ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, ತೆಲಂಗಾಣದ ನಾಮಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಘಟನೆ – Kannada News | Blaze Erupts in Charminar Express Coach Near Telangana Station

ಭುವನಗಿರಿ, ಏಪ್ರಿಲ್ 26: ತೆಲಂಗಾಣದ ಅಲೆರ್ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ(Fire) ಕಾಣಿಸಿಕೊಂಡಿದೆ. ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆಯೇ ಬೋಗಿಯೊಂದರಿಂದ ಹೊಗೆ ಹೊರಬಂದಿದ್ದು, ಪ್ರಯಾಣಿಕರು ಭೀತಿಯಿಂದ ಹೊರಗೆ ಓಡಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ರೈಲಿನ ಎಸ್‌5 (S5) ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ರೈಲು ಅಲೆರ್ ನಿಲ್ದಾಣದ ವ್ಯಾಪ್ತಿಯಲ್ಲಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣವೇ ಎಚ್ಚೆತ್ತ ರೈಲ್ವೆ ಸಿಬ್ಬಂದಿ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಬೋಗಿಯಲ್ಲಿದ್ದ ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ತಕ್ಷಣವೇ ಕೆಳಗಿಳಿದಿದ್ದಾರೆ. ಈವರೆಗೆ ದೊರೆತ ಮಾಹಿತಿಯ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾದ ಬಗ್ಗೆ ಅಧಿಕೃತ ವರದಿಗಳಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ರೈಲ್ವೆ ತಾಂತ್ರಿಕ ತಂಡವು ಬೋಗಿಯನ್ನು ಪರೀಕ್ಷಿಸುತ್ತಿದ್ದು, ಬೆಂಕಿ ಪೂರ್ಣವಾಗಿ ಆರಿರುವುದನ್ನು ಖಚಿತಪಡಿಸಿಕೊಂಡ ನಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೆ.ಆರ್.ಮಾರುಕಟ್ಟೆ ಫ್ಲೈಓವರ್ ಕೆಳಗೆ ಅಗ್ನಿ ಅವಘಡ!

ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ (Short Circuit) ಆಗಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿದ್ದು, ಹಾನಿಯ ಬಗ್ಗೆ ಸಮಗ್ರ ವರದಿ ನೀಡಲಿದ್ದಾರೆ.

ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣ ರೈಲ್ವೆ ಇಲಾಖೆಯು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಿದೆ. ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಪರ್ಯಾಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿಗರೇ ಗಮನಿಸಿ: TCS ಮ್ಯಾರಥಾನ್​​ ಹಿನ್ನೆಲೆ ಈ ಪ್ರಮುಖ ರಸ್ತೆಗಳ ಸಂಚಾರದಲ್ಲಿಂದು ಭಾರಿ ಬದಲಾವಣೆ – Kannada News | Bengaluru Traffic Alert: Road Closures and Diversions for TCS 10K Marathon Today

ಬೆಂಗಳೂರು, ಏಪ್ರಿಲ್​​ 26: ನಗರದಲ್ಲಿ ಇಂದು ನಡೆಯುತ್ತಿರುವ TCS ವರ್ಲ್ಡ್ 10K ಮ್ಯಾರಥಾನ್​​ನಲ್ಲಿ 30,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇರುವ ಹಿನ್ನೆಲೆ ಬೆಳಿಗ್ಗೆ 5 ಗಂಟೆಯಿಂದ 11 ಗಂಟೆಯವರೆಗೆ ವಿವಿಧ ರಸ್ತೆಗಳಲ್ಲಿ ಸಂಚಾರವನ್ನು ನಿರ್ಭಂಧಿಸಲಾಗಿದೆ. ಮಾರ್ಗ ಬದಲಾವಣೆ ಜೊತೆಎಗೆ ನೋ-ಪಾರ್ಕಿಂಗ್ ನಿಯಮಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಜಾರಿಗೊಳಿಸಿದ್ದಾರೆ. ಮ್ಯಾರಥಾನ್ RSAOI ಮೈದಾನದಿಂದ ಆರಂಭವಾಗಿ ಅಲ್ಲಿಯೇ ಮುಕ್ತಾಯವಾಗಲಿದೆ. ಕಬ್ಬನ್ ರಸ್ತೆ, ಕಾಮರಾಜ್ ರಸ್ತೆ, ರಾಜಭವನ ರಸ್ತೆ ಹಾಗೂ ಅಂಬೇಡ್ಕರ್ ರಸ್ತೆ ಮಾರ್ಗಗಳಲ್ಲಿ ಮ್ಯಾರಥಾನ್​​ ನಡೆಯಲಿದ್ದು, ಹಲಸೂರು, ಫ್ರೇಸರ್ ಟೌನ್ ಮತ್ತು ಶಿವಾಜಿನಗರ ಪ್ರದೇಶಗಳ ಮೂಲಕ ಸಾಗಲಿದೆ.

ಯಾವೆಲ್ಲ ರಸ್ತೆಗಳು ಬಂದ್​​

  • ಕಬ್ಬನ್ ರಸ್ತೆ: CTO ಜಂಕ್ಷನ್‌ನಿಂದ ಮಣಿಪಾಲ್ ಸೆಂಟರ್ ವರೆಗೆ ಸಂಚಾರಕ್ಕೆ ಅವಕಾಶ ಇಲ್ಲ
  • ವಿಧಾನಸೌಧದ ಕಡೆ ಪ್ರವೇಶ: ಎಲ್ಲಾ ವಾಹನಗಳಿಗೆ ಸಂಪೂರ್ಣ ನಿರ್ಬಂಧ
  • ಇತರೆ ಮಾರ್ಗಗಳು: ಸೇಂಟ್ ಜಾನ್ಸ್ ರಸ್ತೆ (ಡಿಕನ್ಸನ್ ರಸ್ತೆದಿಂದ ವೀರಪಿಳ್ಳೈ ಸ್ಟ್ರೀಟ್), ಕಾಮರಾಜ್ ರಸ್ತೆ, ಇನ್ಫ್ಯಾಂಟ್ರಿ ರಸ್ತೆ ಹಾಗೂ ಲೇಡಿ ಕರ್ಝನ್ ರಸ್ತೆಯ ಕೆಲವು ಭಾಗಗಳು ಕ್ಲೋಸ್​​ ಇರಲಿವೆ.

ಇದನ್ನೂ ಓದಿ: ಜನಗಣತಿ ಕಾರ್ಯಕ್ಕೆ ಅಡ್ಡಿ; ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್​ಐಆರ್​ ದಾಖಲು

ಪರ್ಯಾಯ ಮಾರ್ಗಗಳು

  • ಕ್ವೀನ್ಸ್ ರಸ್ತೆ ವಾಹನಗಳನ್ನು ಬಾಳೇಕುಂದ್ರಿ ಜಂಕ್ಷನ್​​ ಮಾರ್ಗವಾಗಿ ಕನ್ನಿಂಗ್‌ಹ್ಯಾಮ್ ರಸ್ತೆ ಮೂಲಕ ಚಾಲುಕ್ಯ ಸರ್ಕಲ್​​ನಿಂದ ಮೆಜೆಸ್ಟಿಕ್/ಸಿಟಿ ಮಾರ್ಕೆಟ್ ಕಡೆ ತೆರಳಬೇಕು
  • ಶಿವಾಜಿನಗರ ಬಸ್ ನಿಲ್ದಾಣದಿಂದ ಮೆಜೆಸ್ಟಿಕ್/ಕೆ.ಆರ್. ಮಾರ್ಕೆಟ್ ಕಡೆಗೆ ಹೋಗುವ BMTC ಬಸ್‌ಗಳು ವೆಂಕಟಸ್ವಾಮಿ ನಾಯ್ಡು ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ಮೂಲಕ ಸಾಗಬೇಕು
  • ಎಂಜಿ ರಸ್ತೆದಿಂದ ಹಲಸೂರು ಕಡೆಗೆ ಹೋಗುವವರು ವೆಬ್ಸ್ ಜಂಕ್ಷನ್, ಟ್ರಿನಿಟಿ ಜಂಕ್ಷನ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಬಳಸಿ ಸಾಗಬೇಕು
  • ಭಾರಿ ವಾಹನಗಳಿಗೆ ಸಿಬಿಡಿ ಪ್ರದೇಶಕ್ಕೆ ಪ್ರವೇಶವಿಲ್ಲ. ಓಲ್ಡ್ ಮದ್ರಾಸ್ ರಸ್ತೆಯಿಂದ ಬರುವವರು ಎನ್‌ಜಿಇಎಫ್ ಜಂಕ್ಷನ್‌, ಸುರಂಜನ್ ದಾಸ್ ರಸ್ತೆ ಮೂಲಕ ಓಲ್ಡ್ ಏರ್‌ಪೋರ್ಟ್ ರಸ್ತೆಗೆ ಹೋಗಬೇಕು

ಕಸ್ತೂರಬಾ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಮತ್ತು ಕಬ್ಬನ್ ಪಾರ್ಕ್ ಸುತ್ತಮುತ್ತ ನೋ-ಪಾರ್ಕಿಂಗ್ ಜೋನ್ ಆಗಿರುತ್ತದೆ. ಮ್ಯಾರಥಾನ್​​ನಲ್ಲಿ ಭಾಗವಹಿಸುವವರು ಮತ್ತು ಪ್ರೇಕ್ಷಕರು UB ಸಿಟಿ, ಶಿವಾಜಿನಗರ ಬಸ್ ನಿಲ್ದಾಣ ಅಥವಾ ಚರ್ಚ್ ಸ್ಟ್ರೀಟ್‌ನ ಶೋಭಾ ಮಾಲ್‌ನಲ್ಲಿ ಪಾವತಿಸಬಹುದಾದ ಪಾರ್ಕಿಂಗ್ ಸೌಲಭ್ಯವನ್ನು ಬಳಸಬಹುದು. MS ಬಿಲ್ಡಿಂಗ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲೂ ಅಧಿಕೃತ ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – Kannada News | White House Shooting: Trump Rushed to Bunker During Dinner Amid Gunfire Fear

ವಾಷಿಂಗ್ಟನ್, ಏಪ್ರಿಲ್ 26: ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತಭವನದ ವಾರ್ಷಿಕ ಭೋಜನಕೂಟ ಆತಂಕಕ್ಕೆ ಸಾಕ್ಷಿಯಾಗಿತ್ತು. ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಭಾಷಣಕ್ಕೂ ಮುನ್ನವೇ ಕೇಳಿಬಂದ ಗುಂಡಿನ ಸದ್ದಿನಿಂದಾಗಿ ಇಡೀ ಸಭಾಂಗಣದಲ್ಲಿ ಅವ್ಯವಸ್ಥೆ ಉಂಟಾಯಿತು. ನೂರಾರು ಪತ್ರಕರ್ತರು, ಹಾಲಿವುಡ್ ಸೆಲೆಬ್ರಿಟಿಗಳು ಮತ್ತು ಹಿರಿಯ ರಾಜತಾಂತ್ರಿಕರಿಂದ ತುಂಬಿದ್ದ ಸಭಾಂಗಣದಲ್ಲಿ ಐದರಿಂದ ಎಂಟು ಬಾರಿ ಗುಂಡು ಹಾರಿದ ಶಬ್ದ ಕೇಳಿಬಂದಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ, ದಾರಿ ಬಿಡಿ, ಕೆಳಗೆ ಬಾಗಿ ಎಂದು ಕೂಗುತ್ತಾ ಅಧ್ಯಕ್ಷ ಟ್ರಂಪ್ ಅವರನ್ನು ವೇದಿಕೆಯಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ದರು. ಆ ಸಮಯದಲ್ಲಿ ಸಭಾಂಗಣದಲ್ಲಿದ್ದ ನೂರಾರು ಅತಿಥಿಗಳು ಪ್ರಾಣಭೀತಿಯಿಂದ ಟೇಬಲ್‌ಗಳ ಕೆಳಗೆ ಅಡಗಿ ಕುಳಿತರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟ್ರಂಪ್ ಮತ್ತು ಮೆಲಾನಿಯಾ ಸುರಕ್ಷಿತ
ಅದೃಷ್ಟವಶಾತ್, ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರಿಗೆ ಯಾವುದೇ ಹಾನಿಯಾಗಿಲ್ಲ. ಅಧ್ಯಕ್ಷರು ಮತ್ತು ಅವರ ಸಂಪುಟದ ಸದಸ್ಯರು ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಶ್ವೇತಭವನದ ಅಧಿಕಾರಿಗಳು ಸಿಎನ್‌ಎನ್‌ಗೆ ಸ್ಪಷ್ಟಪಡಿಸಿದ್ದಾರೆ. ಘಟನೆಯ ನಂತರ ರಾಷ್ಟ್ರೀಯ ಗಾರ್ಡ್ ಸಿಬ್ಬಂದಿಯನ್ನು ಸ್ಥಳಕ್ಕೆ ನಿಯೋಜಿಸಲಾಗಿದ್ದು, ಭದ್ರತೆಯನ್ನು ತೀವ್ರಗೊಳಿಸಲಾಗಿದೆ.

ಈ ಘಟನೆಯು ಜುಲೈ 13, 2024 ರಂದು ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ಟ್ರಂಪ್ ಮೇಲಿನ ಹತ್ಯೆ ಯತ್ನದ ನೆನಪುಗಳನ್ನು ಮರುಕಳಿಸಿತು. ಅಂದು ಕಿವಿಗೆ ಗುಂಡು ತಗುಲಿ ಕೂದಲೆಳೆಯ ಅಂತರದಲ್ಲಿ ಟ್ರಂಪ್ ಪಾರಾಗಿದ್ದರು. ಇಂದು ಮತ್ತೆ ಅಂತಹದ್ದೇ ಶೂಟೌಟ್ ವರದಿಗಾರರ ಭೋಜನಕೂಟದಲ್ಲಿ ನಡೆದಿದ್ದು, ಅಮೆರಿಕದ ಅತ್ಯುನ್ನತ ನಾಯಕರ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿದೆ.
ಒಬ್ಬ ಬಂದೂಕುಧಾರಿ ಇರುವಿಕೆಯನ್ನು ಪೊಲೀಸರು ದೃಢಪಡಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ವಾಷಿಂಗ್ಟನ್‌ನಾದ್ಯಂತ ಹೈ-ಅಲರ್ಟ್ ಘೋಷಿಸಲಾಗಿದೆ.

ಮತ್ತಷ್ಟು ಓದಿ: ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?

ಒಟ್ಟಾರೆಯಾಗಿ, ಜಗತ್ತಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿಯ ಮೇಲೆ ಪದೇ ಪದೇ ನಡೆಯುತ್ತಿರುವ ಇಂತಹ ದಾಳಿಯ ಯತ್ನಗಳು ಅಮೆರಿಕದ ಆಂತರಿಕ ಭದ್ರತಾ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಪರಿಣಮಿಸಿವೆ. ಈ ಘಟನೆಯು ಅಮೆರಿಕದ ರಾಜಕೀಯ ಧ್ರುವೀಕರಣ ಮತ್ತು ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ಮೈ ಸುಡುವ ಬಿಸಿಲಿನ ಜೊತೆಗೆ ಇಂದು ಹಲವೆಡೆ ಆಲಿಕಲ್ಲು ಮಳೆ! 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka Weather Forecast: Heatwave in Coastal and Hailstorm in North interior Karnataka, Orange alert

ಕರ್ನಾಟಕ ಹವಾಮಾನ ವರದಿImage Credit source: MediaForge AI

ಬೆಂಗಳೂರು, ಏಪ್ರಿಲ್ 26: ಬೆಂಗಳೂರಿನ ಜನರು ಬಿಸಿಲ ಬೇಗೆಯಲ್ಲಿ (Karnataka Weather) ಬೇಯುತ್ತಿದ್ದು, ತಂಪು ವಾತಾವರಣದ ನಿರೀಕ್ಷೆಯಲ್ಲಿದ್ದಾರೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ 30-40 ಕಿ. ಮೀ ವೇಗದಲ್ಲಿ ಗಾಳಿಯೂ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉಷ್ಣ ಅಲೆ

ಕರಾವಳಿಯ ತಾಪಮಾನದಲ್ಲಿ ಏರುಪೇರಾಗುತ್ತಿದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿಹೋಗಿದ್ದಾರೆ. ಇಂದು ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್​ ವೇವ್ ಅಲರ್ಟ್​ ಘೋಷಿಸಲಾಗಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಂತೂ ಇಂತೂ ಭಾರತದಲ್ಲಿ 100 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಸಿನಿಮಾ – Kannada News | Bhooth Bangla Box Office Collection Akshay Kumar Priyadarshan movie crosses 100 crore mark in India

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್ ಎಂದರೆ ಅಲ್ಲಿ ನಗುವಿಗೆ ಗ್ಯಾರಂಟಿ. ಸುಮಾರು 14 ವರ್ಷಗಳ ನಂತರ ಈ ಸೂಪರ್ ಹಿಟ್ ಜೋಡಿ ಒಂದಾಗಿ ಮಾಡಿರುವ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಈಗ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಬಿಡುಗಡೆಯಾದ 9 ದಿನಗಳಲ್ಲಿ ಈ ಹಾರರ್ ಕಾಮಿಡಿ ಸಿನಿಮಾ ಭಾರತದಲ್ಲಿ 100 ಕೋಟಿ ರೂಪಾಯಿಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದೆ. ಅಕ್ಷಯ್ ಕುಮಾರ್ ಅವರಂತಹ ಸ್ಟಾರ್ ನಟನ ಸಿನಿಮಾಗೆ ಇದು ದೊಡ್ಡ ಕಲೆಕ್ಷನ್ ಅಲ್ಲದೇ ಇದ್ದರೂ, 100 ಕೋಟಿ ರೂಪಾಯಿ ಆಗಿದೆ ಎಂಬುದಷ್ಟೇ ಸಮಾಧಾನಕರ ಸಂಗತಿ.

Sacnilk ವರದಿಯ ಪ್ರಕಾರ, ‘ಭೂತ್ ಬಂಗ್ಲ’ ತನ್ನ ಎರಡನೇ ಶನಿವಾರದಂದು (9ನೇ ದಿನ) ಭರ್ಜರಿ 10.75 ಕೋಟಿ ರೂಪಾಯಿ ಗಳಿಸಿದೆ. ಮೊದಲ ವಾರದಲ್ಲಿ 84.40 ಕೋಟಿ ರೂಪಾಯಿ ಸಂಗ್ರಹಿಸಿದ್ದ ಈ ಸಿನಿಮಾ, ಶನಿವಾರದ ಗಳಿಕೆಯೊಂದಿಗೆ ಭಾರತದಲ್ಲಿ ಒಟ್ಟು 100.90 ಕೋಟಿ ರೂಪಾಯಿ ಗಳಿಸಿದೆ. ಇನ್ನು, ಭಾರತದ ಒಟ್ಟು ಗ್ರಾಸ್ ಕಲೆಕ್ಷನ್ 120.10 ಕೋಟಿ ರೂಪಾಯಿಗೆ ತಲುಪಿದೆ.

ಕೇವಲ ಭಾರತದಲ್ಲಷ್ಟೇ ಅಲ್ಲದೆ, ವಿದೇಶಗಳಲ್ಲೂ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಓವರ್‌ಸೀಸ್ ಮಾರುಕಟ್ಟೆಯಲ್ಲಿ ಈವರೆಗೆ ಸುಮಾರು 3.8 ಮಿಲಿಯನ್ ಡಾಲರ್ (ಅಂದಾಜು 31 ಕೋಟಿ ರೂ.) ಗಳಿಸಿದೆ. ಇದರೊಂದಿಗೆ ಚಿತ್ರದ ಒಟ್ಟು ವಿಶ್ವದಾದ್ಯಂತದ ಗಳಿಕೆ 135 ಕೋಟಿ ರೂಪಾಯಿಗಳನ್ನು ಮೀರಿದೆ. ಮಿಶ್ರ ಪ್ರತಿಕ್ರಿಯೆ ನಡುವೆಯೂ ಅಕ್ಷಯ್ ಕುಮಾರ್ ಅಭಿಮಾನಿಗಳು ಈ ಸಿನಿಮಾ ಎಂಜಾಯ್ ಮಾಡಿದ್ದಾರೆ.

ಈ ಹಿಂದೆ ‘ಹೇರಾ ಫೇರಿ’, ‘ಗರಂ ಮಸಾಲಾ’, ‘ಭೂಲ್ ಭುಲಯ್ಯ’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ಅಕ್ಷಯ್ ಕುಮಾರ್ ಹಾಗೂ ಪ್ರಿಯದರ್ಶನ್ ಈಗ ‘ಭೂತ್ ಬಂಗ್ಲ’ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಜೊತೆಗೆ ಟಬು, ವಾಮಿಕಾ ಗಬ್ಬಿ, ಮಿಥಿಲಾ ಪಾಲ್ಕರ್, ರಾಜ್‌ಪಾಲ್ ಯಾದವ್ ಮತ್ತು ಜಿಸ್ಶು ಸೇನ್‌ಗುಪ್ತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘ನನಗೆ ಆ ರೀತಿ ಮೀಸೆ ಬರಲ್ಲ’: ನೇರವಾಗಿ ಒಪ್ಪಿಕೊಂಡು ಜನರ ಕ್ಷಮೆ ಕೇಳಿದ ಅಕ್ಷಯ್ ಕುಮಾರ್

ಬಾಲಾಜಿ ಮೋಷನ್ ಪಿಕ್ಚರ್ಸ್ ಅಡಿಯಲ್ಲಿ ಶೋಭಾ ಕಪೂರ್ ಮತ್ತು ಏಕ್ತಾ ಕಪೂರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ತಾಂತ್ರಿಕ ಕಾರಣಗಳಿಂದ ಏಪ್ರಿಲ್ 17ರಂದು ತೆರೆಕಂಡಿತ್ತು. ಮಿಶ್ರ ಪ್ರತಿಕ್ರಿಯೆಯ ನಡುವೆಯೂ ಪ್ರೇಕ್ಷಕರು ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿರುವುದರಿಂದ ಕಲೆಕ್ಷನ್ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಳಿಯನ ಮದುವೆಗೆ ಬಂದಿದ್ದ NRI ವೈದ್ಯೆಗೆ ಆಘಾತ: ಮದುವೆ ಮಂಟಪದಿಂದ 1 ಕೋಟಿ ರೂ. ಮೌಲ್ಯದ ಬಂಗಾರದ ಆಭರಣ ಕಳವು – Kannada News | Bangalore Wedding Theft: Rs 1 Crore Gold Vanishes from NRI Doctor’s Locked Room

ಬೆಂಗಳೂರು, ಏಪ್ರಿಲ್​​ 26: ಮದುವೆ ಮನೆಯಲ್ಲಿ ಕೈಚಳಕ ತೋರಿರುವ ಖದೀಮರು ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ಮಹಿಳಾ ವೈದ್ಯೆ ಸಿರುವೆಲ್ಲ ಶ್ರೀದೇವಿ ಎಂಬವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲಿ ದೋಚಿರುವ ಪ್ರಸಂಗ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ.

ಇನ್ನು ಘಟನೆ ಸಂಬಂಧ ಸಿರುವೆಲ್ಲ ಶ್ರೀದೇವಿ ಅವರು ಗುರುವಾರ ಮಧ್ಯಾಹ್ನ ದೂರು ನೀಡಿದ್ದಾರೆ. ತಮ್ಮ ಸಹೋದರನ ಮಗನ ಮದುವೆಗೆ ಏಪ್ರಿಲ್ 18ರಂದು ಬೆಂಗಳೂರಿಗೆ ಬಂದಿದ್ದ ಅವರು, ಬಳ್ಳಾರಿ ರಸ್ತೆಯ ಗಂಗಾನಗರದಲ್ಲಿರುವ ತಮ್ಮ ಸಹೋದರರ ಮನೆಯಲ್ಲಿ ತಂಗಿದ್ದರು. ಬುಧವಾರ ಬೆಳಗ್ಗೆ 11.30ರ ಸುಮಾರಿಗೆ ಬಿಡರಹಳ್ಳಿಯ ಓಲ್ಡ್ ಮದ್ರಾಸ್ ರಸ್ತೆಯ ಎಸ್‌ಡಿಪಿ ಪ್ಯಾಲೆಸ್ ಮಂಟಪಕ್ಕೆ ತೆರಳಿದ್ದರು. ಸಂಜೆ 6.30ರ ವೇಳೆಗೆ ಅವರ ಸಹೋದರರು ಚಿನ್ನಾಭರಣಗಳಿದ್ದ ಪೆಟ್ಟಿಗೆಯನ್ನು ಮಂಟಪದಲ್ಲೇ ನೀಡಿದ್ದಾರೆ. ಆ ಪೈಕಿ ಸ್ವಲ್ಪ ಆಭರಣಗಳನ್ನು ಧರಿಸಿ ಉಳಿದವುಗಳನ್ನು ಕೊಠಡಿಯಲ್ಲಿ ಇಟ್ಟು ಬಾಗಿಲು ಲಾಕ್ ಮಾಡಿ ಸ್ವಾಗತ ಕಾರ್ಯಕ್ರಮಕ್ಕೆ ಅವರು ಹೋಗಿದ್ದರು. ಕೊಠಡಿಗೆ ಲಾಕ್ ಮಾಡಿದ್ದರೂ ಈ ಆಭರಣಗಳು ಕಳವಾಗಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ವ್ಯಾಪಾರಕ್ಕೆಂದು ಬಂದು ಮಹಿಳೆಯ ಸಹವಾಸ ಮಾಡಿ ಬರ್ಬರ ಹತ್ಯೆಯಾದ ಈರುಳ್ಳಿ ವ್ಯಾಪಾರಿ!

ಕಳುವಾಗಿರೋದು ಸುಮಾರು 725 ಗ್ರಾಂ ಚಿನ್ನಾಭರಣಗಳು ಎನ್ನಲಾಗಿದ್ದು, ದೂರುದಾರರಿಗೆ ಪರಿಚಿತರಾದವರು ಅಥವಾ ಕುಟುಂಬದವರಲ್ಲಿ ಯಾರಾದರೂ ಕೃತ್ಯ ಎಸಗಿರಬಹುದೆಂಬ ಶಂಕೆಯೂ ಇದೆ. ಹೀಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಜೊತೆಗೆ ಕೊಠಡಿಗೆ ಪ್ರವೇಶ ಹೊಂದಿದ್ದವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮದುವೆ ಮಂಟಪದ ಸಿಬ್ಬಂದಿ ಪಾತ್ರ ಇಲ್ಲ ಎಂದು ಮಂಟಪ ವ್ಯವಸ್ಥಾಪಕ ಪ್ರಭು ಅವರು ತಿಳಿಸಿದ್ದು, ಬಾಗಿಲು ಲಾಕ್ ಆಗಿತ್ತು. ಕೀಲಿ ಕೂಡ ದೂರುದಾರರಲ್ಲೇ ಇತ್ತು ಎಂದು ಹೇಳಿದ್ದಾರೆ. ಅಲ್ಲದೆ ಘಟನೆ ಸಂಬಂಧ ನಾವು ಪೊಲೀಸರ ತನಿಖೆಗೆ ಸಹಕರಿಸುತ್ತಿದ್ದೇವೆ ಎಂದಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಆದಾವತ್ ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Daily Devotional: ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? – Kannada News | Sahavasa Dosha: How Company Shapes Your Life and Destiny Explained

ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಹವಾಸ ದೋಷವು ನಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಇಂದಿನ ಸಂಚಿಕೆಯಲ್ಲಿ ಗುರೂಜಿ ತಿಳಿಸಿದ್ದಾರೆ. ಒಬ್ಬ ವ್ಯಕ್ತಿಯ ಏಳಿಗೆ ಅಥವಾ ಅವನತಿಗೆ ಅವನ ಸಹವಾಸವೇ ಮುಖ್ಯ ಕಾರಣವಾಗಿರುತ್ತದೆ. ಉತ್ತಮ ಸಹವಾಸವು ಜೀವನದಲ್ಲಿ ಶ್ರೇಯಸ್ಸು ಮತ್ತು ವೃದ್ಧಿಯನ್ನು ತಂದರೆ, ಕೆಟ್ಟ ಸಹವಾಸವು ವಿನಾಶಕ್ಕೆ ಎಡೆಮಾಡಿಕೊಡುತ್ತದೆ. “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ” ಎಂಬ ಗಾದೆಯೇ ಇದರ ಪ್ರಾಮುಖ್ಯತೆಯನ್ನು ಸಾರುತ್ತದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

 

 

 

Source link

Horoscope Today: ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 26, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.

ಇಂದು ರಾಹುಕಾಲ ಮಧ್ಯಾಹ್ನ 4:58 ರಿಂದ ಸಂಜೆ 6:32 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 1:51 ರಿಂದ 3:25 ರವರೆಗೆ ಇರುತ್ತದೆ. ರವಿ ಮೇಷ ರಾಶಿಯಲ್ಲಿ ಹಾಗೂ ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸಲಿದ್ದಾನೆ. ವಾಸವಿ ಕನ್ಯಕಾ ಪರಮೇಶ್ವರಿ ಮತ್ತು ನಿಮಿಷಾಂಬ ಜಯಂತೋತ್ಸವಗಳು ನಡೆಯಲಿವೆ. ಜೊತೆಗೆ, ಬೆಂಗಳೂರು ಕೋಟೆ ವೆಂಕಟರಮಣ ಸ್ವಾಮಿ ಹಾಗೂ ಲಕ್ಷ್ಮೇಶ್ವರ ಸೋಮೇಶ್ವರ ರಥೋತ್ಸವಗಳು ಸಹ ಇವೆ. ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಎಲ್ಲರಿಗೂ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ.

 

 

 

Source link

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​​ – Kannada News | D.K. Shivakumar Justifies Kharge Meeting in Delhi Amidst CM Speculation

ದೆಹಲಿ, ಏಪ್ರಿಲ್​​ 26: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಖರ್ಗೆಯವರು ಎಐಸಿಸಿ ಅಧ್ಯಕ್ಷರು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ. ನಾವು ಭೇಟಿ ಮಾಡುವುದು ಸಹಜ ಎಂದು ಸ್ಪಷ್ಟಪಡಿಸಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ತಮ್ಮನ್ನು ವೀಕ್ಷಕರಾಗಿ ಕಳಿಸಲಾಗಿತ್ತು. ಅಸ್ಸಾಂ, ತಮಿಳುನಾಡು, ಕೇರಳದಲ್ಲಿ ನಡೆದ ಚುನಾವಣಾ ಪ್ರಚಾರಗಳು ಮತ್ತು ಅಲ್ಲಿನ ಪರಿಸ್ಥಿತಿಗಳ ಕುರಿತು ಪಕ್ಷದ ಹಿರಿಯರಿಗೆ ವರದಿ ಸಲ್ಲಿಸುವುದು ನನ್ನ ಕರ್ತವ್ಯ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

RR vs SRH: ವೈಭವ್ ಅಬ್ಬರದ ಶತಕಕ್ಕೂ ಒಲಿಯದ ಜಯ; ಸನ್‌ರೈಸರ್ಸ್​ಗೆ ಸುಲಭ ಜಯ

ಐಪಿಎಲ್ 2026 ರ 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರಸ್ಪರ ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ತಂಡವನ್ನು ಮಣಿಸಿದ ಸನ್‌ರೈಸರ್ಸ್ ತಂಡ ಈ ಲೀಗ್​ನ 5ನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನವನ್ನು ಅಲಂಕರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ತಂಡ ವೈಭವ್ ಸೂರ್ಯವಂಶಿ ಅವರ ದಾಖಲೆಯ ಶತಕದಿಂದ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ನಾಯಕ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 19ನೇ ಓವರ್​ನಲ್ಲಿ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ಪರ ಆರಂಭಿಕ ಜೋಡಿಯಾದ ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ 40 ರನ್​ಗಳ ಜೊತೆಯಾಟ ನೀಡಿದರು. ಯಶಸ್ವಿ 10 ರನ್‌ಗಳಿಗೆ ಔಟಾದರೆ, ನಂತರ ಬಂದ ಧ್ರುವ್ ಜುರೇಲ್ ಹಾಗೂ ವೈಭವ್ ಎರಡನೇ ವಿಕೆಟ್‌ಗೆ ಕೇವಲ 62 ಎಸೆತಗಳಲ್ಲಿ 112 ರನ್‌ಗಳ ಪಾಲುದಾರಿಕೆಯನ್ನು ನೀಡಿದರು. ಧ್ರುವ್ 35 ಎಸೆತಗಳಲ್ಲಿ 51 ರನ್ ಗಳಿಸಿ ಔಟಾದರು. ಇತ್ತ ತನ್ನ ಸಿಡಿಲಬ್ಬರದ ಬ್ಯಾಟಿಂಗ್‌ ಮುಂದುವರೆಸಿದ ವೈಭವ್ ಐಪಿಎಲ್ ವೃತ್ತಿಜೀವನದಲ್ಲಿ ತಮ್ಮ ಎರಡನೇ ಶತಕ ಮತ್ತು ಈ ಆವೃತ್ತಿಯ ಮೊದಲ ಶತಕ ಬಾರಿಸಿದರು.

ವೈಭವ್ ಕೇವಲ 37 ಎಸೆತಗಳಲ್ಲಿ 12 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಾಯದಿಂದ 103 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಡೊವೊವನ್ ಫೆರೇರಾ 33 ರನ್ ಗಳಿಸಿದರೆ, ಶಿಮ್ರಾನ್ ಹೆಟ್ಮೆಯರ್ 11 ರನ್ ಗಳಿಸಿದರು. ನಾಯಕ ರಿಯಾನ್ ಪರಾಗ್ 7 ರನ್ ಗಳಿಸಿ ಔಟಾದರೆ, ರವೀಂದ್ರ ಜಡೇಜಾ 4 ರನ್ ಗಳಿಸಿ ಅಜೇಯರಾಗಿ ಮರಳಿದರು. ಹೈದರಾಬಾದ್ ಪರ ಇಶಾನ್ ಮಾಲಿಂಗ 2, ಪ್ರುಫಲ್ ಹಿಂಗೆ, ಪ್ಯಾಟ್ ಕಮ್ಮಿನ್ಸ್, ಶಕೀಬ್ ಹುಸೇನ್ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ 1 ವಿಕೆಟ್ ಪಡೆದರು.

Source link

Exit mobile version