ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಐದನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಯಾಗಿದ್ದವು. ಎಂದಿನಂತೆ ಈ ಪಂದ್ಯದಲ್ಲೂ ತನ್ನ ಸಾಂಘೀಕ ಪ್ರದರ್ಶನ ತೋರಿದ ಕರ್ನಾಟಕ ತಂಡ ತ್ರಿಪುರ ತಂಡವನ್ನು 80 ರನ್ಗಳಿಂದ ಸೋಲಿಸಿ ಈ ಟೂರ್ನಿಯಲ್ಲಿ ಸತತ ಐದನೇ ಗೆಲುವು ದಾಖಲಿಸಿದೆ. ಅಂದರೆ ಈ ಟೂರ್ನಿಯಲ್ಲಿ ಕರ್ನಾಟಕ ತಂಡ ಆಡಿರುವ ಐದಕ್ಕೆ ಐದು ಪಂದ್ಯಗಳು ಗೆಲುವು ಸಾಧಿಸಿದೆ. ಈ ಮೂಲಕ ಎಲೈಟ್ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 332 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ತ್ರಿಪುರ ತಂಡ 252 ರನ್ಗಳಿಗೆ ಆಲೌಟ್ ಆಯಿತು.
