ಬೆಂಗಳೂರು, (ಆಗಸ್ಟ್ 15): ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ಮಾಡಲು ಪೂರ್ವನುಮತಿ ಕಡ್ಡಾಯಗೊಳಿಸವು ಸಂಬಂಧ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಈ ಮೂಲಕ ಆರ್ಎಸ್ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಪ್ರತಿಕ್ರಿಯಿಸಿದ್ದು, ಸಂಘ ನೋಂದಣಿ ಮಾಡುವ ಅವಶ್ಯಕತೆ ಇಲ್ಲ. ಆರ್ಎಸ್ಎಸ್ ರಿಜಿಸ್ಟ್ರೇಷನ್ ಆಗಿರಲಿಲ್ಲ, ಮುಂದೆಯೂ ಆಗಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದಾರೆ.
