ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್ನಲ್ಲಿ ಘೋಷಿಸಿದಂತೆ 56,400 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಕ್ಷಣವೇ ಆರಂಭವಾಗಲಿದೆ. ಈ ಎಲ್ಲಾ ನೇಮಕಾತಿಗಳಲ್ಲಿ ಈಗ ಘೋಷಿಸಲಾದ ಹೊಸ ಒಳ ಮೀಸಲಾತಿ ಪದ್ಧತಿಯನ್ನೇ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.
ಕ್ರೆಡಿಟ್ ಕಾರ್ಡ್ ಎಂದರೆ ಬಹಳ ಜನರು ಹೌಹಾರಿ ದೂರ ಓಡುತ್ತಾರೆ. ಇನ್ನೂ ಹಲವರು ಸಾಲು ಸಾಲಾಗಿ ಕ್ರೆಡಿಟ್ ಕಾರ್ಡ್ಗಳನ್ನು ಪಡೆದು ಇಎಂಐಗಳ ಗಾಳಕ್ಕೆ ಬೀಳುತ್ತಾರೆ. ಇನ್ನೂ ಕೆಲವರು ಕ್ರೆಡಿಟ್ ಕಾರ್ಡ್ (Credit Card) ಪಡೆದು, ಅದನ್ನು ಬಳಸದೆ ಹಾಗೇ ಬಿಟ್ಟಿರುತ್ತಾರೆ. ಕಾರ್ಡ್ ಬಳಸದೆ ಬಹಳ ಕಾಲ ಬಿಟ್ಟರೆ ಏನಾಗುತ್ತೆ? ಕಾರ್ಡ್ ಬಳಸದೇ ಇರುವುದು ಹಣಕಾಸು ದೃಷ್ಟಿಯಿಂದ ಉತ್ತಮ ಕ್ರಮ ಅನಿಸಬಹುದು. ಆದರೆ, ಕ್ರೆಡಿಟ್ ಸ್ಕೋರ್ ದೃಷ್ಟಿಯಿಂದ ಇದು ತುಸು ಸಂಕೀರ್ಣವಾಗಿದೆ.
‘ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದರೆ ಕ್ರೆಡಿಟ್ ಸ್ಕೋರ್ ಕಡಿಮೆ ಆಗುವುದಿಲ್ಲ ಎನ್ನುವುದು ಹೌದು. ಆದರೆ, ಕಾರ್ಡ್ ಬಳಕೆ ದೀರ್ಘಾವಧಿಯವರೆಗೆ ಇಲ್ಲದಿದ್ದಾಗ ಕ್ರೆಡಿಟ್ ಹಿಸ್ಟರಿಯ ಅವಧಿ ಕಡಿಮೆ ಆಗುತ್ತದೆ. ಇದರಿಂದ ಕ್ರೆಡಿಟ್ ಕಾರ್ಡ್ ಕಂಪನಿ ನಿಮ್ಮ ಅಕೌಂಟ್ ಮುಚ್ಚಬಹುದು. ಇದು ಒಟ್ಟಾರೆ ಯುಟಿಲೈಸೇಶನ್ ರೇಶಿಯೋ ಹೆಚ್ಚಲು ಕಾರಣವಾಗಬಹುದು. ಆ ಮೂಲಕ ಕ್ರೆಡಿಟ್ ಸ್ಕೋರ್ಗೆ ಸ್ವಲ್ಪ ಹಿನ್ನಡೆಗೆ ಕಾರಣವಾಗಬಹುದು’ ಎಂದು ಝ್ಯಾಗಲ್ ಕಂಪನಿಯ ಎಕ್ಸಿಕ್ಯೂಟಿವ್ ಛೇರ್ಮನ್ ರಾಜ್ ಪಿ ನಾರಾಯಣಂ ಹೇಳಿದ್ದಾರೆ.
ಸಾಲ ಪಡೆಯಬೇಕೆನ್ನುವವರು ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರಬೇಕು. ಸ್ಕೋರ್ ಹೆಚ್ಚಿಸಬೇಕೆಂದರೆ ಉತ್ತಮ ಕ್ರೆಡಿಟ್ ಹಿಸ್ಟರಿ ಇರಬೇಕು. ಕ್ರೆಡಿಟ್ ಕಾರ್ಡ್ ಮೂಲಕ ವೆಚ್ಚ ಮಾಡುವುದು, ಸರಿಯಾದ ಸಮಯಕ್ಕೆ ಹಣ ಪಾವತಿಸುವುದು, ಇಎಂಐ ಕಟ್ಟುವುದು ಇವು ಕ್ರೆಡಿಟ್ ಸ್ಕೋರ್ ಅನ್ನು ಹೆಚ್ಚಿಸುತ್ತವೆ.
ಹಣಕಾಸು ಸಂಸ್ಥೆಗಳು ನಿಮ್ಮ ಸಾಲದ ನಿರ್ವಹಣೆ ಹೇಗಿದೆ, ನಿಮಗೆ ಸಾಲ ತೀರಿಸುವ ಜವಾಬ್ದಾರಿ ಮತ್ತು ಶಕ್ತಿ ಇದೆಯಾ ಎಂಬುದನ್ನು ಗಮನಿಸುತ್ತವೆ. ಇಲ್ಲಿ ಕ್ರೆಡಿಟ್ ಸ್ಕೋರ್ ಜೊತೆಗೆ ಕ್ರೆಡಿಟ್ ಹಿಸ್ಟರಿಯೂ ಗಣನೆಗೆ ಬರುತ್ತದೆ.
ನೀವು ಕ್ರೆಡಿಟ್ ಕಾರ್ಡ್ ಪಡೆದು ಅದನ್ನು ಬಹಳ ಕಾಲ ಉಪಯೋಗಿಸುವುದನ್ನು ನಿಲ್ಲಿಸಿದ್ದರೆ ಅಕೌಂಟ್ ಮುಚ್ಚಬಹುದು. ಇದರಿಂದ ಕ್ರೆಡಿಟ್ ಹಿಸ್ಟರಿ ಮೊಟಕುಗೊಳ್ಳಬಹುದು. ಇದರ ಬದಲು ಕ್ರೆಡಿಟ್ ಕಾರ್ಡ್ ಅನ್ನು ಯಾವಾಗಲಾದರೊಮ್ಮೆಯಾದರೂ ಉಪಯೋಗಿಸಿ, ಬಿಲ್ ಅನ್ನು ಸಕಾಲಕ್ಕೆ ಪಾವತಿಸುತ್ತಿದ್ದರೆ ಕ್ರೆಡಿಟ್ ಹಿಸ್ಟರಿ ಬೆಳೆಯುತ್ತಿರುತ್ತದೆ. ನಿಮಗೆ ಮುಂದೆ ಸಾಲಗಳು ಸಿಗುವುದು ಸುಲಭವಾಗುತ್ತದೆ.
ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, (ಏಪ್ರಿಲ್ 24): ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್(D Sudhakar) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು (Lung Infection) ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಚಿನ್ನದುರೈ ಎಂ ಡಿ ಅವರು ಪ್ರಕಟಣೆ ಹೊರಡಿಸಿದ್ದು, ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸಚಿವರ ಅರೋಗ್ಯದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿವೆ. ಇದು ಅವರ ಅಭಿಮಾನಿಗಳಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ.
ಇನ್ನು ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ಕಿಮ್ಸ್ ಆಸ್ಪತ್ರೆ ಶ್ವಾಸಕೋಶ ಕಸಿ ವೈದ್ಯ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸಚಿವ ಡಿ ಸುಧಾಕರ್ಗೆ ಚಿಕಿತ್ಸೆ ನೀಡಲಾಗುತ್ತಿದೆ.ತಜ್ಞ ವೈದ್ಯಕೀಯ ತಂಡದಿಂದ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ವೆಂಟಿಲೇಟರ್ ಮತ್ತು ಎಕ್ಮೋ ನೆರವಿನಿಂದ ಉಸಿರಾಟವಾಡುತ್ತಿದ್ದಾರೆ. ಇನ್ಫೆಕ್ಷನ್ ಆಗಿರುವ ಶ್ವಾಸಕೋಶ ಸರಿಪಡಿಸಲು ಪ್ರಯತ್ನ ಪ್ರಯತ್ನ ನಡೆದಿದೆ. ಸಾಧ್ಯವಾಗದಿದ್ದಾಗ ಶ್ವಾಸಕೋಶ ಕಸಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್
ಇನ್ನು ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿಬರುತ್ತಿರುವುದರಿಂದ ಕಿಮ್ಸ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಚಿನ್ನದೊರೈ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸುಧಾಕರ್ ಅವರಿಗೆ ಕಿಮ್ಸ್ ನ ICU ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸಚಿವ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವ ಅವರು ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಚಿನ್ನದೊರೈ ಹೆಲ್ತ್ ಬುಲೆಟಿನ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಆಪರೇಷನ್ ಬಳಿಕ ಶ್ವಾಸಕೋಶ ಸೋಂಕು
ಮೊದಲು ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿದ್ದು, ಇದು ಇದ್ದಕ್ಕಿದ್ದಂತೆ ಉಲ್ಬಣವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಕಳೆದ ಮೂರು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರವಾಗಿ ಹೇಳಿದ್ದಾರೆ ನೋಡಿ.
ಬಾಗಲಕೋಟೆ, ಏಪ್ರಿಲ್ 24: ಇಲ್ಲಿನ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರು ಚಿನ್ನದ ಪದಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಭಾಗವಹಿಸಿದ್ದರು. ಎಂಎಸ್ಸಿ ಭೌತಶಾಸ್ತ್ರದಲ್ಲಿ 8.9 ಸಿಜಿಪಿಎ ಗಳಿಸಿರುವ ಸನ್ಮತಿ ಜಿನಪ್ಪ ಕುಪ್ಪಿ ಅವರು ಬಸವೇಶ್ವರ ಬಾಗಲಕೋಟ್ ಕಾಲೇಜಿನಿಂದ ವಿಶ್ವವಿದ್ಯಾಲಯದ ಮೊದಲ ಭೌತಶಾಸ್ತ್ರ ಗೋಲ್ಡ್ ಮೆಡಲ್ ವಿಜೇತರಾಗಿದ್ದಾರೆ. ರೈತ ಕುಟುಂಬದಿಂದ ಬಂದಿರುವ ಸನ್ಮತಿ, ತಮ್ಮ ಈ ಸಾಧನೆಯು ತಮ್ಮ ಹಲವು ವರ್ಷಗಳ ಕಷ್ಟದ ಫಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಸನ್ಮತಿ ಪ್ರಸ್ತುತ ಬಿಎಲ್ಡಿ ಕಾಲೇಜಿನಲ್ಲಿ ಬೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಪಿಎಚ್ಡಿ ಮತ್ತು ಸಂಶೋಧನಾ ಕ್ಷೇತ್ರವನ್ನು ಪ್ರವೇಶಿಸುವ ಆಕಾಂಕ್ಷೆ ಹೊಂದಿದ್ದಾರೆ. ಕಳೆದ ವರ್ಷ ಕೆಸೆಟ್ ಪರೀಕ್ಷೆಯನ್ನು ಕೂಡ ಅವರು ಉತ್ತೀರ್ಣರಾಗಿದ್ದಾರೆ. ಇದೇ ರೀತಿ, ಇತಿಹಾಸ ವಿಷಯದಲ್ಲಿ ಚಿನ್ನದ ಪದಕ ಗಳಿಸಿದ ಪ್ರಿಯಾಂಕ ಅಟ್ಪತ್ ಕೂಡ ತಮ್ಮ ಸಾಧನೆಯ ಬಗ್ಗೆ ಅಪಾರ ಸಂತಸಗೊಂಡಿದ್ದಾರೆ. ಇತ್ತೀಚೆಗೆ ಕೆಸೆಟ್ ಪರೀಕ್ಷೆಯನ್ನು ಉತ್ತೀರ್ಣರಾಗಿರುವ ಪ್ರಿಯಾಂಕ, ಸಹಾಯಕ ಪ್ರಾಧ್ಯಾಪಕರಾಗುವ ಗುರಿ ಹೊಂದಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರೂ ತಮ್ಮ ಪೋಷಕರ ಸಂಪೂರ್ಣ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ್ದು, ಅವರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣ ಎಂದು ತಿಳಿಸಿದ್ದಾರೆ.
ಇಂದು (ಏಪ್ರಿಲ್ 24) ಡಾ ರಾಜ್ಕುಮಾರ್ (Dr Rajkumar) ಅವರ ಜಯಂತಿ. ಸಾವಿರಾರು ಮಂದಿ ಅಭಿಮಾನಿಗಳು ಡಾ ರಾಜ್ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳು, ಅಣ್ಣಾವ್ರ ನೆನಪಿನಲ್ಲಿ ಅನ್ನದಾನ, ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ. ಅಣ್ಣಾವ್ರ ನೆನಪಿನಲ್ಲಿ ಗೀತ-ಗಾಯನ ಕಾರ್ಯಕ್ರಮವೂ ಇಂದು ನಡೆದಿದೆ. ರಾಜ್ಯದ ಹಲವು ಮೂಲೆಗಳಲ್ಲಿ ಅಣ್ಣಾವ್ರ ಜಯಂತಿಯನ್ನು ಆಚರಿಸಲಾಗುತ್ತಿದೆ. ಕರ್ನಾಟಕಕ್ಕಾಗಿ, ಕನ್ನಡಕ್ಕಾಗಿ ಮಹತ್ವದ ಯೋಗದಾನ ನೀಡಿದ ಅಪ್ರತಿಮ ಕಲಾವಿದರನ್ನು ಸ್ಮರಿಸಲಾಗುತ್ತಿದೆ. ಆದರೆ ಇದರ ಮಧ್ಯೆ, ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಅಣ್ಣಾವ್ರ ಸಮಾಧಿ ಸ್ಥಳದ ಬಗ್ಗೆ ಕೊಂಕು ತೆಗೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟ ಚೇತನ್ ಅಹಿಂಸ, ಅಣ್ಣಾವ್ರ ಸಮಾಧಿ ಸ್ಥಳಕ್ಕೆ ಜಾಗ ಕೊಟ್ಟಿರುವ ಸರ್ಕಾರದ ಕ್ರಮವನ್ನು ಟೀಕೆ ಮಾಡಿದ್ದಾರೆ. ‘ನಾವು ರಾಜಕುಮಾರ್ ಅವರನ್ನು ಒಬ್ಬ ಮಹಾನ್ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರ ಮಧ್ಯದಲ್ಲಿ 2006ರಲ್ಲಿ ಒಬ್ಬ ನಟನ “ಸಮಾಧಿ ಕಾಂಪ್ಲೆಕ್ಸ್”ಗಾಗಿ 2.5 ಎಕರೆ ಭೂಮಿಯನ್ನು ನೀಡುವುದು ತಿಳುವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ. 21ನೇ ಶತಮಾನದ ಭಾರತದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರವು ಅದನ್ನು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕ ಉಪಯೋಗಕ್ಕೆ ತಕ್ಕಂತೆ ಹಂಚಬೇಕು. ಮತಗಳ ಲಾಭದ ಅವಕಾಶವಾದಿ ಉದ್ದೇಶದಿಂದ ಅಲ್ಲ’ ಎಂದಿದ್ದಾರೆ.
ಆದರೆ ಚೇತನ್ ಅಹಿಂಸ ಅವರ ಈ ಕೊಂಕು ಮಾತಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ‘ಯಾವುದೋ ಅಮಲಿನಲ್ಲಿ ಈ ವ್ಯಕ್ತಿ ಪೋಸ್ಟ್ ಹಂಚಿಕೊಂಡಿದ್ದಾರೆ’ ಎಂದು ಒಬ್ಬರು ಟೀಕೆ ಮಾಡಿದರೆ. ಇನ್ನು ಕೆಲವರು ರಾಜ್ಕುಮಾರ್ ಅವರು ಕನ್ನಡ ಭಾಷೆಗೆ, ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಚೇತನ್ ಅಹಿಂಸಗೆ ನೆನಪು ಮಾಡುವ ಪ್ರಯತ್ನ ಮಾಡಿದ್ದಾರೆ. ಇನ್ನು ಕೆಲವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇನ್ನಿತರರ ಸಮಾಧಿ ಸ್ಥಳಗಳ ಉಲ್ಲೇಖವನ್ನು ಮಾಡಿದ್ದಾರೆ.
ರಾಜ್ಕುಮಾರ್ ಅವರ ಸಮಾಧಿ ಕಂಠೀರವ ಸ್ಟುಡಿಯೋನಲ್ಲಿದೆ. ಇದೇ ಸ್ಥಳದಲ್ಲಿ ಅಂಬರೀಶ್, ಪುನೀತ್ ರಾಜ್ಕುಮಾರ್ ಅವರ ಸಮಾಧಿಗಳೂ ಇವೆ. ಕಂಠೀರವ ಸ್ಟುಡಿಯೋ ಸಹ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಕುಮಾರ್ ಸಮಾಧಿ ಸ್ಥಳ ಅಥವಾ ಇನ್ನಿತರೆ ಸಮಾಧಿ ಸ್ಥಳಗಳನ್ನು ಯಾವುದೇ ವಾಣಿಜ್ಯ ಲಾಭಕ್ಕೆ ಯಾರೂ ಸಹ ಬಳಸಿಕೊಂಡಿಲ್ಲ. ಈ ಬಗ್ಗೆ ಈ ವರೆಗೆ ಯಾರೂ ಪ್ರಶ್ನೆಯನ್ನೂ ಸಹ ಮಾಡಿರಲಿಲ್ಲ. ಆದರೆ ಇದೀಗ ಚೇತನ್ ಅಹಿಂಸ ಅವರು ವಿನಾಕಾರಣ ಕೊಂಕು ತೆಗೆದಿದ್ದಾರೆ. ಇದಕ್ಕೆ ಅಣ್ಣಾವ್ರ ಅಭಿಮಾನಿಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ಮುಂದೆ ಇದು ಯಾವ ತಿರುವು ಪಡೆದುಕೊಳ್ಳಲಿದೆ ಕಾದು ನೋಡಬೇಕಿದೆ.
ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕುಟುಂಬ ಈ ಚಿತ್ರರಂಗಕ್ಕೂ ಕಾಲಿಟ್ಟಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಬಿ. ಹಟ್ಟಿಹೊಳಿ ಅವರು ‘ಐರಾ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ ‘ಅಣ್ಣ ಫ್ರಮ್ ಮೆಕ್ಸಿಕೋ’ (Anna From Mexico) ಸಿನಿಮಾ ನಿರ್ಮಾಣ ಆಗಿದೆ. ‘ದಿ ರಾಯಲ ಸ್ಟುಡಿಯೋಸ್’ ಕೈ ಜೋಡಿಸಿದೆ. ಈಗ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಟ ಡಾಲಿ ಧನಂಜಯ್ (Daali Dhananjay) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಭಾಗವಹಿಸಿ ಮಾತನಾಡಿದರು.
‘ಟೀಸರ್ ಚೆನ್ನಾಗಿದೆ, ಹೊಸತನದಿಂದ ಕೂಡಿದೆ. ಧನಂಜಯ್ ಅವರ ನಟನೆ ಸೂಪರ್. ಧನಂಜಯ್ ಧರಿಸಿದ ಕರ್ನಾಟಕ ಭೂಪಟದ ಲಾಕೆಟ್ ಬಹಳಷ್ಟು ಇಷ್ಟವಾಯ್ತು. ನಾವು ಚಿತ್ರರಂಗಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಸಿನಿಮಾ ನಿರ್ಮಾಣಕ್ಕೆ ಬಂದಿದ್ದೇವೆ. ಕನ್ನಡ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇವೆ. ಕನ್ನಡ ಚಿತ್ರರಂಗ ಸಾಕಷ್ಟು ಶ್ರೀಮಂತವಾಗಿದೆ. ಇದು ನಮ್ಮ ಪರಂಪರೆ. ಈ ಕ್ಷೇತ್ರಕ್ಕೆ ನಾನು ಹೊಸಬಳು’ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದರು.
ಸಿನಿಮಾ ಶುರುವಾದ ಬಗೆಯ ಬಗ್ಗೆ ಡಾಲಿ ಧನಂಜಯ್ ಮಾತನಾಡಿದರು. ‘ಹೊಯ್ಸಳ ಸಿನಿಮಾ ಶೂಟಿಂಗ್ ಬೆಳಗಾವಿಯಲ್ಲಿ ನಡೆಯುವಾಗ ಲಕ್ಷ್ಮಿ ಮೇಡಂ ಮನೆಗೆ ಹೋಗಿ ಊಟ ಮಾಡ್ಕೊಂಡು ಬರುವಾಗ ನಮ್ಮ ತಮ್ಮನಿಗೆ ಸಿನಿಮಾ ಮಾಡುವ ಆಸಕ್ತಿ ಇದೆ ಎಂದಿದ್ದರು. ಆ ಬಳಿಕ ಈ ಜರ್ನಿ ಶುರುವಾಯ್ತು. ಚನ್ನರಾಜು ಅವರು ಪ್ರೊಡಕ್ಷನ್ ಮಾಡಿದ್ದಾರೆ ಎಂಬುವುದು ಗೊತ್ತಾಯ್ತು. ಸಖತ್ ಸ್ಟೈಲಿಶ್ ಆಗಿ, ಆ್ಯಕ್ಷನ್ ರೀತಿ ನನ್ನನ್ನು ತೋರಿಸಬೇಕು ಅಂತ ಅವರು ಎಂದುಕೊಂಡಿದ್ದರು. ಆದರೆ ಫ್ಯಾಮಿಲಿ ನೋಡುವಂತಹ ಸಿನಿಮಾ ಕೂಡ ಆಗಬೇಕು. ಹಾಗಾಗಿ ನಿರ್ದೇಶಕ ಶಂಕರ್ ಬಂದರು. ಒಳ್ಳೆಯ ಟೀಮ್ ಸಿದ್ಧವಾಯಿತು’ ಎಂದು ಡಾಲಿ ಹೇಳಿದರು.
‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್:
‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾದಲ್ಲಿ ರೀಷ್ಮಾ ನಾಣಯ್ಯ ಅವರು ನಾಯಕಿ ಆಗಿದ್ದಾರೆ. ರಂಗಾಯಣ ರಘು, ನಾಗಭೂಷಣ, ಪೂರ್ಣಚಂದ್ರ ಮೈಸೂರು, ಉಮಾಶ್ರೀ, ಸಾಧು ಕೋಕಿಲ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ವಾಸುಕಿ ವೈಭವ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಜಯ್ ಅವರು ಸಂಕಲನ ಮಾಡಿದ್ದಾರೆ. ಗುಣ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.
ಕೋಲಾರ, ಏಪ್ರಿಲ್ 24: ಕೋಲಾರ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾದ ಹಿನ್ನೆಲೆಯಲ್ಲಿ ಮಣ್ಣಿನ ಮಡಿಕೆಗಳ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಜಿಲ್ಲೆಯ ಕುಂಬಾರ ಬೀದಿಯು ಮಣ್ಣಿನ ಮಡಿಕೆಗಳ ಮಾರಾಟಕ್ಕೆ ಹೆಸರುವಾಸಿಯಾಗಿದ್ದು, ಬೇಸಿಗೆ ಆರಂಭವಾದಾಗಿನಿಂದ ಇಲ್ಲಿ ಉತ್ತಮ ವ್ಯಾಪಾರ ನಡೆಯುತ್ತಿದೆ.
ಮಣ್ಣಿನ ಮಡಿಕೆಯಲ್ಲಿ ಇಟ್ಟ ನೀರು ಆರೋಗ್ಯಕ್ಕೆ ಉತ್ತಮ ಎಂಬ ನಂಬಿಕೆ ಮತ್ತು ಫ್ರಿಡ್ಜ್ ನೀರಿಗಿಂತ ತಂಪಾಗಿರುತ್ತದೆ ಎಂಬ ಕಾರಣಕ್ಕೆ ಜನ ಇವುಗಳನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಮಡಿಕೆ ತಯಾರಕರು ಕಾಲಕ್ಕೆ ತಕ್ಕಂತೆ ಅಪ್ಡೇಟ್ ಆಗಿದ್ದು, ಸಾಂಪ್ರದಾಯಿಕ ಮಡಿಕೆಗಳ ಜೊತೆಗೆ ಮಣ್ಣಿನ ಬಾಟಲಿಗಳು, ಫ್ಲಾಸ್ಕ್ಗಳು ಮತ್ತು ವಿವಿಧ ವಿನ್ಯಾಸದ ಕಪ್ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಸದ್ಯಕ್ಕೆ 250 ರೂ.ಗಳಿಂದ 950 ರೂ.ವರೆಗಿನ ಬೆಲೆಯಲ್ಲಿ ಮಡಿಕೆಗಳು ಲಭ್ಯವಿದ್ದು, 10 ರಿಂದ 25 ಲೀಟರ್ ಸಾಮರ್ಥ್ಯದ ಮಡಿಕೆಗಳಿಗೆ ಬೇಡಿಕೆ ಹೆಚ್ಚಿದೆ. ಇದು ಬೇಸಿಗೆ ಕಾಲದಲ್ಲಿ ಮಡಿಕೆ ವ್ಯಾಪಾರಿಗಳಿಗೆ ಉತ್ತಮ ಆದಾಯ ತಂದುಕೊಟ್ಟಿದೆ ಎಂದು ಮಡಿಕೆ ತಯಾರಕರು ಹೇಳುತ್ತಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಐಪಿಎಲ್ 2026 ರಲ್ಲಿ ಅನೇಕ ಯುವ ಹಾಗೂ ಅನುಭವಿ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ತಮ್ಮ ತಂಡಗಳ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇದು ತಂಡದ ನಾಯಕರ ಯಶಸ್ಸಿಗೂ ಸಹಕಾರಿಯಾಗಿದೆ. ಆದರೆ ಇನ್ನು ಕೆಲವು ತಂಡಗಳಿಗೆ ನಾಯಕರೇ ಹೊರ ಆಗಿದ್ದಾರೆ. ಬ್ಯಾಟಿಂಗ್ ಅಥವಾ ಬೌಲಿಂಗ್ ಜೊತೆಗೆ ಅವರ ನಾಯಕತ್ವದ ನಿರ್ಧಾರಗಳು ಕೂಡ ತಂಡದ ಸೋಲಿಗೆ ಕಾರಣವಾಗುತ್ತಿವೆ.
ಹೀಗಾಗಿ ತಮ್ಮ ಕಳಪೆ ಪ್ರದರ್ಶನದಿಂದ ತಂಡಕ್ಕೆ ಹೊರೆಯಾಗಿರುವುದು ಕೇವಲ ಒಬ್ಬರು ಅಥವಾ ಇಬ್ಬರು ಅಲ್ಲ, ಬರೋಬ್ಬರಿ ಐದು ತಂಡಗಳ ನಾಯಕರಿದ್ದಾರೆ. ಈ ಐದು ತಂಡಗಳ ನಾಯಕರು ತಮ್ಮದೇ ತಂಡಗಳಿಗೆ ತಲೆನೋವಾಗುತ್ತಿದ್ದಾರೆ. ಆಶ್ಚರ್ಯಕರ ವಿಷಯವೆಂದರೆ ಈ ಐದು ಆಟಗಾರರ ಖರೀದಿಗೆ ಬರೋಬ್ಬರಿ 76.85 ಕೋಟಿ ರೂ ವ್ಯಯಿಸಲಾಗಿದೆ. ಆದಾಗ್ಯೂ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಪ್ರದರ್ಶನ ಅತ್ಯಂತ ಕಳಪೆಯಾಗಿದೆ. ಆಲ್ರೌಂಡರ್ ಆಗಿರುವ ಪಾಂಡ್ಯಗೆ ಬ್ಯಾಟಿಂಗ್ ಅಥವಾ ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ, ಇದರ ಪರಿಣಾಮವಾಗಿ ಮುಂಬೈ ಏಳು ಪಂದ್ಯಗಳಲ್ಲಿ ಕೇವಲ ಎರಡನ್ನು ಮಾತ್ರ ಗೆದ್ದಿದೆ. ತಂಡವು ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಈ ಆವೃತ್ತಿಯಲ್ಲಿ ಆಡಿರುವ ಆರು ಪಂದ್ಯಗಳಲ್ಲಿ ಪಾಂಡ್ಯ 19.4 ರ ಸರಾಸರಿಯಲ್ಲಿ ಕೇವಲ 97 ರನ್ ಗಳಿಸಿದ್ದು, ಬೌಲಿಂಗ್ನಲ್ಲಿ ಕೇವಲ ಮೂರು ವಿಕೆಟ್ಗಳನ್ನು ಪಡೆದಿದ್ದಾರೆ. ಮುಂಬೈ ತಂಡ ಹಾರ್ದಿಕ್ ಪಾಂಡ್ಯ ಅವರಿಗೆ 16.35 ಕೋಟಿ ರೂ. ಸಂಭಾವನೆ ನೀಡುತ್ತದೆ.
ಲಕ್ನೋ ಸೂಪರ್ಜೈಂಟ್ಸ್ ತಂಡದ ನಾಯಕರಾದಾಗಿನಿಂದ, ರಿಷಭ್ ಪಂತ್ ತಮ್ಮ ನಾಯಕತ್ವ ಮತ್ತು ಬ್ಯಾಟಿಂಗ್ ಎರಡರಲ್ಲೂ ನಿರಾಶಾದಾಯಕ ಪ್ರದರ್ಶನ ನೀಡಿದ್ದಾರೆ. ಈ ಸೀಸನ್ನಲ್ಲಿ ಆಡಿರುವ ಏಳು ಪಂದ್ಯಗಳಲ್ಲಿ ಕೇವಲ 147 ರನ್ ಗಳಿಸಿದ್ದು, ಕೇವಲ ಒಂದು ಅರ್ಧಶತಕ ಮಾತ್ರ ಗಳಿಸಿದ್ದಾರೆ. ಹೀಗಾಗಿ ಲಕ್ನೋ ತಂಡವು ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದ್ದು, ಪಾಯಿಂಟ್ಗಳ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದೆ. ಪಂತ್ ಐಪಿಎಲ್ನಲ್ಲಿ ಅತ್ಯಂತ ದುಬಾರಿ ಆಟಗಾರರಾಗಿದ್ದು, 27 ಕೋಟಿ ರೂ. ಸಂಬಳ ಪಡೆಯುತ್ತಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡದ ಯುವ ನಾಯಕ ರಿಯಾನ್ ಪರಾಗ್ ಆಡಿರುವ ಏಳು ಪಂದ್ಯಗಳಲ್ಲಿ ಕೇವಲ 81 ರನ್ ಗಳಿಸಿದ್ದಾರೆ. ಒಳ್ಳೆಯ ಸುದ್ದಿ ಏನೆಂದರೆ ರಿಯಾನ್ ಪರಾಗ್ ಅವರ ಕಳಪೆ ಪ್ರದರ್ಶನದ ಹೊರತಾಗಿಯೂ ಇತರರ ಉತ್ತಮ ಪ್ರದರ್ಶನದಿಂದ ರಾಜಸ್ಥಾನ ರಾಯಲ್ಸ್ ಪ್ರಸ್ತುತ ಉತ್ತಮ ಸ್ಥಿತಿಯಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರಾಜಸ್ಥಾನ ತಂಡವು ರಿಯಾನ್ ಪರಾಗ್ಗೆ 14 ಕೋಟಿ ರೂ. ಸಂಬಳವನ್ನು ನೀಡುತ್ತದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಕೂಡ ತಂಡಕ್ಕೆ ಸಮಸ್ಯೆಯಾಗಿ ಪರಿಣಮಿಸಿದ್ದಾರೆ. ಏಳು ಪಂದ್ಯಗಳಲ್ಲಿ, ಗಾಯಕ್ವಾಡ್ ಕೇವಲ 104 ರನ್ ಗಳಿಸಿದ್ದಾರೆ. ಅವರು ಒಂದೇ ಒಂದು ಶತಕ ಅಥವಾ ಅರ್ಧಶತಕ ಗಳಿಸಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ಪ್ರತಿ ಪಂದ್ಯದಲ್ಲೂ ಕಳಪೆ ಆರಂಭ ಪಡೆಯುತ್ತಿರುವುದಕ್ಕೆ ರುತುರಾಜ್ ಪ್ರಮುಖ ಕಾರಣರಾಗಿದ್ದಾರೆ. ಗಾಯಕ್ವಾಡ್ಗೆ ಚೆನ್ನೈ ಸೂಪರ್ ಕಿಂಗ್ಸ್ 18 ಕೋಟಿ ರೂ. ಸಂಭಾವನೆ ನೀಡುತ್ತದೆ.
ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಕೂಡ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದಾರೆ. ಆಡಿರುವ ಏಳು ಪಂದ್ಯಗಳಲ್ಲಿ ಕೇವಲ 152 ರನ್ ಗಳಿಸಿದ್ದಾರೆ. ಹೀಗಾಗಿ ಕೆಕೆಆರ್ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದೆ. ರಹಾನೆ ಪ್ರತಿ ಆವೃತ್ತಿಗೆ 1.5 ಕೋಟಿ ರೂ. ಸಂಬಳ ಪಡೆಯುತ್ತಿದ್ದಾರೆ.
ಕ್ರೀಡಾಕೂಟದ ಮೊದಲ ದಿನ ಸಿರಿಂಜ್ಗಳು ಪತ್ತೆ Image Credit source: tv9 kannada
ತುಮಕೂರು, ಏಪ್ರಿಲ್ 24: ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ (National level Sports) ಕಲ್ಪತರು ನಾಡು ತುಮಕೂರು (Tumkur) ಸಾಕ್ಷಿಯಾಗಿದೆ. 20 ವರ್ಷದೊಳಗಿನವರ (U-20) 24ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದ್ದು, ದೇಶದ ವಿವಿಧ ಭಾಗಗಳಿಂದ ಬಂದ ನೂರಾರು ಯುವ ಪ್ರತಿಭೆಗಳು ತಮ್ಮ ಸಾಧನೆ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆದರೆ, ಆರಂಭದ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್ಗಳು (Syringe) ಪತ್ತೆಯಾಗಿದ್ದು, ಗೊಂದಲ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಕ್ರೀಡಾಕೂಟದ ಪಾರದರ್ಶಕತೆಯ ಬಗ್ಗೆ ಅನುಮಾನಗಳು ಮೂಡಿವೆ.
ದೇಶದ 28 ರಾಜ್ಯಗಳಿಂದ ಸುಮಾರು 1,500ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗಲಿದ್ದು, ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಇನ್ನು 40 ವಿವಿಧ ಕ್ರೀಡಾ ಚಟುವಟಿಕೆ ನಡೆಯಲಿದ್ದು, ಬಿಸಿಲಿನ ತಾಪಮಾನಕ್ಕೆ ಅನುಗುಣವಾಗಿ ಕ್ರೀಡಾಚಟುವಟಿಕೆಗಳು ಬೆಳಿಗ್ಗೆ ಹಾಗೂ ಸಂಜೆ ನಂತರ ಫೆಡ್ ಲೈಟ್ನಲ್ಲಿ ನಡೆಯಲಿವೆ. ಈ ಕ್ರೀಡಾಕೂಟದಲ್ಲಿ ವಿಜೇತರು ಆಗಸ್ಟ್ ತಿಂಗಳಲ್ಲಿ ಅಮೆರಿಕಾದ ಓರೆಗಾನ್ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಭಾರತ ಪ್ರತಿನಿಧಿಸಲು ಆಯ್ಕೆ ಆಗಲಿದ್ದಾರೆ.
ಶೌಚಾಲಯದಲ್ಲಿ ಸಿರಿಂಜ್ಗಳು ಪತ್ತೆ
ಇನ್ನು ಇಂದು ಬೆಳಿಗ್ಗೆ ಮಹಾತ್ಮಗಾಂಧಿ ಕ್ರೀಡಾಂಗಣದ ಬಳಿಯ ಜಿ. ಪರಮೇಶ್ವರ್ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದ ಮುಖಾಂತರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಆದರೆ ಚಾಲನೆ ಸಿಕ್ಕ ಮೊದಲ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್ಗಳು ಪತ್ತೆಯಾಗಿದ್ದು, ಉದ್ದೀಪನ ಮದ್ದು ಬಳಕೆಯ ಅನುಮಾನ ಮೂಡಿದೆ.
ಸಿರಿಂಜುಗಳು ಪತ್ತೆಯಾಗಿದ್ದು ನಿಜ: ಸತ್ಯನಾರಾಯಣ
ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕ್ರೀಡಾಕೂಟದ ಸ್ಪರ್ಧಾ ನಿರ್ದೇಶಕ ಸತ್ಯನಾರಾಯಣ, ಸಿರಿಂಜುಗಳು ಪತ್ತೆಯಾದ ಬಗ್ಗೆ NADA (national anti doping agency)ಗೆ ಮಾಹಿತಿ ನೀಡಲಾಗುವುದು. ಅವರು ಪರಿಶೀಲಿಸಿ, ತನಿಖೆ ನಡೆಸಲಿದ್ದಾರೆ ಎಂದರು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ NADAದಿಂದ ಟೆಸ್ಟ್ ಮಾಡಲಾಗುತ್ತದೆ. ಒಂದು ಟೆಸ್ಟ್ 30 ರಿಂದ 40 ಸಾವಿರ ರೂ ವೆಚ್ಚದಾಗಿರುತ್ತದೆ, ಆದರೂ ಸಹ ನಾವು ಮಾಡುತ್ತೇವೆ. ನೋ ನೀಡಲ್ ಪಾಲಿಸಿ ಇದೆ. ಅವರು ಬಾತ್ ರೂಂನಲ್ಲಿ ತೆಗೆದುಕೊಂಡಾಗ ಗೊತ್ತಾಗುವುದಲ್ಲ. ಖಂಡಿತ ಇದನ್ನು ಕೂಲಂಕುಷವಾಗಿ ನೋಡಲಾಗುವುದು. ಬಾಹಿರವಾರವಾಗಿ ಚುಚ್ಚು ಮದ್ದು ಪಡೆದಿದ್ದರೇ NADA ಕ್ರಮಗೈಕೊಳ್ಳಿದೆ. ಯಾರೇ ಸಿರಿಂಜ್ ತೆಗೆದುಕೊಂಡಿರುವುದು ಪತ್ತೆಯಾದರೆ ಅವರಿಗೆ ನಾಲ್ಕು ವರ್ಷ ಕ್ರೀಡೆಯಿಂದ ಬ್ಯಾನ್ ಮಾಡಲಾಗುವುದು ಎಂದು ಹೇಳಿದ್ದಾರೆ.
ದೇಶದ ವಿವಿಧ ರಾಜ್ಯಗಳಿಂದ ಸಣ್ಣಪುಟ್ಟ ಹಳ್ಳಿಗಳಿಂದ ತಮ್ಮದೇ ಕನಸು ಹೊತ್ತು ಬಂದ 20 ವರ್ಷದೊಳಗಿನ ಪ್ರತಿಭೆಗಳ ಭವಿಷ್ಯ ರೂಪಿಸುವ ಕ್ರೀಡ್ರಾಕೂಟದ ನಡುವೆ ಶೌಚಾಲಯದಲ್ಲಿ ಕಂಡ ಸಿರಿಂಜ್ಗಳು, ಉದ್ದೀಪನ ಅನುಮಾನ ಮೂಡಿಸಿದ್ದು, ಕೆಲ ಸ್ಪರ್ಧಿಗಳು ಕಳ್ಳಾಟ ನಡೆಸಿರುವ ಶಂಕೆ ಮೂಡಿದೆ.