TV9 Kannada News Live: ನಿದ್ದೆಯಲ್ಲಿದ್ದಾಗಲೇ ಕುಸಿದುಬಿದ್ದ ಮನೆ, ಗೃಹಜ್ಯೋತಿ ಯೋಜನೆಯಲ್ಲಿ ಭಾರಿ ಪರಿಷ್ಕರಣೆ, ಇಲ್ಲಿದೆ ಇಂದಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 1 July 2026 Karnataka SIR, Mangalore Rains, Gruha Jyothi Application Revision Top News Updates

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಮಳೆಯ ಆರ್ಭಟಕ್ಕೆ ಮನೆಯ ಹಿಂಬದಿಯ ತಡೆಗೋಡೆ ಹಾಗೂ ಮೇಲ್ಚಾವಣಿ ಕುಸಿದುಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆಯಲ್ಲಿ ಭಾರಿ ಪರಿಷ್ಕರಣೆ ನಡೆಯುತ್ತಿದ್ದು, ಇದು ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರವು ‘SIR’ ಪ್ರಕ್ರಿಯೆಯ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಂದ ವೋಟರ್ ಐಡಿ (ಎಪಿಕ್ ಕಾರ್ಡ್ ನಂಬರ್) ಹಾಗೂ ಜಾತಿ ವಿವರಗಳನ್ನು ಕಡ್ಡಾಯವಾಗಿ ಸಂಗ್ರಹಿಸುತ್ತಿದೆ. ಅಂತಾರಾಷ್ಟ್ರೀಯ ಬಿಕ್ಕಟ್ಟಿನ ನಡುವೆಯೂ ಇಂದಿನಿಂದ (ಜುಲೈ 01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಕಡಿತವಾಗಿದ್ದು, ಹೋಟೆಲ್ ಉದ್ಯಮಿಗಳು ಹಾಗೂ ವ್ಯಾಪಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ವಾಣಿಜ್ಯ ಸಿಲಿಂಡರ್ ದರದಲ್ಲಿ ಒಮ್ಮೆಗೆ 183.50 ರೂಪಾಯಿಗಳನ್ನು ಕಡಿತಗೊಳಿಸಲಾಗಿದೆ. ನಟ ಅಖಿಲ್ ರಾಜ್ ಅವರ ಮೇಲೆ ಹಲವಾರು ಫುಡ್ ಡೆಲಿವರಿ ಬಾಯ್ಸ್‌ಗಳು ಒಟ್ಟಾಗಿ ಸೇರಿ ದಾಳಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಟ ಅಖಿಲ್ ರಾಜ್ ಅವರು ತಮ್ಮ ಕಾರಿನಲ್ಲಿ ಚಲಿಸುತ್ತಿದ್ದಾಗ ಡೆಲಿವರಿ ಬಾಯ್ಸ್‌ಗಳು ಒಟ್ಟಾಗಿ ಅವರ ಕಾರನ್ನು ಅಡ್ಡಗಟ್ಟಿ, ಗಾಜುಗಳನ್ನು ಪುಡಿಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಇದೇ ರೀತಿ ಪ್ರಮುಖ ಸುದ್ದಿಗಳ ಅಪ್ಡೇಟ್​​​ಗಳನ್ನು ಇಲ್ಲಿ ನೀಡಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *