Breaking News Today Live Updates in Kannada: ಹರಿಹರ ತಾಲೂಕಿನ ಹನಗವಾಡಿ ಬಳಿಯ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರಿಗೆ ನಿಯಮಿತ ಜಾಮೀನು (Regular Bail) ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಂದು (ಜುಲೈ 13) ತನ್ನ ಮಹತ್ವದ ಅಂತಿಮ ತೀರ್ಪನ್ನು ಪ್ರಕಟಿಸಲಿದೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಡೆದ ಅತ್ಯಂತ ರಹಸ್ಯ ‘ಕ್ಯೂಆರ್ ಕೋಡ್ ಮತ್ತು ಡಿಕಾಯ್ಸ್ ಸ್ಕ್ವಾಡ್’ ಕಾರ್ಯಾಚರಣೆಯ ಮೂಲಕ 20 ಲಕ್ಷ ರೂಪಾಯಿ ಮೌಲ್ಯದ 20 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಅಂತರಜಿಲ್ಲಾ ದಂಧೆಕೋರರನ್ನು ಹೆಡೆಮುರಿ ಕಟ್ಟಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸಂಪೂರ್ಣ ಸೈಲೆಂಟ್ ಆಗಿದ್ದ ಹೆಮ್ಮಾರಿ ಕೊರೊನಾ ವೈರಸ್ (Covid-19) ಮತ್ತೆ ಆತಂಕ ಮೂಡಿಸಲು ಆರಂಭಿಸಿದೆ. ನೆರೆರಾಜ್ಯ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ಸೋಮವಾರ ಬೆಳಗಿನ ಜಾವ ಘೋರ ದುರಂತವೊಂದು ಸಂಭವಿಸಿದೆ. ಹೀಗೆ ರಾಜ್ಯ, ದೇಶ, ವಿದೇಶಗಳ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ.
