Headlines

RCB ಗೆಲುವಿನ ಬೆನ್ನಲ್ಲೇ ಅಂಬಾಟಿ ರಾಯುಡು ‘ಬಿಗ್ ಬಾಯ್ಸ್’ ಹೇಳಿಕೆ!

17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್​ ತಂಡಕ್ಕೆ ಸೋಲುಣಿಸಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿದು 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಐಪಿಎಲ್​ನಲ್ಲಿ ಸತತ ಎರಡು ಟ್ರೋಫಿ ಗೆದ್ದ ವಿಶೇಷ ಸಾಧನೆ ಮಾಡಿದೆ. ಈ ಸಾಧನೆಯ ಬೆನ್ನಲ್ಲೇ, ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಆರ್​ಸಿಬಿ ತಂಡವನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟು ಟೀಕಾಗಾರನೆಂದೇ ಗುರುತಿಸಿಕೊಂಡಿದ್ದ ಅಂಬಾಟಿ ರಾಯುಡು ಅವರೇ ಇದೀಗ ಆರ್​ಸಿಬಿ ತಂಡವನ್ನು ‘ಬಿಗ್ ಬಾಯ್ಸ್’ ಪಡೆ ಎಂದು ಹೊಗಳಿದ್ದಾರೆ. ಅಂದರೆ ಸಾಟಿಯಿಲ್ಲದ ಸರದಾರರು ಎಂದರ್ಥ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಯುಡು, ಆರ್‌ಸಿಬಿ ತಂಡದ ಈ ಅದ್ಭುತ ಪರಿವರ್ತನೆಯನ್ನು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ.

“ಈ ಹಿಂದೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ ಅವರಂತಹ ಸ್ಟಾರ್ ಆಟಗಾರರ ಮೇಲೆ ಅವಲಂಭಿತವಾಗಿತ್ತು. ಆದರೆ ಇದೀಗ ತಂಡ ಬದಲಾಗಿದೆ. ಒಂದು ತಂಡವಾಗಿ ಹೋರಾಡುತ್ತಿದ್ದಾರೆ”.

“ಆರ್​ಸಿಬಿ ತಂಡದ ಪ್ರದರ್ಶನವನ್ನು ಗಮನಿಸಿದರೆ, ಅವರು ಐಪಿಎಲ್​ನ ಬಿಗ್ ಬಾಯ್ಸ್ ಎಂಬುದರಲ್ಲಿ ಸಂಶಯವೇ ಇಲ್ಲ. ಪ್ರಸ್ತುತ ಇರುವ ತಂಡವು ಈ ಹಿಂದಿನ ಚಾಂಪಿಯನ್​ಗಳಾದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್​ ತಂಡಗಳಿಗಿಂತ ಬಲಿಷ್ಠವಾಗಿದೆ” ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

“ಅಷ್ಟೇ ಅಲ್ಲದೆ ಇದು ಆರ್​ಸಿಬಿ ತಂಡದ ಯುಗ. ಈ ಯುಗದಲ್ಲಿ ಅವರು ಈ ಹಿಂದಿನ ಚಾಂಪಿಯನ್​ ತಂಡಗಳಿಗೆ ಸಮನಾದ ಪ್ರದರ್ಶನ ನೀಡುತ್ತಿದೆ. ಪ್ರಸ್ತುತ ಇರುವ ಆರ್‌ಸಿಬಿ ತಂಡವು ಎಷ್ಟು ಬಲಿಷ್ಠವಾಗಿದೆ ಎಂದರೆ, ಬೇರೆ ಯಾವುದೇ ತಂಡಗಳು ಅವರ ಹತ್ತಿರವೂ ಬರಲು ಸಾಧ್ಯವಿಲ್ಲ” ಎಂದು ರಾಯುಡು ಹೇಳಿದ್ದಾರೆ.

ಇದೀಗ ಅಂಬಾಟಿ ರಾಯುಡು ಅವರ ಹೇಳಿಕೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಹೇಳಿಕೆಗೆ ರಾಯುಡು ಅವರನ್ನು ಆರ್​ಸಿಬಿ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ.

ಏಕೆಂದರೆ ಅಂಬಾಟಿ ರಾಯುಡು ಈ ಹಿಂದೆ ಆರ್​ಸಿಬಿ ತಂಡವನ್ನು ಲೇವಡಿ ಮಾಡಿದ್ದರು. ಅಲ್ಲದೆ ಅವಕಾಶ ಸಿಕ್ಕಾಗೆಲ್ಲಾ ಆರ್​ಸಿಬಿ ತಂಡವನ್ನು ಟೀಕಿಸಿದ್ದರು. ಇದಕ್ಕೆ ಸಾಕ್ಷಿ ಅವರ ಈ ಹಿಂದಿನ ಹೇಳಿಕೆಗಳು…

  • ಟ್ರೋಫಿ ಸಂಖ್ಯೆಯ ಲೇವಡಿ: RCB ತನ್ನ ಮೊದಲ ಐಪಿಎಲ್ ಟ್ರೋಫಿ ಗೆದ್ದಾಗ ಲೇವಡಿ ಮಾಡಿದ್ದ ರಾಯುಡು, “ನಿಮಗೆ ಒಂದು ಕಪ್ ಗೆಲ್ಲಲು 18 ವರ್ಷ ಬೇಕಾಯಿತು, ಹಾಗಾದರೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ 5 ಟ್ರೋಫಿಗಳ ದಾಖಲೆ ಸರಿಗಟ್ಟಲು ನಿಮಗೆ 72 ವರ್ಷ ಬೇಕಾಗಬಹುದು” ಎಂದು ಕಾಲೆಳೆದಿದ್ದರು.
  • ಸಂಭ್ರಮಾಚರಣೆಗೆ ಟೀಕೆ: 2024ರ ಐಪಿಎಲ್‌ನಲ್ಲಿ ಸಿಎಸ್‌ಕೆ ತಂಡವನ್ನು ಟೂರ್ನಿಯಿಂದ ಹೊರಹಾಕಿದಾಗ ಆರ್‌ಸಿಬಿ ಆಟಗಾರರು ಮತ್ತು ಅಭಿಮಾನಿಗಳು ರಸ್ತೆಯಲ್ಲಿ ಅತಿಯಾಗಿ ಸಂಭ್ರಮಿಸಿದ್ದನ್ನು ರಾಯುಡು ಟೀಕಿಸಿದ್ದರು. “ಕೇವಲ ಸಂಭ್ರಮಾಚರಣೆಗಳು ನಿಮಗೆ ಟ್ರೋಫಿ ತಂದುಕೊಡುವುದಿಲ್ಲ” ಎಂದು ತಿವಿದಿದ್ದರು.

ಇದನ್ನೂ ಓದಿ: Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬದಲಾಗಿದೆ. ಈ ಹಿಂದೆ ಟೀಕಿಸಿದ ಅಂಬಾಟಿ ರಾಯುಡುವೇ, ಪ್ರಸ್ತುತ ಇರುವ ಆರ್‌ಸಿಬಿ ತಂಡವು ಎಷ್ಟು ಬಲಿಷ್ಠವಾಗಿದೆ ಎಂದರೆ, ಬೇರೆ ಯಾವುದೇ ತಂಡಗಳು ಅವರ ಹತ್ತಿರವೂ ಬರಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

Source link

Leave a Reply

Your email address will not be published. Required fields are marked *