ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಕೇವಲ 30 ನಿಮಿಷಗಳಲ್ಲಿ ನಗರ ಸ್ತಬ್ಧ – Kannada News | Bengaluru Battles Aftermath of Severe Downpour: Widespread Flooding and Fallen Trees Reported
ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ, ವಸಂತನಗರ, ಹೆಬ್ಬಾಳ ಮತ್ತು ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ತೀವ್ರತೆಗೆ ನಗರದ ಹಲವೆಡೆ ಮರಗಳು ಮತ್ತು ಮರದ ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ಬೆಂಗಳೂರಿನ ಕಮಿಷನರ್ ಕಚೇರಿ ಆವರಣದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಕೆಲವು ವಾಹನಗಳಿಗೆ…