Breaking News Today Live Updates in Kannada: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲು ಜುಲೈ 17ರ ನಂತರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು ತರಲು ಸರಕಾರ ಮುಂದಾಗಿದ್ದು, ಆ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೊಂದೆಡೆ ಬಿಡದಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಫುಟ್ಬಾಲ್ ಪ್ರೇಮಿಗಳಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ತಡರಾತ್ರಿ 1 ಗಂಟೆಯಿಂದ 3.30 ರ ಹೋಟೆಲ್, ರೆಸ್ಟೋರೆಂಟ್ ತೆರೆದಿಡಲು ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯ, ರಾಷ್ಟ್ರೀಯ, ಕ್ರೀಡೆ, ಸಿನಿಮಾ ಸೇರಿದಂತೆ ಇಂದಿನ ಎಲ್ಲಾ ಸುದ್ದಿ ಬೆಳವಣಿಗೆಗಳ ತಾಜಾ ಮಾಹಿತಿಗಾಗಿ ಈ ಪುಟವನ್ನು ರಿಫ್ರೆಷ್ ಮಾಡುತ್ತಾ ಇರಿ.
