Breaking News Today Live Updates in Kannada: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತಾರಕಕ್ಕೇರಿದ್ದು, ತಮಿಳುನಾಡಿಗೆ ದಿನಂಪ್ರತಿ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಇಂದು ನವದೆಹಲಿಯಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 2:30ಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಿಗದಿಯಾಗಿದ್ದು, ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರ ಚಿತ್ತ ದೆಹಲಿ ಸಭೆಯತ್ತ ನೆಟ್ಟಿದೆ. ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ವೆಚ್ಚದಾಯಕ ಹಾಗೂ ಬಹುನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana) ಸಿನಿಮಾದ ಭವ್ಯ ಟ್ರೇಲರ್ ಬಿಡುಗಡೆಯಾಗಿದೆ. ಕಾಮನ್ವೆಲ್ತ್ ಗೇಮ್ಸ್ 2026ರ 6ನೇ ದಿನದ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ಗಳು ತಮ್ಮ ಕಠಿಣ ಪರಿಶ್ರಮ ಮತ್ತು ಛಲದಿಂದ ಒಟ್ಟು 3 ಪದಕಗಳನ್ನು ಭಾರತದ ಮಡಿಲಿಗೆ ಹಾಕಿದ್ದಾರೆ. ಇದರ ಜತೆಗೆ ಸಚಿವ ಸಂಪುಟ ರಚನೆ ಹಾಗೂ ಸಚಿವ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ.
