Headlines

Parliament Monsoon Session: ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ, ತೆರಿಗೆ, ಉದ್ಯಮ ಸುಧಾರಣೆ ಸೇರಿ 5 ಹೊಸ ಮಸೂದೆ ಮಂಡನೆಗೆ ಸಜ್ಜು – Kannada News | Parliament Monsoon Session: 5 New Bills on Tax, MSME, NEET Battle Begins July 20

ನವದೆಹಲಿ, ಜುಲೈ 17: ದೇಶದ ರಾಜಕೀಯ ವಲಯದಲ್ಲಿ ಈಗ  ಮುಂಗಾರು ಅಧಿವೇಶನದ ಕಾವು ಜೋರಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನ(Parliament Monsoon Session)ವು ಜುಲೈ 20 ರಿಂದ ಆರಂಭವಾಗಲಿದ್ದು, ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ಒಕ್ಕೂಟದ ನಡುವೆ ಭೀಕರ ರಾಜಕೀಯ ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಒಂದು ಕಡೆ ನಿರುದ್ಯೋಗ, ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆ ಅಕ್ರಮಗಳ ಮೂಲಕ ಸರ್ಕಾರಕ್ಕೆ ಮುತ್ತಿಗೆ ಹಾಕಲು ವಿರೋಧ ಪಕ್ಷಗಳು ತಂತ್ರ ರೂಪಿಸುತ್ತಿದ್ದರೆ, ಮತ್ತೊಂದೆಡೆ ಪ್ರಮುಖ ಕಾಯ್ದೆಗಳನ್ನು ಅಂಗೀಕರಿಸಿಕೊಳ್ಳಲು ಕೇಂದ್ರ ಸರ್ಕಾರ ಸಜ್ಜಾಗಿದೆ.

ಲೋಕಸಭೆಯಲ್ಲಿ ಮಂಡನೆಯಾಗಲಿರುವ 5 ಹೊಸ ಮಸೂದೆಗಳು

ಈ ಬಾರಿಯ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ದೇಶದ ಆರ್ಥಿಕತೆ ಮತ್ತು ಆಡಳಿತಕ್ಕೆ ಸಂಬಂಧಿಸಿದಂತೆ ಐದು ಅತ್ಯಂತ ಪ್ರಮುಖ ಹೊಸ ಮಸೂದೆಗಳನ್ನು ಮಂಡಿಸಲು ತೀರ್ಮಾನಿಸಿದೆ.

  • ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026: ತೆರಿಗೆ ವ್ಯವಸ್ಥೆಯಲ್ಲಿನ ಹೊಸ ಬದಲಾವಣೆಗಳಿಗೆ ಸಂಬಂಧಿಸಿದ್ದಾಗಿದೆ.
  • ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2026: ಎಂಎಸ್ಎಂಇ (MSME) ವಲಯಕ್ಕೆ ಬೂಸ್ಟ್ ನೀಡುವ ಕಾಯ್ದೆ.
  • ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ಮಸೂದೆ, 2026
  • ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, 2026.
  • ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026.

ಇವುಗಳ ಜೊತೆಗೆ ಈ ಹಿಂದೆ ಮಂಡನೆಯಾಗಿ ಬಾಕಿ ಉಳಿದಿರುವ ‘ವಿದೇಶಿ ಕೊಡುಗೆ ನಿಯಂತ್ರಣ ತಿದ್ದುಪಡಿ ಮಸೂದೆ’ ಹಾಗೂ ‘ವಿಕ್ಷಿತ್ ಭಾರತ್ ಶಿಕ್ಷಾ ಅಧಿಷ್ಠಾನ ಮಸೂದೆ’ಗಳನ್ನು ಕೂಡ ಸರ್ಕಾರ ಈ ಅಧಿವೇಶನದಲ್ಲೇ ಇತ್ಯರ್ಥ ಪಡಿಸಿಕೊಳ್ಳುವ ಸಾಧ್ಯತೆ ಇದೆ.

ಸಾರ್ವಜನಿಕ ಕಾಳಜಿಯ ವಿಷಯಗಳ ಮೇಲೆ ವಿರೋಧ ಪಕ್ಷಗಳ ಕಣ್ಣು

ರಾಜಕೀಯ ನಾಯಕರ ಈ ಜಟಾಪಟಿಯ ನಡುವೆ ಸಾರ್ವಜನಿಕರ ದೈನಂದಿನ ಬದುಕಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳು ಸಂಸತ್ತಿನಲ್ಲಿ ಚರ್ಚೆಗೆ ಬರಲಿವೆ. ದೇಶದ ಜನಸಾಮಾನ್ಯರನ್ನು ಕಾಡುತ್ತಿರುವ ಹಣದುಬ್ಬರ , ಯುವಕರನ್ನು ಕಂಗಾಲು ಮಾಡಿರುವ ನಿರುದ್ಯೋಗ ಸಮಸ್ಯೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿರುವ ನೀಟ್ ಪೇಪರ್ ಸೋರಿಕೆ ಹಗರಣಗಳ ಕುರಿತು ಸಂಸತ್ತಿನ ಒಳಗೂ ಮತ್ತು ಹೊರಗೂ ಬೃಹತ್ ಪ್ರತಿಭಟನೆಗಳನ್ನು ನಡೆಸಲು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಜುಲೈ 19 ರಂದು ಎಲ್ಲಾ ವಿರೋಧ ಪಕ್ಷಗಳ ಜಂಟಿ ಮಹಾಸಭೆ ನಡೆಯಲಿದ್ದು, ಅಲ್ಲಿ ಅಂತಿಮ ತಂತ್ರಗಾರಿಕೆ ರೂಪಿಸಲಾಗುವುದು.

ಮತ್ತಷ್ಟು ಓದಿ: Parliament Monsoon Session: ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮತ್ತು ಕ್ಷೇತ್ರ ಪುನರ್ವಿಂಗಡಣೆ ಭೀತಿ

ಈ ಬಾರಿಯ ಅಧಿವೇಶನದಲ್ಲಿ ದೇಶದ ಭವಿಷ್ಯದ ರಾಜಕೀಯ ದಿಕ್ಸೂಚಿಯನ್ನು ಬದಲಿಸಬಲ್ಲ ಎರಡು ಪ್ರಮುಖ ವಿಷಯಗಳ ಕುರಿತು ಭಾರಿ ಚರ್ಚೆಗಳು ನಡೆಯುತ್ತಿವೆ:

ಹೆಚ್ಚಿದ ಆತಂಕ: ಸರ್ಕಾರದ ಅಧಿಕೃತ ಶಾಸಕಾಂಗ ಪಟ್ಟಿಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಅಥವಾ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಗಳು ಸದ್ಯಕ್ಕಿಲ್ಲ. ಆದರೆ, ಕೇಂದ್ರ ಸರ್ಕಾರವು ಈ ಅಧಿವೇಶನದಲ್ಲಿ ಇದ್ದಕ್ಕಿದ್ದಂತೆ ಇವುಗಳನ್ನು ಮಂಡಿಸಲು ಒಳಗೊಳಗೆ ವೇಗವಾಗಿ ಚಲಿಸುತ್ತಿದೆ ಎಂದು ವಿರೋಧ ಪಕ್ಷಗಳು ಬಲವಾಗಿ ನಂಬಿವೆ.

ಕಾಂಗ್ರೆಸ್ ಪ್ರತಿರೋಧ: ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಸಂಸತ್ತಿನ ಮುಂದೆ ತಂದರೆ ಅದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಮತ್ತು ಸಂಸತ್ತಿನ ಒಳಗೆ ತೀವ್ರವಾಗಿ ವಿರೋಧಿಸುವುದಾಗಿ ಕಾಂಗ್ರೆಸ್ ಈಗಾಗಲೇ ಕಟ್ಟುನಿಟ್ಟಾದ ಎಚ್ಚರಿಕೆ ನೀಡಿದೆ.

ಇದಕ್ಕೆ ಪೂರಕವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್   ತುರ್ತು ಸಭೆ ಕರೆದಿದ್ದು, ಮುಂಗಾರು ಅಧಿವೇಶನವನ್ನು ಗದ್ದಲವಿಲ್ಲದೆ ನಡೆಸಲು ಬೇಕಾದ ಆಡಳಿತ ಪಕ್ಷದ ಕಾರ್ಯತಂತ್ರಗಳ ಕುರಿತು ಚರ್ಚಿಸಿದ್ದಾರೆ. ಒಟ್ಟಾರೆಯಾಗಿ, ಈ ಮಳೆಗಾಲದ ಅಧಿವೇಶನವು ತೀವ್ರ ವಾಗ್ವಾದ ಹಾಗೂ ರಾಜಕೀಯ ರಣರಂಗಕ್ಕೆ ಸಾಕ್ಷಿಯಾಗುವುದಂತೂ ಗ್ಯಾರಂಟಿ.

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಸಂಸತ್ತಿನ ಮಳೆಗಾಲದ ಅಧಿವೇಶನವು ಯಾವಾಗ ಆರಂಭವಾಗಲಿದೆ ? ಮತ್ತು ಈ ಬಾರಿ ವಿರೋಧ ಪಕ್ಷಗಳು ಸರ್ಕಾರವನ್ನು ಯಾವ ವಿಷಯಗಳ ಮೇಲೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿವೆ?

ಉತ್ತರ: ಸಂಸತ್ತಿನ ಮಳೆಗಾಲದ ಅಧಿವೇಶನವು ಜುಲೈ 20 ರಿಂದ ಆರಂಭವಾಗಲಿದೆ. ದೇಶದ ಜನಸಾಮಾನ್ಯರನ್ನು ಕಾಡುತ್ತಿರುವ ಹಣದುಬ್ಬರ, ಯುವಕರನ್ನು ಕಂಗಾಲು ಮಾಡಿರುವ ನಿರುದ್ಯೋಗ ಸಮಸ್ಯೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿರುವ ‘ನೀಟ್’ ಪರೀಕ್ಷೆ ಪೇಪರ್ ಸೋರಿಕೆ ಹಗರಣಗಳ ಕುರಿತು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ.

ಪ್ರಶ್ನೆ : ಈ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ 5 ಹೊಸ ಮಸೂದೆಗಳು ಯಾವುವು?

ಉತ್ತರ: ಕೇಂದ್ರ ಸರ್ಕಾರವು ಮಂಡಿಸಲು ಸಜ್ಜಾಗಿರುವ 5 ಹೊಸ ಮಸೂದೆಗಳು:

ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2026

ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ಮಸೂದೆ, 2026

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, 2026

ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026

ಪ್ರಶ್ನೆ : ಸರ್ಕಾರದ ಅಧಿಕೃತ ಪಟ್ಟಿಯಲ್ಲಿ ಇಲ್ಲದಿದ್ದರೂ, ವಿರೋಧ ಪಕ್ಷಗಳಲ್ಲಿ ಭೀತಿ ಮತ್ತು ಚರ್ಚೆ ಹುಟ್ಟುಹಾಕಿರುವ ಎರಡು ಪ್ರಮುಖ ವಿಷಯಗಳು ಯಾವುವು?

ಉತ್ತರ: ‘ಒಂದು ರಾಷ್ಟ್ರ ಒಂದು ಚುನಾವಣೆ’ ಮತ್ತು ‘ಕ್ಷೇತ್ರ ಪುನರ್ವಿಂಗಡಣೆ’ಪ್ರಕ್ರಿಯೆಗಳು ಸರ್ಕಾರದ ಅಧಿಕೃತ ಶಾಸಕಾಂಗ ಪಟ್ಟಿಯಲ್ಲಿ ಸದ್ಯಕ್ಕಿಲ್ಲದಿದ್ದರೂ ವಿರೋಧ ಪಕ್ಷಗಳಲ್ಲಿ ತೀವ್ರ ಆತಂಕ ಮೂಡಿಸಿವೆ. ಕೇಂದ್ರ ಸರ್ಕಾರವು ಇದ್ದಕ್ಕಿದ್ದಂತೆ ಇವುಗಳನ್ನು ಅಧಿವೇಶನದಲ್ಲಿ ಮಂಡಿಸಬಹುದು ಎಂದು ವಿರೋಧ ಪಕ್ಷಗಳು ನಂಬಿವೆ.

ಪ್ರಶ್ನೆ : ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಕುರಿತು ಕಾಂಗ್ರೆಸ್ ಪಕ್ಷದ ನಿಲುವು ಏನು ಮತ್ತು ಅಧಿವೇಶನದ ಸುಗಮ ನಿರ್ವಹಣೆಗೆ ಸರ್ಕಾರ ಕೈಗೊಂಡ ಕ್ರಮವೇನು?

ಉತ್ತರ: ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಸಂಸತ್ತಿನ ಮುಂದೆ ತಂದರೆ ಅದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಮತ್ತು ಸಂಸತ್ತಿನ ಒಳಗೆ ತೀವ್ರವಾಗಿ ಪ್ರತಿಭಟಿಸುವುದಾಗಿ ಕಾಂಗ್ರೆಸ್ ಈಗಾಗಲೇ ಕಟ್ಟುನಿಟ್ಟಾದ ಎಚ್ಚರಿಕೆ ನೀಡಿದೆ. ಇನ್ನೊಂದೆಡೆ, ಮುಂಗಾರು ಅಧಿವೇಶನವನ್ನು ಗದ್ದಲವಿಲ್ಲದೆ ನಡೆಸಲು ಬೇಕಾದ ಆಡಳಿತ ಪಕ್ಷದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತುರ್ತು ಸಭೆ ನಡೆಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:34 pm, Fri, 17 July 26

Source link

Leave a Reply

Your email address will not be published. Required fields are marked *