Headlines

ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಬೆಂಗಳೂರು,ಮಾರ್ಚ್ 15: ಕರ್ನಾಟಕದಲ್ಲಿ (Karnataka) ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ (LPG) ಕೊರತೆ ತೀವ್ರವಾಗುತ್ತಿದ್ದು, ಇದರ ಪರಿಣಾಮವಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಒಂದೇ ಒಂದು ಮಿಸ್ಡ್ ಕಾಲ್‌ಗೆ ಸಿಗುತ್ತಿದ್ದ ಗ್ಯಾಸ್ ಸಿಲಿಂಡರ್‌ಗಾಗಿ ಈಗ ಹೋಟೆಲ್ ಮಾಲೀಕರು ಪರದಾಡುವಂತ ಸ್ಥಿತಿ ಎದುರಾಗಿದೆ. ಈ ಕೊರತೆಯನ್ನು ಕೆಲವು ದಂಧೆಕೋರರು ದುರುಪಯೋಗಪಡಿಸಿಕೊಂಡು ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನಲ್ಲಿ 1,900 ರೂಪಾಯಿ ಬೆಲೆಯ ವಾಣಿಜ್ಯ ಸಿಲಿಂಡರ್ ಅನ್ನು ಕಾಳಸಂತೆಯಲ್ಲಿ ಸುಮಾರು 7 ಸಾವಿರ ರೂಪಾಯಿಗೆ ಮಾರಲಾಗುತ್ತಿದೆ…

Read More

ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ

ಬಾಗಲಕೋಟೆ, ಮಾರ್ಚ್ 23: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ದಾವಣಗೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ ಎಂದು ಆರೋಪಿಸಿದರು. ಅಲ್ಲಿನ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ ಎಂದು ಹೇಳಿ ಕಾಂಗ್ರೆಸ್…

Read More

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

ಬಿಡುಗಡೆ ಆಗಿ ತಿಂಗಳಿಗೂ ಮುಂಚೆಯೇ ಒಟಿಟಿಗೆ ಬಂದ ಪ್ರಭಾಸ್ ಸಿನಿಮಾ – Kannada News | The Raja Saab movie releasing on OTT soon here is the date

ಪ್ರಭಾಸ್ (Prabhas), ಭಾರತದ ಅತಿ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್. ‘ಬಾಹುಬಲಿ’ ಸಿನಿಮಾ ಸರಣಿಯ ಬಳಿಕ ಪ್ರಭಾಸ್ ರೇಂಜ್ ಬಹಳ ಎತ್ತರಕ್ಕೇರಿದೆ. ಯಾವ ಮಟ್ಟಿಗೆಂದರೆ ಅವರ ಕೆಟ್ಟ ಸಿನಿಮಾಗಳು ಸಹ ನೂರಾರು ಕೋಟಿ ಗಳಿಕೆ ಮಾಡುತ್ತವೆ. ಹಾಗೆಂದ ಮಾತ್ರಕ್ಕೆ ಕೆಟ್ಟ ಸಿನಿಮಾಗಳು ಸೂಪರ್ ಹಿಟ್ ಆಗಿಯೇ ತೀರುತ್ತವೆ ಎಂದೇನೂ ಇಲ್ಲ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರು ಸಹ ಕೆಟ್ಟ ಸಿನಿಮಾ ನೀಡಿದರೆ ಸೋಲುವುದು ಖಾತ್ರಿ ಎಂಬುದಕ್ಕೆ ಪ್ರಭಾಸ್ ಅವರ ಇತ್ತೀಚೆಗಿನ ಸಿನಿಮಾ ಉದಾಹರಣೆ ಆಗಿದೆ. ಪ್ರಭಾಸ್…

Read More

41 ನಿಮಿಷದಲ್ಲಿ ಅತ್ಯಾಚಾರ, ಕೊಲೆ, ದರೋಡೆ; ಐಆರ್​ಎಸ್​ ಅಧಿಕಾರಿ ಮನೆಯಲ್ಲಿ ನಡೆದಿದ್ದೇನು? ಆರೋಪಿ ಸಿಕ್ಕಿದ್ದು ಹೇಗೆ? – Kannada News | Rape and murder in 40 minutes Delhi IRS Officer Daughter killed by former Employee Rahul how he Caught

ನವದೆಹಲಿ, ಏಪ್ರಿಲ್ 23: ಬುಧವಾರ ಬೆಳಗ್ಗೆ 6.40ಕ್ಕೆ ದೆಹಲಿಯ ಐಷಾರಾಮಿ ಪ್ರದೇಶವಾದ ಕೈಲಾಶ್ ಹಿಲ್ಸ್​ನಲ್ಲಿರುವ ಐಆರ್​ಎಸ್​ ಅಧಿಕಾರಿಯೊಬ್ಬರ (IRS Officer) ಮನೆಯೊಳಗೆ ಭೀಕರ ಘಟನೆ ನಡೆದಿತ್ತು. ಬೆಳಗ್ಗೆ 6.30ಕ್ಕೆ ಐಆರ್​ಎಸ್​ ಅಧಿಕಾರಿ ತನ್ನ ಹೆಂಡತಿಯ ಜೊತೆ ವಾಕಿಂಗ್​​ಗೆ ಹೋದಕೂಡಲೆ ಅದೇ ಮನೆಯ ಮಾಜಿ ಕೆಲಸಗಾರ ರಾಹುಲ್ ಆ ಮನೆಯೊಳಗೆ ನುಗ್ಗಿದ್ದ. ತನ್ನನ್ನು ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ ಆತನಿಗೆ ಆ ಮನೆಯ ಹೊರಗೆ ಕೆಲಸಗಾರರಿಗಾಗಿ ಎಲ್ಲಿ ಕೀ ಇಟ್ಟಿರುತ್ತಾರೆ ಎಂಬುದು ಗೊತ್ತಿತ್ತು. ಆ ಮನೆಯಲ್ಲಿ…

Read More

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ? – Kannada News | T20 World Cup 2026: Bangladesh ICC Row Over India Matches; Who Replaces Them?

ಈಗ ಪ್ರಶ್ನೆಯೆಂದರೆ, ಅಂತಿಮವಾಗಿ ಎಲ್ಲಾ ಪ್ರಯತ್ನಗಳು ನಡೆದ ಬಳಿಕವೂ ಐಸಿಸಿ, ಬಾಂಗ್ಲಾದೇಶದ ಬೇಡಿಕೆಯನ್ನು ಸ್ವೀಕರಿಸದಿದ್ದರೆ, ಇತ್ತ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ ಏನಾಗುತ್ತದೆ? ಎಂಬುದು. ಐಸಿಸಿ ಹೇಳಿದಂತೆ ಬಾಂಗ್ಲಾ ಕೇಳದಿದ್ದರೆ, ಅದನ್ನು ಟಿ 20 ವಿಶ್ವಕಪ್‌ನಿಂದ ಹೊರಹಾಕಲಾಗುತ್ತದೆ. ಇದು ನಡೆದರೆ ಬಾಂಗ್ಲಾದೇಶ ತಂಡದ ಬದಲು ಬೇರೆ ತಂಡಕ್ಕೆ ಟಿ20 ವಿಶ್ವಕಪ್‌ ಆಡುವ ಅವಕಾಶ ಸಿಗಲಿದೆ. ಹಾಗಿದ್ದರೆ ಆ ತಂಡ ಯಾವುದು? Source link

Read More

National Dentists Day 2026: ಇಂದು ರಾಷ್ಟ್ರೀಯ ದಂತವೈದ್ಯರ ದಿನ; ನಗುವಿನ ಹಿಂದಿನ ನಿಜವಾದ ಶಿಲ್ಪಿಗಳು – Kannada News | National Dentists’ Day: Why Oral Health and Your Dentist’s Role Matter

ಒಂದು ಸುಂದರವಾದ ನಗು ಸಾವಿರ ಮಾತುಗಳನ್ನು ಹೇಳುತ್ತದೆ. ಆದರೆ ಆ ನಗುವಿನ ಹಿಂದೆ ಇರುವ ನಿಜವಾದ ಶಿಲ್ಪಿಗಳು ದಂತವೈದ್ಯರು. ನಮ್ಮ ಹಲ್ಲುಗಳ ಆರೋಗ್ಯವನ್ನು ಕಾಪಾಡಿ, ನೋವನ್ನು ನಿವಾರಿಸಿ, ಆತ್ಮವಿಶ್ವಾಸದ ನಗುವನ್ನು ನೀಡುವವರು ಇವರೇ. ಈ ಮಹತ್ವದ ಸೇವೆಯನ್ನು ಗೌರವಿಸಲು ಪ್ರತಿ ವರ್ಷ ಮಾರ್ಚ್ 6 ರಂದು ರಾಷ್ಟ್ರೀಯ ದಂತವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಸಮಾಜದಲ್ಲಿ ದಂತವೈದ್ಯರ ಸೇವೆಯನ್ನು ಗುರುತಿಸುವುದರ ಜೊತೆಗೆ, ಬಾಯಿ ಮತ್ತು ಹಲ್ಲಿನ ಆರೋಗ್ಯದ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೂ ಈ ದಿನದ ಪ್ರಮುಖ ಉದ್ದೇಶವಾಗಿದೆ….

Read More

ಮದುವೆಗೆಂದು ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ: ಬೇಲೂರಿನ ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ – Kannada News | Kunigal Native Priyanka Missing After Attending Wedding: Undergarments, Slippers, Bag Found Near Kalkere in Belur

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತಯಾದ ಘಟನೆ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ (29) ಎಂಬ ಮಹಿಳೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ್ದ ವೇಳೆ ಕಾಣೆಯಾಗಿದ್ದಾರೆ. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ (Hassan) ಬೇಲೂರು ಬಸ್ ನಿಲ್ದಾಣದ ಬಳಿಯಿಂದ ಅವರು ನಿಗೂಢವಾಗಿ ಕಣ್ಮರೆಯಾಗಿರುವುದು ತಿಳಿದುಬಂದಿದೆ. ಕಾಣೆಯಾಗುವ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆಯಲ್ಲಿ…

Read More

ಕೆವಿಎನ್​​ಗೆ ಕೈಕೊಟ್ಟ ಅದೃಷ್ಟ, ಎರಡು ದೊಡ್ಡ ಸಿನಿಮಾ ಬಿಡುಗಡೆ ಮುಂದೂಡಿಕೆ – Kannada News | Double trouble for KVN Productions two big movie release postponed

ಈ ಹಿಂದೆ 2021-22 ರಲ್ಲಿ ‘ಸಖತ್’, ‘ಬೈ ಟು ಲವ್’ ಅಂಥಹಾ ಸಾಮಾನ್ಯ ಬಜೆಟ್​​ನ ಕನ್ನಡ ಸಿನಿಮಾಗಳನ್ನು ನಿರ್ಮಿಸಿದ್ದ ಕೆವಿಎನ್ ನಿರ್ಮಾಣ ಸಂಸ್ಥೆ ಎರಡನೇ ಇನ್ನಿಂಗ್ಸ್​ ಅನ್ನು ಭಾರಿ ಉತ್ಸಾಹದಿಂದ ಆರಂಭಿಸಿತ್ತು. ಭಾರತದ ಇಬ್ಬರು ಅತಿ ದೊಡ್ಡ ಸ್ಟಾರ್ ನಟರ ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಬಂಡವಾಳ ಹೂಡಿತು, ಆದರೆ ಕೆವಿಎನ್ ಅದೃಷ್ಟ ಕೈಕೊಟ್ಟು, ಎರಡೂ ಸಿನಿಮಾಗಳ ಬಿಡುಗಡೆ ಮುಂದೂಡಲ್ಪಟ್ಟಿದೆ. ಒಂದು ಸಿನಿಮಾದ ಬಿಡುಗಡೆಯೇ ಅಡಕತ್ತರಿಯಲ್ಲಿ ಸಿಲುಕಿದೆ. 2022 ರಲ್ಲಿ ‘ಬೈ ಟು ಲವ್’ ಸಿನಿಮಾ ನಿರ್ಮಿಸಿದ್ದ ಕೆವಿನ್…

Read More

ಚೆನ್ನೈನ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ

ಚೆನ್ನೈ, ಮಾರ್ಚ್ 12: ತಮಿಳುನಾಡಿನ ತಿರುಚ್ಚಿಯಿಂದ ಪ್ರಾಜೆಕ್ಟ್‌ಗಾಗಿ ಬಂದಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪಹರಿಸಿದ ಗ್ಯಾಂಗ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚೆನ್ನೈನಲ್ಲಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಯುವತಿ ಅಭಿರಾಮಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಆರಂಭವಾಗಿದೆ. ಆ ವಿದ್ಯಾರ್ಥಿನಿ ಫೆಬ್ರವರಿ 14ರಂದು ತಿರುಚ್ಚಿಯಿಂದ ಪ್ರಾಜೆಕ್ಟ್‌ಗಾಗಿ ಚೆನ್ನೈಗೆ ಬಂದಿದ್ದರು. ಬಂದ ಕೆಲವೇ ದಿನಗಳಲ್ಲಿ, ಕೆಲವು ವ್ಯಕ್ತಿಗಳು ಆಕೆಯ ಫೋಟೋವನ್ನು ಮಾರ್ಫ್ ಮಾಡಿ ವಾಟ್ಸಾಪ್ ಮೂಲಕ ಕಳುಹಿಸಿದ್ದರು. ಬಳಿಕ, 4 ಜನರ ತಂಡ…

Read More