ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್ನಲ್ಲಿ ಮಹತ್ವದ ನಿರ್ಣಯ ಅಂಗೀಕಾರವಾಗುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ರಾಜಕೀಯ ಹಿನ್ನಡೆಯಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’ ಅನ್ನು ಪ್ರದಾನ ಮಾಡಿದ್ದಾರೆ. ಇತ್ತ ಕ್ರೀಡಾಲೋಕದಲ್ಲಿ, ಐರ್ಲೆಂಡ್ ಮತ್ತು ಇಂಗ್ಲೆಂಡ್ ಸರಣಿಗೂ ಮುನ್ನ ಗಾಯಾಳು ನಿತೀಶ್ ರೆಡ್ಡಿ ಬದಲಿಗೆ 23 ವರ್ಷದ ಯುವ ಆಲ್ರೌಂಡರ್ ಸೂರ್ಯಂಶ್ ಶೆಡ್ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇನ್ನು ಸಿನಿಮಾ ರಂಗದಲ್ಲಿ, ನಟಿ ತಮನ್ನಾ ಭಾಟಿಯಾ ದಕ್ಷಿಣ ಚಿತ್ರರಂಗದ ಪಿತೃಪ್ರಧಾನ ಮನಸ್ಥಿತಿ ಮತ್ತು ಐಟಂ ಸಾಂಗ್ಗಳ ಸಂಸ್ಕೃತಿ ಬಗ್ಗೆ ಮುಕ್ತವಾಗಿ ಅಸಮಾಧಾನ ಹೊರಹಾಕಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
