Headlines

ಸಾಯಿ ಪಲ್ಲವಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಮಣಿರತ್ನಂ

ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಅವರು ಈಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಮಣಿರತ್ನಂ ಅವರು. ಈ ಸಿನಿಮಾಗೆ ಸಾಯಿ ಪಲ್ಲವಿ ನಾಯಕಿ. ಈ ಚಿತ್ರ ಇನ್ನು ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭಿಸಲಿದೆ. ಮಣಿರತ್ನಂ ಅವರು ‘ಥಗ್ ಲೈಫ್’ ಹೆಸರಿನ ಸಿನಿಮಾ ಮಾಡಿದರು. ಕಮಲ್ ಹಾಸನ್ ಜೊತೆ ಮಾಡಿದ ಈ ಚಿತ್ರ ಅಟ್ಟರ್ ಫ್ಲಾಪ್…

Read More

WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್​ಗೇರಿದ ಗುಜರಾತ್ – Kannada News | WPL 2026: Gujarat Giants Beat MI, Secure Playoff Spot. Mumbai’s Fate in Delhi’s Match

ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ವಡೋದರಾದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸುವ ಮೂಲಕ ಪ್ಲೇಆಫ್‌ಗೇರಿದೆ. ಇದು ಮಾತ್ರವಲ್ಲದೆ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮಣಿಸಿದ ದಾಖಲೆಗೆ ಗುಜರಾತ್ ಕೊರಳೊಡ್ಡಿದೆ. ಇನ್ನು ಈ ಪಂದ್ಯದಲ್ಲಿ ಸೋತರೂ ಮುಂಬೈ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶವಿದೆ. ಆದರೆ ನಾಳೆ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ತಂಡ ಸೋತರಷ್ಟೇ ಮುಂಬೈ ಪ್ಲೇಆಫ್‌ಗೇರಲಿದೆ. ಇಂದು ನಡೆದ ಪಂದ್ಯದಲ್ಲಿ…

Read More

ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ – Kannada News | PM Narendra Modi Receives Ceremonial Guard of Honour in Seychelles

ವಿಕ್ಟೋರಿಯಾ, ಜೂನ್ 28: ಪ್ರಧಾನಿ ನರೇಂದ್ರ ಮೋದಿ (PM Modi) ತಮ್ಮ ಐತಿಹಾಸಿಕ 3 ದಿನಗಳ ಪ್ರವಾಸದ ಅಂಗವಾಗಿ ಸೆಶೆಲ್ಸ್‌ಗೆ ತೆರಳಿದ್ದಾರೆ. ಈ ವೇಳೆ ಸೆಶೆಲ್ಸ್​ನ ಸ್ಟೇಟ್ ಹೌಸ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸರ್ಕಾರಿ ಗೌರವ ವಂದನೆಯನ್ನು ನೀಡಲಾಯಿತು. ಇದು ಉಭಯ ದೇಶಗಳ ನಡುವಿನ 50 ವರ್ಷಗಳ ರಾಜತಾಂತ್ರಿಕ ಬಾಂಧವ್ಯದ ಸಂಕೇತವಾಗಿದೆ. ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನೀ ಆತ್ಮೀಯವಾಗಿ ಸ್ವಾಗತಿಸಿದರು. ಸೆಶೆಲ್ಸ್ ಅಧ್ಯಕ್ಷ ಹರ್ಮಿನೀ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ…

Read More

ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ – Kannada News | India US Energy: Jaishankar Highlights Stable, Affordable Supply & Trade Boost

ಜೈಶಂಕರ್ ಮತ್ತು ಮಾರ್ಕೊ ರುಬಿಯೋImage Credit source: PTI ನವದೆಹಲಿ, ಮೇ 24: ಕಡಿಮೆ ಇಂಧನ ದರ ಹಾಗೂ ಸ್ಥಿರ ಪೂರೈಕೆ, ಇವೆರಡೂ ವಿಶ್ವಕ್ಕೆ ಇವತ್ತು ಬಹಳ ಮುಖ್ಯ ಎಂದು ಭಾರತ ಹಾಗು ಅಮೆರಿಕ ನಿಲುವು ವ್ಯಕ್ತಪಡಿಸಿವೆ. ಇಂದು ಭಾನುವಾರ ಇಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೊತೆ ನಡೆದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಅವರು ಭಾರತ ಮತ್ತು ಅಮೆರಿಕ ನಡುವಿನ…

Read More

ಹೀನಾಯವಾಗಿ ಕುಸಿದ ‘ದಿ ಕೇರಳ ಸ್ಟೋರಿ 2’ ಬಾಕ್ಸ್ ಆಫೀಸ್ ಕಲೆಕ್ಷನ್ – Kannada News | The Kerala Story 2 movie Box Office collection declines after day 4

ವಿವಾದದ ಮೂಲಕವೇ ಭಾರಿ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ರಿಲೀಸ್ ಆದ ಈ ಚಿತ್ರಕ್ಕೆ ಹೇಳಿಕೊಳ್ಳುವಂತಹ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ. ಆದ್ದರಿಂದ ಬಾಕ್ಸ್ ಆಫೀಸ್ ಕಲೆಕ್ಷನ್ (Box Office Collection) ಮೇಲೆ ಪೆಟ್ಟು ಬಿದ್ದಿದೆ. ಎರಡು ಮತ್ತು ಮೂರನೇ ದಿನ ಸ್ವಲ್ಪ ಚೇತರಿಕೆ ಕಂಡಿದ್ದ ಬಾಕ್ಸ್ ಆಫೀಸ್ ನಂಬರ್ ನಂತರದ ದಿನಗಳಲ್ಲಿ ಕುಸಿಯಲು ಆರಂಭ ಆಗಿದೆ. ‘ದಿ ಕೇರಳ ಸ್ಟೋರಿ 2’ (The Kerala…

Read More

ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ: ಧಾರಾಕಾರ ಮಳೆಗೆ ಹಲವು ಅವಾಂತರ

ಬೆಂಗಳೂರು, ಮಾರ್ಚ್​ 28: ರಣರಣ ಅಂತಿರೋ ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ. ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು…

Read More

ಕಲೆ, ಪಾಚಿ ಕಟ್ಟಿದ ಪ್ಲಾಸ್ಟಿಕ್‌ ಬಕೆಟ್‌ಗಳನ್ನು ನಿಮಿಷದಲ್ಲೇ ಕ್ಲೀನ್‌ ಮಾಡುತ್ತೆ ಈ ಮನೆಮದ್ದು – Kannada News | These home remedies can help you clean stains stuck on plastic buckets and mugs

ಸಾಮಾನ್ಯವಾಗಿ ಪ್ರತಿ ಮನೆಗಳಲ್ಲೂ ಬಾತ್‌ರೂಮ್‌ಗಳಲ್ಲಿ ಪ್ಲಾಸ್ಟಿಕ್‌ ಬಕೆಟ್‌ (plastic buckets), ಮಗ್‌ಗಳನ್ನೇ ಬಳಸುವುದು. ಇವುಗಳ ನಿರಂತರ ಬಳಕೆಯಿಂದಾಗಿ, ಬಕೆಟ್‌ಗಳ ಹೊಳಪು ಕಳೆದುಹೋಗುತ್ತದೆ ಮತ್ತು ಅದರ ಮೇಲೆ ಹಳದಿ ಬಣ್ಣದ ಕೊಳೆ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ, ಬಕೆಟ್ ತುಂಬಾ ಕೊಳಕಾಗಿ ಕಾಣುತ್ತದೆ. ಹಾಗಾಗಿ ಇವುಗಳನ್ನು ಸ್ವಚ್ಛಗೊಳಿಸಲು ಹೆಚ್ಚಿನವರು ದುಬಾರಿ ಕ್ಲೀನರ್‌ಗಳ ಮೊರೆ ಹೋಗುತ್ತಾರೆ. ಆದರೆ ಇವುಗಳು ಅಷ್ಟು ಪರಿಣಾಮಕಾರಿಯಾಗಿ ಬಕೆಟ್‌ಗಳ ಕೊಳೆಗಳನ್ನು ತೆಗೆದುಹಾಕುವುದಿಲ್ಲ. ಬಕೆಟ್‌ನ ಮೂಲ ಹೊಳಪು ಹೆಚ್ಚಾಗಿ ಹಿಂತಿರುಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಈ ಕೆಲವು ಸರಳ ಮನೆಮದ್ದುಗಳನ್ನು ಬಳಸಿಕೊಂಡು…

Read More

ದಿಲೀಪ್ ರಾಜ್ ಕೊನೆಯ ಕ್ಷಣಗಳು ಹೇಗಿತ್ತು? ಅಂಬ್ಯುಲೆನ್ಸ್ ನೀಡಿದ್ದರೆ ಉಳಿಯುತ್ತಿತ್ತು ಜೀವ? – Kannada News | Dileep Raj Demise: Auto driver Explains Wife Vidya’s Tragic Fight; Hospital Negligence Questioned

ಕನ್ನಡದ ಜನಪ್ರಿಯ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಇಡೀ ಚಿತ್ರರಂಗವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೇ 13ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ದಿಲೀಪ್ ರಾಜ್ ಅವರನ್ನು ಉಳಿಸಿಕೊಳ್ಳಲು ಅವರ ಪತ್ನಿ ಶ್ರೀವಿದ್ಯಾ ನಡೆಸಿದ ಹೋರಾಟ ಈಗ ಕಣ್ಣೀರು ತರಿಸುವಂತಿದೆ. ಆ ಕೊನೆಯ ಕ್ಷಣಗಳಲ್ಲಿ ನಡೆದಿದ್ದೇನು ಎಂಬುದನ್ನು ಸ್ವತಃ ಆಟೋ ಚಾಲಕ ದೇವೇಂದ್ರ ನಾಯ್ಡು ವಿವರಿಸಿದ್ದಾರೆ. ‘ನಾನು ದಿಲೀಪ್ ಅವರ ಮನೆಯ ಹತ್ತಿರವೇ ಇದ್ದೆ. ಬೆಳಿಗ್ಗೆ ಸುಮಾರು 6:10ಕ್ಕೆ ಅವರ ಪತ್ನಿ ಶ್ರೀವಿದ್ಯಾ  ಆತಂಕದಿಂದ…

Read More

ಏರ್‌ಪೋರ್ಟ್‌ಗೆ ಬಂದ ಬಾಕ್ಸ್‌ನಲ್ಲಿತ್ತು ಕೊಳೆತ ಟೊಮೆಟೊ, ಅಶ್ಲೀಲ ಚಿತ್ರಗಳು! ಆರೋಪಿ ಕೊಟ್ಟ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು, ಏ.3: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇರೆ ಬೇರೆ ಬೆದರಿಕೆ ಕರೆಗಳು ಬಂದಿರುವುದನ್ನು ನೋಡಬಹುದು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಭಾರೀ ವೈರಲ್​​ ಆಗಿದೆ. ವಿಮಾನ ನಿಲ್ದಾಣದ ಆಡಳಿತ ಕಚೇರಿಗೆ ಅಸಾಮಾನ್ಯ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್​​ವೊಂದು ಬಂದಿದೆ. ಈ ವಿಚಿತ್ರ ಪಾರ್ಸೆಲ್ ಅನ್ನು ಕಳುಹಿಸಿದ ಆರೋಪದ ಮೇಲೆ ಭಾರತೀಯ ಮೂಲದ 65 ವರ್ಷದ ಡಚ್ ಪ್ರಜೆಯನ್ನು ಬಂಧಿಸಲಾಗಿದೆ. ಸುಭಾಷ್ ಜೈ ಅಜೀಜ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬುಧವಾರ…

Read More

ಕಳ್ಳರ ಕೈ ಹಿಡಿಯಲಿಲ್ಲ ಮಂಜುನಾಥ: ಉದ್ಯಮಿ ಮನೆಯಲ್ಲಿ ಕದ್ದು ಸಿಕ್ಕಿಬಿದ್ದ ಗ್ಯಾಂಗ್​ – Kannada News | Vidyaranyapura Businessman’s House Robbed; Police Arrest Four, Including House Workers

ಬೆಂಗಳೂರು, ಜನವರಿ 06: ಉದ್ಯಮಿಯೋರ್ವರ ಮನೆಯಲ್ಲಿ ಬಂಗಾರ, ಬೆಳ್ಳಿ ಮತ್ತು ಹಣ ಕಳ್ಳತನ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಗೋಪಾಲ ಸಿಂಧೆ ಎಂಬವರಿಗೆ ಸೇರಿದ ಲಕ್ಷ್ಮೀಪುರ ಕ್ರಾಸ್ ಬಳಿಯ ಡೊನಾಟಾ ಕೌಂಟಿ ಎಂಬ ವಿಲ್ಲಾದಲ್ಲಿ ಕಳೆದ ಡಿಸೆಂಬರ್ 24ರಂದು ಗ್ಯಾಂ ಕೈಚಳಕ ತೋರಿಸಿತ್ತು. ಪ್ರಕರಣದ ತನಿಖೆ ವೇಳೆ ಮನೆಗೆಲಸದವರೇ ಆರೋಪಿಗಳು ಎಂಬುದು ಗೊತ್ತಾಗಿದ್ದು, ಗ್ಯಾಂ ಪ್ಲ್ಯಾನ್​​ ಕಂಡು ಖಾಕಿಯೇ ಗಾಬರಿಯಾಗಿದೆ. ಮಂಜುನಾಥ, ಚಂದನ್, ನರೇಂದ್ರ ಹಾಗೂ ಮಂಜಿತ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಬರೋಬ್ಬರಿ…

Read More