ಟ್ರ್ಯಾಕ್ಟರ್ ಬಾಡಿಗೆ ಹೆಚ್ಚು: ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು! – Kannada News | High Tractor Rent Forces Hubballi Farmer Family to Pull Plough Themselves Amid Dry Spell in Dharwad
ಹುಬ್ಬಳ್ಳಿ, ಜೂನ್ 22: ಧಾರವಾಡ ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಮಳೆ ಸುರಿಯದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದಲ್ಲಿ ಬಿತ್ತನೆ ಕಾರ್ಯ ನಡೆಸಿದ್ದ ರೈತರು ಇದೀಗ ಮಳೆಗಾಗಿ ನಿರೀಕ್ಷೆಯಲ್ಲಿದ್ದಾರೆ. ಆದರೆ ನಿರಂತರ ಬರದಿಂದಾಗಿ ಬಿತ್ತಿದ ಬೀಜ ಮೊಳಕೆಯೊಡೆಯದೆ ಬೆಳೆ ನಷ್ಟದ ಭೀತಿ ಎದುರಿಸುತ್ತಿದ್ದಾರೆ. ಕೃಷಿ ಕಾರ್ಯಗಳಿಗೆ ಎತ್ತುಗಳನ್ನು ಖರೀದಿಸುವುದು ದುಬಾರಿಯಾಗಿದ್ದು, ಒಂದು ಜೊತೆ ಎತ್ತುಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿ ಖರ್ಚಾಗುತ್ತದೆ. ಇನ್ನು ಟ್ರ್ಯಾಕ್ಟರ್ಗಳ ಮೂಲಕ ಉಳುಮೆ ಮಾಡಿಸುವುದು ಕೂಡ ಪ್ರತಿ…