Headlines

Video: ಅಪಘಾತದಿಂದ ಯುವಕ-ಯುವತಿ ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್ – Kannada News | Vapasandra accident exposes emergency service failure public saves lives

ಚಿಕ್ಕಬಳ್ಳಾಪುರ, ಫೆ.17: ಜಿಲ್ಲೆಯ ವಾಪಸಂದ್ರ ಬಳಿ ಇಂದು (ಫೆ.17) ನಡೆದ ಭೀಕರ ರಸ್ತೆ ಅಪಘಾತವೊಂದು ತುರ್ತು ಸೇವೆಗಳ ವೈಫಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಅಪಘಾತವಾಗಿ ಗಂಟೆ ಕಳೆದರೂ ಆಂಬುಲೆನ್ಸ್ ಮತ್ತು ಪೊಲೀಸರು ಸ್ಥಳಕ್ಕೆ ಬಂದಿಲ್ಲ. ಕೊನೆಗೆ ಸಾರ್ವಜನಿಕರೇ ಮಾನವೀಯತೆ ಮೆರೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಈಶಾ ಫೌಂಡೇಷನ್‌ನಿಂದ ಬೆಂಗಳೂರು ಕಡೆಗೆ ಕೆಎ 05 ಎಲ್‌ವಿ 9152 ಸಂಖ್ಯೆಯ ಬೈಕ್‌ನಲ್ಲಿ ಯುವಕ ಮತ್ತು ಯುವತಿ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಉರುಳಿ ಬಿದ್ದು ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದರು. ಅಪಘಾತವಾದ ಕೂಡಲೇ ಸ್ಥಳೀಯರು ಆಂಬುಲೆನ್ಸ್ ಮತ್ತು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಗಂಟೆ ಕಳೆದರೂ ಯಾವುದೇ ತುರ್ತು ವಾಹನ ಸ್ಥಳಕ್ಕೆ ಆಗಮಿಸಿಲ್ಲ. ಗಾಯಾಳುಗಳ ಸ್ಥಿತಿ ಗಂಭೀರವಾಗುತ್ತಿರುವುದನ್ನು ಕಂಡು ಸಾರ್ವಜನಿಕರೇ ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ತುರ್ತು ಸೇವೆಗಳ ವೈಫಲ್ಯದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಸಕಾಲದಲ್ಲಿ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *