Headlines

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ – Kannada News | 56400 Jobs Fill under New SC internal reservation Announced By CM Siddaramaiah

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ…

Read More

ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ? – Kannada News | Know what happens if Credit Card not used for long time, how it affects credit score

ಕ್ರೆಡಿಟ್ ಕಾರ್ಡ್ ಎಂದರೆ ಬಹಳ ಜನರು ಹೌಹಾರಿ ದೂರ ಓಡುತ್ತಾರೆ. ಇನ್ನೂ ಹಲವರು ಸಾಲು ಸಾಲಾಗಿ ಕ್ರೆಡಿಟ್ ಕಾರ್ಡ್​ಗಳನ್ನು ಪಡೆದು ಇಎಂಐಗಳ ಗಾಳಕ್ಕೆ ಬೀಳುತ್ತಾರೆ. ಇನ್ನೂ ಕೆಲವರು ಕ್ರೆಡಿಟ್ ಕಾರ್ಡ್ (Credit Card) ಪಡೆದು, ಅದನ್ನು ಬಳಸದೆ ಹಾಗೇ ಬಿಟ್ಟಿರುತ್ತಾರೆ. ಕಾರ್ಡ್ ಬಳಸದೆ ಬಹಳ ಕಾಲ ಬಿಟ್ಟರೆ ಏನಾಗುತ್ತೆ? ಕಾರ್ಡ್ ಬಳಸದೇ ಇರುವುದು ಹಣಕಾಸು ದೃಷ್ಟಿಯಿಂದ ಉತ್ತಮ ಕ್ರಮ ಅನಿಸಬಹುದು. ಆದರೆ, ಕ್ರೆಡಿಟ್ ಸ್ಕೋರ್ ದೃಷ್ಟಿಯಿಂದ ಇದು ತುಸು ಸಂಕೀರ್ಣವಾಗಿದೆ. ‘ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದರೆ ಕ್ರೆಡಿಟ್…

Read More

D Sudhakar Health Bulletin: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್ – Kannada News | Lung specialist doctor Manjunath gives minister D Sudhakar health updates, here Is hospital statement

ಬೆಂಗಳೂರು, (ಏಪ್ರಿಲ್ 24): ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್(D Sudhakar) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು (Lung Infection) ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು…

Read More

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸಂಪುಟ ತೀರ್ಮಾನದ ಬಗ್ಗೆ ಸಿಎಂ ಹೇಳಿದ್ದಿಷ್ಟು – Kannada News | Siddaramaiah Governmnet takes Final destinations about SC internal reservation, here CM press conference

ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ….

Read More

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಗೋಲ್ಡ್​​ ಮೆಡಲ್​​ ಪಡೆದ ರೈತ ಕುಟುಂಬದ ವಿದ್ಯಾರ್ಥಿನಿ – Kannada News | Bagalkot Universitys First Convocation Celebrates Gold Medalists: Farmers Daughters Shine

ಬಾಗಲಕೋಟೆ, ಏಪ್ರಿಲ್​​ 24: ಇಲ್ಲಿನ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರು ಚಿನ್ನದ ಪದಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಭಾಗವಹಿಸಿದ್ದರು. ಎಂಎಸ್ಸಿ ಭೌತಶಾಸ್ತ್ರದಲ್ಲಿ 8.9 ಸಿಜಿಪಿಎ ಗಳಿಸಿರುವ ಸನ್ಮತಿ ಜಿನಪ್ಪ ಕುಪ್ಪಿ ಅವರು ಬಸವೇಶ್ವರ ಬಾಗಲಕೋಟ್ ಕಾಲೇಜಿನಿಂದ ವಿಶ್ವವಿದ್ಯಾಲಯದ ಮೊದಲ ಭೌತಶಾಸ್ತ್ರ ಗೋಲ್ಡ್​​ ಮೆಡಲ್​ ವಿಜೇತರಾಗಿದ್ದಾರೆ. ರೈತ ಕುಟುಂಬದಿಂದ ಬಂದಿರುವ ಸನ್ಮತಿ, ತಮ್ಮ ಈ ಸಾಧನೆಯು ತಮ್ಮ ಹಲವು ವರ್ಷಗಳ…

Read More

ರಾಜ್​ಕುಮಾರ್ ಸಮಾಧಿ ಜಾಗ: ಚೇತನ್ ಪ್ರಶ್ನೆಗೆ ಅಭಿಮಾನಿಗಳ ಆಕ್ರೋಶ – Kannada News | Chetan Ahimsa questions government for giving land to Dr Rajkumar’s memorial

ಇಂದು (ಏಪ್ರಿಲ್ 24) ಡಾ ರಾಜ್​ಕುಮಾರ್ (Dr Rajkumar) ಅವರ ಜಯಂತಿ. ಸಾವಿರಾರು ಮಂದಿ ಅಭಿಮಾನಿಗಳು ಡಾ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳು, ಅಣ್ಣಾವ್ರ ನೆನಪಿನಲ್ಲಿ ಅನ್ನದಾನ, ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ. ಅಣ್ಣಾವ್ರ ನೆನಪಿನಲ್ಲಿ ಗೀತ-ಗಾಯನ ಕಾರ್ಯಕ್ರಮವೂ ಇಂದು ನಡೆದಿದೆ. ರಾಜ್ಯದ ಹಲವು ಮೂಲೆಗಳಲ್ಲಿ ಅಣ್ಣಾವ್ರ ಜಯಂತಿಯನ್ನು ಆಚರಿಸಲಾಗುತ್ತಿದೆ. ಕರ್ನಾಟಕಕ್ಕಾಗಿ, ಕನ್ನಡಕ್ಕಾಗಿ ಮಹತ್ವದ ಯೋಗದಾನ ನೀಡಿದ ಅಪ್ರತಿಮ ಕಲಾವಿದರನ್ನು ಸ್ಮರಿಸಲಾಗುತ್ತಿದೆ. ಆದರೆ ಇದರ ಮಧ್ಯೆ, ನಟ, ಸಾಮಾಜಿಕ ಕಾರ್ಯಕರ್ತ…

Read More

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – Kannada News | Lakshmi Hebbalkar talks about Daali Dhananjay starrer Anna from Mexico movie teaser

ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕುಟುಂಬ ಈ ಚಿತ್ರರಂಗಕ್ಕೂ ಕಾಲಿಟ್ಟಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಬಿ. ಹಟ್ಟಿಹೊಳಿ ಅವರು ‘ಐರಾ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ ‘ಅಣ್ಣ ಫ್ರಮ್ ಮೆಕ್ಸಿಕೋ’ (Anna From Mexico) ಸಿನಿಮಾ ನಿರ್ಮಾಣ ಆಗಿದೆ. ‘ದಿ ರಾಯಲ ಸ್ಟುಡಿಯೋಸ್’ ಕೈ ಜೋಡಿಸಿದೆ. ಈಗ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಟ ಡಾಲಿ ಧನಂಜಯ್ (Daali Dhananjay) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್…

Read More

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ! – Kannada News | Kolar Heatwave: Soaring Demand for Traditional Clay Pots Amidst Extreme Temperatures

ಕೋಲಾರ, ಏಪ್ರಿಲ್ 24: ಕೋಲಾರ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾದ ಹಿನ್ನೆಲೆಯಲ್ಲಿ ಮಣ್ಣಿನ ಮಡಿಕೆಗಳ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಜಿಲ್ಲೆಯ ಕುಂಬಾರ ಬೀದಿಯು ಮಣ್ಣಿನ ಮಡಿಕೆಗಳ ಮಾರಾಟಕ್ಕೆ ಹೆಸರುವಾಸಿಯಾಗಿದ್ದು, ಬೇಸಿಗೆ ಆರಂಭವಾದಾಗಿನಿಂದ ಇಲ್ಲಿ ಉತ್ತಮ ವ್ಯಾಪಾರ ನಡೆಯುತ್ತಿದೆ. ಮಣ್ಣಿನ ಮಡಿಕೆಯಲ್ಲಿ ಇಟ್ಟ ನೀರು ಆರೋಗ್ಯಕ್ಕೆ ಉತ್ತಮ ಎಂಬ ನಂಬಿಕೆ ಮತ್ತು ಫ್ರಿಡ್ಜ್ ನೀರಿಗಿಂತ ತಂಪಾಗಿರುತ್ತದೆ ಎಂಬ ಕಾರಣಕ್ಕೆ ಜನ ಇವುಗಳನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಮಡಿಕೆ ತಯಾರಕರು ಕಾಲಕ್ಕೆ ತಕ್ಕಂತೆ ಅಪ್‌ಡೇಟ್ ಆಗಿದ್ದು, ಸಾಂಪ್ರದಾಯಿಕ ಮಡಿಕೆಗಳ ಜೊತೆಗೆ ಮಣ್ಣಿನ ಬಾಟಲಿಗಳು,…

Read More

IPL 2026: ಈ ಐದು ತಂಡಗಳಿಗೆ ನಾಯಕರೇ ಹೊರೆ

ಐಪಿಎಲ್ 2026 ರಲ್ಲಿ ಅನೇಕ ಯುವ ಹಾಗೂ ಅನುಭವಿ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ತಮ್ಮ ತಂಡಗಳ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇದು ತಂಡದ ನಾಯಕರ ಯಶಸ್ಸಿಗೂ ಸಹಕಾರಿಯಾಗಿದೆ. ಆದರೆ ಇನ್ನು ಕೆಲವು ತಂಡಗಳಿಗೆ ನಾಯಕರೇ ಹೊರ ಆಗಿದ್ದಾರೆ. ಬ್ಯಾಟಿಂಗ್‌ ಅಥವಾ ಬೌಲಿಂಗ್​ ಜೊತೆಗೆ ಅವರ ನಾಯಕತ್ವದ ನಿರ್ಧಾರಗಳು ಕೂಡ ತಂಡದ ಸೋಲಿಗೆ ಕಾರಣವಾಗುತ್ತಿವೆ. ಹೀಗಾಗಿ ತಮ್ಮ ಕಳಪೆ ಪ್ರದರ್ಶನದಿಂದ ತಂಡಕ್ಕೆ ಹೊರೆಯಾಗಿರುವುದು ಕೇವಲ ಒಬ್ಬರು ಅಥವಾ ಇಬ್ಬರು ಅಲ್ಲ, ಬರೋಬ್ಬರಿ ಐದು ತಂಡಗಳ…

Read More

ಶೌಚಾಲಯದಲ್ಲಿ ಸಿರಿಂಜ್‌ಗಳು ಪತ್ತೆ: ತುಮಕೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ದೀಪನ ಶಂಕೆ! – Kannada News | National Games Kick Off; but Syringes Found on Opening Day

ಕ್ರೀಡಾಕೂಟದ ಮೊದಲ ದಿನ ಸಿರಿಂಜ್​ಗಳು ಪತ್ತೆ Image Credit source: tv9 kannada ತುಮಕೂರು, ಏಪ್ರಿಲ್​ 24: ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ (National level Sports) ಕಲ್ಪತರು ನಾಡು ತುಮಕೂರು (Tumkur) ಸಾಕ್ಷಿಯಾಗಿದೆ. 20 ವರ್ಷದೊಳಗಿನವರ (U-20) 24ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದ್ದು, ದೇಶದ ವಿವಿಧ ಭಾಗಗಳಿಂದ ಬಂದ ನೂರಾರು ಯುವ ಪ್ರತಿಭೆಗಳು ತಮ್ಮ ಸಾಧನೆ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆದರೆ, ಆರಂಭದ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್‌ಗಳು…

Read More