Headlines

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಎಸ್ಪಿ ಪ್ರಶ್ನೆಗಳಿಗೆ ಪ್ರಾದೇಶಿಕ ಸಾರಿಗೆ ಆಯುಕ್ತರೇ ತಬ್ಬಿಬ್ಬು! – Kannada News | Lokayukta Raid on Bengaluru South District RTO Office: Illegal Sand Mining Exposed in Haveri

RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​Image Credit source: Tv9 Kannada

ರಾಮನಗರ, ಜೂನ್​​ 12: ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ರೇಡ್​​ ನಡೆದಿದೆ. ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, RTO ಕಚೇರಿಯಲ್ಲಿ ಅಧಿಕಾರಿಗಳು ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ ಇದಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​
  • ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ಕಚೇರಿ ಮೇಲೆ ದಾಳಿ
  • ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ

ತಾಯಿಯ ಬದಲು ಮಗಳು ಕೆಲಸ!

ಇನ್ನು ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಆರ್​​ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳು ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 3 ತಿಂಗಳು ಕಳೆದರೂ ಸ್ಮಾರ್ಟ್ ಕಾರ್ಡ್​​ ವಿತರಿಸದೇ ಕಚೇರಿಯಲ್ಲೇ ಶೇಖರಣೆ ಮಾಡಿರುವುದು ಗೊತ್ತಾಗಿದೆ. ಏಜೆಂಟ್​ಗಳ ಮೂಲಕ ಬಂದರೇ ಮಾತ್ರ RTO ಕಚೇರಿಯಲ್ಲಿ ಕೆಲಸ ನಡೆಯುತ್ತೆ ಎಂಬ ಆರೋಪವೂ ಇದ್ದು, ಏಜೆಂಟ್​ಗಳ ನಡುಗೆ ಹೊಡೆದಾಟ ನಡೆದರೂ ಪ್ರಾದೇಶಿಕ ಸಾರಿಗೆ ಆಯುಕ್ತರು ದೂರು ನೀಡಿಲ್ಲ. ಕಚೇರಿಯಲ್ಲಿ ಗುತ್ತಿಗೆ ನೌಕರರ ದರ್ಬಾರ್ ನಡೆಯುತ್ತಿದ್ದು, ಎಸ್​​ಪಿ ಸ್ನೇಹಾ ಪ್ರಶ್ನೆಗಳಿಗೆ ಆರ್​​ಟಿಒ ಟಿ.ಎ.ಸತೀಶ್ ಬಾಬು ತಬ್ಬಿಬ್ಬಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್; ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ?

ಹಾವೇರಿಯಲ್ಲೂ ಲೋಕಾಯುಕ್ತ ರೆಡ್​​

ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಹಾವೇರಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಣೇಬೆನ್ನೂರು ತಾಲ್ಲೂಕಿನ ನಿಟಪಳ್ಳಿ, ಚಂದಾಪುರ, ಬೆಲೂರು , ಐರಣಿ ಹರನಗಿರಿ, ಕೋಟಿಹಾಳ ಮತ್ತು ಚಿಕ್ಕಕುರವತ್ತಿ ಗ್ರಾಮದ ಬಳಿ ಸೇರಿ ಒಟ್ಟು 8 ಸ್ಥಳಗಳಲ್ಲಿ ಏಕಕಾಲಕ್ಕೆ ರೇಡ್​​ ನಡೆದಿದೆ. ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ಮಧುಸೂದನ್ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ಸುಮಾರು 12,779 ಮೆಟ್ರಿಕ್ ಟನ್ ಮರಳು, 2 ಜೆಸಿಬಿ ಹಾಗೂ 4 ತೆಪ್ಪಗಳನ್ನ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:08 pm, Fri, 12 June 26

Source link

Leave a Reply

Your email address will not be published. Required fields are marked *