Headlines

SP Warning Rowdysheeters: ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌

SP Warning Rowdysheeters: ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌

ದಾವಣಗೆರೆ, ಜುಲೈ 22: ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಅವರ ನೇತೃತ್ವದಲ್ಲಿ, ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ 145 ರೌಡಿಶೀಟರ್‌ಗಳಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ.

ಕಾರ್ಯಾಚರಣೆಯ ಭಾಗವಾಗಿ, ಎರಡು ದಿನಗಳ ಹಿಂದೆ ಬೆಳಗಿನ ಜಾವದಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲಾಯಿತು. ನಂತರ ಎಲ್ಲರನ್ನು ಡಿಆರ್ ಮೈದಾನಕ್ಕೆ ಕರೆತಂದು ಅವರ ಪೂರ್ವಾಪರ ಮತ್ತು ಇತ್ತೀಚಿನ ಚಟುವಟಿಕೆಗಳ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಲಾಯಿತು. ಜಿಲ್ಲೆಯಲ್ಲಿ ಒಟ್ಟು 468 ರೌಡಿಶೀಟರ್‌ಗಳಿದ್ದು, ದಾವಣಗೆರೆ ನಗರದಲ್ಲಿನ 145 ರೌಡಿಶೀಟರ್‌ಗಳಿಗೆ ಈ ಎಚ್ಚರಿಕೆ ನೀಡಲಾಗಿದೆ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಡಾ. ಎಚ್.ಟಿ. ಶೇಖರ್ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *