Headlines

ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್: ದಳಪತಿ ವಿಜಯ್ ಸಿನಿಮಾಗೆ ಸಂಕಷ್ಟ

ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾಗೆ ಸದ್ಯ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಒಂದು ಕಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ಚಿತ್ರದ ಬಿಡುಗಡೆಗೆ ಅಡ್ಡಿಯಾಗಿದ್ದರೆ, ಮತ್ತೊಂದೆಡೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಲೀಕ್ (Leak) ಆಗಿರುವುದು ಚಿತ್ರತಂಡವನ್ನು ಆತಂಕಕ್ಕೆ ತಳ್ಳಿದೆ. ಅಭಿಮಾನಿಗಳಿಗೆ ಈ ಬಗ್ಗೆ ಬೇಸರ ಆಗಿದೆ. ದಳಪತಿ ವಿಜಯ್ (Vijay) ಅವರ ವಿರೋಧಿಗಳು ಈ ಕೃತ್ಯದ ಹಿಂದೆ ಇದ್ದಾರೆ ಎಂಬುದು ಫ್ಯಾನ್ಸ್ ಆರೋಪ. ಸಾಮಾಜಿಕ ಜಾಲತಾಣಗಳಲ್ಲಿ…

Read More

ಮಕ್ಕಳೊಟ್ಟಿಗೆ ಸಮುದ್ರದಲ್ಲಿ ಈಜಾಡಿದ ಹೃತಿಕ್ ರೋಷನ್: ವಿಡಿಯೋ ನೋಡಿ

ಬಾಲಿವುಡ್ (Bollywood) ಸ್ಟಾರ್ ನಟ ಹೃತಿಕ್ ರೋಷನ್ ಅದ್ಭುತ ನಟ ಮತ್ತು ಯಶಸ್ವಿ ಉದ್ಯಮಿ ಆಗಿರುವ ಜೊತೆಗೆ ಬಹಳ ಒಳ್ಳೆ ತಂದೆಯೂ ಸಹ ಹೌದು. ಪತ್ನಿ ಸೂಸನ್​​ ಜೊತೆಗೆ ಹಲವು ವರ್ಷಗಳ ಹಿಂದೆಯೇ ವಿಚ್ಛೇದನ ಪಡೆದಿದ್ದರೂ ಸಹ ಮಕ್ಕಳೊಟ್ಟಿಗೆ ಆತ್ಮೀಯ ಬಂಧವನ್ನು ಇರಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಮಕ್ಕಳೊಂದಿಗಿನ ಕೆಲವು ಮುದ್ದಾದ ವಿಡಿಯೋಗಳನ್ನು ಹೃತಿಕ್ ರೋಷನ್ ಹಂಚಿಕೊಂಡಿದ್ದಾರೆ. ಅದರಲ್ಲೂ ಮಕ್ಕಳಿಬ್ಬರ ಜೊತೆಗೆ ಸಮುದ್ರದಲ್ಲಿ ಈಜಾಡುತ್ತಿರುವ ವಿಡಿಯೋ ಬಹಳ ಚೆನ್ನಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Spiritual Tips: ಮನೆಯಲ್ಲಿ ಊಟದ ನಂತರ ನಮ್ಮ ತಟ್ಟೆಯನ್ನು ನಾವೇ ತೊಳೆಯಬೇಕು ಯಾಕೆ ಗೊತ್ತಾ? – Kannada News | The Spiritual and Scientific Benefits of Clearing Your Own Plate After Meals

ಊಟದ ನಂತರ ತಮ್ಮ ತಟ್ಟೆಯನ್ನು ನಾವೇ ಏಕೆ ತೆಗೆಯಬೇಕು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಆಹಾರ ಸೇವನೆಯನ್ನು ಅನ್ನಯಜ್ಞ ಎಂದು ಕರೆಯಲಾಗುತ್ತದೆ. ಈ ಯಜ್ಞದ ಪ್ರಾರಂಭದಿಂದ ಮುಕ್ತಾಯದವರೆಗೆ ವಿನಯ, ವಿಧೇಯತೆ, ಭಕ್ತಿ ಮತ್ತು ಕೃತಜ್ಞತಾ ಭಾವ ಇರಬೇಕು. ಮನೆಯಲ್ಲಿ ತಾಯಿ, ಶ್ರೀಮತಿ, ಅಕ್ಕ, ತಂಗಿಯರು ಅಥವಾ ಬೇರೆಯವರು ಆಹಾರ ತಯಾರಿಸಿರಬಹುದು, ಅಥವಾ ನೀವೇ ತಯಾರಿಸಿರಬಹುದು. ಅನ್ನವು ಪರಬ್ರಹ್ಮ…

Read More

ಕೊನೆಗೂ ನಿಜವಾಯ್ತಾ ನಂಬಿಕೆ?: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಬೃಹತ್​​ ಹಾವು ಪ್ರತ್ಯಕ್ಷ! – Kannada News | Snake Sighted in Lakkundi Village on the Third Day of Excavation

ಲಕ್ಕುಂಡಿಯಲ್ಲಿ ಉತ್ಖನನImage Credit source: Google ಗದಗ, ಜನವರಿ 18: ಮನೆಗಾಗಿ ಅಡಿಪಾಯ ಮಾಡುವ ವೇಳೆ ಗದಗ ತಾಲೂಕಿನ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಕ್ಕ ಆಭರಣಗಳನ್ನು ಕುಟುಂಬ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಹತ್ತಾರು ಬೆಳವಣಿಗೆಗಳು ನಡೆದು ಗ್ರಾಮದಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಲಾಗಿತ್ತು. ಅದರ ಭಾಗವಾಗಿ ಇಂದು ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿಯ ಆವರಣದಲ್ಲಿ ಮೂರನೇ ದಿನದ ಉತ್ಖನನದ ವೇಳೆ ಕಾರ್ಮಿಕರು ಬೆಚ್ಚಿಬೀಳುವಂತೆ ಘಟನೆಯೊಂದು ನಡೆದಿದೆ. ನಿಧಿಯನ್ನು ಸರ್ಪ ಕಾಯುತ್ತದೆ ಎಂಬ ನಂಬಿಕೆಗೆ ಕಾಕತಾಳೀಯವೆಂಬಂತೆ…

Read More

ವಿವಾಹಕ್ಕೆ ವಯಸ್ಸಿನ ಅಂತರ ಅಡ್ಡಿಯಲ್ಲ: ಪ್ರಬುದ್ಧ ಸಂಗಾತಿಯಿಂದ ಕುಟುಂಬಕ್ಕೆ ಶ್ರೇಯಸ್ಸು – Kannada News | Beyond Convention: Examining Age Differences in Marriages Through Ancient Texts and Modern Examples

ಬೆಂಗಳೂರು, ಮೇ.6: ವಿವಾಹವು ಮನುಷ್ಯನ ಜೀವನದಲ್ಲಿ ಒಂದು ಪ್ರಮುಖ ಘಟ್ಟ. ಅನಾದಿ ಕಾಲದಿಂದಲೂ ಗಂಡನ ವಯಸ್ಸು ಹೆಚ್ಚಿದ್ದು, ಹೆಣ್ಣಿನ ವಯಸ್ಸು ಕಡಿಮೆಯಿರುವುದು ಸಾಮಾನ್ಯವಾಗಿದೆ. ಆದರೆ, ಕಾಲ ಬದಲಾದಂತೆ, ಪುರುಷರು ತಮ್ಮಿಗಿಂತ ಹೆಚ್ಚಿನ ವಯಸ್ಸಿನ ಮಹಿಳೆಯರನ್ನು ಮದುವೆಯಾಗುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಉದ್ಭವಿಸಿದೆ. ಶಾಸ್ತ್ರೀಯವಾಗಿ ಪರಿಶೀಲಿಸಿದಾಗ, ಯಾವುದೇ ಧರ್ಮಗ್ರಂಥಗಳಲ್ಲಿ ಗಂಡಿಗಿಂತ ಹೆಣ್ಣು ವಯಸ್ಸಿನಲ್ಲಿ ಹೆಚ್ಚಿದ್ದರೆ ಮದುವೆಯಾಗಬಾರದು ಎಂದು ಹೇಳಿಲ್ಲ. ಬದಲಾಗಿ, ಕಾಲಾಂತರದಲ್ಲಿ ಸಮಾಜದ ಚಿಂತನೆಗಳು ಬದಲಾಗಿವೆ. ಪುರಾಣಗಳನ್ನು ಗಮನಿಸಿದರೆ, ವಸಿಷ್ಠ ಋಷಿ-ಅರುಂಧತಿ, ಚಂದ್ರ-ತಾರೆ, ಅರ್ಜುನ-ಉಲೂಪಿ ಮತ್ತು…

Read More

IPLಗೆ ಎಂಟ್ರಿ ಬೆನ್ನಲ್ಲೇ PSL​ನಿಂದ ಬ್ಯಾನ್!

ಝಿಂಬಾಬ್ವೆ ತಂಡದ ವೇಗದ ಬೌಲರ್ ಬ್ಲೆಸ್ಸಿಂಗ್ ಮುಝರಬಾನಿ (Blessing Muzarabani) ಅವರು ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಉಲ್ಲಂಘಿಸಿರುವ ಕಾರಣ, ಪಾಕ್ ಕ್ರಿಕೆಟ್ ಮಂಡಳಿ (PCB) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಝರಬಾನಿ ಮುಂಬರುವ PSL 2026 ಸೀಸನ್‌ಗಾಗಿ ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗೆ ಸುಮಾರು 1.1 ಕೋಟಿ ರೂಪಾಯಿ (PKR) ಮೊತ್ತಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಮುಝರಬಾನಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ. ಕೊಲ್ಕತ್ತಾ…

Read More

ICC T20 Rankings: ಅಭಿಷೇಕ್ ಅಧಿಪತ್ಯ ಅಂತ್ಯ; ಅಗ್ರಸ್ಥಾನಕ್ಕೇರಿದ ಇಶಾನ್ ಕಿಶನ್ – Kannada News | ICC T20 Rankings: Ishan Kishan Claims World No. 1 Spot, Dethrones Abhishek Sharma

ಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಟಿ20 ಬ್ಯಾಟ್ಸ್‌ಮನ್​ಗಳ ಶ್ರೇಯಾಂಕದಲ್ಲಿ ದೊಡ್ಡ ಬದಲಾವಣೆಯಾಗಿದೆ. ಇದರಲ್ಲಿ ಟೀಂ ಇಂಡಿಯಾದ ಡ್ಯಾಶಿಂಗ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರವಾಗಿ ವಿಶ್ವದ ನಂಬರ್-1 ಸ್ಥಾನದಲ್ಲಿದ್ದ ತಂಡದ ಸಹ ಆಟಗಾರ ಅಭಿಷೇಕ್ ಶರ್ಮಾಗೆ ಇಶಾನ್ ಕಿಶನ್ ಅನಿರೀಕ್ಷಿತ ಆಘಾತ ನೀಡಿದ್ದಾರೆ (PC-PTI). ವರ್ಷದಿಂದ ಅಗ್ರಸ್ಥಾನದಲ್ಲಿದ್ದ ಅಭಿಷೇಕ್ ಶರ್ಮಾರನ್ನು ಹಿಂದಿಕ್ಕಿರುವ ಇಶಾನ್ ಕಿಶನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಇಬ್ಬರು ಯುವ ಬ್ಯಾಟ್ಸ್‌ಮನ್‌ಗಳ ನಡುವೆ ಪ್ರಸ್ತುತ ಕೇವಲ 7 ರೇಟಿಂಗ್…

Read More

ವಿರಾಟ್ ಕೊಹ್ಲಿ ಹೆಸರು ಕೇಳುತ್ತಿದ್ದಂತೆ ಕೆರಳಿ ಕೆಂಡವಾದ ಬಾಬರ್ ಆಝಂ

ಕೆಲವೇ ಕೆಲವು ವರ್ಷಗಳ ಹಿಂದೆ, ಪ್ರಸ್ತುತ ವಿಶ್ವ ಕ್ರಿಕೆಟ್​ನ ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಜೊತೆಗೆ ಬಾಬರ್ ಆಝಂ (Babar Azam) ಅವರ ಹೆಸರನ್ನು ಸಹ ಹೇಳಲಾಗುತಿತ್ತು. ವಿರಾಟ್ ಕೊಹ್ಲಿ ಎರಡು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕವೂ ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಆದರೆ ಬಾಬರ್ ಆಝಂ ಹಾಗಲ್ಲ. ಸತತ ಕಳಪೆ ಪ್ರದರ್ಶನದಿಂದ ಬಳಲುತ್ತಿರುವ ಬಾಬರ್​ ಈಗಲೂ ಎಲ್ಲಾ ಮಾದರಿಯಲ್ಲಿ ಆಡುತ್ತಿದ್ದಾರೆ. ಆದರೆ ಅವಮಾನವೆಂಬಂತೆ ಪಾಕ್ ಆಯ್ಕೆ ಮಂಡಳಿ ಅವರನ್ನು…

Read More

ಐದು ತಿಂಗಳಲ್ಲಿ ಎರಡನೇ ಬಾರಿಗೆ ರಾಮ್ ರಹೀಮ್​ಗೆ ಪೆರೋಲ್, 30 ದಿನಗಳ ಕಾಲ ಜೈಲಿನಿಂದ ಬಿಡುಗಡೆ – Kannada News | Ram Rahim Gets 30 Day Parole Again: Dera Chief Released from Jail for Second Time in 5 Months

ನವದೆಹಲಿ, ಮೇ 26 ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್(Gurmeet Ram Rahim Singh)ಗೆ ಮತ್ತೊಮ್ಮೆ ಪೆರೋಲ್ ಮಂಜೂರು ಮಾಡಲಾಗಿದೆ. ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಮ್ ರಹೀಮ್ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಬಾರಿ ಅವರಿಗೆ 30 ದಿನಗಳ ಪೆರೋಲ್ ನೀಡಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗುರ್ಮೀತ್ ರಾಮ್ ರಹೀಮ್ ಬಿಗಿ ಭದ್ರತೆಯಲ್ಲಿ ಸಿರ್ಸಾ ಆಶ್ರಮಕ್ಕೆ ತೆರಳಿದರು. ಈ ವರ್ಷ ಇದು ಅವರ…

Read More

ಜಾಗರೂಕರಾಗಿರಿ ಇಲ್ಲದಿದ್ದರೆ ರಣಾಂಗಣದಲ್ಲಿ ನೀವು ಒಂಟಿಯಾಗ್ತೀರಿ, ನೆತನ್ಯಾಹುಗೆ ಟ್ರಂಪ್ ಎಚ್ಚರಿಕೆ

ಟೆಲ್ ಅವಿವ್, ಜೂನ್ 09: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಭೀಕರ ಯುದ್ಧದ ಮುನ್ಸೂಚನೆ ನೀಡಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯು, ಜಾಗತಿಕ ನಾಯಕರ ತತ್‌ಕ್ಷಣದ ರಾಜತಾಂತ್ರಿಕ ಹಸ್ತಕ್ಷೇಪದಿಂದಾಗಿ ಸದ್ಯಕ್ಕೆ ಶಾಂತಿಯುತ ನಿಯಂತ್ರಣಕ್ಕೆ ಬಂದಿದೆ. ಇರಾನ್ ವಿರುದ್ಧ ಇಸ್ರೇಲ್ ಸಿದ್ಧಪಡಿಸುತ್ತಿದ್ದ ಬೃಹತ್ ಮಟ್ಟದ ಪ್ರತೀಕಾರದ ದಾಳಿಯ ಅಲೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ನೇರ ಹಾಗೂ ಪ್ರಭಾವಶಾಲಿ ಮಾತುಕತೆಯು ಯಶಸ್ವಿಯಾಗಿ ತಡೆದಿದೆ. ಯುದ್ಧದ ಹಾದಿಯನ್ನು ಬದಿಗಿಟ್ಟು ಪ್ರಾದೇಶಿಕ ಸ್ಥಿರತೆ ಮತ್ತು ಸೌಹಾರ್ದತೆಗೆ ಆದ್ಯತೆ ನೀಡುವಂತೆ ಟ್ರಂಪ್…

Read More