Headlines

ಗುರುಕುಲದಲ್ಲಿ 11 ವರ್ಷದ ವಿದ್ಯಾರ್ಥಿಯ ಬರ್ಬರ ಹತ್ಯೆ; ಮೈಮೇಲಿತ್ತು 42 ಗಾಯ – Kannada News | Lucknow Gurukul student beaten to death body found with 42 injuries and cigarette burns

ಲಕ್ನೋ, ಏಪ್ರಿಲ್ 24: ಲಕ್ನೋದ (Lucknow) ಗುರುಕುಲವೊಂದರಲ್ಲಿ ವಿದ್ಯಾರ್ಥಿಯಾಗಿದ್ದ 11 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುಕುಲಕ್ಕೆ ಸೇರಿಸಿ 7 ದಿನಗಳಲ್ಲೇ ಆತ ಶವವಾಗಿ ಪತ್ತೆಯಾಗಿದ್ದಾನೆ. ಮನೆಗೆ ತರುವಾಗ ಆತನ ದೇಹದಲ್ಲಿ ಹಲವಾರು ಗಾಯದ ಗುರುತುಗಳಿತ್ತು ಎಂದು ಆತನ ಕುಟುಂಬ ಆರೋಪಿಸಿದೆ. 11 ವರ್ಷದ ದಿವ್ಯಾಂಶ್ ಅವರನ್ನು ಏಪ್ರಿಲ್ 15ರಂದು ಲಕ್ನೋದ ರಾಮಾನುಜ್ ಭಾಗವತ್ ವೇದ ವಿದ್ಯಾಪೀಠ ಗುರುಕುಲಕ್ಕೆ ದಾಖಲಿಸಲಾಗಿತ್ತು. ಏಪ್ರಿಲ್ 22ರಂದು ಆತನ ಕುಟುಂಬಕ್ಕೆ ಆತನ ಸಾವಿನ…

Read More

RCB vs GT; ಆರ್​​ಸಿಬಿ ವಿರುದ್ಧ ಶತಕ ಬಾರಿಸಿ ದಾಖಲೆ ನಿರ್ಮಿಸಿದ ಸಾಯಿ ಸುದರ್ಶನ್ – Kannada News | Sai Sudharsan’s IPL 2026 Century: GT Opener Smashes Records vs RCB at Chinnaswamy

ಆರ್​​ಸಿಬಿ (RCB) ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ (Sai Sudharsan) ಅದ್ಭುತ ಶತಕ ಬಾರಿಸಿದರು. 57 ಎಸೆತಗಳಲ್ಲಿ ಶತಕ ಪೂರೈಸಿದ ಸುದರ್ಶನ್​ಗೆ ಇದು ಮೂರನೇ ಐಪಿಎಲ್ ಶತಕವಾಗಿದೆ. ಅಂತಿಮವಾಗಿ ಸುದರ್ಶನ್ 58 ಎಸೆತಗಳಲ್ಲಿ 100 ರನ್ ಗಳಿಸಿ ಹೇಜಲ್​​ವುಡ್​ಗೆ ಬಲಿಯಾದರು. ಈ ಶತಕದೊಂದಿಗೆ, ಸಾಯಿ ಸುದರ್ಶನ್ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 2000 ಐಪಿಎಲ್ ರನ್‌ಗಳನ್ನು ಪೂರೈಸಿದ…

Read More

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ – Kannada News | Minister HC Mahadevappa Talks about SC Internal Reservation

ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್​​ಸಿ ಮಹದೇವಪ್ಪ ವಿವರಿಸಿದ್ದಾರೆ. ಇದನ್ನೂ ಓದಿ:…

Read More

ಕಾಣಿಸುತ್ತಿಲ್ಲ ‘ಕೆಡಿ’ ಸಿನಿಮಾ ಟ್ರೇಲರ್; ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಗೆ ಇನ್ನೊಂದು ವಿಘ್ನ – Kannada News | KD Movie Trailer taken down days after its release due to this reason Says KVN Productions

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿತ್ತು. ಬೆಂಗಳೂರಿನ ಸ್ಟಾರ್ ಹೋಟೆಲ್​​ನಲ್ಲಿ ಚಿತ್ರತಂಡದ ಕಲಾವಿದರು ಮತ್ತು ತಂತ್ರಜ್ಞರ ಸಮ್ಮುಖದಲ್ಲಿ ಟ್ರೇಲರ್ (KD Trailer) ಅನಾವರಣ ಮಾಡಲಾಗಿತ್ತು. ಟ್ರೇಲರ್ ನೋಡಿದ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದರು. ಆದರೆ ಈಗ ಒಂದು ಅನಿರೀಕ್ಷಿತ ಸಂಗತಿ ಎದುರಾಗಿದೆ. ಎರಡು ದಿನದ ಹಿಂದೆ ಬಿಡುಗಡೆ ಆಗಿದ್ದ ‘ಕೆಡಿ’ ಚಿತ್ರದ ಟ್ರೇಲರ್ ಈಗ ಕಾಣಿಸುತ್ತಿಲ್ಲ! ಆ ಮೂಲಕ ‘ಕೆವಿಎನ್ ಪ್ರೊಡಕ್ಷನ್ಸ್’ (KVN…

Read More

ಬೆಂಗಳೂರು: ನಡುರಸ್ತೆಯಲ್ಲೇ ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್ – Kannada News | Viral Video: Two Young Women Thrash Youth in the Middle of Koramangala Road Over Pub Dispute

ಬೆಂಗಳೂರು, ಏಪ್ರಿಲ್ 24: ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದಲ್ಲಿ ಹೈಡ್ರಾಮಾವೊಂದು ನಡೆದಿದೆ. ಯುವಕನೊಬ್ಬ ತಮಗೆ ಕಿರಿಕಿರಿ ನೀಡಿದ್ದಾನೆ ಎಂದು ಆರೋಪಿಸಿ ಇಬ್ಬರು ಯುವತಿಯರು ಆತನಿಗೆ ನಡುರಸ್ತೆಯಲ್ಲೇ ಪೊಲೀಸರೆದುರೇ ಮನಬಂದಂತೆ ಹೊಡೆದ ಘಟನೆ ಬೆಳಕಿಗೆ ಬಂದಿದೆ. ಪಬ್‌ವೊಂದರ ಒಳಗೆ ಯುವಕ ತಮಗೆ ತೊಂದರೆ ನೀಡಿದ್ದಾನೆ ಎಂದು ಆಕ್ರೋಶಗೊಂಡ ಯುವತಿಯರು, ಆತನನ್ನು ರಸ್ತೆಗೆ ಎಳೆದು ತಂದು ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಯುವತಿಯರನ್ನು ತಡೆಯಲು ಪ್ರಯತ್ನಿಸಿ, ‘ಹೊಡೆಯಬೇಡಿ, ಠಾಣೆಗೆ ಬಂದು ದೂರು ನೀಡಿ’ ಎಂದು ಎಷ್ಟೇ ಮನವಿ ಮಾಡಿದರೂ ಕೇಳದ…

Read More

MI vs CSK: ಮುಂಬೈ ವಿರುದ್ಧ ಈ ಸಾಧನೆ ಮಾಡಿದ ಮೊದಲ ಸಿಎಸ್​ಕೆ ಬ್ಯಾಟರ್ ಸಂಜು ಸ್ಯಾಮ್ಸನ್ – Kannada News | IPL 2026: Sanju Samson’s 101* Powers CSK Past MI, Sets Multiple Records

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನೊಬ್ಬ ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಗಳಿಸಿದ್ದು ಇದೇ ಮೊದಲು. ಇದಕ್ಕೂ ಮೊದಲು, ಸಿಎಸ್‌ಕೆ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮುಂಬೈ ವಿರುದ್ಧ ಅತಿ ಹೆಚ್ಚು ಅಂದರೆ ಅಜೇಯ 88 ರನ್​ ಬಾರಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಮುರಿದಿದ್ದಾರೆ. Source link

Read More

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ – Kannada News | Kalaburagi serial Accident: Auto Driver Critical, 9 Others Injured in Chincholi Highway Crash

ಕಲಬುರಗಿ, ಏಪ್ರಿಲ್​ 24: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಹಾಗೂ ಆಟೋ ನಡುವೆ ನಡೆದ ಈ ಅಪಘಾತದಲ್ಲಿ ಹತ್ತು ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ತೆಲಂಗಾಣದ ತಾಂಡೂರು ಕಡೆಯಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್, ಎದುರಿಗಿದ್ದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ಯಾಂಕರ್, ಚಿಂಚೋಳಿಯಿಂದ ವೆಂಕಟಾಪುರಕ್ಕೆ ಹೊರಟಿದ್ದ ಬಸ್ಸಿಗೆ ಮುಖಾಮುಖಿ ಡಿಕ್ಕಿ…

Read More

“ನೀನು ತುಂಬಾ ಸಣ್ಣಗಿದ್ದೀಯ, ಜಿಮ್‌ಗೆ ಹೋದ್ರೆ ಸೆಕ್ಸಿಯಾಗಿ ಕಾಣ್ತೀಯ”: ಟಿಸಿಎಸ್ ಸಹೋದ್ಯೋಗಿ ಬಗ್ಗೆ ಯುವತಿ ಸ್ಫೋಟಕ ಹೇಳಿಕೆ – Kannada News | Shocking Harassment and Conversion Plot at TCS Nashik: Female Employee Recalls Trauma

ನಾಸಿಕ್, ಏ.24: ದೇಶದ ಪ್ರತಿಷ್ಠಿತ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ಮನುಕುಲವೇ ಬೆಚ್ಚಿಬೀಳುವಂತಹ ಘಟನೆ ಬೆಳಕಿಗೆ ಬಂದಿತ್ತು. ಕೆಲಸದ ಸ್ಥಳದಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ, ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಚು ರೂಪಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ‘ಕಾರ್ಪೊರೇಟ್ ಜಿಹಾದ್’ ಎಂದು ಬಣ್ಣಿಸಿದ್ದರು. ಇದೀಗ ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಯುವತಿಯರು…

Read More

ಎಷ್ಟೇ ಇಷ್ಟವಾದರೂ ಕೂಡ ಈ ಆರೋಗ್ಯ ಸಮಸ್ಯೆ ಇದ್ದಲ್ಲಿ ಕಬ್ಬಿನ ಜ್ಯೂಸ್ ಕುಡಿಯಬೇಡಿ! – Kannada News | Is Sugarcane Juice Bad for You? When to Skip This Summer Drink

Is Sugarcane Juice Bad for You? When to Skip This Summer DrinkImage Credit source: Getty Images ಬೇಸಿಗೆ ಕಾಲದಲ್ಲಿ ನಾನಾ ರೀತಿಯ ಭಕ್ಷ್ಯಗಳ ಸೇವನೆಗಿಂತ ದ್ರವರೂಪದ ಆಹಾರವೇ ಬೆಸ್ಟ್ ಎನಿಸುತ್ತದೆ. ಹಾಗಾಗಿ ಎಳನೀರು, ಕಬ್ಬಿನ ಜ್ಯೂಸ್ (Sugarcane Juice) ಹೀಗೆ ವಿವಿಧ ರೀತಿಯ ಆರೋಗ್ಯಕ್ಕೆ ಉತ್ತಮವಾದ ಪಾನೀಯಗಳನ್ನು ಸೇವನೆ ಮಾಡುವುದು ಸಾಮಾನ್ಯ. ಇವು ದೇಹಕ್ಕೆ ತಂಪು ನೀಡುವುದರಿಂದ ಜನ ಹೆಚ್ಚೆಚ್ಚು ಸೇವನೆ ಮಾಡುತ್ತಾರೆ. ಆದರೆ ನಿಮಗೆ ಗೊತ್ತಾ… ಶುಗರ್ ಕೆನ್ ಜ್ಯೂಸ್…

Read More

ಏಕಾಏಕಿ ಕುಸಿದ ಹೋಟೆಲ್​​ ಲಿಫ್ಟ್​​: ಶ್ರೀನಗರದಲ್ಲಿ ಬೆಂಗಳೂರಿನ ಪ್ರವಾಸಿಗರು ಬದುಕಿದ್ದೇ ಪವಾಡ! – Kannada News | 6 Bengaluru Tourists Injured in Srinagar Hotel Lift Mishap

ಬೆಂಗಳೂರು, ಏಪ್ರಿಲ್​​ 24: ಜಮ್ಮು-ಕಾಶ್ಮೀರದ ಶ್ರೀನಗರದ ಹೈದರ್ಪೋರ ಪ್ರದೇಶದಲ್ಲಿರುವ ಹೊಸದಾಗಿ ನಿರ್ಮಿತ ಹೋಟೆಲ್‌ನಲ್ಲಿ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಬೆಂಗಳೂರಿನ ಆರು ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಿಗರು ವಾಸ್ತವ್ಯ ಹೂಡಿದ್ದ ಹೋಟೆಲ್ ಅರಿಸನ್ ಲಕ್ಷುರಿಯಲ್ಲಿ ಘಟನೆ ನಡೆದಿದ್ದು, ಲಿಫ್ಟ್ ಕುಸಿದ ತಕ್ಷಣ ಗಾಯಾಳುಗಳನ್ನು ಬರ್ಜುಲ್ಲಾದ ಬೋನ್ ಆ್ಯಂಡ್​ ಜಾಯಿಂಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಇದೆ. ಗಾಯಗೊಂಡವರನ್ನು ವೆಂಕಟೇಶ್ (65), ಡಿ. ಮಂಗಲಾ (54), ಕುಶಲ್ಲಾ (18), ಪಂಕಜಾ (16),…

Read More