ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್; ದವಸ-ಧಾನ್ಯಗಳ ದರ ಎಷ್ಟಕ್ಕೇರಿದೆ ನೋಡಿ! – Kannada News | Karnataka Price Hike: Rice, Dal, Chili Costs,check new price

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್

ಬೆಂಗಳೂರು, ಫೆಬ್ರುವರಿ 03: ಈಗಾಗಲೇ ರಾಜ್ಯದಲ್ಲಿ ತರಕಾರಿ, ಹಣ್ಣು, ಚಿನ್ನ, ಬೆಳ್ಳಿ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸರಗೊಂಡಿದ್ದಾರೆ. ಈಗ ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಬೆಲೆಯಲ್ಲಿ ಹೆಚ್ಚಳವಾಗಿರುವುದು (Price Hike) ಜನಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಬ್ಯಾಡಗಿ ಮೆಣಸಿನ ಕಾಯಿ, ಸೋನಾ ಮಸೂರಿ ಅಕ್ಕಿ ಸೇರಿ ಹಲವು ಬೇಳೆ, ಕಾಳುಗಳ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ.

ಆದಾಯ ಬರುವ ಮುನ್ನವೇ ರೈತರಿಕೆ ಆತಂಕ

ಪ್ರಮುಖವಾಗಿ ಬೇರೆ ಬೇರೆ ದೇಶಗಳಿಗೆ ಅಕ್ಕಿ ರಫ್ತು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅಕ್ಕಿಯ ಬೆಲೆ ಕೆ.ಜಿ.ಗೆ 5–6 ರೂಪಾಯಿ ಏರಿಕೆಯಾಗಿದೆ. ಕಡಲೆಬೀಜ, ಮೆಣಸಿನಕಾಯಿ ಇಳುವಳಿಯಲ್ಲಿ ಇಳಿಕೆಯಾಗದ ಕಾರಣ ಬೆಲೆ 50 ರೂಪಾಯಿ ಎತ್ತರಕ್ಕೆ ತಲುಪಿದೆ. ಇತರ ಬೇಳೆ, ಕಾಳುಗಳ ಬೆಲೆಯೂ 10–20 ರೂಪಾಯಿ ಏರಿಕೆಯಾಗಿದೆ. ಬೇಸಿಗೆ ಇನ್ನೂ ಆರಂಭವಾಗಿಲ್ಲ, ಈಗಲೇ ಬೆಲೆ ತಾರಕಕ್ಕೇರಿರುವುದರಿಂದ ಸಾಮಾನ್ಯ ಜನರ ಜೀವನ ಖರ್ಚಿಗೆ ಮತ್ತೊಂದು ಹೊಡೆತವಾಗಿದೆ.

ಕೆ.ಜಿಗೆ ದವಸ-ಧಾನ್ಯಗಳ ಬೆಲೆಯೇರಿಕೆಯ ಪಟ್ಟಿ ಇಲ್ಲಿದೆ

ಒಟ್ಟಾರೆ ಹೊಸ ಬೆಳೆ ಬರುವವರೆಗೂ ಈ ಬೆಲೆ ಏರಿಕೆ ಮುಂದುವರೆಯಲ್ಲಿದ್ದು, ಜನಸಾಮಾನ್ಯರ ಜೇಬು ಸುಡಲಿದೆ.

ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸುದೀಪ್​​​ಗೆ ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು – Kannada News | If Kichcha Sudeep Know Abou Chakravarthy Chandrachud he will not Allow him to stay Say K Manju

ಕಿಚ್ಚ ಸುದೀಪ್ ಅವರ ಆಪ್ತ ಎನಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಸದ್ಯ ವಿವಾದದಲ್ಲಿ ಇದ್ದಾರೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಹೇಳಿದ್ದು ಚರ್ಚೆಗೆ ಕಾರಣ ಆಗಿದೆ. ಈ ವಿಷಯದ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಾತನಾಡಿದ್ದಾರೆ. ‘ಸುದೀಪ್ ಅವರು ಈ ರೀತಿಯ ವ್ಯಕ್ತಿಗಳನ್ನು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ. ಬಹುಶಃ ಅವರಿಗೆ ಈ ವಿಷಯ ಗೊತ್ತಾಗಿಲ್ಲ ಅನಿಸುತ್ತದೆ. ಗೊತ್ತಾದ್ರೆ ಬೇಸರ ಆಗುತ್ತದೆ. ಅವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲ್ಲ’ ಎಂದಿದ್ದಾರೆ ಮಂಜು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..! – Kannada News | Team India’s Head To Head Record With T20 World Cup 2026 Teams

ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ ಟೀಮ್ ಇಂಡಿಯಾಗೆ ಸಿಗಲಿದೆಯಾ ಕಾದು ನೋಡಬೇಕಿದೆ.

Source link

T20 World Cup 2026: ಜಗದೀಸನ್ ಸ್ಫೋಟಕ ಶತಕ: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A beat US by 38 runs

ಟಿ20 ವಿಶ್ವಕಪ್​ನ 2ನೇ ಅಭ್ಯಾಸ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ನಾರಾಯಣ್ ಜಗದೀಸನ್ ಉತ್ತಮ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 43 ರನ್​ಗಳ ಜೊತೆಯಾಟವಾಡಿದ ಬಳಿಕ ಪ್ರಿಯಾಂಶ್ ಆರ್ಯ (28) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ನಾರಾಯಣ್ ಜಗದೀಸನ್ ಕೇವಲ 49 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 55 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 105 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್ ವರ್ಮಾ 24 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 38 ರನ್ ಬಾರಿಸಿದರು. ಈ ಭರ್ಜರಿ ಇನಿಂಗ್ಸ್​ನೊಂದಿಗೆ ತಿಲಕ್ ವರ್ಮಾ ತಮ್ಮ ಫಿಟ್​​ನೆಸ್ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಆಯುಷ್ ಬದೋನಿ 26 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 60 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 238 ರನ್​ ಕಲೆಹಾಕಿತು.

239 ರನ್​ಗಳ ಕಠಿಣ ಗುರಿ ಪಡೆದ ಯುಎಸ್​ಎ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 33 ಆಗುವಷ್ಟರಲ್ಲಿ ಇಬ್ಬರು ಪ್ರಮುಖ ದಾಂಡಿಗರನ್ನು ಕಳೆದುಕೊಂಡರು. ಇದಾಗ್ಯೂ ಆರಂಭಿಕ ಬ್ಯಾಟರ್ ಆ್ಯಂಡ್ರಿಸ್ ಗೌಸ್ 44 ರನ್ ಬಾರಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಂಜಯ್ ಕೃಷ್ಣಮೂರ್ತಿ ಕೇವಲ 18 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 41 ರನ್ ಚಚ್ಚಿದರು. ಹಾಗೆಯೇ ಶುಭಮ್ ರಂಜಾನೆ 28 ರನ್​ಗಳ ಕೊಡುಗೆ ನೀಡಿದರೆ, ಹರ್ಮೀತ್ ಸಿಂಗ್ 25 ರನ್ ಬಾರಿಸಿದರು.

ಇದಾಗ್ಯೂ ಯುಎಸ್​ಎ ತಂಡವು 19.4 ಓವರ್​ಗಳಲ್ಲಿ 200 ರನ್​ ಕಲೆಹಾಕಿ ಆಲೌಟ್ ಆಯಿತು. ಈ ಮೂಲಕ ಭಾರತ ಎ ತಂಡವು 38 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಭಾರತ ಎ ತಂಡ: ಆಯುಷ್ ಬದೋನಿ (ನಾಯಕ), ನಮನ್ ಧೀರ್, ಅಶುತೋಷ್ ಶರ್ಮಾ, ಪ್ರಿಯಾಂಶ್ ಆರ್ಯ, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಯಾನ್ ಪರಾಗ್, ಮಾನವ್ ಸುತಾರ್, ಅಶೋಕ್ ಶರ್ಮಾ, ಉರ್ವಿಲ್ ಪಟೇಲ್ (ವಿಕೆಟ್ ಕೀಪರ್), ಗುರ್ಜಪ್ನೀತ್ ಸಿಂಗ್, ವಿಪ್ರಾಜ್ ನಿಗಮ್, ರವಿ ಬಿಷ್ಣೋಯ್, ಖಲೀಲ್ ಅಹ್ಮದ್, ಮಯಾಂಕ್ ಯಾದವ್.

ಇದನ್ನೂ ಓದಿ: 402 ನಾಟೌಟ್… ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್

ಯುಎಸ್​ಎ ತಂಡ: ಮೊನಾಂಕ್ ಪಟೇಲ್ (ನಾಯಕ), ಜೆಸ್ಸಿ ಸಿಂಗ್, ಆಂಡ್ರೀಸ್ ಗೌಸ್, ಶೆಹನ್ ಜಯಸೂರ್ಯ, ಮಿಲಿಂದ್ ಕುಮಾರ್, ಶಯಾನ್ ಜಹಾಂಗೀರ್, ಸೈತೇಜ ಮುಕ್ಕಮಲ, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ನೋಸ್ತೂಶ್ ಕೆಂಜಿಗೆ, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್, ಮೊಹಮ್ಮದ್ ಮೊಹ್ಸಿನ್, ಶುಭಮ್ ರಂಜಾನೆ.

Source link

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam first batter to reach 4500 T20I runs

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 48 ಬ್ಯಾಟರ್​ಗಳು 2 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿದ್ದಾರೆ. ಈ 48 ಬ್ಯಾಟರ್​ಗಳಲ್ಲಿ 12 ಮಂದಿ 3 ಸಾವಿರಕ್ಕಿಂತ ಅಧಿಕ ರನ್​ ಗಳಿಸಿದ್ದಾರೆ. ಇನ್ನು ಈ ಹನ್ನೆರಡು ಮಂದಿಯಲ್ಲಿ 4 ಸಾವಿರ ರನ್​ಗಳ ಗಡಿದಾಟಿರುವುದು ಕೇವಲ ಮೂವರು ಮಾತ್ರ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಬಾಬರ್ ಆಝಂ.

ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ 36 ಎಸೆತಗಳಲ್ಲಿ ಅಜೇಯ 50 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಬಾಬರ್ ಟಿ20 ಕ್ರಿಕೆಟ್​ನಲ್ಲಿ 4500 ರನ್​ಗಳನ್ನು ಪೂರೈಸಿದ್ದಾರೆ.

ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 4500 ರನ್​ಗಳ ಗಡಿದಾಟಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಬಾಬರ್​ನನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ 4250 ಕ್ಕಿಂತ ಹೆಚ್ಚಿನ ರನ್​ ಗಳಿಸಿಲ್ಲ.

ಈ ಪಟ್ಟಿಯಲ್ಲಿ ಭಾರತ ಟಿ20 ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ 4231 ರನ್​ ಕಲೆಹಾಕಿದರೆ, ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 4188 ರನ್​ಗಳಿಸಿದ್ದಾರೆ. ಇದೀಗ ಇವರಿಬ್ಬರನ್ನು ಹಿಂದಿಕ್ಕಿ ಬಾಬರ್ ಹೊಸ ಮೈಲುಗಲ್ಲು ಮುಟ್ಟಿದ್ದಾರೆ.

ಪಾಕಿಸ್ತಾನ್ ಪರ ಈವರೆಗೆ 132 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ ಮೂರು ಶತಕ ಹಾಗೂ 39 ಅರ್ಧಶತಕಗಳೊಂದಿಗೆ ಒಟ್ಟು 4505 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ 4500 ಕ್ಕಿಂತ ಅಧಿಕ ರನ್​ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Published On – 8:03 am, Tue, 3 February 26

Source link

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ

ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಕಲುಷಿತ ಗಾಳಿ

ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 204ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ AQI 182 ಆಗಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲೂ ಕಡಿಮೆ ಆಗದ AQI, ಇಂದು 182ಕ್ಕೆ ತಲುಪಿದೆ.ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ಸೂಕ್ಷ್ಮಾಣುಗಳಿಂದಲೂ ಜೀವಕ್ಕೆ ಹಾನಿ

PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –180
  • ಮಂಗಳೂರು-174
  • ಮೈಸೂರು –175
  • ಬೆಳಗಾವಿ – 156
  • ಕಲಬುರ್ಗಿ-170
  • ಶಿವಮೊಗ್ಗ – 182
  • ಬಳ್ಳಾರಿ – 204
  • ಹುಬ್ಬಳ್ಳಿ- 166
  • ಉಡುಪಿ –176
  • ವಿಜಯಪುರ –174

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇದೇನ್ ರೇಸಿಂಗಾ! ಅಗರ ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್ – Kannada News | Rash Driving on Agara Flyover Bengaluru, Biker Narrowly Escapes in Shocking Near Miss

ಬೆಂಗಳೂರು, ಫೆಬ್ರವರಿ 3: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಮತ್ತು ಕೋರಮಂಗಲವನ್ನು ಸಂಪರ್ಕಿಸುವ ಅಗರ ಫ್ಲೈಓವರ್ ಮೇಲೆ ಇತ್ತೀಚೆಗೆ ನಡೆದ ಅತಿವೇಗದ ಮತ್ತು ಅಜಾಗರೂಕ ಕಾರು ಚಾಲನೆಯ ದೃಶ್ಯವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಒಂದು ಕಾರನ್ನು ಅತಿವೇಗದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಲಾಗಿದ್ದು, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಚಾಲಕನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಈ ಘಟನೆಯ ದೃಶ್ಯವು ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಕಾರಿನ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ಸಿನಿಮಾ ವಿಷಯದಲ್ಲಿ ಕೊನೆಗೂ ತಪ್ಪು ತಿದ್ದಿಕೊಂಡ ನೆಟ್​​ಫ್ಲಿಕ್ಸ್ – Kannada News | Dhurandhar Netflix OTT Release Fixed: Quality Issues Resolved After Audience Backlash

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಇತ್ತೀಚೆಗೆ ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸನ್ನು ಗಳಿಸಿದ ನಂತರ, ‘ಧುರಂಧರ್’ ಚಿತ್ರದ ಒಟಿಟಿ ಬಿಡುಗಡೆಯ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಆದ್ದರಿಂದ, ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆದ ಕೇವಲ 24 ಗಂಟೆಗಳಲ್ಲಿ ಚಿತ್ರವು ಟ್ರೆಂಡಿಂಗ್‌ ಅಲ್ಲಿ ಮೊದಲ ಸ್ಥಾನದಲ್ಲಿ ಬರಲು ಪ್ರಾರಂಭಿಸಿತು. ಆದರೆ ‘ಧುರಂಧರ್’ ಚಿತ್ರದ ಒಟಿಟಿ ಆವೃತ್ತಿ ಪ್ರೇಕ್ಷಕರನ್ನು ದೊಡ್ಡ ಪ್ರಮಾಣದಲ್ಲಿ ನಿರಾಶೆಗೊಳಿಸಿತು. ಟೀಕೆ ವ್ಯಕ್ತವಾದ ಬಳಿಕ ನೆಟ್​ಫ್ಲಿಕ್ಸ್ ತಪ್ಪು ತಿದ್ದುಕೊಂಡಿದೆ.

ಥಿಯೇಟರ್‌ಗೆ ಹೋಲಿಸಿದರೆ ಒಟಿಟಿಯಲ್ಲಿ ಚಿತ್ರದ ರನ್-ಟೈಮ್ ಅನ್ನು 9 ರಿಂದ 10 ನಿಮಿಷಗಳಷ್ಟು ಕಡಿಮೆ ಮಾಡಲಾಗಿದೆ. ಎರಡನೆಯ ಕಾರಣವೆಂದರೆ ಒಟಿಟಿಯಲ್ಲಿ ಚಿತ್ರದ ಪ್ರಿಂಟ್. ಒಟಿಟಿಯಲ್ಲಿ ಅಪ್​​​ಲೋಡ್ ಆದ ಪ್ರಿಂಟ್​​ನ ಕಲರಿಂಗ್ ಬಗ್ಗೆ ಅನೇಕರು ದೂರಿದ್ದರು.ಆಡಿಯೋ ಬಗ್ಗೆಯೂ ದೂರಿತ್ತು. ಈ ಎಲ್ಲಾ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ನೆಟ್‌ಫ್ಲಿಕ್ಸ್ ಈಗ ಅದರಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ.

ಈ ಚಿತ್ರವನ್ನು ಜನವರಿ 30 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಾಯಿತು, ಆದರೆ ಅದಾದ ಸ್ವಲ್ಪ ಸಮಯದ ನಂತರ, ನೆಟ್ಟಿಗರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ಪ್ರಾರಂಭಿಸಿದರು. ಪ್ರೇಕ್ಷಕರಿಂದ ಹೆಚ್ಚುತ್ತಿರುವ ದೂರುಗಳ ನಂತರ, ನೆಟ್‌ಫ್ಲಿಕ್ಸ್ ಮತ್ತು ತಯಾರಕರು ಅಂತಿಮವಾಗಿ OTT ಆವೃತ್ತಿಯನ್ನು ಅಪ್‌ಗ್ರೇಡ್ ಮಾಡಿದ್ದಾರೆ. ಭಾನುವಾರ ಚಿತ್ರವನ್ನು ವೀಕ್ಷಿಸಿದ ವೀಕ್ಷಕರು ಕಲರಿಂಗ್​​​ನಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ಚಿತ್ರದ ಗುಣಮಟ್ಟದ ಮೇಲೆ ಉತ್ತಮ ಪರಿಣಾಮ ಬೀರಿದೆ.

‘ಧುರಂಧರ್’ ಚಿತ್ರದ ಥಿಯೇಟ್ರಿಕಲ್ ರನ್‌ಟೈಮ್ 3 ಗಂಟೆ 34 ನಿಮಿಷಗಳು, ಆದರೆ ನೆಟ್‌ಫ್ಲಿಕ್ಸ್‌ನಲ್ಲಿ ಚಿತ್ರವು ಕೇವಲ 3 ಗಂಟೆ 25 ನಿಮಿಷಗಳು. ಕೆಲವೊಮ್ಮೆ ಡೇಟಾವನ್ನು ಕಡಿಮೆ ಮಾಡಲು OTT ನಲ್ಲಿ ಚಲನಚಿತ್ರಗಳನ್ನು ಸಂಕುಚಿತಗೊಳಿಸಲಾಗುತ್ತದೆ. ಓಪನಿಂಗ್ ಹಾಗೂ ಕೊನೆಯಲ್ಲಿ ಬರೋ ಹೆಸರು ತೋರಿಸೋ ದೃಶ್ಯಗಳನ್ನು ತೆಗೆದು ಹಾಕುತ್ತಾರೆ. ಇದು ಕೆಲವು ನಿಮಿಷಗಳ ವ್ಯತ್ಯಾಸವನ್ನುಂಟು ಮಾಡುತ್ತದೆ. ‘ಧುರಂಧರ್’ ಚಿತ್ರದ ವಿಷಯದಲ್ಲೂ ಅದೇ ಸಂಭವಿಸಿದೆ ಎಂದು ಊಹಿಸಲಾಗುತ್ತಿದೆ. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ತನ್ನ ಮೊದಲ ಮೂರು ವಾರಗಳಲ್ಲಿ 500 ಕೋಟಿ ರೂ.ಗಳನ್ನು ದಾಟಿದೆ. ಇಲ್ಲಿಯವರೆಗೆ, ಈ ಚಿತ್ರವು ವಿಶ್ವಾದ್ಯಂತ 1300 ಕೋಟಿ ರೂ.ಗಳಿಗೂ ಹೆಚ್ಚು ಸಂಗ್ರಹಿಸಿದೆ.

ಇದನ್ನೂ ಓದಿ: ಒಟಿಟಿಗೆ ಬಂದ ‘ಧುರಂಧರ್’ ಸಿನಿಮಾ; ಕನ್ನಡ ಪ್ರೇಕ್ಷಕರಿಗೆ ನಿರಾಸೆ

‘ಧುರಂಧರ್’ ಚಿತ್ರದ ಎರಡನೇ ಭಾಗವು ಮಾರ್ಚ್ 19, 2026 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದಲ್ಲಿ ರಣವೀರ್ ಸಿಂಗ್ ಪತ್ತೇದಾರಿ ಹಮ್ಜಾ ಪಾತ್ರವನ್ನು ನಿರ್ವಹಿಸಿದ್ದಾರೆ. ರಣವೀರ್ ಜೊತೆಗೆ, ಚಿತ್ರದಲ್ಲಿ ಅಕ್ಷಯ್ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಂಜಯ್ ದತ್, ರಾಕೇಶ್ ಬೇಡಿ ಮತ್ತು ಸಾರಾ ಅರ್ಜುನ್ ಕೂಡ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ – Kannada News | Bengaluru temperature: Dry weather all over karnataka, clear sky in bengaluru

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ

ಬೆಂಗಳೂರು, ಫೆಬ್ರುವರಿ 03: ರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿಯ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:50 am, Tue, 3 February 26

Source link

Exit mobile version