ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!; ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು – Kannada News | Belagavi: Giant Tree Crashes on Tractor in Shivoli Amidst Rain; Driver Unharmed
ಖಾನಾಪುರ, ಜು.6: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಒಂದರ ಮೇಲೆ ದೈತ್ಯ ಮರವೊಂದು ಮುರಿದು ಬಿದ್ದಿರುವ ಆಘಾತಕಾರಿ ಘಟನೆ ನಡೆದಿದೆ. ಆದರೆ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ. ಖಾನಾಪುರ ತಾಲೂಕಿನ ಶಿವೋಲಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ಪುಂಡಲೀಕ್ ಪಾಟೀಲ್ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದ್ದು, ಎಂದಿನಂತೆ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಹಠಾತ್ ಆಗಿ ರಸ್ತೆ ಬದಿಯ ದೈತ್ಯ ಮರವೊಂದು ಮುರಿದು ನೇರವಾಗಿ…