Breaking News Today Live Updates in Kannada: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಿಗಾಗಿ ರೈತರು ಹಾಗೂ ಕರಾವೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರ್ಕಾರ ಕೇವಲ ಕುಡಿಯುವ ನೀರು ಬಿಡುಗಡೆ ಮಾಡಿದೆ. ಇತ್ತ ಯಾದಗಿರಿಯಲ್ಲಿ ಒಣಗುತ್ತಿರುವ ಬೆಳೆಗಳು, ಚಿತ್ರದುರ್ಗದಲ್ಲಿ ಬತ್ತಿದ ಬೋರ್ವೆಲ್ಗಳು ಹಾಗೂ ವಿಜಯನಗರದ ಮಳೆ ಅಭಾವ ರೈತರನ್ನು ಕಂಗಾಲುಗೊಳಿಸಿದೆ. ಬರ ಪರಿಹಾರಕ್ಕಾಗಿ ಡಿಸಿಎಂ ಪರಮೇಶ್ವರ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಇನ್ನು ಕೊಪ್ಪಳದಲ್ಲಿ ಮಳೆಗಾಗಿ ಹರಕೆ ಹೊತ್ತ ಬೆನ್ನಲ್ಲೇ ಮಳೆರಾಯ ತಂಪೆರೆದಿದ್ದಾನೆ. ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತ ಜಾಗತಿಕವಾಗಿ, ಡೊನಾಲ್ಡ್ ಟ್ರಂಪ್ ಹತ್ಯೆಗೆ ಇರಾಕಿ ಉಗ್ರ ಸಂಘಟನೆ 84 ಕೋಟಿ ರೂ. ಬಹುಮಾನ ಘೋಷಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
