Headlines

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್: ಆಹಾರ ಸಚಿವ ಮಹತ್ವದ ಹೇಳಿಕೆ – Kannada News | Central Government Recognized 7.76 Lakh Illegal BPL Card In Karnataka Says Ministers KH Muniyappa

ಬೆಂಗಳೂರು, (ಜುಲೈ 16): ರಾಜ್ಯದ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ.ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ. ಬಿಪಿಎಲ್​ನಲ್ಲಿದ್ದ 4,32,295 ಜನರನ್ನು ಎಪಿಎಲ್​ಗೆ ಸೇರಿಸಲಾಗಿದೆ. ಇನ್ನುಳಿದವರನ್ನು ಆದಷ್ಟು ಬೇಗ ಎಪಿಎಲ್​ಗೆ ಪರಿವರ್ತನೆ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ಇನ್ನು ಬಿಪಿಎಲ್ ಕಾರ್ಡ್ ಎಪಿಎಲ್ ಆಗಿದ್ರೆ, 15 ದಿನಗಳಲ್ಲಿ ಸರಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ 15 ದಿನದ ಸಮಯ ನೀಡಲಾಗಿದೆ ಎಂದು…

Read More

ಇದು ರೈಲ್ವೆ ಬೋಗಿನಾ ಅಥ್ವಾ ಮನೇನಾ, ಕೋಚ್ ತುಂಬಾ ಒಳ ಉಡುಪುಗಳನ್ನು ನೇತು ಹಾಕಿದ ಮಹಿಳೆಯರು

ಮನಿಹಾರಿ, ಏಪ್ರಿಲ್ 1: ಒಮ್ಮೆ ಈ ರೈಲ್ವೆ ಬೋಗಿಯನ್ನು ನೋಡಿದಾಗ ಇದು ನಿಜವಾಗಿಯೂ ಬೋಗಿಯೇ ಅಥವಾ ಖಾಸಗಿ ವಿಮಾನವೇ ಎನ್ನುವ ಅನುಮಾನ ಮೂಡುತ್ತದೆ. ಯಾಕೆಂದರೆ ಬೇರೆ ಬಟ್ಟೆಗಳು ಹಾಗಿರಲಿ ಒಳ ಉಡುಪುಗಳನ್ನು ಕೂಡ ಮಹಿಳೆಯರು ನೇತುಹಾಕಿದ್ದಾರೆ. ಈ ಘಟನೆ ಮನಿಹಾರಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಇಡೀ ಬೋಗಿಯ ತುಂಬೆಲ್ಲಾ ಬಟ್ಟೆಗಳನ್ನು ಒಣಹಾಕಿದ್ದಾರೆ. ಇವರಿಗೆ ಕಿಂಚಿತ್ತಾದರೂ ನಾಗರಿಕ ಪ್ರಜ್ಞೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ರೈಲ್ವೆ ಆಡಳಿತ ಇಂಥವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎನ್ನುವ ಪ್ರಶ್ನೆಯೂ…

Read More

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು – Kannada News | Tragedy in Mysore: Student’s Sudden Heart Attack at Marimallappa College Sparks Youth Health Fears

ಮೈಸೂರು ವಿದ್ಯಾರ್ಥಿ ಸಾವುImage Credit source: Tv9 kannada ಮೈಸೂರು, ಜೂ.19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕವೂ ಮೂಡಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ (Marimallappa College) ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿರುವುದು ಪೋಷಕರಲ್ಲಿ ಆಂತಕ ಉಂಟು ಮಾಡಿದೆ. ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ…

Read More

GT vs MI: W,W,W.. ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ – Kannada News | IPL 2026: Rabada’s Fiery Spell Decimates Mumbai Indians’ Top Order vs Gujarat Titans

ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಎಂದಿನಂತೆ ಕಳಪೆ ಆರಂಭ ಸಿಕ್ಕಿತು. ಪವರ್‌ಪ್ಲೇನಲ್ಲಿಯೇ ತಂಡದ ಪ್ರಮುಖ 3 ವಿಕೆಟ್​ಗಳು ಪತನವಾದವು. ರಬಾಡ ಅವರ ಮಾರಕ ದಾಳಿಗೆ ತತ್ತರಿಸಿದ ಮುಂಬೈ ಟಾಪ್ ಆರ್ಡರ್ ಬಹುಬೇಗನೇ ಪೆವಿಲಿಯನ್ ಸೇರಿಕೊಂಡಿತು. ವಾಸ್ತವವಾಗಿ ಈ ಪಂದ್ಯಕ್ಕೆ ಮುಂಬೈ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿತ್ತು. ಅದರಂತೆ ರಿಯಾನ್ ರಿಕಲ್ಟನ್ ಬದಲಿಗೆ…

Read More

ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ: ಸಚಿವ ಕೃಷ್ಣ ಭೈರೇಗೌಡ – Kannada News | Bengaluru Footpath Clearance: Minister Krishna Byre Gowda Stands Firm for Public Welfare

ಬೆಂಗಳೂರು, ಜುಲೈ 06: ನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ತೀವ್ರಗೊಂಡಿದ್ದು, ಬುಲ್ಡೋಜರ್‌ಗಳು ಈಗಾಗಲೇ ಅಖಾಡಕ್ಕಿಳಿದಿವೆ. ಈ ಕಾರ್ಯಾಚರಣೆಯ ವಿರುದ್ಧ ದೊಡ್ಡ ಮಟ್ಟದಲ್ಲಿ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಆದರೆ, ನಗರಾಭಿವೃದ್ಧಿ ಸಚಿವರಾದ ಕೃಷ್ಣಭೈರೇಗೌಡ ಅವರು, ಜನರ ಒಳ್ಳೆಯದಕ್ಕಾಗಿ ನಿಷ್ಠುರ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. ಯಾವುದೇ ಸುಧಾರಣೆ ಆಗಬೇಕಾದರೆ ಸವಾಲುಗಳನ್ನು ಎದುರಿಸುವುದು ಅನಿವಾರ್ಯ. ಏನೂ ಪ್ರಯತ್ನ ಮಾಡದೆ ಸುಮ್ಮನಿದ್ದರೆ ಹುದ್ದೆಯಲ್ಲಿ ಇರುವುದು ಸರಿಯಲ್ಲ ಎಂದು ಸಚಿವರು ತಿಳಿಸಿದ್ದಾರೆ. ಒತ್ತುವರಿ ತೆರವಿಗೆ ಶೇಕಡ 80ರಷ್ಟು ಜನರು ಬೆಂಬಲ ಸೂಚಿಸಿದ್ದಾರೆ ಎಂದು ಅವರು…

Read More

Gajakesari Rajayoga: ಜುಲೈ ಮೊದಲ ವಾರದಿಂದ ‘ಗಜಕೇಸರಿ ರಾಜಯೋಗ’; ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ, ಕೈತುಂಬಾ ಹಣ! – Kannada News | Gajakesari Rajayoga July 2026: 4 Lucky Zodiac Signs to Strike Gold and Gain Wealth

ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಜಯೋಗಗಳಿಗೆ ವಿಶೇಷ ಮಹತ್ವವಿದೆ. ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ ಕಾಲಕಾಲಕ್ಕೆ ಹಲವು ಅಪರೂಪದ ಯೋಗಗಳು ಸೃಷ್ಟಿಯಾಗುತ್ತವೆ. ಅವುಗಳಲ್ಲಿ ಅತ್ಯಂತ ಶಕ್ತಿಶಾಲಿ ಮತ್ತು ಶುಭ ಫಲ ನೀಡುವ ಯೋಗವೆಂದರೆ ಅದುವೇ ‘ಗಜಕೇಸರಿ ರಾಜಯೋಗ’. ಜುಲೈ ತಿಂಗಳ ಮೊದಲ ವಾರದಲ್ಲಿ ಈ ಮಹಾ ರಾಜಯೋಗವು ರೂಪುಗೊಳ್ಳುತ್ತಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಗಳ ಮೇಲಿರಲಿದೆ. ಆದರೆ, ವಿಶೇಷವಾಗಿ 4 ರಾಶಿಯವರಿಗೆ ಈ ಸಮಯವು ಅತ್ಯಂತ ಅದೃಷ್ಟಶಾಲಿಯಾಗಿದ್ದು, ಅವರು “ಮುಟ್ಟಿದ್ದೆಲ್ಲಾ ಚಿನ್ನ”ವಾಗುವಂತಹ ಸುವರ್ಣ ಕಾಲ ಆರಂಭವಾಗಲಿದೆ ಎಂದು ಜ್ಯೋತಿಷ್ಯ ಶಾಸ್ತ್ರಜ್ಞರು…

Read More

IND vs AFG: ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್ – Kannada News

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ಮಾನವ್ ಸುತಾರ್ ಚೊಚ್ಚಲ ಪಂದ್ಯದಲ್ಲಿತೇ ತಮ್ಮ ಛಾಪು ಮೂಡಿಸಿದ್ದಾರೆ. ಮೊದಲು ಬ್ಯಾಟಿಂಗ್​ನಲ್ಲಿ 28 ರನ್​ಗಳ ಇನ್ನಿಂಗ್ಸ್ ಆಡಿದ ಸುತಾರ್, ವಾಷಿಂಗ್ಟನ್ ಸುಂದರ್ ಅವರೊಂದಿಗೆ 54 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು 500 ರನ್​ಗಳ ಗಡಿ ದಾಟಿಸಿದರು. ಸುತಾರ್ ತಮ್ಮ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಬ್ಯಾಟಿಂಗ್‌ ಬಳಿಕ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಸುತಾರ್, ತಾನು…

Read More

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ತನಿಖೆ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಚಿಕ್ಕಬಳ್ಳಾಪುರ ಎಸ್​​ಪಿ

ಬೆಂಗಳೂರು, ಮೇ.31: ಬಾಗೇಪಲ್ಲಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ದುರ್ಘಟನೆ ನಡೆದಿದೆ. ಗಾರೆ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಹತ್ತು ಜನರನ್ನು (ಒಬ್ಬ ಚಾಲಕ ಮತ್ತು ಒಂಬತ್ತು ಮಹಿಳೆಯರು) ಕರೆದೊಯ್ಯುತ್ತಿದ್ದ ಆಟೋಗೆ, ಅತಿ ವೇಗವಾಗಿ ಬಂದ ಥಾರ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮದಿಂದ, ಆಟೋ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿ ಮತ್ತು ಥಾರ್ ವಾಹನಗಳ ನಡುವೆ ಸಿಲುಕಿ…

Read More

ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ – Kannada News | Canada PM Mark Carney to visit India on February 26 on Indo Pacific tour

ನವದೆಹಲಿ, ಫೆಬ್ರವರಿ 23: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣಿಸಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣೆಯ ವ್ಯವಹಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೆನಡಾ ಸರ್ಕಾರದ ಹೇಳಿಕೆ ತಿಳಿಸಿದೆ. “ಪ್ರಧಾನಿ ಕಾರ್ನಿ ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ, ನಂತರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Modi) ಭೇಟಿ ಮಾಡಲಿದ್ದಾರೆ. ಉಭಯ ನಾಯಕರು…

Read More

ನಾನೇ ನಂಬರ್ 1 ಟಾರ್ಗೆಟ್,ಇರಾನ್‌ ನನ್ನ ಹತ್ಯೆಗೆ ಸಂಚು ರೂಪಿಸುತ್ತಿದೆ ಎಂದ ಟ್ರಂಪ್ – Kannada News | Trump: Iran Plotting My Assassination; US Iran Conflict Escalates Amid Attacks

ವಾಷಿಂಗ್ಟನ್, ಜುಲೈ 09: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಸೇನಾ ಸಂಘರ್ಷವು ಈಗ ತುತ್ತತುದಿಗೆ ತಲುಪಿದೆ. ಇರಾನ್ ದೇಶವು ತನ್ನನ್ನು ಹತ್ಯೆ ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಹಸ್ಯ ಸಂಚು ರೂಪಿಸುತ್ತಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಡರಾತ್ರಿ ಅತ್ಯಂತ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ ನ್ಯಾಟೋ ಶೃಂಗಸಭೆಯ ನಡುವೆ ಪತ್ರಕರ್ತರೊಂದಿಗೆ ಮಾತನಾಡಿದ ಟ್ರಂಪ್, “ನಾನು ಇರಾನ್‌ನ ಪ್ರಮುಖ ಮತ್ತು ನಂಬರ್ ಒನ್ ಗುರಿಯಾಗಿದ್ದೇನೆ. ಇರಾನ್ ನಾಯಕತ್ವದ ಕೆಲವು ಶಕ್ತಿಗಳು…

Read More