PM Modi in Bengaluru: ಪ್ರಧಾನಿ ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು – Kannada News | Leaders Honour PM Modi with Traditional Mysuru Gifts and Statue

ಬೆಂಗಳೂರು, ಮೇ 10: ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇಟಿ ಭಾರಿಸಿದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮೇ 10) ಕರ್ನಾಟಕಕ್ಕೆ ನೀಡಿದ್ದಾರೆ. ಬೆಂಗಳೂರಿನ ಎಚ್‌ಎಎಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ನಾಯಕರಿಂದ ಅದ್ಧೂರಿ ಸನ್ಮಾನ ನೆರವೇರಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರಿಗೆ 13 ಕೆಜಿ ತೂಕದ ಬೆಳ್ಳಿಯ ಪ್ರತಿಮೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕರಾದ ಅಶ್ವತ್ಥ್ ನಾರಾಯಣ್, ಎಸ್.ಆರ್. ವಿಶ್ವನಾಥ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದು, ಚುನಾವಣಾ ಯಶಸ್ಸನ್ನು ಸಂಭ್ರಮಿಸಿದರು.

ಇದನ್ನೂ ಓದಿ: ಬೆಂಗಳೂರಿನ ಹೆಚ್​ಎಎಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *