Protest Against Kambala: ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?

ಮೈಸೂರು, ಜುಲೈ 18: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪರಿಸರವಾದಿಗಳು, ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ಕಂಬಳ ನಡೆಯುವ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸಿವೆ.

ಪ್ರತಿಭಟನಾಕಾರರು ಕರಾವಳಿ ಭಾಗದಿಂದ 300 ಕಿಲೋಮೀಟರ್ ದೂರದಿಂದ ಕೋಣಗಳನ್ನು ಕರೆತರುವುದು, ಜಾಗವನ್ನು ಹಾಳು ಮಾಡುವುದು ಮತ್ತು ಮರಗಳನ್ನು ಕಡಿಯುವುದು ಪರಿಸರಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಮರಗಳನ್ನು ಕಡಿಯಲು ಪರಿಸರ ಇಲಾಖೆಯಿಂದ ಅನುಮತಿ ಕೇಳಿರುವುದು ಆಘಾತಕಾರಿ ಎಂದು ಅವರು ಹೇಳಿದ್ದಾರೆ. ಮೈಸೂರು ದಸರಾದ ಸಾಂಸ್ಕೃತಿಕ ಅಸ್ಮಿತೆಯನ್ನು ಉಳಿಸುವ ಬದಲು, ಸರ್ಕಾರವೇ ಅದನ್ನು ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಕನ್ನಡ ಕ್ರಿಯಾ ಸಮಿತಿಯ ಮೈನಾ ಲೋಕೇಶ್ ಮತ್ತು ಕುಸುಮ ಐಯ್ಯಂಗಾರ್ ಅವರು ಮಾತನಾಡಿ, ಸರ್ಕಾರದ ಈ ನಿರ್ಧಾರವು ಹಣ ಮಾಡುವ ಉದ್ದೇಶದಿಂದ ಕೂಡಿದೆ ಎಂದು ಟೀಕಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಟಿಕೆಟ್ ದರ ಏರಿಸಿದಂತೆ, ಇದೂ ಒಂದು ವ್ಯವಹಾರಿಕ ನಡೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *