Breaking News Today Live Updates in Kannada: ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದು, ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ಏರಿದ್ದು, 20 ಖಾಲಿ ಸಚಿವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ಜತೆ ಅಂತಿಮ ಚರ್ಚೆ ನಡೆಸಲು ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಈ ನಡುವೆ, ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಸಿಜೆಪಿ ನೀಡಿದ್ದ ಎಚ್ಚರಿಕೆಗೆ ಮಣಿದ ಬಿಹಾರ ಸರ್ಕಾರ, ಬಂಧಿತರ ಬಿಡುಗಡೆ ಹಾಗೂ ಎಫ್ಐಆರ್ಗಳನ್ನು ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.