Virat Kohli: ಈ ಒಂದು ವಿಶ್ವ ದಾಖಲೆ ಬರೆದಿರುವುದು ವಿರಾಟ್ ಕೊಹ್ಲಿ ಒಬ್ಬರೇ..! – Kannada News | Virat Kohli Scripts New World Record in T20 Cricket

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ದೇಶದಲ್ಲಿ 10 ಸಾವಿರ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯು ಕಿಂಗ್ ಕೊಹ್ಲಿಯ ಪಾಲಾಗಿದೆ. ಕೊಹ್ಲಿ ಭಾರತದಲ್ಲಿ ಐಪಿಎಲ್​ನಲ್ಲಿ 7,933 ರನ್​ ಗಳಿಸಿದರೆ, ಚಾಂಪಿಯನ್ಸ್​ ಟ್ರೋಫಿ ಟಿ20 ಲೀಗ್​ನಲ್ಲಿ 311 ರನ್​ ಬಾರಿಸಿದ್ದಾರೆ. ಇನ್ನು ಟೀಮ್ ಇಂಡಿಯಾ ಪರ ಕಣಕ್ಕಿಳಿದಾಗ ಭಾರತದ ಪಿಚ್​ನಲ್ಲಿ 1577 ರನ್​ಗಳಿಸಿದ್ದಾರೆ. ಹಾಗೆಯೇ ಸೈಯದ್ಯ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ 179 ರನ್​ ಬಾರಿಸಿದ್ದಾರೆ.

Source link

ಹೀಗೂ ಸಂಬಂಧದಲ್ಲಿ ಇರ್ತಾರಾ? ತಮ್ಮ ಬಗ್ಗೆ ಶಾಕಿಂಗ್ ವಿಷಯ ರಿವೀಲ್ ಮಾಡಿದ ರಕುಲ್ – Kannada News | Rakul Preet and Jackky’s Situationship Marriage: Actress Clarifies Misinterpretation

ರಕುಲ್ ಪ್ರೀತ್ ಸಿಂಗ್ (Rakul) ಹಾಗೂ ಜಾಕಿ ಭಗ್ನಾನಿ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರದ್ದು ಲವ್ ಮ್ಯಾರೇಜ್. ರಕುಲ್ ಅವರು ನಟಿ. ಜಾಕಿ ಬಾಲಿವುಡ್​​ನ ಖ್ಯಾತ ನಿರ್ಮಾಪಕ. ಈಗ ಅವರು ಸಂದರ್ಶನ ಒಂದರಲ್ಲಿ ಮಾತನಾಡಿರುವ ವಿಷಯ ಚರ್ಚೆಗೆ ಗ್ರಾಸವಾಗಿದೆ. ‘ನಾವು ಸಿಚ್ಯುವೇಶನ್​ಶಿಪ್​ನಲ್ಲಿ ಇದ್ದೇವೆ’ ಎಂದಿದ್ದಾರೆ. ಸಿಚ್ಯುವೇಶನ್​​ಶಿಪ್ ಎಂದರೆ ಯಾವುದೇ ಕಮಿಟ್​​ಮೆಂಟ್ ಇಲ್ಲದೆ ಸಂಬಂಧವನ್ನು ಮುಂದುವರಿಸುವುದು. ಅವರ ಹೇಳಿಕೆಯನ್ನು ನಾನಾ ರೀತಿಯಲ್ಲಿ ಅರ್ಥೈಸಲಾಗುತ್ತಿದೆ.

ರಕುಲ್ ಹಾಗೂ ಜಾಕಿ ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ. ತಮ್ಮ ವಿವಾಹದ ಬಗ್ಗೆ ಜಾಕಿ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ. ‘ರಕುಲ್ ಮತ್ತು ನಾನು ವಿವಾಹಿತರು. ಆದರೆ ನಾವು ಸಿಚ್ಯುವೇಶನ್​​ಶಿಪ್​ನಲ್ಲಿದ್ದೇವೆ. ಆದಾಗ್ಯೂ ನಮ್ಮ ಮಧ್ಯೆ ಬದ್ಧತೆ ಇದೆ. ಏಕೆಂದರೆ ನಾವು ಮದುವೆ ಆಗಿದ್ದೇವೆ. ಅತ್ಯಂತ ಮುಖ್ಯವಾದ ವಿಷಯವೆಂದರೆ ನಾನು ಅವಳೊಂದಿಗೆ ಯಾವುದೇ ವಿಷಯದ ಬಗ್ಗೆ ಮಾತನಾಡಬಲ್ಲೆ’ ಎಂದು ಜಾಕಿ ಹೇಳಿದ್ದಾರೆ.

‘ನಮಗೆ ಈಗ 20-21 ವರ್ಷ ಅಲ್ಲ ಎಂದು ಒಬ್ಬರಿಗೊಬ್ಬರು ಹೇಳಿಕೊಂಡೆವು. ನಾವಿಬ್ಬರೂ ಅನೇಕ ಏರಿಳಿತಗಳನ್ನು ಕಂಡಿದ್ದೇವೆ. ನಾನು ಯಾವಾಗಲೂ ಖುಷಿಯಿಂದ ಇರುವ ವ್ಯಕ್ತಿ. ನಾನು ಖುಷಿಯಾಗಿರಲು ಇನ್ಯಾರೋ ಬೇಕಿಲ್ಲ. ಒಂದೊಮ್ಮೆ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದರೆ ಯಾರೇ ಬಂದರೂ ನಾನು ಖಿನ್ನತೆಯಿಂದಲೇ ಇರುತ್ತೇನೆ. ರಕುಲ್ ಸದಾ ಖುಷಿಯಿಂದ ಇರುವ ಹುಡುಗಿ. ನಾನು ಕೂಡ. ಹೀಗಾಗಿ ಇಬ್ಬರೂ ಸೇರಿ ಮತ್ತಷ್ಟು ಖುಷಿಯಾಗಿದ್ದೇವೆ’ ಎಂದರು ಜಾಕಿ.

ಜಾಕಿ ಮಾತನಾಡಿದ ವಿಷಯದಲ್ಲಿ ಸಿಚ್ಯುವೇಶನ್​ಶಿಪ್ ವಿಷಯ ತುಂಬಾನೇ ಹೈಲೈಟ್ ಆಗಿದೆ. ಈ ವಿಷಯ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಸೋಶಿಯಲ್ ಮೀಡಿಯಾದಲ್ಲಿ ಇದುವೇ ಚರ್ಚೆ ಆಗಿದೆ. ಇದಕ್ಕೆ ರಕುಲ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ರಕುಲ್ ಪ್ರೀತ್ ಮಾವನಿಂದ ಐಷಾರಾಮಿ ಪ್ರಾಪರ್ಟಿ ಖರೀದಿಸಿದ ಖ್ಯಾತ ಕ್ರಿಕೆಟರ್

‘ನಾವು ತುಂಬಾನೇ ಮಾತನಾಡಿದ್ದೇವೆ. ಆದರೆ, ಒಂದೇ ಒಂದು ಸಾಲನ್ನು ಹೇಗೆ ಹೆಡ್​​ಲೈನ್ ಮಾಡಲಾಗುತ್ತದೆ ಎಂಬುದನ್ನು ನೋಡಿ ನಗು ಬಂತು. ಸಂದರ್ಭ ಅನ್ನೋದು ಮುಖ್ಯವಾಗುತ್ತದೆ’ ಎಂದು ಅವರು ಹೇಳಿದ್ದಾರೆ. ಉಳಿದ ಸಂಬಂಧಗಳಂತೆ ನಮ್ಮ ಸಂಬಂಧದಲ್ಲಿ ಹೆಚ್ಚು ಕಮಿಟ್​​ಮೆಂಟ್ ಇಲ್ಲ ಎಂದು ಹೇಳುವ ಪ್ರಯತ್ನವನ್ನು ಅವರು ಮಾಡಿದ್ದರು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿರುವ ರಾಜ್ಯದಲ್ಲಿಂದು ಗುಡುಗು ಸಹಿತ ಆಲಿಕಲ್ಲು ಮಳೆ! 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka Weather Forecast: Heatwave in Coastal area, Hailstorm in North interior Karnataka, Orange alert

ಕಾದ ಕೆಂಡದಂತಾಗಿರುವ ರಾಜ್ಯದಲ್ಲಿಂದು ಗುಡುಗು ಸಹಿತ ಆಲಿಕಲ್ಲು ಮಳೆ!Image Credit source: MediaForge AI

ಬೆಂಗಳೂರು, ಏಪ್ರಿಲ್ 25: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ  (Karnataka Weather) ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ 30-40 ಕಿ. ಮೀ ವೇಗದಲ್ಲಿ ಗಾಳಿಯೂ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉಷ್ಣ ಅಲೆ

ಕರಾವಳಿಯ ತಾಪಮಾನದಲ್ಲಿ ಏರುಪೇರಾಗುತ್ತಿದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿಹೋಗಿದ್ದಾರೆ. ಇಂದು ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್​ ವೇವ್ ಅಲರ್ಟ್​ ಘೋಷಿಸಲಾಗಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೆಚ್ಚುತ್ತಿದೆ ಬಿಸಿಲ ಬೇಗೆ: ಹೀಟ್ ಸ್ಟ್ರೋಕ್ ಎದುರಿಸಲು ಆರೋಗ್ಯ ಇಲಾಖೆ ಸಜ್ಜು, ಏನೇನು ಕ್ರಮ? ಇಲ್ಲಿದೆ ವಿವರ – Kannada News | Karnataka Heatwave Alert: Health Department Opens Special Heatstroke Wards in Hospitals Across the State

ಸಾಂದರ್ಭಿಕ ಎಐ ಚಿತ್ರImage Credit source: MediaForge AI

ಬೆಂಗಳೂರು, ಏಪ್ರಿಲ್ 25: ಕರ್ನಾಟದಲ್ಲಿ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಹಿಂದೆ ಬಳ್ಳಾರಿ, ಕಲಬುರಗಿ, ರಾಯಚೂರಿನಂತಹ ಜಿಲ್ಲೆಗಳಿಗೆ ಸೀಮಿತವಾಗಿದ್ದ ಉಷ್ಣ ಅಲೆ (Heat Wave) ಈಗ ಬೆಂಗಳೂರಿಗರನ್ನೂ (Bangalore) ಬೆವರಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಉಷ್ಣಾಂಶ ಈಗಾಗಲೇ 36 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ್ದು, ಅತಿಯಾದ ಶಾಖದಿಂದ ಜನರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಆಸ್ಪತ್ರೆಗಳಲ್ಲಿ ‘ನಿರ್ವಹಣಾ ಕೊಠಡಿ’ ಸ್ಥಾಪನೆ

ಬಿಸಿಗಾಳಿ ಹಾಗೂ ಹೀಟ್ ಸ್ಟ್ರೋಕ್‌ನಿಂದ ಬಾಧಿತರಾಗುವವರಿಗೆ ತುರ್ತು ಚಿಕಿತ್ಸೆ ನೀಡಲು ಸರ್ಕಾರ ವಿಶೇಷ ಸುತ್ತೋಲೆ ಹೊರಡಿಸಿದೆ. ಜುಲೈ 31ರವರೆಗೆ ಜಾರಿಯಲ್ಲಿರುವಂತೆ ರಾಜ್ಯದಾದ್ಯಂತ ವಿಶೇಷ ವಾರ್ಡ್‌ಗಳನ್ನು ತೆರೆಯಲಾಗುತ್ತಿದೆ.

  • ಸಮುದಾಯ ಆರೋಗ್ಯ ಕೇಂದ್ರಗಳು: ತಲಾ 2 ಬೆಡ್‌ಗಳು
  • ತಾಲೂಕು ಆಸ್ಪತ್ರೆಗಳು: ತಲಾ 5 ಬೆಡ್‌ಗಳು
  • ಜಿಲ್ಲಾಸ್ಪತ್ರೆಗಳು: ತಲಾ 10 ಬೆಡ್‌ಗಳ ಪ್ರತ್ಯೇಕ ನಿರ್ವಹಣಾ ಕೊಠಡಿ

ಈ ಕೊಠಡಿಗಳಲ್ಲಿ ಫ್ಯಾನ್, ಏರ್ ಕೂಲರ್, ಐಸ್ ಕ್ಯೂಬ್ಸ್, ಥರ್ಮಾಮೀಟರ್ ಮತ್ತು ಓಆರ್‌ಎಸ್ (ORS) ಕಾರ್ನರ್‌ಗಳನ್ನು ಕಡ್ಡಾಯವಾಗಿ ಸ್ಥಾಪಿಸಲು ಸೂಚಿಸಲಾಗಿದೆ.

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಈಗಾಗಲೇ 5 ಬೆಡ್‌ಗಳ ಪ್ರತ್ಯೇಕ ‘ಹೀಟ್ ಸ್ಟ್ರೋಕ್ ವಾರ್ಡ್’ ಸಜ್ಜಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆಯ ಡೀನ್ ಡಾ. ಲಕ್ಷ್ಮೀಪತಿ ಅವರು, ‘ಬಿಸಿಲಿನಿಂದ ಅಸ್ವಸ್ಥರಾಗುವವರಿಗೆ ಚಿಕಿತ್ಸೆ ನೀಡಲು ಅಗತ್ಯ ಔಷಧಿಗಳು ಹಾಗೂ ತಂಪಾದ ವಾತಾವರಣದ ವ್ಯವಸ್ಥೆ ಮಾಡಲಾಗಿದೆ’ ಎಂದಿದ್ದಾರೆ. ಇದೇ ರೀತಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಾಣಿ-ಪಕ್ಷಿಗಳಿಗೂ ಹಸಿರು ರಕ್ಷಣೆ

ಬಿಸಿಲಿನ ಪ್ರಭಾವ ಕೇವಲ ಮನುಷ್ಯರ ಮೇಲಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳ ಮೇಲೂ ಆಗುತ್ತಿದೆ. ಬೆಳಗಾವಿಯ ಪಕ್ಷಿ ಸಂಗ್ರಹಾಲಯದಲ್ಲಿ ಸ್ಪ್ರಿಂಕ್ಲರ್‌ಗಳ (Sprinklers) ವ್ಯವಸ್ಥೆ ಮಾಡಲಾಗಿದ್ದು, ಪಕ್ಷಿಗಳ ಆಹಾರ ಕ್ರಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಹತ್ವದ ಬದಲಾವಣೆ ಮಾಡಿದ್ದಾರೆ.

ಇದನ್ನೂ ಓದಿ: ಹೀಟ್ ವೇವ್ ಎದುರಿಸಲು ಮೈಸೂರಿನ ಆಸ್ಪತ್ರೆ ಸನ್ನದ್ಧ; ರೋಗಿಗಳಿಗಾಗಿ ಬೆಡ್ ಮೀಸಲು, ವಾರ್ಡ್‌ನಲ್ಲಿ ಎಸಿ, ಫ್ಯಾನ್ ಅಳವಡಿಕೆ!

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಎಲ್ಲಾ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೀಟ್ ಸ್ಟ್ರೋಕ್ ನಿರ್ವಹಣೆ ಕುರಿತು ತರಬೇತಿ ನೀಡಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 25, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಅಷ್ಟಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.

ರವಿ ಗ್ರಹವು ಮೇಷ ರಾಶಿಯಲ್ಲಿ ಮತ್ತು ಚಂದ್ರ ಗ್ರಹವು ಕರ್ಕಾಟಕ ರಾಶಿಯ ಆಶ್ಲೇಷ ನಕ್ಷತ್ರದಲ್ಲಿ ಸಂಚರಿಸುತ್ತಿವೆ. ಈ ದಿನವನ್ನು ಸೀತಾ ನವಮಿ, ಸೌರ ಶ್ರೀರಾಮ ನವಮಿ ಹಾಗೂ ವಿಶ್ವ ಮಲೇರಿಯಾ ದಿನವನ್ನಾಗಿ ಆಚರಿಸಲಾಗುತ್ತದೆ. ಗುರೂಜಿ ಅವರು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ಪ್ರತಿಯೊಂದು ರಾಶಿಗೂ ಗ್ರಹಗಳ ಸಂಚಾರದ ಆಧಾರದ ಮೇಲೆ ವೈಯಕ್ತಿಕ ಫಲಾಫಲಗಳನ್ನು ವಿವರಿಸಿದ್ದಾರೆ.

 

 

 

Source link

Daily Devotional: ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ! – Kannada News | How to Escape the Debt Trap with Daily Devotional Practices

ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಮಾರ್ಗ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ ಸಾಲ ಪಡೆಯುವ ಮೊದಲು ಕುಬೇರನನ್ನು ಸ್ಮರಿಸುವುದು ಶುಭವೆಂದು ಹೇಳಲಾಗುತ್ತದೆ. ಮನೆಯಲ್ಲಿ ಒಂದು ರೂಪಾಯಿ ಕಾಯನ್ನು ಅರಿಶಿನ ಬಟ್ಟೆಯಲ್ಲಿ ಕಟ್ಟಿ ದೇವರ ಬಳಿ ಇಟ್ಟು, ಲಕ್ಷ್ಮಿ ಕುಬೇರರಿಗೆ ಪ್ರಾರ್ಥನೆ ಸಲ್ಲಿಸಿ ಸಾಲಕ್ಕೆ ಹೊರಟರೆ, ಅದು ಸುಲಭವಾಗಿ ತೀರುತ್ತದೆ. ಸಾಲವನ್ನು ಮರುಪಾವತಿಸುವಾಗ ದಕ್ಷಿಣಾಮೂರ್ತಿಯನ್ನು ನೆನೆದು ಹಣವನ್ನು ನೀಡಬೇಕು.

ಮಂಗಳವಾರದಂದು ಸಾಲವನ್ನು ಮರುಪಾವತಿಸಲು ಪ್ರಾರಂಭಿಸಿದರೆ, ಮೂರು ಮಂಗಳವಾರಗಳ ಒಳಗೆ ಸಾಲ ಬೇಗ ತೀರುತ್ತದೆ. ಹಾಗೆಯೇ, ಸೋಮವಾರ ಅಥವಾ ಗುರುವಾರದಂದು ಸಾಲವನ್ನು ಪಡೆದರೆ, ಅದನ್ನು ಸುಲಭವಾಗಿ ತೀರಿಸಲು ಸಾಧ್ಯವಾಗುತ್ತದೆ. ಯಾವುದೇ ಕಾರಣಕ್ಕೂ ಶನಿವಾರದಂದು ಹಣಕಾಸಿನ ವಹಿವಾಟುಗಳನ್ನು ಮಾಡುವುದು ಶುಭವಲ್ಲ. ಈ ಸಣ್ಣ ತಂತ್ರಗಳನ್ನು ಪಾಲಿಸುವುದರಿಂದ ಸಾಲದ ಸಂಕಷ್ಟದಿಂದ ಹೊರಬರಲು ಸಹಾಯವಾಗುತ್ತದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

 

 

 

Source link

ದಿನ ಭವಿಷ್ಯ: ಇಂದು ಈ ರಾಶಿಯವರ ನಿರೀಕ್ಷೆಯು ಶತ್ರುಗಳು ಹುಸಿ ಮಾಡುವರು – Kannada News | Horoscope April 25 Satursday 2026; Dina Rashi Bhavishya Today, Checkout the details here

ಮೇಷ ರಾಶಿ:

ಇಂದು ನಿಮ್ಮ ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವಾಹನಗಳು, ಜಮೀನುಗಳನ್ನು ಖರೀದಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗ ಹಾಗೂ ಉತ್ತಮ ಮಾರ್ಗದರ್ಶನ ಎರಡೂ ಸಿಗುವುದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ನೀವು ಯಾರಿಂದಲೂ ಸಲಹೆಯನ್ನು ಪಡೆಯಲು ಇಷ್ಟಪಡುವುದಿಲ್ಲ.

ವೃಷಭ ರಾಶಿ:

ನಿಮಗೆ ಮನೆ ನಿರ್ಮಾಣ ಮಾಡಲು ಆರ್ಥಿಕತೆಯನ್ನು ಹೊಂದಿಸಬೇಕಾಗುವುದು. ವ್ಯವಹಾರಗಳು ವಿಸ್ತರಣೆಯಲ್ಲಿ ಯಶಸ್ವಿಯಾಗುತ್ತವೆ. ಉದ್ಯೋಗಿಗಳಿಗೆ ಉನ್ನತ ಸ್ಥಾನಮಾನ ಪ್ರಾಪ್ತಿ‌. ಹೊಸ ಕೆಲಸವನ್ನು ಆರಂಭಿಸುವ ಹುನ್ನಾರ ನಡೆಸುವಿರಿ. ನಂಬುಗೆಯನ್ನು ಉಳಿಸಿಕೊಳ್ಳುವ ಕಾರ್ಯವನ್ನು ಮಾಡಬೇಕು. ಇದು ಸಮಸ್ಯೆಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ.

ಮಿಥುನ ರಾಶಿ:

ಸಾಲದ ಸಮಸ್ಯೆಗಳು ಹೆಚ್ಚಾಗಿ ಬಗೆಹರಿಯುತ್ತವೆ. ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಗುತ್ತಿಗೆದಾರರಿಗೆ ಹೊಸ ಭರವಸೆಗಳು ಮೂಡಲಿವೆ. ಒಂದಿಲ್ಲೊಂದು ವಿಷಯಗಳಿಂದ ಸುಖವನ್ನು ಪಡೆಯುವ ನಿಮಗೆ ಮುಂಬರುವ ವಿಷಯಗಳನ್ನು ಹೇಗೆ ನಿಭಾಯಿಸಬೇಕು ಎನ್ನುವ ಸ್ಪಷ್ಟತೆಯನ್ನು ಇಟ್ಟುಕೊಂಡಿರುತ್ತೀರಿ. ಶತ್ರುಗಳಿಂದ ಎಚ್ಚರವಾಗಿರಿ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ.

ಕರ್ಕಾಟಕ ರಾಶಿ:

ವಿದ್ಯಾರ್ಥಿಗಳ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವ್ಯವಹಾರಗಳು ಭರದಿಂದ ಸಾಗುತ್ತವೆ. ಉದ್ಯಮಿಗಳಿಗೆ ವ್ಯಾಪಾರಕ್ಕೆ ಸಂಬಂಧಿಸಿದ ಅನಿರೀಕ್ಷಿತ ಪ್ರಯಾಣವು ಬರಲಿದೆ‌. ಇಂದು ಯಾವದೋ ಆತಂಕದಲ್ಲಿ ಇರುವಿರಿ. ನಿಮ್ಮ ಕೀರ್ತಿ ಹೆಚ್ಚಲಿದೆ. ದೂರದಿಂದ ಒಳ್ಳೆಯ ಸುದ್ದಿ ಸಿಗಲಿದೆ. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಹಳೆಯ ಕೆಲಸಗಳು ವ್ಯರ್ಥವಾಗಬಹುದು. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು.

ಸಿಂಹ ರಾಶಿ:

ಕೆಲಸಗಳು ಅನಿರೀಕ್ಷಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕಗಳು ಇರುತ್ತವೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಕುಟುಂಬದ ಬಗ್ಗೆ ಹೆಮ್ಮೆಯ ಭಾವ ಮೂಡುತ್ತದೆ. ನೀವು ಆರಾಮಾಗಿದ್ದೀರಿ ಎಂದು ತೋರಿಸಲು ಹೋಗಬೇಡಿ‌. ನೀವು ಕೆಲಸಕ್ಕೆ ಸಂಬಂಧಿಸಿದಂತೆ ಯಾರೊಂದಿಗಾದರೂ ಸಂವಹನ ನಡೆಸಲು ಪ್ರಯತ್ನಿಸುತ್ತಿದ್ದರೆ, ಇಂದು ನಿಮಗೆ ಅದೃಷ್ಟವನ್ನು ತರಬಹುದು. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ.

ಕನ್ಯಾ ರಾಶಿ:

ಮನೆಯಲ್ಲಿ ಸಣ್ಣ ಸಣ್ಣ ಕೆಲಸಕ್ಕೂ ಧನವನ್ನು ಖರ್ಚು ಮಾಡಬೇಕಾಗಬಹುದು. ಹೊಸ ಜನರ ಪರಿಚಯವು ಸಂತೋಷವನ್ನು ತರುತ್ತದೆ. ಗುತ್ತಿಗೆದಾರರಿಗೆ ಪ್ರೋತ್ಸಾಹಕವಾಗಲಿದೆ. ಮೋಟಾರು ವಾಹನದಿಂದ ಸಂತೋಷ ಇರುತ್ತೆ. ವ್ಯವಹಾರದಲ್ಲಿನ ಅಡೆತಡೆಗಳನ್ನು ನಿವಾರಿಸಿ ಲಾಭದ ಹಾದಿಯಲ್ಲಿ ಸಾಗುತ್ತೀರಿ. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತುಗಳು ಬರಬಹುದು. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ.

ತುಲಾ ರಾಶಿ:

ಇಂದು ನಿಮ್ಮ ಮನಸ್ಸು ಶಕ್ತಿಯನ್ನು ಉಲ್ಬಣಗೊಳಿಸಿಕೊಳ್ಳುವುದು. ಪರಿಹಾರದ ದಾರಿಗಳು ಆ ಕ್ಷಣದಲ್ಲಿ ಸ್ಫುರಿಸುವುದು. ಆರ್ಥಿಕ ಶಕ್ತಿಯನ್ನು ಪಡೆಯುತ್ತೀರಿ. ಸಾಲಗಳನ್ನು ತೀರಿಸುತ್ತೀರಿ. ನಿರುದ್ಯೋಗಿಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗಲಿದೆ.  ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ.

ವೃಶ್ಚಿಕ ರಾಶಿ:

ನಿರುದ್ಯೋಗಿಗಳ ಪ್ರಯತ್ನಗಳು ನಿಧಾನವಾಗಿ ಖುಷಿ ಕೊಡುವುದು. ವ್ಯವಹಾರದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ಮತ್ತು ಉದ್ಯೋಗಗಳಲ್ಲಿ ಬದಲಾವಣೆಗಳು ಉಂಟಾಗಬಹುದು. ಸಿಟ್ಟಿನನ್ನು ಕಡಿಮೆಮಾಡಿಕೊಳ್ಳಲು ಆಗದು. ನಿಮ್ಮ ಹಾದಿಯನ್ನು ನೋಡಿಕೊಳ್ಳುವ ಸಮಯವಿದಾಗಿರುತ್ತದೆ. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಅನಿರೀಕ್ಷಿತವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಸಿಗುವುದು.

ಧನು ರಾಶಿ:

ಮನೆ ನಿರ್ಮಾಣ ಪ್ರಯತ್ನಗಳಲ್ಲಿ ಒಂದು ಹೆಜ್ಜೆ ಮುಂದಿಡುತ್ತೀರಿ. ವ್ಯವಹಾರಗಳು ಭರದಿಂದ ಸಾಗುತ್ತಿವೆ. ಉದ್ಯೋಗಗಳಲ್ಲಿ ಬಡ್ತಿಗಳನ್ನು ಪಡೆಯುತ್ತೀರಿ. ಪ್ರೇಮ ವ್ಯವಹಾರಗಳಲ್ಲಿ ಹೊಂದಾಣಿಕೆ ಬೇಕೆನಿಸುವುದು. ಅದೃಷ್ಟ ನಿಮ್ಮ ಕಡೆ ಇದ್ದರೂ ಅದನ್ನು ಅನುಭವಿಸುವ ಮನೋಭಾವ ಇರಲಿ. ನಿಮ್ಮ ಸಹೋದರರ ಸಹಯೋಗವು ಇಂದು ಆರ್ಥಿಕ ಲಾಭಕ್ಕೆ ಕಾರಣವಾಗುತ್ತದೆ. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು.

ಮಕರ ರಾಶಿ:

ನಿಮ್ಮ ಒಪ್ಪಂದಗಳು ಸುರಕ್ಷಿತವಾಗಿ ಇರುವಂತೆ ನೋಡಿ. ವ್ಯವಹಾರದಲ್ಲಿ ನಿರೀಕ್ಷಿತ ಲಾಭಗಳು ಇರುತ್ತವೆ. ಕೆಲಸಗಳು ರೋಮಾಂಚನ ರೀತಿಯಿಂದ ಮುಂದುವರಿಯುತ್ತವೆ. ರಾಜಕೀಯ ವಲಯದಲ್ಲಿ ಸೇರುವ ಅನಿವಾರ್ಯತೆ ಇರುತ್ತದೆ. ವಿದ್ಯಾರ್ಥಿಗಳು ಯಶಸ್ಸು ಸಾಧಿಸುವರು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ಜವಾಬ್ದಾರಿ ಆಗಿರುವಿರಿ. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ.

ಕುಂಭ ರಾಶಿ:

ವ್ಯವಹಾರಗಳು ವಿಸ್ತರಣೆಯಲ್ಲಿ ಮುಂಚೂಣಿಯಲ್ಲಿರುತ್ತವೆ. ಉದ್ಯೋಗದ ಕೊರತೆ ಮಾಯವಾಗುತ್ತದೆ. ರಾಜಕೀಯ ವಲಯಗಳಲ್ಲಿ ಉತ್ತಮ ಮನ್ನಣೆ ಪಡೆಯಬಹುದು. ಮಾನಸಿಕ ಶಾಂತಿ ಮತ್ತು ಸ್ಥಿರತೆಗೆ ಕಾರಣವಾಗಬಹುದು. ಪ್ರೀತಿಪಾತ್ರರ ಜೊತೆ ವಾದಗಳನ್ನು ಹುಟ್ಟುಹಾಕುವ ವಿಷಯಗಳಿಂದ ದೂರವಿರಿ. ಯಾರ ಮೇಲಾದರೂ ದೋಷಾರೋಪ ಮಾಡುವ ಸಂಭವವಿದೆ. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರುವುದು.

ಮೀನ ರಾಶಿ:

ನಿಮ್ಮ ಯೋಜಿತ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಫಲಿತಾಂಶಗಳಿವೆ. ಭೂವ್ಯವಹಾರದ ಒಪ್ಪಂದಗಳನ್ನು ಮಾಡಿಕೊಳ್ಳುತ್ತೀರಿ. ವ್ಯವಹಾರಗಳು ಲಾಭದಾಯಕವಾಗಿ ನಡೆಯಲಿವೆ. ಹಿರಿಯ ಹಾಗೂ ಪ್ರಮುಖವ್ಯಕ್ತಿಗಳನ್ನು ಇಂದು ಭೇಟಿಯಾಗುತ್ತೀರಿ. ನೀವು‌ ಮಾಡುವ ಕಾರ್ಯಕ್ಕೆ ಇತರರ ಸಹಾಯವೂ ಲಭ್ಯವಾಗಲಿದೆ. ಕಛೇರಿಗೆ ವಿರಾಮವಿದ್ದರೂ ಅನಿರೀಕ್ಷಿತ ಸಭೆಗೆ ಹಾಜಾರಾಗಬೇಕಾದೀತು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮಘಾ, ಯೋಗ : ಸುಕರ್ಮ, ಕರಣ : ವಣಿಜ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:14 – 10:48, ಯಮಗಂಡ ಕಾಲ 13:56 – 15:30, ಗುಳಿಕ ಕಾಲ 06:06 – 07:40

-ಲೋಹಿತ ಹೆಬ್ಬಾರ್ – 8762924271 (what’s app only)

Source link

RCB vs GT: ಕೊಹ್ಲಿ- ಪಡಿಕ್ಕಲ್ ಅರ್ಧಶತಕ; ಆರ್​ಸಿಬಿಗೆ ಚಿನ್ನಸ್ವಾಮಿಯಲ್ಲಿ 50ನೇ ಜಯ – Kannada News | RCB Dominates GT: 5 Wicket Win at Chinnaswamy Propels Them to 2nd Spot in IPL Points Table

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿದ ಆರ್​ಸಿಬಿ, ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿತ್ತು. ಕಳೆದ ಪಂದ್ಯದಲ್ಲಿ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದ ಆರ್​ಸಿಬಿ, ಇದೀಗ ಗುಜರಾತ್ ವಿರುದ್ಧ 5 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಎರಡನೇ ಸ್ಥಾನವನ್ನು ಅಲಂಕರಿಸಿತು. ಇನ್ನು ಚಿನ್ನಸ್ವಾಮಿ ಮೈದಾನದಲ್ಲಿ ಆರ್​​ಸಿಬಿಗೆ ಇದು 50ನೇ ಗೆಲುವಾಗಿದ್ದು, ಮತ್ತಷ್ಟು ವಿಶೇಷವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 206 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 19ನೇ ಓವರ್​ನಲ್ಲಿ ಗೆಲುವಿನ ದಡ ಮುಟ್ಟಿತು.

Source link

ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್: ನಂಬಿಕೆಯ ಬ್ಯಾಂಕ್​​ ಹೀಗೆ ಮಾಡಿದ್ರೆ ಹೇಗೆ? – Kannada News | Bengalurus Indian Bank Branch Rocked by Major Gold Jewellery Theft

ಬೆಂಗಳೂರು, ಏಪ್ರಿಲ್​ 24: ಬ್ಯಾಂಕ್ ಅಂದಮೇಲೆ ಹಣ ಮತ್ತು ಒಡವೆಗೆ ಭದ್ರತೆ ಇರುತ್ತದೆ ಎಂದು ನಂಬುವ ಜನರಿಗೆ ಬೆಂಗಳೂರಿನ ಗಿರಿನಗರದ ಈ ಘಟನೆ ಆಘಾತ ನೀಡಿದೆ. ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ಒಬ್ಬ ತನ್ನ ಬೆಟ್ಟಿಂಗ್ ಚಟಕ್ಕಾಗಿ ಗ್ರಾಹಕರ ಚಿನ್ನಕ್ಕೆ ಕನ್ನ ಹಾಕಿದ್ದು, ಸದ್ಯ ಜಾಮೀನಿನ ಮೇಲೆ ಹೊರಬಂದು ಓಡಾಡುತ್ತಿದ್ದಾನೆ. ಇತ್ತ ಸಾಲ ತೀರಿಸಿದರೂ ತಮ್ಮ ಚಿನ್ನ ಸಿಗದೆ ಗ್ರಾಹಕರು ಪರದಾಡುವಂತಾಗಿದೆ. ಈ ಮೊದಲು ಬ್ಯಾಂಕ್ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಹಕರಿಗೆ ಭರವಸೆ ನೀಡಿತ್ತು. ಆದರೆ, ಮೂರು ತಿಂಗಳ ನಂತರವೂ ಯಾವುದೇ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ. ಎಫ್‌ಐಆರ್ ದಾಖಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಗ್ರಾಹಕರು ಇದೀಗ ಮತ್ತೆ ಪ್ರತಿಭಟನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

RCB vs GT: ಮೊದಲ ಎಸೆತದಲ್ಲೇ ಜೀವದಾನ; ಅಬ್ಬರದ 81 ರನ್ ಬಾರಿಸಿದ ಕೊಹ್ಲಿ – Kannada News | IPL 2026: Virat Kohli’s Explosive 81 After Dropped Catch Powers RCB Batting

ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತಿದೆ. ಫಿಲ್ಡರ್ ಮಾಡುವ ಅದೊಂದೆ ಒಂದು ತಪ್ಪು ತಂಡವನ್ನು ಸೋಲಿನ ದವಡೆಗೆ ಹೇಗೆ ತಳ್ಳುತ್ತದೆ ಎಂಬುದು ಇಂದಿನ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಸಾಭೀತಾಯಿತು. ಐಪಿಎಲ್ 2026 34ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 206 ರನ್ ಕಲೆಹಾಕಿತ. ಈ ಗುರಿ ಬೆನ್ನಟ್ಟಿದ ಆರ್​​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಜೆಕೋಬ್ ಬೆಥೆಲ್ ಇನ್ನಿಂಗ್ಸ್ ಆರಂಭಿಸಿದರು. ಇತ್ತ ಗುಜರಾತ್ ಪರ ಮೊಹಮ್ಮದ್ ಸಿರಾಜ್ ಬೌಲಿಂಗ್ ಆರಂಭಿಸಿದರು. ಸಿರಾಜ್ ಬೌಲ್ ಮಾಡಿದ ಈ ಓವರ್​ನಲ್ಲಿ ಕೊಹ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಕ್ಯಾಚ್ ನೀಡಿದ್ದರು. ಆದರೆ ಆ ಕ್ಯಾಚ್ ಹಿಡಿಯುವಲ್ಲಿ ವಾಷಿಂಗ್ಟನ್ ಸುಂದರ್ ವಿಫಲರಾದರು.

ಮೊದಲ ಎಸೆತದಲ್ಲೇ ಜೀವದಾನ

ಸಿರಾಜ್ ಎಸೆತವನ್ನು ಕೊಹ್ಲಿ ಮಿಡ್ ವಿಕೆಟ್​ ಕಡೆಗೆ ಆಡಿದರು. ಅಲ್ಲಿಯೇ ನಿಂತಿದ್ದ ಸುಂದರ್​ಗೆ ಇದು ಸುಲಭ ಕ್ಯಾಚ್ ಆಗಿತ್ತು. ಆದರೆ ಆ ಕ್ಯಾಚ್ ತೆಗೆದುಕೊಳ್ಳುವಲ್ಲಿ ಸುಂದರ್ ತಪ್ಪು ಮಾಡಿದರು. ಹೀಗಾಗಿ ಕೊಹ್ಲಿಗೆ ತಾವು ಎದುರಿಸಿದ ಮೊದಲ ಎಸೆತದಲ್ಲೇ ಜೀವದಾನ ಸಿಕ್ಕಿತು. ಅಂದರೆ ಆಗ ಕೊಗ್ಲಿ ಖಾತೆಯನ್ನು ತೆರೆದಿರಲಿಲ್ಲ. ಇಲ್ಲಿಂದ ಜೀವದಾನದ ಲಾಭವನ್ನು ಸಂಪೂರ್ಣವಾಗಿ ಬಳಸಿಕೊಂಡ ವಿರಾಟ್ ಕೊಹ್ಲಿ ಗುಜರಾತ್​ನ ಪ್ರತಿಯೊಬ್ಬ ಬೌಲರ್​ ಅನ್ನು ತರಾಟೆಗೆ ತೆಗೆದುಕೊಂಡರು.

44 ಎಸೆತಗಳಲ್ಲಿ 81 ರನ್

ಇದರ ಫಲವಾಗಿ ಕೊಹ್ಲಿ 30 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಅವರ 66 ನೇ ಐಪಿಎಲ್ ಅರ್ಧಶತಕ ಮತ್ತು ಈ ಆವೃತ್ತಿಯ ಮೂರನೇ ಅರ್ಧಶತಕವೂ ಆಗಿದೆ. ಕೊಹ್ಲಿ ಅರ್ಧಶತಕ ಬಾರಿಸುವುದರ ಜೊತೆಗೆ ದೇವದತ್ ಪಡಿಕ್ಕಲ್ ಅವರೊಂದಿಗೆ ಎರಡನೇ ವಿಕೆಟ್​ಗೆ ಶತಕದ ಜೊತೆಯಾಟವನ್ನು ಕಟ್ಟಿದರು. ಅರ್ಧಶತಕದ ಬಳಿಕ ತಮ್ಮ ಬ್ಯಾಟಿಂಗ್ ಗೇರ್ ಬದಲಿಸಿದ ಕೊಹ್ಲಿ ಕೇವಲ 44 ಎಸೆತಗಳಲ್ಲಿ 81 ರನ್ ಬಾರಿಸಿದರು. ಅಂದರೆ ಕೊಹ್ಲಿ ಮುಂದಿನ 14 ಎಸೆತಗಳಲ್ಲಿ 31 ರನ್ ಚಚ್ಚಿದರು. ದುರಾದೃಷ್ಟವಶಾತ್ ಕೊಹ್ಲಿ ಜೇಸನ್ ಹೊಲ್ಡರ್ ಅವರ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿ ಶತಕ ವಂಚಿತದರು.

800 ಬೌಂಡರಿ, 300 ಸಿಕ್ಸರ್

ಕೊಹ್ಲಿ ತಮ್ಮ ಈ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಮತ್ತು 4 ಭರ್ಜರಿ ಸಿಕ್ಸರ್​ಗಳನ್ನು ಬಾರಿಸಿದರು. ಈ ಮೂಲಕ ಕೊಹ್ಲಿ ಐಪಿಎಲ್​ನಲ್ಲಿ 800 ಬೌಂಡರಿಗಳನ್ನು ಮತ್ತು 300 ಸಿಕ್ಸರ್​ಗಳನ್ನು ಬಾರಿಸಿದ ಮೈಲಿಗಲ್ಲು ದಾಟಿದರು. ಹಾಗೆಯೇ ಅತಿ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version