Headlines

RCB vs SRH: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್! ಅಭಿಮಾನಿಗಳೇ ಈ ವಿಚಾರ ತಿಳಿದಿರಿ

RCB vs SRH: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್! ಅಭಿಮಾನಿಗಳೇ ಈ ವಿಚಾರ ತಿಳಿದಿರಿ

ಬೆಂಗಳೂರು, ಮಾರ್ಚ್ 26: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮುಂಬರುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ಮತ್ತು ಪ್ರವೇಶ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳು, ಪಿಡಬ್ಲ್ಯುಡಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈ ಹೊಸ ವ್ಯವಸ್ಥೆಗಳ ಕುರಿತು ಪೂರ್ವಭಾವಿ ತರಬೇತಿ ನೀಡಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ, ಹಿಂದಿನಂತೆ ಕ್ವೀನ್ಸ್ ರೋಡ್ ಬದಲು ಕಬ್ಬನ್ ರೋಡ್ ಮತ್ತು ಲಿಂಕ್ ರೋಡ್ ಮೂಲಕ ಗರಿಷ್ಠ ಸಂಖ್ಯೆಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಗೇಟ್‌ಗಳನ್ನು ವಿಸ್ತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಮೆಟ್ರೋ (ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ, ಎಂ.ಜಿ. ರೋಡ್ ನಿಲ್ದಾಣ) ಬಳಸುವಂತೆ ಮನವಿ ಮಾಡಿದ್ದಾರೆ. ಟಿಕೆಟ್‌ಗಳ ಜೊತೆಗೆ ಕ್ಯೂಆರ್ ಕೋಡ್ ಮತ್ತು ಮೆಟ್ರೋ ಟಿಕೆಟ್‌ಗಳನ್ನು ನೀಡಲಾಗುತ್ತಿದೆ. ಅಲ್ಲದೆ, ಪಾರ್ಕಿಂಗ್ ಸ್ಲಾಟ್‌ಗಳನ್ನು ಆನ್‌ಲೈನ್‌ನಲ್ಲಿ ಖರೀದಿಸಿ, ಅಲ್ಲಿಂದ ಶಟಲ್ ಬಸ್‌ಗಳ ಮೂಲಕ ಕ್ರೀಡಾಂಗಣಕ್ಕೆ ತಲುಪುವ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಪ್ರೇಕ್ಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪೊಲೀಸರು ವಿನಂತಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *