Headlines

TV9 Kannada News Live: ಮುಂಗಾರು ಮಳೆಗೆ ನಲುಗಿದ ಕರಾವಳಿ! ಕರ್ನಾಟಕದ ಹಲವು ಶಾಲೆಗಳಿಗೆ ರಜೆ – Kannada News | TV9 Kannada Live | 7 July 2026 Karnataka Weather Rain Report, School Holidays Mumbai Rains Latest News

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Breaking News Today Live Updates in Kannada: ಕರ್ನಾಟಕ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ 6 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರಿನ 5 ಹೋಬಳಿಗಳ ಶಾಲೆಗಳಿಗೆ, ಶೃಂಗೇರಿಯ ಶಾಲಾ-ಕಾಲೇಜುಗಳಿಗೆ ಮತ್ತು ಕಳಸದ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಲಾಗಿದೆ. ಇತ್ತ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮತ್ತೊಂದೆಡೆ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ದಟ್ಟವಾದ ಮಂಜು ಆವರಿಸಿದೆ. ಇದರಿಂದಾಗಿ NH 173 ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯಿಂದಾಗಿ ಘಾಟಿಯಲ್ಲಿ ಸುಂದರ ಜಲಪಾತಗಳು ಸೃಷ್ಟಿಯಾಗಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Source link

Leave a Reply

Your email address will not be published. Required fields are marked *