Breaking News Today Live Updates in Kannada: ಮಾಜಿ ಶಿಕ್ಷಣ ಸಚಿವ, ಬಿಜೆಪಿ ಹಿರಿಯ ನಾಯಕ ಬಿ.ಸಿ. ನಾಗೇಶ್ (72) ಅನಾರೋಗ್ಯದಿಂದ ನಿಧನರಾಗಿದ್ದು, ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಲ್ಲೇಶ್ವರಂ ಕಚೇರಿಗೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ಕೆಲಸಕ್ಕಾಗಿ ಇಂದು ದೆಹಲಿ ಹಾಗೂ ನಾಳೆ ಚೆನ್ನೈಗೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ, ಮಲ್ಲಸಂದ್ರ-ಗುಬ್ಬಿ ನಡುವಿನ ಇಂಜಿನಿಯರಿಂಗ್ ಕಾಮಗಾರಿಯಿಂದಾಗಿ ಆಗಸ್ಟ್ 19, 22, 23 ಮತ್ತು 26 ರಂದು ಶಿವಮೊಗ್ಗ, ತಾಳಗುಪ್ಪ ಹಾಗೂ ಚಿಕ್ಕಮಗಳೂರು ಮಾರ್ಗದ ಹಲವು ರೈಲು ಸಂಚಾರ ರದ್ದು ಮತ್ತು ಮಾರ್ಗ ಬದಲಾವಣೆಯಾಗಿದ್ದು, ಪ್ರಯಾಣಿಕರು ವೇಳಾಪಟ್ಟಿ ಪರಿಶೀಲಿಸಲು ರೈಲ್ವೆ ಇಲಾಖೆ ಕೋರಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
