DC vs PBKS: ದಾಖಲೆಯ 152 ರನ್..! ಕನ್ನಡಿಗ ರಾಹುಲ್ ಅಬ್ಬರಕ್ಕೆ ಹಳೆಯ ದಾಖಲೆಗಳೆಲ್ಲ ಧ್ವಂಸ – Kannada News | KL Rahul’s Record 152*: DC Scores 264 vs PK in IPL 2026; Highest Indian Score!

ಐಪಿಎಲ್ 2026 ಟೂರ್ನಮೆಂಟ್‌ನ 35 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ದಾಖಲೆಯ 264 ರನ್ ಕಲೆಹಾಕಿದೆ. ಇದು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕಲೆಹಾಕಿದ ಅತ್ಯಧಿಕ ಮೊತ್ತವಾಗಿದೆ.

Source link

MECON Recruitment 2026: 103 ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೇ ನಡೆಯಲಿದೆ ಸಂದರ್ಶನ! – Kannada News | MECON Recruitment 2026: 103 Professional Posts, Apply Online for Walk in Interview

ಉಕ್ಕು ಸಚಿವಾಲಯದ ಅಧೀನದಲ್ಲಿರುವ ಪ್ರತಿಷ್ಠಿತ MECON ಲಿಮಿಟೆಡ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಒಟ್ಟು 103 ವೃತ್ತಿಪರ ಹುದ್ದೆಗಳ ಭರ್ತಿಗಾಗಿ ಸಂಸ್ಥೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳು ಪೂರ್ಣ ಸಮಯದ ಸ್ಥಿರ-ಅವಧಿಯ (FTFT) ಒಪ್ಪಂದದ ಆಧಾರದ ಮೇಲೆ ಇರಲಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು 103 ವೃತ್ತಿಪರರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ಹುದ್ದೆಗೆ ಬೇಕಾದ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಅನುಭವದ ವಿವರಗಳನ್ನು MECON ಲಿಮಿಟೆಡ್‌ನ ಅಧಿಕೃತ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಲು ಅಧಿಸೂಚನೆಯನ್ನು ಕೂಲಂಕಷವಾಗಿ ಓದಿಕೊಳ್ಳಲು ಸೂಚಿಸಲಾಗಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಈಗಾಗಲೇ ಚಾಲನೆಯಲ್ಲಿದ್ದು, ಮೇ 11 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಆಯ್ಕೆ ಪ್ರಕ್ರಿಯೆಯು ಅತ್ಯಂತ ನೇರವಾಗಿದ್ದು, ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ, ದೇಶದ ಪ್ರಮುಖ ನಗರಗಳಾದ ಬೆಂಗಳೂರು, ದೆಹಲಿ, ರಾಂಚಿ ಮತ್ತು ಕೋಲ್ಕತ್ತಾಗಳಲ್ಲಿ ನಡೆಯಲಿರುವ ವಾಕ್-ಇನ್ ಸಂದರ್ಶನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಂದರ್ಶನದ ನಿಖರವಾದ ದಿನಾಂಕ, ಸಮಯ ಮತ್ತು ಸ್ಥಳದ ವಿವರಗಳನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಪ್ರಕಟಿಸಲಾಗುವುದು. ಸಂದರ್ಶನದಲ್ಲಿ ತೋರುವ ದಕ್ಷತೆಯ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಮತ್ತು ಆಯ್ಕೆಯಾದವರಿಗೆ ಇಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಅರ್ಜಿ ಸಲ್ಲಿಸಲು ಇಚ್ಛಿಸುವವರು MECON ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ‘ನೇಮಕಾತಿ’ (Recruitment) ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಅರ್ಜಿ ಸಲ್ಲಿಸಿದ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳುವುದು ಉತ್ತಮ. ಸಂದರ್ಶನಕ್ಕೆ ಹಾಜರಾಗುವಾಗ ಎಲ್ಲಾ ಮೂಲ ದಾಖಲೆಗಳು ಮತ್ತು ಅವುಗಳ ಪ್ರತಿಗಳನ್ನು ಮರೆಯದೆ ತರಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ದಾಖಲೆಯ ರಿಸಲ್ಟ್​​ ಬಗ್ಗೆ ವಿಶ್ವನಾಥ್ ಅನುಮಾನ – Kannada News | BJP MLC H Vishwanath doubts on Karnataka SSLC Results 2026

ಮೈಸೂರು, (ಏಪ್ರಿಲ್ 25): ಎಸ್​ಎಸ್​​ಎಲ್​​ಸಿ ಪರೀಕ್ಷೆ 1 ಫಲಿತಾಂಶ (SSLC Results 2026) ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಶೇ.94.1ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕರ್ನಾಟಕ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದಾಖಲೆಯ ಫಲಿತಾಂಶ ಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಖುಷಿಯಿಂದಲೇ ಹೇಳಿಕೊಂಡಿದ್ದಾರೆ. ಆದ್ರೆ, ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿನ ಅನಿರೀಕ್ಷಿತ ಏರಿಕೆಯ ಕುರಿತು ಮಾಜಿ ಶಿಕ್ಷಣ ಸಚಿವ, ಪರಿಷತ್ ಸದಸ್ಯ ಎಚ್. ವಿಶ್ವನಾಥ್ (BJP MLC H Vishwanath) ತೀವ್ರ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ರಾಜ್ಯದಾದ್ಯಂತ ಅದರಲ್ಲೂ ವಿಶೇಷವಾಗಿ ಯಾದಗಿರಿ, ಬಳ್ಳಾರಿ ಮತ್ತು ಬೀದರ್‌ನಂತಹ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಶಿಕ್ಷಕರ ಕೊರತೆ ಇದ್ದರೂ ಸಹ, ಇಷ್ಟು ದೊಡ್ಡ ಮಟ್ಟದ ಫಲಿತಾಂಶ ಬಂದಿರುವುದು ಹೇಗೆ ಸಾಧ್ಯ? ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರೆತೆ ಇದೆ, ಈ ನಡುವೆ ಗ್ರೇಸ್ ಮಾರ್ಕ್ ನೀಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದರೆ ಮುಂದೆ ಅವರ ಭವಿಷ್ಯ ಏನು? ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka SSLC Result 2026: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ ಶೇ 94.1ರಷ್ಟು ಮಂದಿ ಪಾಸ್, 7 ಮಂದಿ ರಾಜ್ಯಕ್ಕೇ ಟಾಪ್!

Source link

ಡಾ ರಾಜ್ ಸಮಾಧಿ ಬಗ್ಗೆ ಕೊಂಕು ತೆಗೆದ ಚೇತನ್ ಅಹಿಂಸ ವಿರುದ್ಧ ದೂರು – Kannada News | Dr Rajkumar Sena gave complaint against Chetan Ahimsa

ನಿನ್ನೆ (ಏಪ್ರಿಲ್ 24) ರಾಜ್ಯದಾದ್ಯಂತ ಕಲಾಚೇತನ ಡಾ ರಾಜ್​ಕುಮಾರ್ (Dr Rajkumar) ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯ್ತು. ಡಾ ರಾಜ್​ಕುಮಾರ್ ಅವರ ಕರ್ನಾಟಕಕ್ಕೆ, ಕನ್ನಡಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯ್ತು. ಆದರೆ ಈ ವೇಳೆ ನಟ, ಸ್ವಯಂ ಘೋಷಿತ ಹೋರಾಟಗಾರ ಚೇತನ್ ಅಹಿಂಸ ಅವರು ರಾಜ್​​ಕುಮಾರ್ ಅವರ ಸಮಾಧಿಗೆ ಸರ್ಕಾರ ಸ್ಥಳ ಕೊಟ್ಟಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪೋಸ್ಟ್ ಒಂದನ್ನು ಹಂಚಿಕೊಂಡರು. ಅಣ್ಣಾವ್ರ ಸಮಾಧಿಗೆ 2.50 ಎಕರೆ ಸ್ಥಳ ನೀಡಿತ್ತು ಸೂಕ್ತ ನಿರ್ಧಾರವಲ್ಲ ಎಂದು ಚೇತನ್ ಹೆಳಿದ್ದರು. ನಿನ್ನೆಯೇ ಚೇತನ್ ಅವರ ಈ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ರಾಜ್​ಕುಮಾರ್ ಅಭಿಮಾನಿಗಳು ಚೇತನ್ ವಿರುದ್ಧ ದೂರು ಸಹ ದಾಖಲಿಸಿದ್ದಾರೆ.

ಡಾ ರಾಜ್​ಕುಮಾರ್ ಸೇನೆ ಹೆಸರಿನ ಸಂಘಟನೆಯು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಚೇತನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ‘ಚೇತನ್‌ ಅಹಿಂಸ ಎಂಬ ವ್ಯಕ್ತಿ ಕನ್ನಡ ಚಿತ್ರರಂಗದ ವರನಟ ಡಾ ರಾಜಕುಮಾರ್‌ ಅವರ ಸ್ಮಾರಕದ ಬಗ್ಗೆ ಆತನ ಸಾಮಾಜಿಕ ಜಾಲತಾಣವಾದಲ್ಲಿ ಅವಹೇಳನಕಾರಿ ಹೇಳಿಕೆ ಬರೆದುಕೊಂಡು ಕನ್ನಡ ಚಿತ್ರಾಭಿಮಾನಿಗಳಿಗೆ ಹಾಗೂ ಡಾ ರಾಜ್‌ ಕುಮಾರ್‌ ಅವರ ಅಭಿಮಾನಿಗಳಿಗೆ ಅಪಮಾನಿಸಿದ್ದಾನೆ. ಘನ ಪೊಲೀಸ್‌ ಇಲಾಖೆ ಕೂಡಲೆ ಕ್ರಮ ಕೈಗೊಂಡು ಚೇತನ್‌ ಅಹಿಂಸ ಎಂಬ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತಿದ್ದೇವೆ’ ಎಂದಿದ್ದಾರೆ.

‘ಪದ್ಮಭೂಷಣ ಕರ್ನಾಟಕ ರತ್ನ ಡಾ ರಾಜಕುಮಾರ್‌ ಎಂದರೆ ಅವರೊಂದು ಬೃಹತ್‌ ಶಕ್ತಿ. ಡಾ ರಾಜ್‌ ಎಂದರೆ ಗೋಕಾಕ್‌ ಚಳವಳಿ ನೇತಾರ ಮತ್ತು ಕನ್ನಡ ನಾಡು ನುಡಿ ನೆಲ ಜಲ ಭಾಷೆಗಾಗಿ ಶ್ರಮಿಸಿದ ಗಣ್ಯಮಾನ್ಯರು ನಮ್ಮ ರಾಜಕುಮಾರ್‌. ಶೈಕ್ಷಣಿಕ ಸಂಸ್ಥೆಗಳಿಗೆ ಧಾರ್ಮಿಕ ಕ್ಷೇತ್ರಗಳಿಗೆ ಪೊಲೀಸ್‌ ಇಲಾಖೆಯ ಪರಿಹಾರ ನಿಧಿ, ನೆರೆ ಹಾವಳಿ, ಬರಪರಿಹಾರ ನಿಧಿಗಾಗಿ ಶ್ರಮಿಸಿದ ವ್ಯಕ್ತಿ ರಾಜಕುಮಾರ್‌, ಕಾರ್ಗಿಲ್‌ ಯುದ್ಧದಲ್ಲಿ ಮಡಿದ ಯೋಧರ ಸೇವೆಗೆ ರಸಮಂಜರಿ ಕಾರ್ಯಕ್ರಮದ ಮುಖಾಂತರ ಸಹಾಯಧನ ಮಾಡಿದ ವ್ಯಕ್ತಿ ರಾಜಕುಮಾರ್‌, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆಸ್ಪತ್ರೆಗಳಿಗೆ ಮಿಡಿದ ಜೀವ ಡಾ.ರಾಜಕುಮಾರ್‌, ಕನ್ನಡದ ಅಸ್ಮಿತೆ ರಾಜಕುಮಾರ್‌ ಬಡತನದ ಬೇಗೆಯಲ್ಲಿ ವೃತ್ತಿ ರಂಗಭೂಮಿಗೆ ದುಡಿದ ವ್ಯಕ್ತಿ ಮುಂದೆ ಕನ್ನಡ ಚಲನಚಿತ್ರರಂಗದಲ್ಲಿ ಪೌರಾಣಿಕ ಐತಿಹಾಸಿಕ ಜನಪದ ಸಾಮಾಜಿಕ ಸಾಂಸಾರಿಕ ಭಕ್ತಿಪ್ರಧಾನ ಭಾವಪ್ರಧಾನತೆಯ ಮೂಲಕ ಅತ್ಯುನ್ನತ ಪಾತ್ರಗಳನ್ನು ನಿರ್ವಹಿಸಿದವರು ಡಾ.ರಾಜಕುಮಾರ್‌ ಇಂತಹ ಮಹಾನ್‌ ಕಲಾವಿದ ಮೇರುನಟನ ಸಾಧನೆಯನ್ನು ಗಮನಿಸಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಮತ್ತು ದೇಶ ವಿದೇಶಗಳು ಅತ್ಯಂತ ಪ್ರೀತಿಯಿಂದ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಕನ್ನಡ ನಾಡಿನ ಕೋಟಿ ಕೋಟಿ ಅಭಿಮಾನಿಗಳ ಮನಸ್ಸಿಗೆ ಧಕ್ಕೆ ಉಂಟುಮಾಡಿರುವ ಚೇತನ ಎಂಬ ವ್ಯಕ್ತಿಯ ಮೇಲೆ ಕೂಡಲೆ ಕ್ರಮ ಕೈಗೊಂಡು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಮತ್ತು ಕರ್ನಾಟಕದ ಜನತೆಯಲ್ಲಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ:ಕಾಣಿಸುತ್ತಿಲ್ಲ ‘ಕೆಡಿ’ ಸಿನಿಮಾ ಟ್ರೇಲರ್; ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಗೆ ಇನ್ನೊಂದು ವಿಘ್ನ

ಚೇತನ್ ಅಹಿಂಸ ಹೇಳಿರುವ ಮಾತಿನ ವಿರುದ್ಧ ಹಲವಾರು ಮಂದಿ ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್​ಕುಮಾರ್ ಅವರಿಗೆ ಸರ್ಕಾರವು ಸೂಕ್ತ ಗೌರವವನ್ನೇ ನೀಡಿದೆ. ಅಲ್ಲದೆ ಸ್ಮಾರಕ ನಿರ್ಮಾಣವಾಗಿ ಮೂರು ದಶಕಗಳ ಬಳಿಕ ಈಗ ವಿನಾಕಾರಣ ಆ ಬಗ್ಗೆ ಆಕ್ಷೇಪ ಎತ್ತಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಹ ಅಹಿಂಸ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸಾರಾ ಗೋವಿಂದು ಸಹ ಚೇತನ್ ಅಹಿಂಸ ವಿರುದ್ಧ ಗುಡುಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ – Kannada News | Bride Disappears from Sirsi Home Before Wedding; Parents File Complaint

ನಾಪತ್ತೆಯಾಗಿರುವ ಯುವತಿ Image Credit source: tv9 kannada

ಕಾರವಾರ, ಏಪ್ರಿಲ್​ 25: ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು (girl) ಮದುವೆಗೆ ಕೆಲವೇ ಗಂಟೆಗಳಿರುವಾಗ ನಾಪತ್ತೆಯಾಗಿರುವಂತಹ (Missing) ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಇದೀಗ ಆತಂಕದ ಮೌನ ಆವರಿಸಿದೆ. ಶಿರಸಿ ನಗರದ ನಿವಾಸಿ ಸೀಫಾ ಖಾನ್ ನಾಪತ್ತೆಯಾಗಿರುವ ಯುವತಿ. MBBS ಓದುತ್ತಿದ್ದ ಯುವಕನೊಂದಿಗೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆಗೆ ಪೋಷಕರು ದೂರು ನೀಡಿದ್ದಾರೆ.

ನಡೆದಿದ್ದೇನು?

ಇಂದು (ಏಪ್ರಿಲ್ 25) ಮಧ್ಯಾಹ್ನ ಶಿರಸಿಯ ಉಸರಿ ರಸ್ತೆಯ ಕಲ್ಯಾಣ ಮಂಟಪದಲ್ಲಿ ಸೀಫಾ ಖಾನ್​​ ಮದುವೆ ನಿಶ್ಚಯವಾಗಿತ್ತು. ಮದುವೆಯ ಸಿದ್ಧತೆಗಳಲ್ಲಿ ಕುಟುಂಬಸ್ಥರೆಲ್ಲರೂ ಬ್ಯುಸಿಯಾಗಿದ್ದರು. ಆದರೆ, ವಧುವನ್ನು ಸಜ್ಜುಗೊಳಿಸಲು ಆಕೆಯ ಕೋಣೆಗೆ ಹೋಗಿ ನೋಡಿದಾಗ ಯುವತಿ ಕಾಣಿಸಲಿಲ್ಲ. ಮನೆಯವರು ಸುತ್ತಮುತ್ತ ಹಾಗೂ ಪರಿಚಿತರ ಮನೆಗಳಲ್ಲಿ ಎಷ್ಟೇ ಹುಡುಕಾಡಿದರೂ ಯಾವುದೇ ಸುಳಿವು ಸಿಕ್ಕಿಲ್ಲ.

ಇದನ್ನೂ ಓದಿ: ‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು

ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಈ ಘಟನೆ ಬರಸಿಡಿಲಿನಂತೆ ಎರಗಿದೆ. ಎಲ್ಲಿ ಹುಡುಕಿದರೂ ಯುವತಿ ಪತ್ತೆಯಾಗದ ಹಿನ್ನೆಲೆಯಲ್ಲಿ, ಆತಂಕಕ್ಕೊಳಗಾದ ಪಾಲಕರು ಕೊನೆಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

MBBS ಯುವಕನೊಂದಿಗೆ ಓಡಿ ಹೋಗಿರುವ ಶಂಕೆ: ಪೊಲೀಸರಿಗೆ ದೂರು ನೀಡಿದ ಪೋಷಕರು

ಇನ್ನು ಸೀಫಾ ಖಾನ್, MBBS ಓದುತ್ತಿದ್ದ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಆತನೊಂದಿಗೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಕುಟುಂಬಸ್ಥರು ಅವರ ಪ್ರೀತಿಯನ್ನ ಒಪ್ಪಿರಲಿಲ್ಲ. ಇಂದು ಬೇರೆಯವರ ಜೊತೆ ಮದುವೆ ಮಾಡಲು ನಿಶ್ಚಯಿಸಿದ್ದರು. ಆದರೆ ಅಷ್ಟರಲ್ಲಿ ಯುವತಿ ನಾಪತ್ತೆ ಆಗಿದ್ದಾಳೆ. ಸದ್ಯ ಮಗಳನ್ನ ಹುಡುಕಿಕೊಡುವಂತೆ ಯುವತಿಯ ತಂದೆ ಝಹೀರ್ ಖಾನ್ ಶಿರಸಿಯ ಹೊಸ ಮಾರುಕಟ್ಟೆ ಠಾಣೆಗೆ ದೂರು ನೀಡಿದ್ದಾರೆ.

ಮದುವೆಗೆ ಒಂದು ತಿಂಗಳು ಇರುವಾಗಲೇ ಮದುಮಗ ಗಾಯಬ್

ಇನ್ನು ಇತ್ತೀಚೆಗೆ ಇಂತಹದೊಂದು ಘಟನೆ ರಾಯಚೂರಿನಲ್ಲಿ ನಡೆದಿತ್ತು. ಮದುವೆಗೆ ಒಂದು ತಿಂಗಳು ಇರುವಾಗಲೇ ಯುವಕ ನಾಪತ್ತೆ ಆಗಿದ್ದ. ಇಡೀ ಊರಿಗೆ ಬಾಡೂಟ ಹಾಕಿಸಿದ ಮಾರನೇ ದಿನವೇ ಗಾಯಬ್ ಆಗಿದ್ದ. ಇತ್ತ ತಂದೆ-ತಾಯಿ ಇಲ್ಲದ ಮೊಮ್ಮಗನನ್ನ ಸಲುಹಿದ್ದ ಅಜ್ಜಿ ಕಣ್ಣಿರು ಹಾಕಿದ್ದರು. ಮೊಮ್ಮಗನಿಗಾಗಿ ಉಪವಾಸ ಕೂಡ ಮಾಡಿದ್ದರು.

25 ವರ್ಷದ ಮುದ್ದುರಂಗಪ್ಪ ನಾಪತ್ತೆಯಾಗಿದ್ದ ಯುವಕ. ಬಿಎ ಡಿಗ್ರಿ ಮುಗಿಸಿ ಹೊಲ ಮನೆ ಕೆಲಸ ಮಾಡಿಕೊಂಡಿದ್ದ. ಕಳೆದೊಂದು ವರ್ಷದ ಹಿಂದೆ ಮುದ್ದುರಂಗಪ್ಪಗೆ ಸಂಬಂಧಿಕರೊಬ್ಬರ ಯುವತಿ ಜೊತೆ ಮದುವೆ ಫಿಕ್ಸ್ ಆಗಿತ್ತು. ಇನ್ನೊಂದು ತಿಂಗಳಲ್ಲಿ ಮದುವೆ ಆಗಬೇಕಿತ್ತು. ಈ ಮುದ್ದುರಂಗಪ್ಪ ಕುಟುಂಬದಲ್ಲಿ ಮದುವೆಗೂ ಮುನ್ನ ಮರಿ ಹೊಡೆದು ಇಡೀ ಊರಿಗೆ ಬಾಡೂಟ ಹಾಕಿಸುವ ಪದ್ದತಿ ಇದೆ.

ಇದನ್ನೂ ಓದಿ: ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ

ಹಾಗಾಗಿ ಇಡೀ ಊರಿಗೆ ಬಾಡೂಟ ಹಾಕಿಸಿದ್ದ. ಹೀಗೆ ಬಾಡೂಟ ಹಾಕಿಸಿ ಮದುವೆ ತಯಾರಿಯಲ್ಲಿದ್ದ ಮುದ್ದುರಂಗಪ್ಪ ಮರುವ ದಿನವೇ ನಾಪತ್ತೆಯಾಗಿದ್ದ. ಎಷ್ಟೇ ಹುಡುಕಿದರೂ ಪತ್ತೆಯಾಗಿಲ್ಲ. ಹೀಗಾಗಿ ಮಾನ್ವಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಎಫ್​ಐಆರ್ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

NTPC Recruitment 2026: ಎನ್‌ಟಿಪಿಸಿ ನೇಮಕಾತಿ; ಎಂಜಿನಿಯರಿಂಗ್ ಪದವೀಧರರಿಗೆ ಭರ್ಜರಿ ಅವಕಾಶ,55,000ರೂ. ವೇತನ! – Kannada News | NTPC Recruitment 2026: 250 Asst Executive Jobs, Apply by May 7!

ದೇಶದ ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎನ್‌ಟಿಪಿಸಿ (NTPC) ಲಿಮಿಟೆಡ್, ಒಟ್ಟು 250 ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 23 ರಿಂದ ಆರಂಭವಾಗಿದ್ದು, ಆಸಕ್ತರು ಮೇ 7 ರೊಳಗೆ ಅಧಿಕೃತ ವೆಬ್‌ಸೈಟ್ careers.ntpc.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಪ್ರತಿಷ್ಠಿತ ಸರ್ಕಾರಿ ಕಂಪನಿಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಎಂಜಿನಿಯರಿಂಗ್ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಅರ್ಹತಾ ಮಾನದಂಡಗಳ ಕುರಿತು ನೋಡುವುದಾದರೆ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಬಿ.ಇ ಅಥವಾ ಬಿ.ಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದರೊಂದಿಗೆ 40 ಮೆಗಾವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ವಿದ್ಯುತ್ ಸ್ಥಾವರದ ಕಾರ್ಯಾಚರಣೆ ಅಥವಾ ನಿರ್ವಹಣಾ ವಿಭಾಗದಲ್ಲಿ ಕನಿಷ್ಠ ಒಂದು ವರ್ಷದ ಕೆಲಸದ ಅನುಭವ ಹೊಂದಿರುವುದು ಕಡ್ಡಾಯವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳೆಂದು ನಿಗದಿಪಡಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 55,000ರೂ. ಸ್ಥಿರ ವೇತನದೊಂದಿಗೆ ಆಕರ್ಷಕ ಸೌಲಭ್ಯಗಳನ್ನು ನೀಡಲಾಗುತ್ತದೆ. ಮನೆ ಬಾಡಿಗೆ ಭತ್ಯೆ (HRA) ಅಥವಾ ಕಂಪನಿ ಒದಗಿಸುವ ವಸತಿ ಸೌಕರ್ಯದ ಜೊತೆಗೆ, ರಾತ್ರಿ ಪಾಳಿ ಭತ್ಯೆ ಹಾಗೂ ಕುಟುಂಬದ ಸದಸ್ಯರಿಗೆ (ಸಂಗಾತಿ, ಇಬ್ಬರು ಮಕ್ಕಳು ಮತ್ತು ಪೋಷಕರು) ವೈದ್ಯಕೀಯ ವಿಮೆಯನ್ನು ಒದಗಿಸಲಾಗುತ್ತದೆ. ಆರಂಭದಲ್ಲಿ ಈ ನೇಮಕಾತಿಯು ಮೂರು ವರ್ಷಗಳ ಅವಧಿಗೆ ಇರಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಮತ್ತು ಕಂಪನಿಯ ಅಗತ್ಯಕ್ಕೆ ಅನುಗುಣವಾಗಿ ಈ ಅವಧಿಯನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸುವ ಅವಕಾಶವೂ ಲಭ್ಯವಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆದರೆ ಮಹಿಳೆಯರು, ಎಸ್‌ಸಿ, ಎಸ್‌ಟಿ, ಅಂಗವಿಕಲರು ಮತ್ತು ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಂಡು, ನಂತರ ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಪೂರ್ಣಗೊಳಿಸಬಹುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:53 pm, Sat, 25 April 26

Source link

DC vs PBKS: 12 ರನ್​ಗೆ ಕ್ಯಾಚ್ ಡ್ರಾಪ್; ಭರ್ಜರಿ ಶತಕ ಚಚ್ಚಿದ ರಾಹುಲ್ – Kannada News | IPL 2026: KL Rahul hits 6th IPL ton for Delhi Capitals against Punjab Kings

ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್‌ ಸ್ನೇಹಿ ಪಿಚ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಹರಿಸಿದ ರಾಹುಲ್ ಕೇವಲ 48 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ ಐಪಿಎಲ್ ವೃತ್ತಿಜೀವನದ 6ನೇ ಶತಕ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಎರಡನೇ ಶತಕವನ್ನು ದಾಖಲಿಸಿದರು.

Source link

ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು, 21 ಜನರಿಗೆ ಗಾಯ – Kannada News | Russian drone attack on Ukraine Dnipro 4 dead over 21 injured

ಕೈವ್, ಏಪ್ರಿಲ್ 25: ಉಕ್ರೇನಿಯನ್ ನಗರವಾದ ಡ್ನಿಪ್ರೊ ಮೇಲೆ ರಷ್ಯಾದ (Russian Drone Attack) ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ 4 ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ. ರಾತ್ರಿಯಿಡೀ ನಡೆದ ದಾಳಿಯಲ್ಲಿ ನಾಶವಾದ ಮನೆಯ ಅವಶೇಷಗಳಲ್ಲಿ ನಾಲ್ವರ ಶವಗಳು ಪತ್ತೆಯಾಗಿವೆ. ” ರಷ್ಯಾದ ದಾಳಿಯ ನಂತರ ಡ್ನಿಪ್ರೊದಲ್ಲಿನ ಆಸ್ಪತ್ರೆಗಳಲ್ಲಿ 11 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯನ್ನರು ರಾತ್ರಿಯಿಡೀ ಡ್ನಿಪ್ರೊ, ಇತರೆ ನಗರಗಳು ಮತ್ತು ಸಮುದಾಯಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದರಿಂದಾಗಿ ಡ್ನಿಪ್ರೊದಾದ್ಯಂತ ಬೆಂಕಿ ಹೊತ್ತಿಕೊಂಡಿತು. ಬೆಂಕಿಯಲ್ಲಿ ಹಲವಾರು ಅಪಾರ್ಟ್​ಮೆಂಟ್ ಕಟ್ಟಡಗಳು, ಕಾಂಪ್ಲೆಕ್ಸ್​ಗಳು ನಾಶವಾದವು. ಒಡೆಸಾ ಪ್ರದೇಶದ ಮೇಲೆ ರಾತ್ರಿಯಿಡೀ ನಡೆದ ಡ್ರೋನ್ ದಾಳಿಯಲ್ಲಿ ಇಬ್ಬರು ಗಾಯಗೊಂಡರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಶಾಲೆಗೆ ಹೋಗುತ್ತಿದ್ದಾಗ ರಾಜಸ್ಥಾನದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | 15 year Old Girl kidnapped and Physically Harassed in Rajasthan’s Alwar while going school

ಅಲ್ವಾರ್, ಏಪ್ರಿಲ್ 25: ರಾಜಸ್ಥಾನದ (Rajasthan) ಅಲ್ವಾರ್‌ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಹುಲ್ ಸೈನಿ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಿ ಈ ಕೃತ್ಯ ಎಸಗಲಾಗಿದೆ.

ಶುಕ್ರವಾರ ರಾತ್ರಿ ಪೊಲೀಸರು ಆರೋಪಿಗಳಲ್ಲಿ ಒಬ್ಬನಾದ 23 ವರ್ಷದ ರಾಹುಲ್ ಸೈನಿಯನ್ನು ಬಂಧಿಸಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಈ ಘಟನೆಯು ಬಿಜೆಪಿ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆ ಯಂತ್ರದ ವಿಶ್ವಾಸಾರ್ಹತೆಯನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ಹೇಳಿದ್ದಾರೆ. ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ. ಅತ್ಯಾಚಾರ ನಡೆಸಿದ ಆರೋಪಿಯ ಮೊಬೈಲ್ ಫೋನ್‌ನಿಂದ ಹಲವಾರು ಹುಡುಗಿಯರ ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಗುರುಕುಲದಲ್ಲಿ 11 ವರ್ಷದ ವಿದ್ಯಾರ್ಥಿಯ ಬರ್ಬರ ಹತ್ಯೆ; ಮೈಮೇಲಿತ್ತು 42 ಗಾಯ

ಈ ಪ್ರಕರಣದ ಇತರ ಇಬ್ಬರು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡಲು ಪೊಲೀಸ್ ತಂಡಗಳು ಪ್ರಯತ್ನಿಸುತ್ತಿವೆ. ಮೂವರೂ ದೌಸಾ ಜಿಲ್ಲೆಯ ಬಸ್ವಾ ಪ್ರದೇಶದ ನಿವಾಸಿಗಳು ಎಂದು ಹೇಳಲಾಗುತ್ತದೆ. ಗುರುವಾರ ಬೆಳಿಗ್ಗೆ ಬಾಲಕಿ ಎಂದಿನಂತೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ನಡೆದುಕೊಂಡು ಶಾಲೆಗೆ ಹೊರಟಳು. ಆಗ ಬೊಲೆರೊ ವಾಹನದಲ್ಲಿ ಬಂದ ಇಬ್ಬರು ಯುವಕರು ಆಕೆಯನ್ನು ಬಲವಂತವಾಗಿ ವಾಹನದೊಳಗೆ ಎಳೆದೊಯ್ದರು. ಆರೋಪಿಗಳು ಆಕೆಯ ಕೈಗಳನ್ನು ಕಟ್ಟಿ ಕಣ್ಣುಗಳಿಗೆ ಬಟ್ಟೆ ಕಟ್ಟಿದರು. ದಾರಿಯಲ್ಲಿ ಅವರು ಮತ್ತೊಬ್ಬ ಯುವಕನನ್ನು ಬೊಲೆರೊದಲ್ಲಿ ಕೂರಿಸಿಕೊಂಡರು. ನಂತರ ಮೂವರು ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು.

ಅಲ್ಲಿ ಮೂವರು ಆರೋಪಿಗಳು ಆಕೆಯನ್ನು ರೂಂಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯ ಫೋಟೋಗಳು ಮತ್ತು ವಿಡಿಯೋಗಳನ್ನು ಸಹ ತೆಗೆದಿದ್ದಾರೆ. ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಆಕೆಯ ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆಯನ್ನೂ ಹಾಕಿದ್ದಾರೆ. ಅತ್ಯಾಚಾರ ನಡೆಸಿದ ನಂತರ, ಆರೋಪಿಗಳು ಆಕೆಯನ್ನು ಮತ್ತೆ ಕಾರಿನಲ್ಲಿ ಕೂರಿಸಿಕೊಂಡು, ಕಣ್ಣಿಗೆ ಬಟ್ಟೆ ಕಟ್ಟಿ, ಅಪಹರಿಸಿದ ಸ್ಥಳದ ಬಳಿಯೇ ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ: 41 ನಿಮಿಷದಲ್ಲಿ ಅತ್ಯಾಚಾರ, ಕೊಲೆ, ದರೋಡೆ; ಐಆರ್​ಎಸ್​ ಅಧಿಕಾರಿ ಮನೆಯಲ್ಲಿ ನಡೆದಿದ್ದೇನು? ಆರೋಪಿ ಸಿಕ್ಕಿದ್ದು ಹೇಗೆ?

ಆ ಬಾಲಕಿಯನ್ನು ಬಲವಂತವಾಗಿ ವಾಹನದೊಳಗೆ ಹತ್ತಿಸಿಕೊಂಡಿದ್ದನ್ನು ನೋಡಿದ್ದ ಇತರೆ ವಿದ್ಯಾರ್ಥಿಗಳು ಊರಿನವರಿಗೆ ಈ ವಿಷಯ ತಿಳಿಸಿದ್ದರು. ಹೀಗಾಗಿ, ಆ ಜಾಗದಲ್ಲಿ ಸಾಕಷ್ಟು ಜನ ಸೇರಿ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದರು. ಅಷ್ಟರಲ್ಲಿ ಆರೋಪಿಗಳು ಆ ಬಾಲಕಿಯನ್ನು ವಾಪಾಸ್ ಅದೇ ಸ್ಥಳಕ್ಕೆ ಬಿಡಲು ಹಿಂತಿರುಗಿದಾಗ ಅಲ್ಲಿ ಸಾಕಷ್ಟು ಜನ ಸೇರಿದ್ದನ್ನು ಕಂಡು ತಮ್ಮ ವಾಹನವನ್ನು ಅಲ್ಲೇ ಬಿಟ್ಟು ಅಲ್ಲಿಂದ ಪರಾರಿಯಾದರು. ಕೋಪಗೊಂಡ ಗ್ರಾಮಸ್ಥರು ಅವರ ವಾಹನಕ್ಕೆ ಬೆಂಕಿ ಹಚ್ಚಿದರು. ಮಾಹಿತಿ ಪಡೆದ ರೈನಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಟ್ಟುಹೋದ ವಾಹನವನ್ನು ವಶಪಡಿಸಿಕೊಂಡು ಪೊಲೀಸ್ ಠಾಣೆಗೆ ತಂದರು. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರೆದಿದೆ. ಬಂಧಿತ ರಾಹುಲ್​ನ ಮೊಬೈಲ್ ಫೋನ್‌ನಿಂದ ಇತರ ಹುಡುಗಿಯರ ಹಲವಾರು ಅಶ್ಲೀಲ ವೀಡಿಯೊಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜನಿವಾರ ವಿವಾದ: ಕೆಇಎ ಅಧಿಕಾರಿ ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ? – Kannada News | Janivara Row: Why KEA Not mentioned about Sacred Thread In guidelines circular

ಬೆಂಗಳೂರು, (ಏಪ್ರಿಲ್ 25): ಸಿಇಟಿ ಪರೀಕ್ಷೆ ವೇಳೆ ಜನಿವಾರ ( Sacred Thread) ಕಟ್ ಮಾಡಿರುವ ವಿವಾದ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾರ್ಥಿಗಳ ಜನಿವಾರ ಕಟ್ ಮಾಡಿದ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 299, 302ರಡಿ ಮೊಕದ್ದಮೆ ದಾಖಲಾಗಿದ್ದು, ಈ ದೂರಿನ ಮೇರೆಗೆ ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಸುಧಾಕರ್‌ ಅವರನ್ನು ಬಂಧಿಸಲಾಗಿದೆ. ಅಲ್ಲದೇ ಈ ಮೂವರನ್ನು ಸಹ ಕೆಲಸದಿಂದ ಅಮಾನತು ಮಾಡಲಾಗಿದೆ. ಆದ್ರೆ, ಮೇಲ್ನೋಟಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಲಕ್ಷ್ಯಕ್ಕೆ ಕೆಳ ಹಂತದ ಅಧಿಕಾರಿಗಳು ಶಿಕ್ಷೆಗೆ ಗುರಿಯಾದಂತೆ ಕಾಣುತ್ತಿದೆ. ಕಳೆದ ವರ್ಷ ಇದೇ ವಿವಾದ ಬೆಳಕಿಗೆ ಬಂದಿದ್ದರಿಂದ ಈ ಬಾರಿ ಯಾವುದೇ ಕಾರಣಕ್ಕೂ ಜನಿವಾರ ಹಾಗೂ ಕೊರಳಲ್ಲಿ ಹಾಕುವ ಲಿಂಗುವನ್ನು ತೆಗೆಸುವಂತಿಲ್ಲ ಎಂದು ಕೆಇಎ ಅಧಿಕಾರಿಗಳು ಹೇಳಿದ್ದರು. ಆದ್ರೆ, ಅದು ಬಾಯಿ ಮಾತಿಗೆ ಹೇಳಲಾಗಿದೆ ಹೊರತು ಅಧಿಕೃತವಾಗಿ ಸುತ್ತೋಲೆಯಲ್ಲಿ ಇಲ್ಲ. ಕೆಇಎ ಎಡವಟ್ಟನಿಂದಾಗಿಯೇ ಈ ವರ್ಷವೂ ಸಹ ಜನಿವಾರ ವಿವಾದ ಮರುಕಳಿಸಿದ್ದು, ಇಷ್ಟೆಲ್ಲ ರಾದ್ಧಾಂತ ಕಾರವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದ್ದೇನು?

ಇನ್ನು ಈ ವರ್ಷದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕಣಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ನಗರ ಡಿಸಿಗೆ ಪತ್ರ ಬರೆದಿದೆ.  ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ ಜನಿವಾರ ತೆಗೆಸಿದ್ದು ಉದ್ದೇಶಪೂರ್ವಕ ಘಟನಯಂತೆ ಕಂಡಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮವಹಿಸಿದ ವಿವರ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ: CET ಪರೀಕ್ಷೆಗೆ ವಸ್ತ್ರ ಸಂಹಿತೆ ಏನು ಹೇಳುತ್ತೆ?

ಆದ್ರೆ, ಸಿಇಟಿ ಪರೀಕ್ಷೆ ವೇಳೆ ಯಾವುದನ್ನು ತರಬೇಕು? ಯಾವುದನ್ನು ನಿಷೇಧಿಸಲಾಗಿದೆ ಎನ್ನುವ ಬಗ್ಗೆ ಸುತ್ತೋಲೆ ಹೊರಡಿಸುವ ಕೆಇಎ, ಜನಿವಾರ ಹಾಗೂ ಕೊರಳಲ್ಲಿ ಹಾಕುವ ಲಿಂಗುವನ್ನು ತೆಗೆಸುವಂತಿಲ್ಲ ಎನ್ನುವ ಅಂಶವನ್ನು ಏಕೆ ಸುತ್ತೋಲೆಯಲ್ಲಿ ಉಲ್ಲೇಖಿಸಿಲ್ಲ? ಇದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ದಿವ್ಯ ನಿರ್ಲಕ್ಷ್ಯವಲ್ಲದೇ ಮತ್ತೇನು ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ?

ಹೌದು…ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ದಿವ್ಯ ನಿರ್ಲಕ್ಕ್ಷ್ಯದಿಂದಲೇ ಜನಿವಾರ ವಿವಾದ ಮತ್ತೆ ಮರುಕಳಿಸಿದೆ. ಕೇವಲ ಬಾಯಿಗೆ ಮಾತಲ್ಲಿ ಹೇಳೋದು, ಸೂಚನೆ ಕೊಡುವುದಲ್ಲ. ಅಧಿಕೃತವಾಗಿ ಪ್ರಕಟಿಸುವ ಸುತ್ತೋಲೆಯಲ್ಲಿ ಪರೀಕ್ಷಾರ್ಥಿಗಳ ಜನಿವಾರ, ಕೊರಳಲ್ಲಿ ಹಾಕುವ ಲಿಂಗುವನ್ನು ತೆಗೆಯುವಂತಿಲ್ಲ ಎಂಬ ಅಂಶವನ್ನು ಕೆಇಎ ಉಲ್ಲೇಖಿಸಬಹುದಿತ್ತು. ಆ ವಸ್ತು ನಿಷೇಧ, ಇದು ನಿಷೇಧ ಅಂತೆಲ್ಲಾ ನೂರೆಂಟು ಕಟ್ಟಪ್ಪಣೆಗಳನ್ನು ಹಾಕಿ ಸುತ್ತೋಲೆಯಲ್ಲಿನ್ನು ಹೊರಡಿಸುವ ಕೆಇಎ, ಜನಿವಾರ-ಕೊರಳಿನ ಲಿಂಗು ಬಗ್ಗೆ ಏಕೆ ಉಲ್ಲೇಖಿಸಿಲ್ಲ ಎನ್ನುವುದೇ ಪ್ರಶ್ನೆ.

ಇದನ್ನೂ ಓದಿ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಜನಿವಾರ ದಂಗಲ್: ವಿವಾದ ಬೆನ್ನಲ್ಲೇ ಮೂವರು ವಶಕ್ಕೆ

ಕಳೆದ ವರ್ಷ ಇದೇ ವಿಚಾರಕ್ಕೆ ದೊಡ್ಡ ರದ್ದಾಂತವಾಗಿತ್ತು.ರಾಜಕೀಯ ಕೆಸರೆರೆಚಾಟಕ್ಕೂ ಕಾರಣವಾಗಿತ್ತು. ಆದರೂ ಕೆಇಎ ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ಜನಿವಾರ ಪ್ರಕರಣ ಈ ವರ್ಷವೂ ಸಹ ಮುನ್ನೆಲೆಗೆ ಬಂದಿದ್ದು, ಇದು ಕೆಇಎ ಕಾರ್ಯವೈಖರಿಯ ಹಿಡಿದ ಕನ್ನಡಿಯಾಗಿದೆ. ಅಲ್ಲದೇ ಪ್ರತಿ ವರ್ಷವೂ ಹುಟ್ಟಿಕೊಳ್ಳುವ ಈ ರೀತಿಯ ವಿವಾದಗಳಿಗೆ ಕೆಇಎ ಕಾರಣ. ಹೀಗಾಗಿ ಸರ್ಕಾರ, ಕೇವಲ ಕೆಳ ಹಂತದ ಅಧಿಕಾರಿಗಳು ಅಥವಾ ಪರೀಕ್ಷಾ ಕೇಂದ್ರ ಆಫೀರ್ಸ್​ ಮೇಲೆ ಕ್ರಮಕೈಗೊಂಡು ಕೈತೊಳೆದುಕೊಂಡರೆ ಸಾಲದು, ಯಾವುದೇ ಕಟ್ಟು ನಿಟ್ಟಿನ ಅಧಿಕೃತ ಸುತ್ತೋಲೆಯಲ್ಲಿ ತಿಳಿಸದೇ ನಿರ್ಲಕ್ಷ್ಯ ತೋರಿದ ಸಂಬಂಧಿಸಿದ ಕೆಇಎ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಬೇಕು. ಮನೆ ಯಜಮಾನನಿಗೆ ಬಿಸಿ ಮುಟ್ಟಿದಾಗ ಮಾತ್ರ ಈ ರೀತಿಯ ಪ್ರಕರಣ, ವಿವಾದಗಳು ಮತ್ತೆ ಮತ್ತೆ ಮರುಕಳುಹಿಸುವುದಿಲ್ಲ. ಹಾಗೇ ಯಾರದ್ದೋ ನಿರ್ಲಕ್ಷ್ಯಕ್ಕೆ ಇನ್ನಾರೋ ಶಿಕ್ಷೆಗೆ ಗುರಿಯಾಗುವುದು ತಪ್ಪಿದಂತಾಗುತ್ತೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version