ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 1036 ಪಿಡಿಒ ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕ ಭಾಗದ 80 ಅಧಿಕಾರಿಗಳಿಗೆ ಈಗಾಗಲೇ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದೆ. ಇನ್ನು 76 ಜನರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 150 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡಲಾಗುವುದು. ಸಿಂಧುತ್ವ ಪರಿಶೀಲನೆ, ಆರೋಗ್ಯ ತಪಾಸಣೆ ಸೇರಿ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಈ ಆದೇಶಗಳನ್ನು ನೀಡಲಾಗುತ್ತದೆ. ಈ ನೇಮಕಾತಿಗಳ ನಂತರವೂ 200-250 ಹುದ್ದೆಗಳು ಖಾಲಿ ಉಳಿಯಲಿವೆ. ಒಟ್ಟಾರೆ, ಸುಮಾರು ಶೇ. 90 ರಷ್ಟು ಪಿಡಿಒ ಹುದ್ದೆಗಳು ಭರ್ತಿಯಾಗಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ