ ಅಭಿಷೇಕ್ ಶರ್ಮಾ ಅವರ ಕ್ಯಾಚ್ ಮಿಸ್.
  • 14.1 ಓವರ್​– ಬ್ರಿಜೇಶ್ ಶರ್ಮಾ ಕೈಯಿಂದ ನಿತೀಶ್ ಕುಮಾರ್ ರೆಡ್ಡಿ ಅವರ ಕ್ಯಾಚ್ ಮಿಸ್.

Source link

‘ಟಾಕ್ಸಿಕ್’ ಟೀಸರ್​ನಲ್ಲಿ ಅಂಥ ದೃಶ್ಯ ಇದೆ ಎಂದು ಟೀಕಿಸಿದವರಿಗೆ ಉತ್ತರ ನೀಡಿದ ಯಶ್ – Kannada News | Yash talks about bold scenes in Toxic teaser and Geethu Mohandas in CinemaCon

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಪ್ರಚಾರ ಜೋರಾಗಿ ನಡೆಯುತ್ತಿದೆ. ಯಶ್ ಅವರು ವಿದೇಶದಲ್ಲಿ ಸಂದರ್ಶನ ನೀಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ‘ಟಾಕ್ಸಿಕ್’ (Toxic) ಚಿತ್ರದ ಟೀಸರ್​ನಲ್ಲಿ ಇರುವ ಕೆಲವು ಬೋಲ್ಡ್ ದೃಶ್ಯಗಳ ಬಗ್ಗೆ ಜನರಿಂದ ವ್ಯಕ್ತವಾದ ಟೀಕೆಗಳಿಗೆ ಯಶ್ ಈಗ ಉತ್ತರ ನೀಡಿದ್ದಾರೆ. ಆ ಮೂಲಕ ಅವರು ಸಿನಿಮಾ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.

ಅಮೆರಿಕದಲ್ಲಿ ನಡೆದ ‘ಸಿನಿಮಾಕಾನ್’ ಈವೆಂಟ್​ನಲ್ಲಿ ಪಾಲ್ಗೊಂಡಿದ್ದ ಯಶ್ ಅವರು ಸಂದರ್ಶನ ನೀಡಿದ್ದಾರೆ. ಈ ವೇಳೆ ‘ಟಾಕ್ಸಿಕ್’ ಚಿತ್ರದ ನಿರ್ದೇಶಕಿ ಗೀತು ಮೋಹನ್‌ದಾಸ್ ಬಗ್ಗೆ ಮಾತನಾಡಿದ ಅವರು, ‘ಭಾರತದಲ್ಲಿ ಆ್ಯಕ್ಷನ್ ಸಿನಿಮಾಗಳನ್ನು ಸಾಮಾನ್ಯವಾಗಿ ಪುರುಷ ನಿರ್ದೇಶಕರೇ ನಿರ್ದೇಶಿಸುತ್ತಾರೆ ಎಂಬ ಇತಿಹಾಸವಿದೆ. ಆದರೆ, ಒಬ್ಬ ಮಹಿಳಾ ನಿರ್ದೇಶಕಿ ಗ್ಯಾಂಗ್‌ಸ್ಟರ್ ಸಿನಿಮಾವನ್ನು ತನ್ನದೇ ಆದ ಹೆಣ್ಣಿನ ದೃಷ್ಟಿಕೋನದಿಂದ ತೆರೆಯ ಮೇಲೆ ತರುತ್ತಿರುವುದು ತುಂಬಾ ಹೊಸತನದಿಂದ ಕೂಡಿದೆ’ ಎಂದಿದ್ದಾರೆ.

ಚಿತ್ರದಲ್ಲಿನ ಬೋಲ್ಡ್ ದೃಶ್ಯಗಳ ಬಗ್ಗೆ ಮಾತನಾಡಿದ ಅವರು, ‘ಗೀತು ಅವರು ಕಥೆಯನ್ನು ಬರೆಯುವ ರೀತಿ ಮತ್ತು ಅದರಲ್ಲಿ ಪ್ರಣಯ ತೋರಿಸುವ ವಿಧಾನವೇ ಬೇರೆ. ಒಬ್ಬ ಮಹಿಳೆ ಬಯಕೆ ಅಥವಾ ಭಾವನೆಗಳನ್ನು ಎಷ್ಟು ಆಳವಾಗಿ ಮತ್ತು ವಿಭಿನ್ನವಾಗಿ ತೋರಿಸಬಲ್ಲರು ಎಂಬುದು ಈ ಚಿತ್ರದ ಜರ್ನಿಯಲ್ಲಿ ನನಗೆ ಅರಿವಾಯಿತು. ಇದು ಈವರೆಗಿನ ಆ್ಯಕ್ಷನ್ ಸಿನಿಮಾಗಳಿಗಿಂತ ಬಹಳ ವಿಭಿನ್ನವಾಗಿರಲಿದೆ’ ಎಂದು ಯಶ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

2025ರ ಜನವರಿಯಲ್ಲಿ ಬಿಡುಗಡೆಯಾದ ಬರ್ತ್‌ಡೇ ಟೀಸರ್​​ನಲ್ಲಿ ಯಶ್ ಅವರು ಕ್ಯಾಸಿನೋವೊಂದಕ್ಕೆ ಎಂಟ್ರಿ ಕೊಡುವ ದೃಶ್ಯವಿತ್ತು. ಇತ್ತೀಚೆಗೆ ಬಿಡುಗಡೆಯಾದ ‘ಇಂಟ್ರಡ್ಯೂಸಿಂಗ್ ರಾಯಾ’ ವಿಡಿಯೋದಲ್ಲಿನ ಕೆಲವು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಸ್ಮಶಾನ, ಕಾರ್ ಮತ್ತು ಬಾಂಬ್ ಒಳಗೊಂಡ ಆ ದೃಶ್ಯವು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ಕ್ರಿಶ್ಚಿಯನ್ ಫೆಡರೇಷನ್ ದೂರನ್ನು ದಾಖಲಿಸಿತ್ತು.

ಇದನ್ನೂ ಓದಿ: ‘ಟಾಕ್ಸಿಕ್’ ಕಥೆ ಏನು ಎಂಬುದನ್ನು ಓಪನ್ ಆಗಿ ಹೇಳಿದ ಯಶ್; ವಿಡಿಯೋ ವೈರಲ್

ಮಿಶ್ರ ಪ್ರತಿಕ್ರಿಯೆ ಮತ್ತು ಸಣ್ಣಪುಟ್ಟ ವಿರೋಧಗಳ ನಡುವೆಯೂ, ‘ಟಾಕ್ಸಿಕ್’ ಚಿತ್ರವು ತನ್ನ ವಿಭಿನ್ನ ಮೇಕಿಂಗ್ ಮತ್ತು ಯಶ್ ಅವರ ಸ್ಟೈಲಿಶ್ ಲುಕ್‌ನಿಂದಾಗಿ ಜಾಗತಿಕ ಮಟ್ಟದಲ್ಲಿ ಕುತೂಹಲ ಮೂಡಿಸಿರುವುದಂತೂ ನಿಜ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಕಾರಣಾಂತರಗಳಿಂದ ಮುಂದೂಡಿಕೆ ಆಯಿತು. ಜೂನ್ 4ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

70 ವರ್ಷದ ವ್ಯಕ್ತಿಯಿಂದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ – Kannada News | Gujarat Case: Elderly Man Held Over Alleged Assault of Disabled Woman

ಮಹಿಸಾಗರ್, ಏಪ್ರಿಲ್ 26: ಸಂಬಂಧಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಘಟನೆಯೊಂದು ಜಿಲ್ಲೆಯ ಲುನಾವಾಡ ಪಟ್ಟಣದಲ್ಲಿ ವರದಿಯಾಗಿದೆ. 26 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಆಕೆಯ 70 ವರ್ಷದ ಸಂಬಂಧಿಕನೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಸಂತ್ರಸ್ತೆಯ ನೆರೆಮನೆಯವನಾಗಿದ್ದು, ಸಂಬಂಧದಲ್ಲಿ ಚಿಕ್ಕಪ್ಪ ಅಥವಾ ದೊಡ್ಡಪ್ಪನಾಗಬೇಕಿತ್ತು. ಘಟನೆ ನಡೆದ ದಿನ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಗಮನಿಸಿದ ಆರೋಪಿ, ತನ್ನ ಪತ್ನಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ. ನಂತರ ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆತಂದು, ಬಾಗಿಲು ಲಾಕ್ ಮಾಡಿ ಮೃಗೀಯವಾಗಿ ವರ್ತಿಸಿದ್ದಾನೆ.

ದೌರ್ಜನ್ಯದ ನಂತರ ಈ ವಿಷಯವನ್ನು ಯಾರಿಗೂ ತಿಳಿಸದಂತೆ ಆರೋಪಿ ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಿದ್ದಾನೆ. ಆದರೆ, ಸಂತ್ರಸ್ತ ಮಹಿಳೆ ಧೈರ್ಯಗುಂದದೆ ನಡೆದ ಅನ್ಯಾಯವನ್ನು ತನ್ನ ತಾಯಿಗೆ ತಿಳಿಸಿದ್ದಾರೆ. ಮಗಳ ಸ್ಥಿತಿಯನ್ನು ಕಂಡು ಮರುಗಿದ ತಾಯಿ ಕೂಡಲೇ ಲುನಾವಾಡ ಪೊಲೀಸ್ ಠಾಣೆಗೆ ಧಾವಿಸಿ ದೂರು ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು?

ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, 70 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಂಗವಿಕಲ ವ್ಯಕ್ತಿಗಳ ಮೇಲಿನ ಅಪರಾಧಗಳು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಠಿಣ ಕಾನೂನು ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮನೆಯ ಹತ್ತಿರವೇ ಇರುವ ವಯಸ್ಸಾದ ಸಂಬಂಧಿಯೇ ಇಂತಹ ವಿಕೃತ ಕೃತ್ಯವೆಸಗಿರುವುದು ಸ್ಥಳೀಯ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ವಯಸ್ಸಾದವರು ಮಕ್ಕಳಿಗೆ ಮತ್ತು ಅಬಲರಿಗೆ ರಕ್ಷಣೆ ನೀಡಬೇಕು, ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ” ಎಂದು ಜನರು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬರೋಬ್ಬರಿ 986 ರನ್​ಗಳು… ಐಪಿಎಲ್​ನಲ್ಲಿ ಹೊಸ ಇತಿಹಾಸ – Kannada News | 983 Runs, One Day: IPL Hits a New High

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ಪಂಜಾಬ್ ಕಿಂಗ್ಸ್ (PBKS)​, ಡೆಲ್ಲಿ ಕ್ಯಾಪಿಟಲ್ಸ್ (DC), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು. ಅದು ಸಹ ರನ್​ ರಾಶಿ ಪೇರಿಸುವ ಮೂಲಕ ಎಂಬುದು ವಿಶೇಷ.

Source link

Karun Nair: ಕರುಣ್ ನಾಯರ್​ನಿಂದ ಒಂದಲ್ಲ ಎರಡು ಕ್ಯಾಚ್ ಡ್ರಾಪ್: ಕೆಎಲ್ ರಾಹುಲ್ ಸ್ಫೋಟಕ ಆಟ ವ್ಯರ್ಥ – Kannada News | Karun Nair dropped two catches of Shreyas Iyer KL Rahul’s explosive batting wasted

ಬೆಂಗಳೂರು (ಏ. 26): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 35ನೇ ಪಂದ್ಯ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಪಂಜಾಬ್ ಕಿಂಗ್ಸ್ ತಂಡವು 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿತು, ಆದರೆ ಈ ಸೋಲು ಡೆಲ್ಲಿ ಕ್ಯಾಪಿಟಲ್ಸ್‌ನ ಗಾಯಗಳಿಗೆ ಉಪ್ಪು ಸವರಿತು. ಇಲ್ಲಿ ಇಡೀ ಪಂದ್ಯದ ಗತಿಯನ್ನು ಬದಲಾಯಿಸಿದ್ದು ಬ್ಯಾಟಿಂಗ್ ಅಲ್ಲ, ಡೆಲ್ಲಿಯ ಕಳಪೆ ಫೀಲ್ಡಿಂಗ್. ಕರುಣ್ ನಾಯರ್ (Karun Nair) ಈ ಪಂದ್ಯದಲ್ಲಿ ಎರಡು ದೊಡ್ಡ ತಪ್ಪುಗಳನ್ನು ಮಾಡಿ ಡೆಲ್ಲಿ ಕ್ಯಾಪಿಟಲ್ಸ್​ನ ಹೀನಾಯ ಸೋಲಿಗೆ ಕಾರಣರಾದರು.

ಕರುಣ್ ನಾಯರ್ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅವರ ಎರಡು ಸುಲಭ ಕ್ಯಾಚ್‌ಗಳನ್ನು ಕೈಬಿಟ್ಟಿದ್ದು ಪಂದ್ಯಕ್ಕೆ ದೊಡ್ಡ ತಿರುವು ಸಿಕ್ಕಿತು. ಮೊದಲನೆಯದು 16 ನೇ ಓವರ್‌ನಲ್ಲಿ ವಿಪ್ರಜ್ ನಿಗಮ್ ಎಸೆತದಲ್ಲಿ ಲಾಂಗ್-ಆಫ್‌ನಲ್ಲಿ ಕರುಣ್ ಕ್ಯಾಚ್ ಬಿಟ್ಟರು. ನಂತರ, ಮುಂದಿನ ಓವರ್‌ನಲ್ಲಿ, ನಾಯರ್ ಕುಲದೀಪ್ ಯಾದವ್ ಎಸೆತದಲ್ಲಿ ಲಾಂಗ್-ಆನ್‌ನಲ್ಲಿ ಅಯ್ಯರ್‌ಗೆ ಮತ್ತೊಂದು ಜೀವದಾನ ನೀಡಿದರು. ಈ ಎರಡೂ ಜೀವದಾನವನ್ನು ಎರಡೂ ಕೈಗಳಿಂದ ಬಾಚಿಕೊಂಡ ಅಯ್ಯರ್ ದೆಹಲಿ ಬೌಲರ್‌ಗಳ ಬೆವರಿಳಿಸಿಬಿಟ್ಟರು. ಕೇವಲ 26 ಎಸೆತಗಳಲ್ಲಿ ಅರ್ಧಶತಕವನ್ನು ತಲುಪಿ ಅಜೇಯ 71 ರನ್ ಗಳಿಸಿ ತಂಡವನ್ನು ಕೇವಲ 18.5 ಓವರ್‌ಗಳಲ್ಲಿ ಗೆಲುವಿನತ್ತ ಕೊಂಡೊಯ್ದರು.

ಕರುಣ್ ನಾಯರ್ ಕ್ಯಾಚ್ ಡ್ರಾಪ್ ಮಾಡಿದ ವಿಡಿಯೋ:

ಕೆಎಲ್ ರಾಹುಲ್ ಐತಿಹಾಸಿಕ ಇನ್ನಿಂಗ್ಸ್ ವ್ಯರ್ಥ

ಈ ಪಂದ್ಯದಲ್ಲಿ ಡೆಲ್ಲಿ ನಾಯಕ ಕೆ.ಎಲ್. ರಾಹುಲ್ ಅಜೇಯ 152 ರನ್ ಗಳಿಸಿ ಐಪಿಎಲ್ ಇತಿಹಾಸದಲ್ಲಿ ದಾಖಲೆಯ ವೈಯಕ್ತಿಕ ಸ್ಕೋರ್‌ ಗಳಿಸಿದರು. ಆದರೆ ನಾಯರ್ ಅವರ ಕಳಪೆ ಫೀಲ್ಡಿಂಗ್ ಈ ಮಾಸ್ಟರ್‌ಕ್ಲಾಸ್ ಇನ್ನಿಂಗ್ಸ್ ಅನ್ನು ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಡಲಿಲ್ಲ. ಪಂಜಾಬ್ ಕಿಂಗ್ಸ್ 265 ರನ್ ಗಳಿಸಿ, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಯಶಸ್ವಿ ರನ್-ಚೇಸ್ ಅನ್ನು ಪೂರ್ಣಗೊಳಿಸಿತು. ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಪವರ್‌ಪ್ಲೇನಲ್ಲಿಯೇ 116 ರನ್ ಗಳಿಸುವ ಮೂಲಕ ದೆಹಲಿಯನ್ನು ಹಿಮ್ಮೆಟ್ಟಿಸಿದರು. ಇದರ ನಂತರ, ನಾಯರ್ ಅವರ ಕಳಪೆ ಫೀಲ್ಡಿಂಗ್ ಡೆಲ್ಲಿಯ ಉಳಿದ ಕೆಲಸವನ್ನು ಪೂರ್ಣಗೊಳಿಸಿತು.

RR vs SRH: ವೈಭವ್ ಅಬ್ಬರದ ಶತಕಕ್ಕೂ ಒಲಿಯದ ಜಯ; ಸನ್‌ರೈಸರ್ಸ್​ಗೆ ಸುಲಭ ಗೆಲುವು

ಕರುಣ್ ನಾಯರ್ ವಿರುದ್ಧ ಸಿಟ್ಟಾದ ಫ್ಯಾನ್ಸ್

ಕರುಣ್ ನಾಯರ್ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟ್ರೋಲಿಂಗ್​ಗೆ ಗುರಿಯಾಗಿದ್ದಾರೆ. ಅಯ್ಯರ್ ಕ್ಯಾಚ್ ಸಕಾಲದಲ್ಲಿ ಪಡೆದಿದ್ದರೆ ಡೆಲ್ಲಿ ಸುಲಭವಾಗಿ ಪಂದ್ಯ ಗೆಲ್ಲಬಹುದಿತ್ತು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಡೆಲ್ಲಿ ತಂಡ ಈ ಋತುವಿನಲ್ಲಿ ಎದುರಿಸಿದ ನಾಲ್ಕನೇ ಸೋಲು ಇದಾಗಿದ್ದು, ಪಂಜಾಬ್ ತಂಡ ಅಜೇಯವಾಗಿ ಉಳಿದಿದ್ದು, ಪ್ಲೇಆಫ್ ತಲುಪುವ ಹಂತದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:12 am, Sun, 26 April 26

Source link

ದೆಹಲಿ ಮೆಟ್ರೋ ನಿಲ್ದಾಣದ ಮಹಿಳಾ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ – Kannada News | Man Found Dead Inside Ladies’ Washroom at Delhi Metro Station

ನವದೆಹಲಿ, ಏಪ್ರಿಲ್ 26: ದೆಹಲಿಯ ಇಂದರ್​ಲೋಕ್ ಮೆಟ್ರೋ(Metro) ನಿಲ್ದಾಣದಲ್ಲಿ ಮಹಿಳಾ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಏಪ್ರಿಲ್ 25ರ ಶನಿವಾರ ಸಂಜೆ ಸುಮಾರು 5.33ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಮೆಟ್ರೋ ನಿಲ್ದಾಣದ ಮಹಿಳೆಯರ ಶೌಚಾಲಯವು ಒಳಗಿನಿಂದ ಲಾಕ್ ಆಗಿದ್ದು, ಅಲ್ಲಿಂದ ತೀವ್ರವಾದ ದುರ್ವಾಸನೆ ಬರುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡವು ಶೌಚಾಲಯದ ಬಾಗಿಲನ್ನು ಒಡೆದು ಒಳಪ್ರವೇಶಿಸಿದೆ.

ಬಾಗಿಲು ಒಡೆದಾಗ ಪೊಲೀಸರಿಗೆ ಆಘಾತ ಕಾದಿತ್ತು. ಶೌಚಾಲಯದೊಳಗೆ ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯ ಶವ ನೇತಾಡುತ್ತಿರುವುದು ಕಂಡುಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ವ್ಯಕ್ತಿಯು ಅದೇ ಶೌಚಾಲಯದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿದ್ದರಿಂದ, ಸಾವು ಸಂಭವಿಸಿ ಕನಿಷ್ಠ ಎರಡು ದಿನಗಳಾಗಿರಬಹುದು ಎಂದು ಶಂಕಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಮೃತ ವ್ಯಕ್ತಿಯನ್ನು ಕೊನೆಯ ಬಾರಿಗೆ ಎರಡು ದಿನಗಳ ಹಿಂದೆ ಕೆಲಸದ ಸ್ಥಳದಲ್ಲಿ ನೋಡಲಾಗಿತ್ತು. ಅಂದಿನಿಂದ ಅವರು ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಶೌಚಾಲಯದ ಬಾಗಿಲು ಒಳಗಿನಿಂದ ಲಾಕ್ ಆಗಿದ್ದರಿಂದ ಇದು ಆತ್ಮಹತ್ಯೆ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದ್ದರೂ, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

ಅಪರಾಧ ವಿಭಾಗದ ತಜ್ಞರು ಸ್ಥಳವನ್ನು ಪರಿಶೀಲಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಬಿಎನ್‌ಎಸ್‌ಎಸ್‌ನ (BNSS) ಸೆಕ್ಷನ್ 194ರ ಅಡಿಯಲ್ಲಿ ವಿಚಾರಣೆ ಆರಂಭಿಸಲಾಗಿದ್ದು, ಮೆಟ್ರೋ ಅಧಿಕಾರಿಗಳ ಸಹಕಾರದೊಂದಿಗೆ ಮೃತರ ಪೂರ್ಣ ಗುರುತು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ.

ಮತ್ತಷ್ಟು ಓದಿ: ನಮ್ಮ ಮೆಟ್ರೋ ಪಿಂಕ್​​ ಲೈನ್​​ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು

ಮೆಟ್ರೋ ನಿಲ್ದಾಣದಂತಹ ಜನನಿಬಿಡ ಪ್ರದೇಶದಲ್ಲಿ ಮಹಿಳೆಯರ ಶೌಚಾಲಯದೊಳಗೆ ವ್ಯಕ್ತಿ ಶವ ಪತ್ತೆಯಾಗಿರುವುದು ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಸಾವಿನ ಹಿಂದಿನ ಅಸಲಿ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿದುಬರಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Bengaluru Air Quality: ಬಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari Air quality gets worse, Bengaluru AQI is slightly better

ಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ
Image Credit source: google Gemini

ಬೆಂಗಳೂರು, ಏಪ್ರಿಲ್ 26: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಕಳೆದ ತಿಂಗಳಿಂದ ಸುಧಾರಿಸಿದ್ದ AQI

ಬಳ್ಳಾರಿಯಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಇದೀಗ ಮತ್ತೊಮ್ಮೆ ಜಿಲ್ಲೆಯ ವಾಯು ಗುಣಮಟ್ಟ ಕಳಪೆಯಾಗಿದ್ದು, 150ಕ್ಕೂ ಹೆಚ್ಚಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 129ಕ್ಕೆ ತಲುಪಿದೆ.

ಮಂಗಳೂರು ಮತ್ತು ಉಡುಪಿಯ AQI 100ಕ್ಕಿಂತ ಹೆಚ್ಚಿದ್ದು, ಅನಾರೋಗ್ಯಕರ ಮಟ್ಟದಲ್ಲಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 129
  • ಮಂಗಳೂರು-148
  • ಮೈಸೂರು – 121
  • ಬೆಳಗಾವಿ – 120
  • ಕಲಬುರ್ಗಿ-144
  • ಶಿವಮೊಗ್ಗ –124
  • ಬಳ್ಳಾರಿ – 158
  • ಹುಬ್ಬಳ್ಳಿ- 136
  • ಉಡುಪಿ –138
  • ವಿಜಯಪುರ – 93

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version